Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸರಕಾರಿ ತೈಲ ಕಂಪನಿಗಳು ಘೋಷಿತ ಆರ್ಥಿಕ...

ಸರಕಾರಿ ತೈಲ ಕಂಪನಿಗಳು ಘೋಷಿತ ಆರ್ಥಿಕ ಅಪರಾಧಿಗಳ ಜೊತೆ ವ್ಯವಹರಿಸುತ್ತಿವೆ: ಕಾಂಗ್ರೆಸ್ ಆರೋಪ

ವಾರ್ತಾಭಾರತಿವಾರ್ತಾಭಾರತಿ11 Oct 2021 4:22 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಸರಕಾರಿ ತೈಲ ಕಂಪನಿಗಳು ಘೋಷಿತ ಆರ್ಥಿಕ ಅಪರಾಧಿಗಳ ಜೊತೆ ವ್ಯವಹರಿಸುತ್ತಿವೆ: ಕಾಂಗ್ರೆಸ್ ಆರೋಪ

ಹೊಸದಿಲ್ಲಿ,ಅ.11: ಸರಕಾರವು ಆರ್ಥಿಕ ಅಪರಾಧಿಗಳು ಪಾರಾಗಲು ಅವಕಾಶ ನೀಡುತ್ತಿರುವುದು ಮಾತ್ರವಲ್ಲ,ಅವರೊಂದಿಗೆ ವ್ಯವಹಾರವನ್ನೂ ನಡೆಸುತ್ತಿದೆ ಎಂದು ಕಾಂಗ್ರೆಸ್ ಸೋಮವಾರ ಆರೋಪಿಸಿದೆ. ಸರಕಾರವು ಸ್ಟರ್ಲಿಂಗ್ ಬಯೊಟೆಕ್ ಸಮೂಹಕ್ಕೆ ಸೇರಿದ ಸ್ಟರ್ಲಿಂಗ್ ಆಯಿಲ್ ಎಕ್ಸ್ಪ್ಲೊರೇಷನ್ ಆ್ಯಂಡ್ ಪ್ರೊಡಕ್ಷನ್ ಕಂಪನಿ ಲಿ.(ಸೀಪ್ಕೊ)ನ ಮೂಲಕ ಕಚ್ಚಾ ತೈಲವನ್ನು ಆಮದು ಮಾಡಿಕೊಳ್ಳುವುದನ್ನು ಮುಂದುವರಿಸಿದೆ ಎಂದು ಅದು ಬೆಟ್ಟು ಮಾಡಿದೆ.

ಕಳೆದ ವರ್ಷದ ಸೆಪ್ಟಂಬರ್ನಲ್ಲಿ ವಿಶೇಷ ನ್ಯಾಯಾಲಯವೊಂದು ಬ್ಯಾಂಕುಗಳಿಂದ 15,000 ಕೋ.ರೂ.ಸಾಲವನ್ನು ಪಡೆದುಕೊಂಡು ವಂಚಿಸಿದ್ದಕ್ಕಾಗಿ ಸ್ಟರ್ಲಿಂಗ್ ಬಯೊಟೆಕ್ ಸಮೂಹದ ಪ್ರವರ್ತಕರಾದ ನಿತಿನ್ ಸಂದೇಸರಾ ಮತ್ತು ಚೇತನ ಸಂದೇಸರಾ ಅವರನ್ನು ಆರ್ಥಿಕ ಅಪರಾಧಿಗಳೆಂದು ಘೋಷಿಸಿತ್ತು.

