Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸದೃಢ ರಾಷ್ಟ್ರ ನಿರ್ಮಾಣ ಯುವಜನತೆಯಿಂದ...

ಸದೃಢ ರಾಷ್ಟ್ರ ನಿರ್ಮಾಣ ಯುವಜನತೆಯಿಂದ ಸಾಧ್ಯ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

ವಾರ್ತಾಭಾರತಿವಾರ್ತಾಭಾರತಿ13 Oct 2021 10:14 PM IST
share
ಸದೃಢ ರಾಷ್ಟ್ರ ನಿರ್ಮಾಣ ಯುವಜನತೆಯಿಂದ ಸಾಧ್ಯ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

ಬೆಂಗಳೂರು, ಅ. 13: ಯುವಜನತೆಯ ಅಪಾರ ಶಕ್ತಿಯನ್ನು ಸಾಮಾಜಿಕ ಕಲ್ಯಾಣ ಮತ್ತು ರಾಷ್ಟ್ರ ನಿರ್ಮಾಣಕ್ಕೆ ಬಳಸುವುದು ಅಗತ್ಯವಾಗಿದ್ದು, ಸ್ವಾಮಿ ವಿವೇಕಾನಂದರ ಆಶಯದಂತೆ ಸಮಾಜದಲ್ಲಿ ಉತ್ತಮ ಬದಲಾವಣೆ ತರುವ ಸಾಮಥ್ರ್ಯವಿರುವಂತಹ ಯುವಜನರಲ್ಲಿ ಸಕರಾತ್ಮಕ ಶಕ್ತಿ ಮತ್ತು ಉತ್ಸಾಹವನ್ನು ತುಂಬುವ ಕಾರ್ಯವನ್ನು ನಾವೆಲ್ಲರೂ ಮಾಡಬೇಕಾಗಿದೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೇಳಿದ್ದಾರೆ.

ಬುಧವಾರ ಜಯನಗರದಲ್ಲಿ ಯುವ ಸಂಘದ ಯುವ ಪಥ ಅಮೃತಮಹೋತ್ಸವ ಕಟ್ಟಡ ಲೋಕಾರ್ಪಣೆ ಮಾಡಿ ಮಾತನಾಡಿದ ಅವರು, ಯುವಜನತೆ ದೇಶದ ಭವಿಷ್ಯ ಹಾಗೂ ದೇಶದ ಅಭಿವೃದ್ಧಿಯ ಪ್ರಮುಖ ಭಾಗವಾಗಿದ್ದಾರೆ. ರಾಷ್ಟ್ರೀಯ ಯುವ ನೀತಿ-2014ಅನ್ನು ಭಾರತ ಸರಕಾರವು ಜಾರಿಗೆ ತಂದಿದೆ, ಇದರ ಉದ್ದೇಶ ಯುವಕರ ಸಾಮಥ್ರ್ಯವನ್ನು ಗುರುತಿಸುವುದು ಮತ್ತು ಸಬಲೀಕರಣಗೊಳಿಸುವುದು ಮತ್ತು ಈ ಮೂಲಕ ಭಾರತಕ್ಕೆ ವಿಶ್ವದಲ್ಲಿ ಸರಿಯಾದ ಸ್ಥಾನವನ್ನು ನೀಡುವುದು ಎಂದು ಮಾಹಿತಿ ನೀಡಿದರು.

