Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ''ಅವರ ತಂದೆ ಇದ್ದ ಹುದ್ದೆ ಪುಟಗೋಸಿಯೇ'':...

''ಅವರ ತಂದೆ ಇದ್ದ ಹುದ್ದೆ ಪುಟಗೋಸಿಯೇ'': ಎಚ್‍ಡಿಕೆಗೆ ಸಿದ್ದರಾಮಯ್ಯ ತಿರುಗೇಟು

ವಾರ್ತಾಭಾರತಿವಾರ್ತಾಭಾರತಿ13 Oct 2021 6:18 PM IST
share
ಅವರ ತಂದೆ ಇದ್ದ ಹುದ್ದೆ ಪುಟಗೋಸಿಯೇ: ಎಚ್‍ಡಿಕೆಗೆ  ಸಿದ್ದರಾಮಯ್ಯ ತಿರುಗೇಟು

ಕಲಬುರಗಿ, ಅ. 13: `ಒಬ್ಬ ಮಾಜಿ ಮುಖ್ಯಮಂತ್ರಿ ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ಕೊಡುವ ಗೌರವ ಅವರ ಮಾತಿನಿಂದಲೇ ತಿಳಿಯುತ್ತಿದೆ. ದೇವರಾಜ ಅರಸು ಮುಖ್ಯಮಂತ್ರಿ ಆಗಿದ್ದಾಗ ದೇವೇಗೌಡರು ವಿರೋಧ ಪಕ್ಷದ ನಾಯಕರಾಗಿದ್ದರು, ಅವರ ತಂದೆ ಇದ್ದ ಹುದ್ದೆ `ಪುಟಗೋಸಿ' ಹುದ್ದೆಯಾ ಎಂದು ಕುಮಾರಸ್ವಾಮಿ ಅವರೇ ಹೇಳಬೇಕು' ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಬುಧವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, `ಸಮ್ಮಿಶ್ರ ಸರಕಾರದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ತೊರೆದು ಬಿಜೆಪಿ ಸೇರಿದವರು ಒಟ್ಟು 17 ಜನ. ಇದರಲ್ಲಿ ಜೆಡಿಎಸ್‍ನ ಶಾಸಕರು 3 ಜನರಿದ್ದಾರೆ. ಅವರನ್ನು ನಾನೇ ಕಳಿಸಿದ್ದಾ? ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ಪುಟಗೋಸಿ ಹುದ್ದೆ ಎಂದು ಕರೆದಿರುವ ಕುಮಾರಸ್ವಾಮಿ ಹೇಳಿಕೆ ಸಂವಿಧಾನಾತ್ಮಕ ಹುದ್ದೆಗೆ ಮಾಡಿದ ಅವಮಾನ' ಎಂದು ಆಕ್ರೋಶ ವ್ಯಕ್ತಪಡಿಸಿದರು.

`ವಿಶ್ವಾಸ ಮತ ಗೊತ್ತುವಳಿ ವೇಳೆ ಕುಮಾರಸ್ವಾಮಿ ಏನೆಂದು ಭಾಷಣ ಮಾಡಿದ್ರು? ಯಡಿಯೂರಪ್ಪ ಆಪರೇಷನ್ ಕಮಲ ಮಾಡಿ, ಅಧಿಕಾರ ಮತ್ತು ಹಣದಾಸೆಗೆ ನಮ್ಮ ಶಾಸಕರನ್ನು ಬಿಜೆಪಿ ಖರೀದಿ ಮಾಡಿದ್ದರಿಂದ ನನ್ನ ಸರಕಾರ ಹೋಗಿದೆ ಎಂದು ಹೇಳಿದರೆ, ಹೊರತು ಸಿದ್ದರಾಮಯ್ಯ ಪಕ್ಷದ ಶಾಸಕರನ್ನು ಬಿಜೆಪಿಗೆ ಕಳುಹಿಸಿದರು ಎಂದು ಹೇಳಿದ್ರಾ? ನಾನು ಅವರನ್ನು ಕಳುಹಿಸಿದರೆ ಅಂದೇ ಹೇಳಬೇಕಿತ್ತು, ಉತ್ತರ ಕೊಡ್ತಿದ್ದೆ. ಕುಮಾರಸ್ವಾಮಿಗೆ ಎಷ್ಟು ನಾಲಿಗೆ ಇದೆ?' ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.

