Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಆಸ್ಕರ್ ರಾಜಕೀಯ ಶ್ರೇಷ್ಠ ಸಂತ:...

ಆಸ್ಕರ್ ರಾಜಕೀಯ ಶ್ರೇಷ್ಠ ಸಂತ: ಡಾ.ಎಂ.ವೀರಪ್ಪ ಮೊಯ್ಲಿ

‘ನೆನಪಿನ ಅಂಗಳದಲ್ಲಿ ಆಸ್ಕರ್ ಅಣ್ಣ’ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ8 Oct 2021 9:29 PM IST
share
ಆಸ್ಕರ್ ರಾಜಕೀಯ ಶ್ರೇಷ್ಠ ಸಂತ: ಡಾ.ಎಂ.ವೀರಪ್ಪ ಮೊಯ್ಲಿ

ಮಂಗಳೂರು, ಅ.8: ನಾಲ್ಕು ದಶಕಗಳ ಸುದೀರ್ಘ ಕಾಲ ದೇಶದ ಸಂಸತ್ತಿನಲ್ಲಿ ಲೋಕ ಸಭೆ ಮತ್ತು ರಾಜ್ಯಸಭೆಯನ್ನು ಪ್ರತಿನಿಧಿಸಿ, ಕೇಂದ್ರ ಸಚಿವರೂ ಆಗಿ ಅಗಾಧ ಸೇವೆ ಸಲ್ಲಿಸಿದ್ದ ಆಸ್ಕರ್ ಫೆರ್ನಾಂಡಿಸ್ ರಾಜಕೀಯ ಕ್ಷೇತ್ರದ ಸರ್ವ ಶ್ರೇಷ್ಠ ಸಂತ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್‌ನ ಹಿರಿಯ ಮುಖಂಡ ಡಾ.ಎಂ. ವೀರಪ್ಪ ಮೊಯ್ಲಿ ಬಣ್ಣಿಸಿದ್ದಾರೆ.

ಇತ್ತೀಚೆಗೆ ಅಗಲಿದ ಆಸ್ಕರ್ ಫೆರ್ನಾಂಡಿಸ್‌ಗೆ ಸಾರ್ವಜನಿಕವಾಗಿ ಶ್ರದ್ಧಾಂಜಲಿ ಅರ್ಪಿಸಲು ಆಸ್ಕರ್ ಅಭಿಮಾನಿಗಳು ನಗರದ ಎಸ್‌ಡಿಎಂ ಬಿಬಿಎಂ ಕಾಲೇಜಿನಲ್ಲಿ ಶುಕ್ರವಾರ ಏರ್ಪಡಿಸಿದ್ದ ‘ನೆನಪಿನ ಅಂಗಳದಲ್ಲಿ ಆಸ್ಕರ್ ಅಣ್ಣ’ ಕಾರ್ಯಕ್ರಮದಲ್ಲಿ ಅವರು ಆಸ್ಕರ್ ಅವರೊಂದಿನ ನೆನಪುಗಳನ್ನು ಕಾರ್ಯಕ್ರಮದಲ್ಲಿ ತೆರೆದಿಟ್ಟರು.

ಪ್ರಾಮಾಣಿಕ ರಾಜಕಾರಣಿಯಾಗಿದ್ದ ಆಸ್ಕರ್ ಶಿಸ್ತು ಮತ್ತು ಪ್ರಾಮಾಣಿಕತೆಯ ಸಾಕಾರ ಮೂರ್ತಿಯಾಗಿದ್ದರು. ಅವರು ಯಾರನ್ನೂ ನೋಯಿಸಿದವರಲ್ಲ; ಯಾರೊಂದಿಗೂ ಭಿನ್ನಾಭಿಪ್ರಾಯ ಹೊಂದಿದವರಲ್ಲ. ಯಾರಿಗೂ ಅನ್ಯಾಯ ಮಾಡಿದವರಲ್ಲ. ಮಾತು ಕಡಿಮೆ; ಹೆಚ್ಚು ಆಲಿಸುತ್ತಿದ್ದರು. ಅಧಿಕಾರಕ್ಕಾಗಿ ಆಸೆ ಪಡದೆ ಸಿಕ್ಕಿದ್ದನ್ನು ಸ್ವೀಕರಿಸಿ ಸಮರ್ಪಣಾ ಭಾವದಿಂದ ಕರ್ತವ್ಯ ನಿರ್ವಹಿಸುತ್ತಿದ್ದ ಸೇವಾ ಕರ್ತೃ ಆಗಿದ್ದರು. ಆದರ್ಶ ವ್ಯಕ್ಯಿತ್ವದ ಅವರ ಸೇವೆ ನಮಗೆ ಇನ್ನೂ ಬೇಕಿತ್ತು ಎಂದು ಮೊಯ್ಲಿ ತಿಳಿಸಿದರು.