ಡೀಸೆಲ್,ಪೆಟ್ರೋಲ್ ಮತ್ತು ಅಡಿಗೆ ಅನಿಲ ಬೆಲೆಗಳಲ್ಲಿ ತೀವ್ರ ಏರಿಕೆಯಿಂದ ಭಾರತೀಯರು ತತ್ತರಿಸಿದ್ದರೆ ದೇಶಭ್ರಷ್ಟರು ಪ್ರಗತಿಯನ್ನು ಹೊಂದುತ್ತಿದ್ದಾರೆ ಎಂದು ಇಲ್ಲಿ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದ ಕಾಂಗ್ರೆಸ್ ವಕ್ತಾರ ಗೌರವ ವಲ್ಲಭ್ ಅವರು,ನಿಜವಾದ ‘ವಿಕಾಸ’ ಮತ್ತು ‘ಅಚ್ಚೇ ದಿನ್’ ಕೇವಲ ಸುಸ್ತಿದಾರರು ಮತ್ತು ದೇಶಭ್ರಷ್ಟರಿಗಾಗಿ ಇರುವಂತಿದೆ ಎಂದರು.
 2017,ಅಕ್ಟೋಬರ್ನಲ್ಲಿ ಜಾರಿ ನಿರ್ದೇಶನಾಲಯವು ಸ್ಟರ್ಲಿಂಗ್ ಬಯೊಟೆಕ್ ಮತ್ತು ಸಂದೇಸರಾ ಸೋದರರ ವಿರುದ್ಧ ಅಕ್ರಮ ಹಣ ವರ್ಗಾವಣೆ ಪ್ರಕರಣವನ್ನು ದಾಖಲಿಸಿತ್ತು. ಪ್ರಕರಣ ದಾಖಲಾಗುವುದಕ್ಕೆ ಕೆಲವೇ ಸಮಯದ ಮೊದಲು ನಿತಿನ್,ಚೇತನ್,ಆತನ ಪತ್ನಿ ದೀಪ್ತಿ ಮತ್ತು ಸಹವರ್ತಿ ಹಿತೇಶಕುಮಾರ ನರೇಂದ್ರಭಾಯಿ ಪಟೇಲ್ ಅವರು ದೇಶದಿಂದ ಪರಾರಿಯಾಗಿದ್ದರು.
ಸುದ್ದಿಗೋಷ್ಠಿಯಲ್ಲಿ ಆರ್ಟಿಐ ಉತ್ತರವೊಂದನ್ನು ಪ್ರದರ್ಶಿಸಿದ ವಲ್ಲಭ್,ಅವರನ್ನು ಕಾನೂನಿನ ವಿಚಾರಣೆಗಾಗಿ ಮರಳಿ ತರಲು ಪ್ರಯತ್ನಗಳ ಬದಲು ಸರಕಾರವು ಅವರಿಂದ ಕಚ್ಚಾ ತೈಲವನ್ನು ಖರೀದಿಸುತ್ತಿದೆ. 2018,ಜ.1 ಮತ್ತು 2020,ಮೇ 31ರ ನಡುವೆ ಸರಕಾರಿ ಸ್ವಾಮ್ಯದ ತೈಲ ಕಂಪನಿಗಳು ಸೀಪ್ಕೊ ನೈಜೀರಿಯಾದಿಂದ 5,701.83 ಕೋ.ರೂ.ಮೌಲ್ಯದ ಕಚ್ಚಾ ತೈಲವನ್ನು ಆಮದು ಮಾಡಿಕೊಂಡಿವೆ ಎಂದು ಹೇಳಿದರು.

ಮೋದಿ ಸರಕಾರವು ಸಂದೇಸರಾ ಸೋದರರನ್ನು ದೇಶಭ್ರಷ್ಟ ಆರ್ಥಿಕ ಅಪರಾಧಿಗಳೆಂದು ಪರಿಗಣಿಸಿದೆಯೇ ಮತ್ತು ಪರಿಗಣಿಸಿದ್ದರೆ ಸರಕಾರಿ ಸ್ವಾಮ್ಯದ ತೈಲ ಕಂಪನಿಗಳು ಈಗಲೂ ಅವರೊಂದಿಗೆ ವ್ಯವಹಾರವನ್ನು ಹೇಗೆ ಮುಂದುವರಿಸಿವೆ ಎಂದು ವಲ್ಲಭ್ ಪ್ರಶ್ನಿಸಿದರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X