Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನಾಸ್ಕಾಂ ಜತೆ ಉನ್ನತ ಶಿಕ್ಷಣ ಪರಿಷತ್...

ನಾಸ್ಕಾಂ ಜತೆ ಉನ್ನತ ಶಿಕ್ಷಣ ಪರಿಷತ್ ಒಡಂಬಡಿಕೆ: ವಿದ್ಯಾರ್ಥಿಗಳಲ್ಲಿ ಕೌಶಲ್ಯ ವೃದ್ಧಿಯ ಗುರಿ

ಪದವಿಯ ಮೂರು ವರ್ಷಗಳಲ್ಲಿ 3 ಕೋರ್ಸ್ ಲಭ್ಯ: ಟ್ಯಾಬ್ಲೆಟ್, ಸ್ಮಾರ್ಟ್‍ಫೋನ್ ಮೂಲಕವೂ ಕಲಿಕೆಗೆ ಅವಕಾಶ

ವಾರ್ತಾಭಾರತಿವಾರ್ತಾಭಾರತಿ12 Oct 2021 11:33 PM IST
share
ನಾಸ್ಕಾಂ ಜತೆ ಉನ್ನತ ಶಿಕ್ಷಣ ಪರಿಷತ್ ಒಡಂಬಡಿಕೆ: ವಿದ್ಯಾರ್ಥಿಗಳಲ್ಲಿ ಕೌಶಲ್ಯ ವೃದ್ಧಿಯ ಗುರಿ

► ಪ್ರತಿವರ್ಷ 5 ಲಕ್ಷ ವಿದ್ಯಾರ್ಥಿಗಳಿಗೆ ಲಾಭ

ಬೆಂಗಳೂರು, ಅ. 12: `ಉದ್ಯಮರಂಗವು ನಿರೀಕ್ಷಿಸುವಂತಹ ಕೌಶಲ್ಯಗಳನ್ನು ವಿದ್ಯಾರ್ಥಿಗಳಲ್ಲಿ ಬೆಳೆಸುವ ಮಹತ್ವಾಕಾಂಕ್ಷೆಯಿಂದ `ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತು' ಇಂದು `ನಾಸ್ಕಾಂ'(ನ್ಯಾಷನಲ್ ಅಸೋಸಿಯೇಷನ್ ಆಫ್ ಸಾಫ್ಟ್‍ವೇರ್ ಅಂಡ್ ಸರ್ವೀಸ್ ಕಂಪೆನೀಸ್) ಜೊತೆ ಒಡಂಬಡಿಕೆಗೆ ಸಹಿ ಹಾಕಿತು. 

ಮಂಗಳವಾರ ವಿಧಾನಸೌಧದಲ್ಲಿ ನಡೆದ ಸಮಾರಂಭದಲ್ಲಿ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರ ಸಮ್ಮುಖದಲ್ಲಿ ಒಡಂಬಡಿಕೆಗೆ ಅಂಕಿತ ಹಾಕಲಾಯಿತು. ಬಳಿಕ ಮಾತನಾಡಿದ ಡಾ.ಅಶ್ವತ್ಥ ನಾರಾಯಣ, `ಒಡಂಬಡಿಕೆಯು ರಾಜ್ಯದ ಎಲ್ಲ ಸರಕಾರಿ ಮತ್ತು ಖಾಸಗಿ ಕಾಲೇಜು/ವಿಶ್ವ ವಿದ್ಯಾಲಯಗಳಲ್ಲಿ ಓದುವ ವಿದ್ಯಾರ್ಥಿಗಳಿಗೆ ಅನ್ವಯವಾಗಲಿದೆ. ಇದರಿಂದ ಪ್ರತೀವರ್ಷ 5 ಲಕ್ಷ ವಿದ್ಯಾರ್ಥಿಗಳಿಗೆ ಮತ್ತು ಬೋಧಕರಿಗೆ ಲಾಭವಾಗಲಿದೆ' ಎಂದು ಹೇಳಿದರು. 

`ಈ ಉಪಕ್ರಮದಿಂದಾಗಿ ನಾಸ್ಕಾಂನ `ಫ್ಯೂಚರ್ ಸ್ಕಿಲ್ಸ್ ಪ್ರೈಮ್' ವೇದಿಕೆಯಲ್ಲಿರುವ ಕೌಶಲ್ಯಾಭಿವೃದ್ಧಿ ಕೋರ್ಸುಗಳು ರಾಜ್ಯದ ಪದವಿ ವಿದ್ಯಾರ್ಥಿಗಳಿಗೆ ಮತ್ತು ಬೋಧಕರಿಗೆ ಆನ್‍ಲೈನ್ ಮೂಲಕ ಸುಲಭವಾಗಿ ಲಭ್ಯವಾಗಲಿವೆ. ಈ ಒಡಂಬಡಿಕೆಯಲ್ಲಿ ಗುಣಮಟ್ಟದಿಂದ ಕೂಡಿರುವ ಕೋರ್ಸುಗಳು, ಬೋಧಕ ಸಿಬ್ಬಂದಿಗೆ ತರಬೇತಿ ಮತ್ತು ಮೂಲಸೌಲಭ್ಯ ಸಂಪನ್ಮೂಲಗಳ ಅಭಿವೃದ್ಧಿಗೆ ಆದ್ಯ ಗಮನ ಕೊಡಲಾಗಿದೆ' ಎಂದು ಅವರು ತಿಳಿಸಿದರು. 

