Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅತ್ಯಾಚಾರ ಸಂತ್ರಸ್ತೆಗೆ ಬೆದರಿಕೆ ಹಾಕಿದ...

ಅತ್ಯಾಚಾರ ಸಂತ್ರಸ್ತೆಗೆ ಬೆದರಿಕೆ ಹಾಕಿದ ಆರೋಪ: 251 ರೂ.ಗಳ ಸ್ಮಾರ್ಟ್‌ಫೋನ್ ಹಗರಣದ ಆರೋಪಿಯ ಬಂಧನ

ವಾರ್ತಾಭಾರತಿವಾರ್ತಾಭಾರತಿ10 Oct 2021 6:00 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಅತ್ಯಾಚಾರ ಸಂತ್ರಸ್ತೆಗೆ ಬೆದರಿಕೆ ಹಾಕಿದ ಆರೋಪ: 251 ರೂ.ಗಳ ಸ್ಮಾರ್ಟ್‌ಫೋನ್ ಹಗರಣದ ಆರೋಪಿಯ ಬಂಧನ

ಹೊಸದಿಲ್ಲಿ: ಅತ್ಯಾಚಾರ ಸಂತ್ರಸ್ತೆಗೆ ಒಂದು ವರ್ಷ ಕಾಲ  ಬೆದರಿಕೆ ಹಾಕಿದ ಆರೋಪದ ಮೇಲೆ ದಿಲ್ಲಿ ಪೊಲೀಸ್ ಕ್ರೈಂ ಬ್ರಾಂಚ್ ಬಂಧಿಸಿರುವ ಮೂವರಲ್ಲಿ 251 ರೂ.ಗಳ ಸ್ಮಾರ್ಟ್ ಫೋನ್ ಹಗರಣದ ಆರೋಪಿ ಕೂಡ ಸೇರಿದ್ದಾನೆ.

ಬಂಧಿತರಾದ ಮೋಹಿತ್ ಗೋಯೆಲ್, ಸುಮಿತ್ ಯಾದವ್  ಹಾಗೂ  ವಿನಿತ್  ಸುಮಾರು  50 ವಂಚನೆ ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.  ಈ ಮೂವರು ಅತ್ಯಾಚಾರ ಆರೋಪಿ ವಿಕಾಸ್ ಮಿತ್ತಲ್ ಮೇಲೆ ಸೇಡು ತೀರಿಸಿಕೊಳ್ಳಲು ಬಯಸಿದ್ದರು ಹಾಗೂ  ವಿಕಾಸ್ ನಿಂದ ಅತ್ಯಚಾರಕ್ಕೊಳಗಾಗಿದ್ದ ಮಹಿಳೆಗೆ  ಬೆದರಿಕೆ ಹಾಕಲು ನಿರ್ಧರಿಸಿದ್ದರು.

ಕಳೆದ ಆಗಸ್ಟ್ ನಲ್ಲಿ ದ್ವಾರಕಾದಲ್ಲಿ ಮಹಿಳೆಯೊಬ್ಬಳು ವಿಕಾಸ್ ಮಿತ್ತಲ್ ನಿಂದ ಅತ್ಯಾಚಾರಕ್ಕೊಳಗಾಗಿದ್ದಳು ಹಾಗೂ ಈ ಕುರಿತಾಗಿ ದೂರು ನೀಡಿದ್ದಳು. ಮಿತ್ತಲ್ ನನ್ನು ಐಜಿಐ ವಿಮಾನ ನಿಲ್ದಾಣದಿಂದ ಬಂಧಿಸಲಾಗಿತ್ತು. ಆದಾಗ್ಯೂ, ಅತ್ಯಾಚಾರ ಸಂತ್ರಸ್ತೆ ಗೆ ಅಪರಿಚಿತ ವ್ಯಕ್ತಿಗಳಿಂದ ಕೊಲೆ ಬೆದರಿಕೆಗಳು ಬರುತ್ತಿದ್ದವು. ಒಂದು ತಿಂಗಳ ನಂತರ, ಅಪರಿಚಿತ ವ್ಯಕ್ತಿ ಸಿವಿಲ್ ಲೈನ್ಸ್ ಮೆಟ್ರೋ ನಿಲ್ದಾಣದ ಬಳಿ ಸಂತ್ರಸ್ತೆಯನ್ನು ಹಿಡಿದು ಆಕೆಗೆ ಬೆದರಿಕೆ ಹಾಕಿದನೆನ್ನಲಾಗಿದೆ.