ಕೇಂದ್ರ ಸಚಿವರಾಗಿ ಆಸ್ಕರ್ ಶಿರಾಡಿ ಘಾಟ್ ಸುರಂಗ ಮಾರ್ಗ ಯೋಜನೆಗೆ ಮಂಜೂರಾತಿ ನೀಡಿದ್ದರು. ಆಗುಂಬೆ ಘಾಟ್ ರಸ್ತೆ ಯನ್ನು ರಾಷ್ಟೀಯ ಹೆದ್ದಾರಿಯನ್ನಾಗಿ ಮೇಲ್ದರ್ಜೆಗೇರಿಸಿದ್ದರು. ಆದರೆ ಅವರು ತಮ್ಮ ಕೆಲಸಗಳನ್ನು ಎಂದೂ ಕೂಡ ಹೇಳಿಕೊಳ್ಳಲು ಹೋಗಿಲ್ಲ ಎಂದರು.

ವಿಧಾನ ಪರಿಷತ್‌ನ ಮಾಜಿ ಮುಖ್ಯ ಸಚೇತಕ ಕಾ.ಗಣೇಶ್ ಕಾರ್ಣಿಕ್, ‘ಸಂಸದೀಯ ಮೌಲ್ಯಗಳು ಮತ್ತು ಆಸ್ಕರ್ ಫೆರ್ನಾಂಡಿಸ್’ ವಿಷಯದ ಬಗ್ಗೆ ಮಾತನಾಡಿ, ಆಸ್ಕರ್ ಅವರು ಯಾವತ್ತೂ ವಿಭಜಿತ ಮಾನಸಿಕತೆಗೆ ಅವಕಾಶ ನೀಡಿರಲಿಲ್ಲ. ಎಲ್ಲ ಸಮುದಾಯ ದವರನ್ನು ಪ್ರೀತಿಸುತ್ತಿದ್ದರು. ಮಹಾನ್ ರಾಜ ನೀತಿಜ್ಞರಾಗಿದ್ದು, ಅವರ ಜೀವನ ಮೌಲ್ಯಗಳು ಅನುಕರಣೀಯ ಎಂದು ಹೇಳಿದರು.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅಭಿಪ್ರಾಯ ಬೇಧಗಳು ಸಹಜ. ಜನ ಪ್ರತಿನಿಧಿಗಳು ಸದನದಲ್ಲಿ ಕುಳಿತು ಅಭಿಪ್ರಾಯ ಬೇಧಗಳನ್ನು ಮಂಡಿಸಿ ಚರ್ಚೆ ನಡೆಸಿ ಒಮ್ಮತದ ನಿರ್ಣಯ ಕೈಗೊಳ್ಳಬೇಕು. ಇವತ್ತಿನ ಕಲುಷಿತ ರಾಜಕೀಯ ವಾತಾವರಣದಲ್ಲಿ ಇದು ಸಾಧ್ಯವೇ ಎನ್ನುವುದರ ಕುರಿತು ಆತ್ಮಾವಲೋಕನ ಮಾಡಬೇಕು ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಮಂಗಳೂರು ವಿಶ್ವ ವಿದ್ಯಾನಿಲಯದ ಕುಲಪತಿ ಪ್ರೊ.ಪಿ.ಎಸ್. ಯಡಪಡಿತ್ತಾಯ ಮಾತನಾಡಿ, ಆಸ್ಕರ್ ಅವರು ಸಮಾಜಕ್ಕೆ ಅರ್ಥಪೂರ್ಣ ಸೇವೆ ನೀಡಿದ್ದು, ಅವರ ಸಮಾಜಮುಖಿ ಚಿಂತನೆ ಮಾದರಿ ಎಂದರು.

ಕಾರ್ಯಕ್ರಮದ ಸಂಚಾಲಕ ವಿಧಾನ ಪರಿಷತ್‌ನ ಮಾಜಿ ಮುಖ್ಯ ಸಚೇತಕ ಐವನ್ ಡಿಸೋಜ ಸ್ವಾಗತಿಸಿದರು. ಸಂಘಟನಾ ಸಮಿತಿಯ ಸದಸ್ಯ ಎಂ.ಜಿ. ಹೆಗಡೆ ವಂದಿಸಿದರು. ಪ್ರೊ.ಮಾಲಿನಿ ಹೆಬ್ಬಾರ್ ಕಾರ್ಯಕ್ರಮ ನಿರೂಪಿಸಿದರು.

ಆಸ್ಕರ್ ಪತ್ನಿ ಬ್ಲೋಸಂ ಅವರ ಪರವಾಗಿ ಕುಟುಂಬಸ್ಥರಾದ ವಾಲ್ಟರ್ ಡಿಸೋಜ ಅವರಿಗೆ ಹೂವಿನ ಗಿಡ ನೀಡಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಮಾಜಿ ಸಚಿವರಾದ ಬಿ. ನಾಗರಾಜ ಶೆಟ್ಟಿ , ಕೃಷ್ಣ ಜೆ. ಪಾಲೆಮಾರ್, ಮಾಜಿ ರಾಜ್ಯಸಭಾ ಸದಸ್ಯ ಬಿ.ಇಬ್ರಾಹಿಂ ಮತ್ತಿತರರು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X