Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಗೋಳಿತ್ತೊಟ್ಟು: ಪಿಡಿಒ ವರ್ಗಾವಣೆ...

ಗೋಳಿತ್ತೊಟ್ಟು: ಪಿಡಿಒ ವರ್ಗಾವಣೆ ವಿರೋಧಿಸಿ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ11 Oct 2021 9:18 PM IST
share
ಗೋಳಿತ್ತೊಟ್ಟು: ಪಿಡಿಒ ವರ್ಗಾವಣೆ ವಿರೋಧಿಸಿ ಪ್ರತಿಭಟನೆ

ಉಪ್ಪಿನಂಗಡಿ: ಗೋಳಿತ್ತೊಟ್ಟು ಗ್ರಾಮ ಪಂಚಾಯತ್ ಪಿಡಿಒ ಪಿ.ವೆಂಕಟೇಶ್‍ರವರ ವರ್ಗಾವಣೆ ವಿರೋಧಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಪ್ರೊ. ಬಿ.ಕೃಷ್ಣಪ್ಪ ಸ್ಥಾಪಿತ ಪುತ್ತೂರು ಮತ್ತು ಕಡಬ ತಾಲೂಕು ಸಮಿತಿ ಹಾಗೂ ಗೋಳಿತ್ತೊಟ್ಟು ಗ್ರಾಮಸ್ಥರ ಸಹಯೋಗದಲ್ಲಿ ಅ.11ರಂದು ಗೋಳಿತ್ತೊಟ್ಟು ಗ್ರಾ.ಪಂ.ಮುಂಭಾಗದಲ್ಲಿ ಪ್ರತಿಭಟನೆ ನಡೆಸಲಾಯಿತು.

ಪ್ರೊ.ಕೃಷ್ಣಪ್ಪ ಸ್ಥಾಪಿತ ದಲಿತ ಸಂಘರ್ಷ ಸಮಿತಿ ದ.ಕ.ಜಿಲ್ಲಾ ಸಂಘಟನಾ ಸಂಚಾಲಕ ಆನಂದ ಮಿತ್ತಬೈಲ್‍ರವರು ಮಾತನಾಡಿ, ಗ್ರಾಮದ ಅಭ್ಯುದಯದ ಚಿಂತನೆ ಹೊಂದಿದ್ದ ಪಿಡಿಒ ವೆಂಕಟೇಶ್‍ರವರ ವರ್ಗಾವಣೆ ಬಿಜೆಪಿಯವರ ನೀಚ ರಾಜಕೀಯಕ್ಕೆ ಸಾಕ್ಷಿಯಾಗಿದೆ. ದಕ್ಷ, ಪ್ರಾಮಾಣಿಕ ಅಧಿಕಾರಿಯಾಗಿರುವ ಪಿ.ವೆಂಕಟೇಶ್‍ರವರು ಉದ್ಯೋಗ ಖಾತ್ರಿ ಯೋಜನೆಯಡಿ ಮಾಡಿರುವ ಅಭಿವೃದ್ಧಿ ಕೆಲಸಗಳಿಗಾಗಿ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪರವರ ಕೈಯಿಂದಲೇ ರಾಜ್ಯ ಪ್ರಶಸ್ತಿ ಪಡೆದುಕೊಂಡಿದ್ದಾರೆ. ಪ್ರಾಮಾಣಿಕ ಅಧಿಕಾರಿಗಳ ಪರ ದಲಿತ ಸಂಘರ್ಷ ಸಮಿತಿ ಹಿಂದೆಯೂ ಹೋರಾಟ ಮಾಡಿದ್ದು ಮುಂದೆಯೂ ಹೋರಾಟ ನಡೆಸಲಿದೆ. ಆದ್ದರಿಂದ ವೆಂಕಟೇಶ್ ವರ್ಗಾವಣೆ ಪ್ರಕರಣದಲ್ಲಿ ಸಚಿವ ಎಸ್.ಅಂಗಾರರವರು ಮಧ್ಯಪ್ರವೇಶಿಸಿ ಸಂಜೆಯೊಳಗೆ ಅವರ ವರ್ಗಾವಣೆ ರದ್ದುಗೊಳಿಸಬೇಕು. ಇಲ್ಲದೇ ಇದ್ದಲ್ಲಿ ಸಚಿವ ಎಸ್.ಅಂಗಾರರವರಿಗೆ ದಲಿತ ಸಂಘರ್ಷ ಸಮಿತಿ ಘೇರಾವ್ ಹಾಕಲಿದೆ ಎಂದು ಎಚ್ಚರಿಸಿದರು.

ಜಿ.ಪಂ.ಮುಖ್ಯ ಕಾರ್ಯನಿರ್ವಾಹಣಾಧಿಕಾರಿಯಾಗಿರುವ ಡಾ.ಕುಮಾರ್ ಅವರೂ ಇಲ್ಲಿನ ಪಿಡಿಒರವರ ವರ್ಗಾವಣೆ ಆದೇಶ ರದ್ದುಗೊಳಿಸಬೇಕು. ಇಲ್ಲದೇ ಇದ್ದಲ್ಲಿ ಜಿ.ಪಂ.ಕಚೇರಿ ಮುಂದೆ ಧರಣಿ ನಡೆಸುವುದಾಗಿಯೂ  ಎಚ್ಚರಿಕೆ ನೀಡಿದರು.

ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುಧೀರ್ ಕುಮಾರ್ ರವರು ಮಾತನಾಡಿ, ದೇಶದಲ್ಲಿ ರೈತರಿಗೆ, ಬಡವರಿಗೆ ಆಗುತ್ತಿರುವ ಬಗ್ಗೆ ದೊಡ್ಡಮಟ್ಟದಲ್ಲಿ ಹೋರಾಟ ನಡೆಸಿದರೂ ಕೇಂದ್ರ ಸರಕಾರ ನ್ಯಾಯಕೊಡಿಸುವಲ್ಲಿ ವಿಫಲವಾಗಿದೆ. ಅಭಿವೃದ್ಧಿ ಕೆಲಸಗಳ ಮೂಲಕ ಗೋಳಿತ್ತೊಟ್ಟು ಗ್ರಾಮ ಪಂಚಾಯತ್ ಅನ್ನು ಮಾದರಿ ಗ್ರಾಮ ಪಂಚಾಯತ್ ಆಗಿ ಮಾಡಲು ಹೊರಟಿರುವ ಪಿಡಿಒ ವೆಂಕಟೇಶ್‍ರವರನ್ನು ಅಭಿವೃದ್ಧಿ ಸಹಿಸದವರ ಷಡ್ಯಂತ್ರದಿಂದ ವರ್ಗಾವಣೆಗೊಳಿಸಲಾಗಿದೆ. ಇದರ ವಿರುದ್ಧ ದಲಿತ ಸಂಘರ್ಷ ಸಮಿತಿ ನಡೆಸುವ ಹೋರಾಟದ ಜೊತೆ ನಾವಿದ್ದೇವೆ ಎಂದರು.

ಪ್ರತಿಭಟನಾ ಸಭೆಯ ಬಳಿಕ ಕಡಬ ತಾಲೂಕು ಪಂಚಾಯತ್ ಸಹಾಯಕ ನಿರ್ದೇಶಕ ಚೆನ್ನಪ್ಪ ಗೌಡರವರ ಮೂಲಕ ಪಿಡಿಒ ವರ್ಗಾವಣೆ ರದ್ದುಗೊಳಿಸುವಂತೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ಹಾಗೂ ಗ್ರಾಮಸ್ಥರ ಪರವಾಗಿ ಪ್ರತ್ಯೇಕ ಮನವಿ ಸಲ್ಲಿಸಲಾಯಿತು.

ಪ್ರತಿಭಟನೆಯಲ್ಲಿ ಜಿ.ಪಂ.ಮಾಜಿ ಸದಸ್ಯರಾದ ಸರ್ವೋತ್ತಮ ಗೌಡ, ಪಿ.ಪಿ.ವರ್ಗೀಸ್, ಕಡಬ ಬ್ಲಾಕ್ ಕಾಂಗ್ರೆಸ್ ಹಿಂದುಳಿದ ವರ್ಗಗಳ ಅಧ್ಯಕ್ಷ ಪೂವಪ್ಪ ಕರ್ಕೇರ, ಕೆಪಿಸಿಸಿ ಸದಸ್ಯ ಕೆ.ಪಿ. ತೋಮಸ್ ನೆಲ್ಯಾಡಿ,   ದ.ಕ.ಜಿಲ್ಲಾ ದಲಿತ ಸೇವಾ ಸಮಿತಿ ಸ್ಥಾಪಕ ಜಿಲ್ಲಾಧ್ಯಕ್ಷ ಸೇಸಪ್ಪ ಬೆದ್ರಕಾಡು, ಕೆಪಿಸಿಸಿ ಸದಸ್ಯರಾದ ಕೃಷ್ಣಪ್ಪ, ಡಾ.ರಘು, ದಲಿತ ಸಂಘರ್ಷ ಸಮಿತಿ ಸುಳ್ಯ ತಾಲೂಕು ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮೀ ಸುಬ್ರಹ್ಮಣ್ಯ, ದಲಿತ ಸಂಘರ್ಷ ಸಮಿತಿ ಪುತ್ತೂರು ತಾಲೂಕು ಸಂಘಟನಾ ಸಂಚಾಲಕ ಹರೀಶ್, ಶೋಷಿತ ಸಮುದಾಯಗಳ ವೇದಿಕೆ ಅಧ್ಯಕ್ಷ ಶಶಿಧರ ಬೊಟ್ಟಡ್ಕ, ತಾ.ಪಂ. ಮಾಜಿ ಸದಸ್ಯೆ ಉಷಾ ಅಂಚನ್,  ದಲಿತ ಸಂಘರ್ಷ ಸಮಿತಿ ಪುತ್ತೂರು ತಾಲೂಕು ಸಮಿತಿ ಸಂಚಾಲಕ ಸೇಸಪ್ಪ ನೆಕ್ಕಿಲು, ದಲಿತ ಸಂಘರ್ಷ ಸಮಿತಿ ಕಡಬ ತಾಲೂಕು ಮಹಿಳಾ ಘಟಕದ ಸಂಚಾಲಕಿ ಯಶೋಧ, ಕಡಬ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಅಭಿಲಾಷ್ ಪಿ.ಕೆ., ಕಡಬ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಅಶ್ರಫ್ ಶೇಡಿಗುಂಡಿ ಮತ್ತಿತರರು ಉಪಸ್ಥಿತರಿದ್ದರು.

ಪುತ್ತೂರು ತಾಲೂಕು ದಲಿತ ಸಂಘರ್ಷ ಸಮಿತಿ ಸಂಚಾಲಕ ಗಣೇಶ ಗುರಿಯಾನ, ದಲಿತ ಮುಖಂಡ ಕೆ.ಪಿ.ಆನಂದ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X