ಡಿಸೆಂಬರ್ 2020 ರಲ್ಲಿ ಸುಪ್ರೀಂ ಕೋರ್ಟ್ ಪ್ರಕರಣವನ್ನು ಕ್ರೈಂ ಬ್ರಾಂಚ್‌ಗೆ ವರ್ಗಾಯಿಸಿತು ಮತ್ತು ಮಹಿಳೆ ಬೆದರಿಕೆ ಹಾಕುತ್ತಿದ್ದ ವ್ಯಕ್ತಿಯನ್ನು ಬಂಧಿಸುವಂತೆ ಸೂಚಿಸಿತು. ಬೆದರಿಕೆ ಕರೆಗಳ ಕುರಿತು ತನಿಖೆ ಆರಂಭಿಸಲಾಯಿತು ಹಾಗೂ  ಶಂಕಿತರನ್ನು ಗುರುತಿಸಲಾಯಿತು.  ಆದರೆ ಅವರು ಅಡಗುತಾಣಗಳನ್ನು ಬದಲಾಯಿಸುತ್ತಲೇ ಇದ್ದರು.

ಜೆಸಿಪಿ (ಅಪರಾಧ) ಅಲೋಕ್ ಕುಮಾರ್ ಅವರ ತಂಡವು ಮೊದಲು ಗುರ್ಗಾಂವ್ ನಿಂದ ವಿನಿತ್ (31) ನನ್ನು ಬಂಧಿಸಿತು. ಅತ್ಯಾಚಾರ ಸಂತ್ರಸ್ತೆಗೆ ಕಿರುಕುಳ ನೀಡಿದ್ದಾಗಿ ಆತ ಒಪ್ಪಿಕೊಂಡಿದ್ದ ಹಾಗೂ  ತಾನು ಯಾದವ್ ಮತ್ತು ಗೋಯೆಲ್ ಜೊತೆ ಕೆಲಸ ಮಾಡುತ್ತಿರುವುದಾಗಿ ಹೇಳಿದ್ದ. ಗೋಯೆಲ್ ನನ್ನು ನೋಯ್ಡಾ ಮತ್ತು ಯಾದವ್ ಅವರನ್ನು ಚಂಡೀಗಡದಿಂದ ಬಂಧಿಸಲಾಯಿತು.

ಗೋಯೆಲ್,  ಮಿತ್ತಲ್ ನ ಸೋದರ ಮಾವ ಮತ್ತು ಆತನೊಂದಿಗೆ ವ್ಯಾಪಾರದಲ್ಲಿ  ವಿವಾದ ಹೊಂದಿದ್ದ ಎನ್ನುವುದನ್ನು ವಿಚಾರಣೆಯ ವೇಳೆ ಪೊಲೀಸರು ಕಂಡುಕೊಂಡರು.

ದೇಶದ ಅಗ್ಗದ ಸ್ಮಾರ್ಟ್‌ಫೋನ್ ಹಗರಣದ ಹಿಂದೆ ಗೋಯೆಲ್ ಕೂಡ ಇದ್ದಾನೆ. ಆತ ರಿಂಗಿಂಗ್ ಬೆಲ್ಸ್ ಪ್ರೈವೇಟ್ ಲಿಮಿಟೆಡ್ ಅನ್ನು ಸ್ಥಾಪಿಸಿದ್ದ ಹಾಗೂ  ಭಾರತ ಸರಕಾರದ ಡಿಜಿಟಲ್ ಇಂಡಿಯಾ ಕಾರ್ಯಕ್ರಮದ ಅಡಿಯಲ್ಲಿ ಅಗ್ಗದ ದರದಲ್ಲಿ ಫ್ರೀಡಂ 251 ಎಂಬ ಸ್ಮಾರ್ಟ್ ಫೋನ್ ಗಳನ್ನು ಬಿಡುಗಡೆ ಮಾಡಿದ್ದ. ಆತ 48 ವಂಚನೆ ಪ್ರಕರಣಗಳಲ್ಲಿ ಭಾಗಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X