ಈ ದೇಶದ ಮೇಲೆ ಯಾವಾಗ ಬಿಕ್ಕಟ್ಟಿನ ಮೋಡಗಳು ಆವರಿಸಿಕೊಂಡಿದ್ದವು ಎನ್ನುವುದಕ್ಕೆ ಇತಿಹಾಸವು ಸಾಕ್ಷಿಯಾಗಿದೆ. ಆ ಸಮಯದಲ್ಲಿ ಯುವ ಪೀಳಿಗೆಯು ತಮ್ಮ ಸ್ವಾರ್ಥ ಮತ್ತು ಸೌಕರ್ಯಗಳನ್ನು ತ್ಯಾಗ ಮಾಡುವ ಮೂಲಕ ದೇಶದ ಭದ್ರತೆಯಲ್ಲಿ ತಮ್ಮ ಸಂಪೂರ್ಣ ಸಹಕಾರವನ್ನು ನೀಡಿದೆ. ಸ್ವದೇಶಿ ಚಳುವಳಿಯಾಗಿರಲಿ ಅಥವಾ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಟವಾಗಿರಲಿ, ದೇಶದ ಯುವಕರು ತಮ್ಮ ಎಲ್ಲ ಶಕ್ತಿಯಿಂದ ಉತ್ಸಾಹದಿಂದ ಭಾಗವಹಿಸಿದರು ಮತ್ತು ಅದನ್ನು ಮುಂದುವರಿಸಲು ತಮ್ಮ ಸಂಪೂರ್ಣ ಸಹಕಾರವನ್ನು ನೀಡುವ ಮೂಲಕ ದೇಶವನ್ನು ಸ್ವತಂತ್ರಗೊಳಿಸಲು ತಮ್ಮ ಜೀವನವನ್ನೇ ತ್ಯಾಗ ಮಾಡಿದ್ದಾರೆ ಎಂದು ಅವರು ಹೇಳಿದರು.

ಹಿಂಸೆ ಮತ್ತು ಭಯೋತ್ಪಾದನೆಯನ್ನು ತಡೆಗಟ್ಟಲು, ವಸುಧೈವ್ ಕುಟುಂಬಕಮ್‍ನ ಪ್ರಕಾರ ಮಾನವ ಪ್ರಜ್ಞೆಯನ್ನು ಜಾಗೃತಗೊಳಿಸುವುದು ಅಗತ್ಯವಾಗಿದೆ. ಪ್ರತಿಯೊಬ್ಬ ಪ್ರಜೆಯು ತನ್ನ ಆಲೋಚನೆಗಳು, ನಡವಳಿಕೆ ಮತ್ತು ಭಾವನೆಗಳಂತೆ ಇತರರ ಆಲೋಚನೆಗಳು ಮತ್ತು ಭಾವನೆಗಳನ್ನು ಗೌರವಿಸಬೇಕು ಮತ್ತು ಪ್ರಾಣಿಗಳನ್ನು ರಕ್ಷಿಸುವ ಜವಾಬ್ದಾರಿಯನ್ನು ಪರಿಗಣಿಸಬೇಕು ಎಂದ ಅವರು, ಭಯೋತ್ಪಾದನೆಯನ್ನು ತೊಡೆದುಹಾಕಲು ಉತ್ತಮ ಶಿಕ್ಷಣದ ಅಗತ್ಯವಿದೆ. ಉತ್ತಮ ಶಿಕ್ಷಣ ಪಡೆದ ನಂತರ, ವ್ಯಕ್ತಿಯ ಆಲೋಚನೆ ಬದಲಾಗುತ್ತದೆ, ಅವನ ಆಲೋಚನಾ ಸಾಮಥ್ರ್ಯ ಬದಲಾಗುತ್ತದೆ ಮತ್ತು ಅವನು ಸರಿಯಾದ ದಿಕ್ಕಿನಲ್ಲಿ ಯೋಚಿಸುತ್ತಾನೆ. ಹೊಸ ಶಿಕ್ಷಣ ನೀತಿ ಈ ದಿಕ್ಕಿನಲ್ಲಿ ನಮಗೆ ಸ್ಫೂರ್ತಿ ನೀಡುತ್ತದೆ ಎಂದು ಅವರು ತಿಳಿಸಿದರು.

