ಮೈಸೂರು ಕೋರ್ಟ್ನಲ್ಲಿ ಬಾಂಬ್ ಸ್ಫೋಟ ಪ್ರಕರಣ; ಎನ್ಐಎ ಕೋರ್ಟ್ನಿಂದ 3 ಆರೋಪಿಗಳು ತಪ್ಪಿತಸ್ಥರೆಂದು ತೀರ್ಪು

ಬೆಂಗಳೂರು, ಅ.8: 2016ರ ಮೈಸೂರು ಬಾಂಬ್ ಸ್ಫೋಟ ಪ್ರಕರಣದಲ್ಲಿ ಬಂಧಿತರಾಗಿದ್ದ ಮೂವರು ಆರೋಪಿಗಳು ತಪ್ಪಿತಸ್ಥರೆಂದು ಬೆಂಗಳೂರಿನ ಎನ್ಐಎ ವಿಶೇಷ ಕೋರ್ಟ್ ತೀರ್ಪು ನೀಡಿದೆ.
ನ್ಯಾ.ಕಸನಪ್ಪ ನಾಯ್ಕ್ ಅವರಿದ್ದ ನ್ಯಾಯಪೀಠ ಈ ತೀರ್ಪು ನೀಡಿದೆ. ತಮಿಳುನಾಡು ಮೂಲದ ಅಬ್ಬಾಸ್ ಅಲಿ, ಅಬ್ದುಲ್ ಕರೀಂ ಹಾಗೂ ದಾವೂದ್ ಸುಲೇಮಾನ್ ತಪ್ಪಿತಸ್ಥರೆಂದು ಕೋರ್ಟ್ ತೀರ್ಪಿತ್ತಿದೆ.
ಏನಿದು ಪ್ರಕರಣ: 2016ರ ಆ.6ರಂದು ಮೈಸೂರು ಜಿಲ್ಲಾ ನ್ಯಾಯಾಲಯದ ಶೌಚಾಲಯದಲ್ಲಿ ಅಡುಗೆ ಕುಕ್ಕರಿನಲ್ಲಿ ಬಾಂಬ್ ಇಟ್ಟು ಆರೋಪಿಗಳು ಸ್ಫೋಟಿಸಿದ್ದರು. ಬ್ಯಾಟರಿ, ಗ್ಲಾಸ್ ಪೀಸ್, ಪಟಾಕಿ ಪೌಡರ್, ಕೆಮಿಕಲ್ ಬಳಸಿ ಬಾಂಬ್ ತಯಾರಿಸಿದ್ದರು. ಆಯೂಬ್ಗೆ ಗೊತ್ತಿಲ್ಲದೆ ಅವನ ಮನೆಯಲ್ಲಿ ಬಾಂಬ್ ತಯಾರು ಮಾಡಿದ್ದ ಹಿನ್ನೆಲೆ ಹೈಕೋರ್ಟ್ ವಾದ ಆಲಿಸಿ ಕ್ಷಮಾದಾನ ನೀಡಿತ್ತು.
Next Story





