Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಎಲ್ಎಸಿಯಲ್ಲಿ ಚೀನಾದ ಉಪಸ್ಥಿತಿ...

ಎಲ್ಎಸಿಯಲ್ಲಿ ಚೀನಾದ ಉಪಸ್ಥಿತಿ ಮುಂದುವರಿದರೆ ನಮ್ಮ ಸೇನೆಯೂ ಅಲ್ಲಿರಲಿದೆ: ಜ.ಎಂ.ಎಂ.ನರವಾಣೆ

ವಾರ್ತಾಭಾರತಿವಾರ್ತಾಭಾರತಿ9 Oct 2021 11:54 PM IST
share

ಹೊಸದಿಲ್ಲಿ. 9: ಲಡಾಖ್ನಲ್ಲಿ ಗಡಿಯುದ್ದಕ್ಕೂ ಭಾರೀ ಪ್ರಮಾಣದಲ್ಲಿ ತನ್ನ ಮೂಲಸೌಕರ್ಯ ನಿರ್ಮಾಣವನ್ನು ಚೀನಿ ಸೇನೆಯು ಮುಂದುವರಿಸಿದರೆ ವಾಸ್ತವ ನಿಯಂತ್ರಣ ರೇಖೆ (ಎಲ್ಎಸಿ)ಯಲ್ಲಿ ಭಾರತೀಯ ಯೋಧರ ನಿಯೋಜನೆಯೂ ಮುಂದುವರಿಯಲಿದೆ ಎಂದು ಸೇನಾ ಮುಖ್ಯಸ್ಥ ಜ.ಎಂ.ಎಂ.ನರವಾಣೆ ಅವರು ಶನಿವಾರ ಇಲ್ಲಿ ಹೇಳಿದರು.

ಇಂಡಿಯಾ ಟುಡೇ ಕಾನ್ ಕ್ಲೈವ್ ನಲ್ಲಿ ಮಾತನಾಡುತ್ತಿದ್ದ ಅವರು,  ಗಡಿಯ ಚೀನಾದ ಪ್ರದೇಶದಲ್ಲಿ ಮೂಲಸೌಕರ್ಯ ನಿರ್ಮಾಣ ಕಾಮಗಾರಿಗಳು ನಡೆಯುತ್ತಿವೆ,ಇದು ಅವರು ಅಲ್ಲಿಯೇ ಉಳಿಯಲಿದ್ದಾರೆ ಎನ್ನುವುದನ್ನು ಸೂಚಿಸುತ್ತಿದೆ. ಅವರು ಅಲ್ಲಿಯೇ ಇದ್ದರೆ ನಾವೂ ಅಲ್ಲಿರುತ್ತೇವೆ. ನಮ್ಮ ಪ್ರದೇಶದಲ್ಲಿ ಮೂಲಸೌಕಯ ನಿರ್ಮಾಣ ಮತ್ತು ಅಭಿವೃದ್ಧಿ ಚೀನಿ ಸೇನೆ ಮಾಡಿರುವಷ್ಟೇ ಉತ್ತಮವಾಗಿದೆ ಎಂದರು.

ಎಲ್ಎಸಿಯಲ್ಲಿ ಚೀನಿ ಸೇನೆಯ ಉಪಸ್ಥಿತಿಯು ಪಾಕಿಸ್ತಾನದೊಂದಿಗಿನ ನಿಯಂತ್ರಣ ರೇಖೆಯಲ್ಲಿರುವ ಸ್ಥಿತಿಯನ್ನು ಸೃಷ್ಟಿಸಬಹುದು ಎಂದ ನರವಾಣೆ, ಱಆದರೆ ಅವರು ಮತ್ತೊಮ್ಮೆ ದುಃಸ್ಸಾಹಸಕ್ಕಿಳಿಯದಂತೆ ನೋಡಿಕೊಳ್ಳಲು ನಾವೂ ಚೀನಿ ಸೇನೆಯ ಎಲ್ಲ ಚಟುವಟಿಕೆಗಳ ಮೇಲೆ ಖಂಡಿತವಾಗಿ ನಿಗಾಯಿರಿಸಬೇಕಾಗುತ್ತದೆ ೞಎಂದರು.
ಕಳೆದ ವರ್ಷದ ಜೂನ್ನಲ್ಲಿ ಪೂರ್ವ ಲಡಾಖ್ನ ಗಲ್ವಾನ್ ಕಣಿವೆಯಲ್ಲಿ ಉಭಯ ಪಡೆಗಳ ನಡುವೆ ಘರ್ಷಣೆಗಳ ಬಳಿಕ ಭಾರತ ಮತ್ತು ಚೀನಾ ಗಡಿ ಬಿಕ್ಕಟ್ಟಿನಲ್ಲಿ ಸಿಕ್ಕಿಕೊಂಡಿವೆ.
 
ಉತ್ತರದ ಗಡಿಯಲ್ಲಿಯೂ ಚೀನಿ ಸೇನೆ ಶಿಷ್ಟಾಚಾರಗಳನ್ನು ಪಾಲಿಸುತ್ತಿಲ್ಲ ಎಂದು ಹೇಳಿದ ನರವಾಣೆ, "ಇದರ ಅರ್ಥ ಅವರು ಅಲ್ಲಿಯೇ ಉಳಿಯಲಿದ್ದಾರೆ. ಈ ಎಲ್ಲ ಬೆಳವಣಿಗೆಗಳ ಮೇಲೆ ನಾವು ನಿಕಟ ನಿಗಾಯಿರಿಸಿದ್ದೇವೆ. ಆದರೆ ಅವರು ಅಲ್ಲಿಯೇ ಉಳಿದರೆ ನಾವೂ ಅಲಿಯೇ ಇರುತ್ತೇವೆ" ಎಂದರು.

"ಭಾರತೀಯ ಸೇನೆಯು ಬೇಹುಗಾರಿಕೆ,ಕಣ್ಗಾವಲು ಮತ್ತು ಪೂರ್ವೇಕ್ಷಣೆಯನ್ನು ಉತ್ತಮಗೊಳಿಸಿಕೊಳ್ಳಲು ಗಮನವನ್ನು ಕೆಂದ್ರೀಕರಿಸಬೇಕಿದೆ. ಇದು ಕಳೆದ ಒಂದು ವರ್ಷದಿಂದ ನಡೆಯುತ್ತಿರುವ ನಮ್ಮ ಆಧುನೀಕರಣದ ಉದ್ದೇಶವಾಗಿದೆ. ಇದೇ ರೀತಿ ಭವಿಷ್ಯದಲ್ಲಿ ಅಗತ್ಯವಾಗುತ್ತವೆ ಎಂದು ನಾವು ಭಾವಿಸಿರುವ ಇತರ ಶಸ್ತ್ರಾಸ್ತ್ರಗಳು ಮತ್ತು ಉಪಕರಣಗಳ ಖರೀದಿಯತ್ತಲೂ ನಾವು ಗಮನವನ್ನು ಹರಿಸಿದ್ದೇವೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X