ಮೂರು ವರ್ಷಕ್ಕೆ ಮೂರು ಕೋರ್ಸ್: `ಈ ಒಡಂಬಡಿಕೆಯ ಫಲವಾಗಿ, ಕಂಪ್ಯೂಟರ್ ವಿಜ್ಞಾನವನ್ನು ಹೊರತುಪಡಿಸಿ ಬೇರೆ ವಿಭಾಗಗಳಲ್ಲಿರುವ ವಿದ್ಯಾರ್ಥಿಗಳಿಗೆ ಮತ್ತು ಬೋಧಕರಿಗೆ ಪದವಿಯ ಮೊದಲನೇ ವರ್ಷದಲ್ಲಿ ಡಿಜಿಟಲ್ ಫ್ಲೂಯೆನ್ಸಿ, ಎರಡನೇ ವರ್ಷದಲ್ಲಿ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ (ಎಐ) ಮತ್ತು ಮೂರನೇ ವರ್ಷದಲ್ಲಿ ಸೈಬರ್ ಸೆಕ್ಯುರಿಟಿ ಕೋರ್ಸುಗಳು ಲಭ್ಯವಾಗಲಿದ್ದು, ಇವುಗಳ ಕಲಿಕೆ ಕಡ್ಡಾಯವಾಗಿದೆ. ಈ ಕೋರ್ಸುಗಳನ್ನು ಮೈಕ್ರೋಸಾಫ್ಟ್ ಮತ್ತು ಸಿಸ್ಕೋ ಕಂಪೆನಿಗಳು ರೂಪಿಸಿದ್ದು, ಇವುಗಳ ಮೂಲಕ ವಿದ್ಯಾರ್ಥಿಗಳಿಗೆ ಕೌಶಲ್ಯಗಳನ್ನು ಕಲಿಸಲಾಗುವುದು. ಇದನ್ನು ಕಲಿಯಲು ಯಾವುದೇ ಶುಲ್ಕದ ಹೊರೆ ಇರುವುದಿಲ್ಲ' ಎಂದು ಅವರು ವಿವರಿಸಿದರು. 

`ವಿದ್ಯಾರ್ಥಿಗಳು ತಮ್ಮ ಬಳಿ ಇರುವ ಟ್ಯಾಬ್ಲೆಟ್ ಮತ್ತು ಸ್ಮಾರ್ಟ್ ಫೋನುಗಳ ಮೂಲಕವೂ ಈ ಆನ್‍ಲೈನ್ ಕೋರ್ಸುಗಳನ್ನು ಸುಲಭವಾಗಿ ಕಲಿಯಬಹುದು. ನಾಸ್ಕಾಂನ ಈ ಕೋರ್ಸುಗಳು ಎನ್‍ಎಸ್‍ಕ್ಯೂಎಫ್ (ನ್ಯಾಷನಲ್ ಸ್ಕಿಲ್ಸ್ ಕ್ವಾಲಿಫಿಕೇಶನ್ ಫ್ರೇಂವರ್ಕ್) ರೂಪಿಸಿರುವ ಗುಣಮಟ್ಟ ಮಾನದಂಡಗಳಿಗೆ ಅನುಗುಣವಾಗಿವೆ' ಎಂದು ಡಾ.ಅಶ್ವತ್ಥ ನಾರಾಯಣ ನುಡಿದರು. 

`ನೂತನ ರಾಷ್ಟ್ರೀಯ ಶಿಕ್ಷಣ ನೀತಿಯು ವಿದ್ಯಾರ್ಥಿಗಳಲ್ಲಿ ಉದ್ಯೋಗಕ್ಷೇತ್ರವು ಬೇಡುವಂತಹ ಕೌಶಲ್ಯಗಳನ್ನು ಬೆಳೆಸಲು ಒತ್ತು ಕೊಟ್ಟಿದೆ. ಇದರಂತೆ, ಭಾರತವನ್ನು ಪ್ರವರ್ಧಮಾನಕ್ಕೆ ಬರುತ್ತಿರುವ ತಂತ್ರಜ್ಞಾನ ಕ್ಷೇತ್ರಗಳಲ್ಲಿ ಕೌಶಲ್ಯಪೂರ್ಣ ಪ್ರತಿಭೆಗಳ ತೊಟ್ಟಿಲನ್ನಾಗಿ ಮಾಡುವುದು ಕೇಂದ್ರ ಸರಕಾರದ ಆಶಯವಾಗಿದೆ. ಇದಕ್ಕೆ ಪೂರಕವಾಗಿ ಕೇಂದ್ರ ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯವು ಇಡೀ ದೇಶದಲ್ಲಿ ನಾಸ್ಕಾಂ ಜೊತೆ ಸೇರಿಕೊಂಡು ಇಂತಹ ಒಡಂಬಡಿಕೆಗಳಿಗೆ ಅವಕಾಶ ಮಾಡಿಕೊಟ್ಟಿದೆ. ಈ ಮೂಲಕ ರಾಜ್ಯದಲ್ಲೂ ಡಿಜಿಟಲ್ ಯುಗಕ್ಕೆ ಸಮರ್ಥವಾಗಿ ಪರಿವರ್ತನೆ ಹೊಂದಲಾಗುವುದು. ಇದಕ್ಕಾಗಿ ರಾಜ್ಯ ಸರಕಾರವು ಯಾವುದೇ ವೆಚ್ಚವನ್ನು ಮಾಡಬೇಕಾಗಿಲ್ಲ' ಎಂದು ಅವರು ವಿವರಿಸಿದರು. 