`ಇದೀಗ ಕುಮಾರಸ್ವಾಮಿ ಮೈಸೂರಿನ ಜನರನ್ನು ನನ್ನ ವಿರುದ್ಧ ಎತ್ತಿಕಟ್ಟಲು ಇಂತಹ ಕೀಳುಮಟ್ಟದ ರಾಜಕೀಯ ಹೇಳಿಕೆ ನೀಡುತ್ತಿದ್ದಾರೆ. ಸರಕಾರ ಬೀಳುವ ಹಂತಕ್ಕೆ ಹೋದಾಗ ಕುಮಾರಸ್ವಾಮಿ ಅಮೇರಿಕ ಹೋಗಿ ಕೂತಿದ್ದು ಏಕೆ? ನಾನೇ ಫೋನ್ ಮಾಡಿ ಕುಮಾರಸ್ವಾಮಿ ಅವರೆ ಸರಕಾರ ಬೀಳುವ ಹಂತಕ್ಕೆ ಹೋಗಿದೆ, ಭಾರತಕ್ಕೆ ಬನ್ನಿ ಎಂದು ಕರೆದರೆ ಇವತ್ತು ಬರ್ತೀನಿ, ನಾಳೆ ಬರ್ತೀನಿ ಎಂದು ಹೇಳುತ್ತಾ ಅಮೇರಿಕಾದಲ್ಲೇ 9 ದಿನ ಕಳೆದರು' ಎಂದು ಸಿದ್ದರಾಮಯ್ಯ ಮಾಹಿತಿ ನೀಡಿದರು.

`ಮುಖ್ಯಮಂತ್ರಿಯಾದವರು ತಾಜ್ ವೆಸ್ಟಂಡ್ ಹೊಟೇಲ್‍ನಲ್ಲಿ ಕೂತು ಸರಕಾರ ನಡೆಸೋದಾ? ಒಬ್ಬ ಶಾಸಕನನ್ನು, ಸಚಿವನನ್ನು ಭೇಟಿ ಮಾಡದೆ ಸರಕಾರ ನಡೆಸಲು ಆಗುತ್ತಾ? ಈ ಕಾರಣಕ್ಕೆ ಕುಮಾರಸ್ವಾಮಿ ಅವರ ಸರಕಾರ ಹೋಗಿದ್ದು. ಇದು ಹತ್ತೋ, ಹನ್ನೆರಡನೇ ಬಾರಿಯೋ ಈ ಆರೋಪವನ್ನು ಅವರು ಮಾಡಿದ್ದಾರೆ, ನನಗೂ ಪದೇ ಪದೇ ಉತ್ತರ ಕೊಟ್ಟು ಸಾಕಾಗಿದೆ. ಮತ್ತೆ ಇಂತಹ ಆರೋಪಗಳಿಗೆ ನಾನು ಉತ್ತರ ಕೊಡುವುದಿಲ್ಲ' ಎಂದು ಅವರು ನುಡಿದರು.

`ಬಿಎಸ್‍ವೈ ಹುಟ್ಟುಹಬ್ಬದ ದಿನ ಅವರನ್ನು ನಾನು ಕಡೇ ಬಾರಿ ಭೇಟಿಯಾದದ್ದು, ಆಮೇಲೆ ಒಂದು ದಿನವೂ ಅವರನ್ನು ವೈಯಕ್ತಿಕವಾಗಿ ಭೇಟಿಯಾಗಿಲ್ಲ. ಒಮ್ಮೆಯಾದರೂ ಭೇಟಿ ಮಾಡಿದ್ದನ್ನು ಸಾಬೀತು ಮಾಡಿದರೆ ನಾನು ರಾಜಕೀಯವಾಗಿ ನಿವೃತ್ತಿಯಾಗಲು ಸಿದ್ಧನಿದ್ದೇನೆ. ಯಡಿಯೂರಪ್ಪ ಅವರನ್ನು ಮೇಲಿಂದ ಮೇಲೆ ಭೇಟಿಯಾಗೋದೆ ಕುಮಾರಸ್ವಾಮಿ. ಬಿಎಸ್‍ವೈ ಬಿಜೆಪಿಯ ಮಾಜಿ ಸಿಎಂ, ಕೇಂದ್ರದಲ್ಲಿ ಬಿಜೆಪಿ ಸರಕಾರ ಇದೆ, ಗೃಹ ಸಚಿವ ಅಮಿತ್ ಶಾ ಬಿಜೆಪಿಯವರು, ನಾನು ವಿಪಕ್ಷ ನಾಯಕ, ನನ್ನ ಮಾತು ಕೇಳಿ ಮೋದಿ, ಯಡಿಯೂರಪ್ಪ ಅವರ ಆಪ್ತರ ಮನೆ ಮೇಲೆ ಐಟಿ ದಾಳಿ ಮಾಡಿಸ್ತಾರಾ? ಇಂತಹಾ ಆರೋಪಕ್ಕೆ ನಗುಬಹುದು ಅಷ್ಟೆ' ಎಂದು ಅವರು ಪ್ರಶ್ನೆ ಮಾಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X