`ದೇಶದ ಐ.ಟಿ. ಸೇವಾ ವಲಯವು ಈಗ ವರ್ಷಕ್ಕೆ 150 ಶತಕೋಟಿ ಡಾಲರ್ ವಹಿವಾಟು ನಡೆಸುತ್ತಿದೆ. ಇದು 2025ರ ಹೊತ್ತಿಗೆ 350 ಶತಕೋಟಿ ಡಾಲರ್ ವಹಿವಾಟು ನಡೆಸುವ ಮಟ್ಟಕ್ಕೆ ಬೆಳೆಯಲಿದೆ. ಈಗ ರಾಷ್ಟ್ರದಲ್ಲಿರುವ ಡಿಜಿಟಲ್ ಪ್ರತಿಭಾವಂತರಿಗಿಂತ ಎಂಟು ಪಟ್ಟು ಹೆಚ್ಚಿನ ಬೇಡಿಕೆ ಇದ್ದು, 2024ರ ಹೊತ್ತಿಗೆ ಇದು 20 ಪಟ್ಟು ಹೆಚ್ಚಾಗಲಿದೆ. ಇದನ್ನೆಲ್ಲ ಗಂಭೀರವಾಗಿ ಪರಿಗಣಿಸಿ, ಹೊಸ ಹೆಜ್ಜೆಗಳನ್ನು ಇಡಲಾಗುತ್ತಿದೆ' ಎಂದು ಅವರು ಮಾಹಿತಿ ನೀಡಿದರು. 

`ದೇಶದಲ್ಲಿ ಈಗ ಸಾಕಷ್ಟು ಉದ್ಯೋಗಗಳು ಲಭ್ಯವಾಗುತ್ತಿವೆ. ಆದರೆ, ಅದಕ್ಕೆ ಅರ್ಹರಾದ ಅಭ್ಯರ್ಥಿಗಳೇ ಹೆಚ್ಚಿನ ಸಂಖ್ಯೆಯಲ್ಲಿ ಇಲ್ಲ. ಇಂದು ತಂತ್ರಜ್ಞಾನದ ನೆರವಿಲ್ಲದೆ ಯಾವ ವೃತ್ತಿಯನ್ನೂ ಸಮರ್ಥವಾಗಿ ನಿರ್ವಹಿಸಲು ಸಾಧ್ಯವಿಲ್ಲ. ಇದನ್ನು ಮನಗಂಡು, ನಾವು ಸಕಾರಾತ್ಮಕವಾಗಿ ಇಂತಹ ಹೆಜ್ಜೆಗಳನ್ನು ಇಡುತ್ತಿದ್ದೇವೆ. ಎನ್‍ಇಪಿ ಜಾರಿಯಲ್ಲಿ ಕರ್ನಾಟಕವು ರಾಜ್ಯಗಳಿಗಿಂತ ಮುಂಚೂಣಿಯಲ್ಲಿದೆ' ಎಂದು ಅವರು ಹೇಳಿದರು. 

ನಾಸ್ಕಾಂ ಪರವಾಗಿ ನವನೀತ್ ಸಮೈಯಾರ್ ಮತ್ತು ದಿನೇಶ್ ಕುಮಾರ್ ಪಾಣಿಗ್ರಾಹಿ ಇದ್ದು, ಒಪ್ಪಂದ ಪತ್ರಗಳನ್ನು ವಿನಿಮಯ ಮಾಡಿಕೊಂಡರು. ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿನ ಉಪಾಧ್ಯಕ್ಷ  ಪ್ರೊ.ಬಿ.ತಿಮ್ಮೇಗೌಡ, ಕಾರ್ಯನಿರ್ವಾಹಕ ನಿರ್ದೇಶಕ ಪ್ರೊ.ಗೋಪಾಲಕೃಷ್ಣ ಜೋಶಿ, ಆಡಳಿತಾಧಿಕಾರಿ ಡಾ.ಟಿ.ಎನ್.ತಾಂಡವೇಗೌಡ ಈ ಸಂದರ್ಭದಲ್ಲಿ ಉಪಸ್ಥಿತರಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X