ಭಾರತ ಯುವಕರ ದೇಶ. ದೇಶದ ಅಭಿವೃದ್ಧಿಗೆ ಯುವಕರು ಸಕ್ರಿಯವಾಗಿ ಕೊಡುಗೆ ನೀಡುವ ನಿರೀಕ್ಷೆಯಿದೆ. ದೇಶದ ಸ್ವಾತಂತ್ರ್ಯಕ್ಕಾಗಿ ಯುವಜನರಿಗೆ ನಿರ್ದೇಶನ ನೀಡುವ ಮತ್ತು ಸಮಾಜಕ್ಕಾಗಿ ಏನಾದರೂ ಮಾಡುವ ಉದ್ದೇಶದಿಂದ 1944ರಲ್ಲಿ ಈ ಸಂಸ್ಥೆಯು ಪತ್ರಿಕೆ ಓದುವ ಕೇಂದ್ರವಾಗಿ ಆರಂಭವಾಯಿತು. ಈ ಸ್ವಯಂಸೇವಾ ಸಂಸ್ಥೆಯು ತನ್ನ ಸ್ಥಾಪನೆಯ 75 ವರ್ಷಗಳಿಗಿಂತಲೂ ಹೆಚ್ಚು ಕಾಲ ಯುವಕರ ಸರ್ವತೋಮುಖ ಅಭಿವೃದ್ಧಿಗಾಗಿ ಮತ್ತು ದೇಶದ ಆಸಕ್ತಿಯ ಪ್ರಜ್ಞೆಯನ್ನು ಜಾಗೃತಗೊಳಿಸಲು ಕೆಲಸ ಮಾಡುತ್ತಿರುವುದು ಶ್ಲಾಘನೀಯ ಎಂದರು.
ಹೆಚ್ಚಿನ ಯುವಜನರು ಯಶಸ್ವಿ ಮತ್ತು ಅರ್ಥಪೂರ್ಣ ಜೀವನವನ್ನು ನಡೆಸಲು ಬಯಸುತ್ತಾರೆ, ಆದರೆ ಅವರು ಈ ಗುರಿಯನ್ನು ಸಾಧಿಸಲು ದೈಹಿಕವಾಗಿ ಮತ್ತು ಮಾನಸಿಕವಾಗಿ ಸಿದ್ಧರಾಗಿರುವುದಿಲ್ಲ ಎಂಬುದು ವಿವೇಕಾನಂದವರ ಅಭಿಪ್ರಾಯವಾಗಿತ್ತು, ಹಾಗಾಗಿ, ಸ್ವಾಮೀಜಿ ಅವರು ಯುವಕರು ನಿರ್ಭೀತರಾಗಿ ತಮ್ಮನ್ನು ದೈಹಿಕವಾಗಿ ಮತ್ತು ಮಾನಸಿಕವಾಗಿ ಆರೋಗ್ಯವಂತರನ್ನಾಗಿ ಇರುವಂತೆ ನೋಡಿಕೊಳ್ಳಬೇಕು ಎಂದು ಮನವಿ ಮಾಡಿದರು.
ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಅಸಮಾನತೆ ಮತ್ತು ಬಡತನ ಕೂಡ ಪ್ರಮುಖ ಸವಾಲುಗಳು ಮತ್ತು ಸಮಸ್ಯೆಗಳು. ಈ ಸಮಸ್ಯೆಗಳನ್ನು ಪರಿಹರಿಸಲು, ನಮ್ಮ ದೇಶದ ಅನೇಕ ಮಹಾನ್ ಪುರುಷರು ಮತ್ತು ಋಷಿಗಳು ಅನೇಕ ಪರಿಹಾರಗಳನ್ನು ಸೂಚಿಸಿದ್ದಾರೆ. ಸರ್ವೇ ಭವಂತು ಸುಖಿನೋ, ಸರ್ವೇ ಸಂತು ನಿರಾಮಯಾ ಬದುಕು ಮತ್ತು ಬದುಕಲು ಬಿಡು, ಈ ಚಿಂತನೆಯು ದೇಶದಲ್ಲಿ ಮತ್ತು ಪ್ರಪಂಚದಲ್ಲಿ ಶಾಂತಿಯನ್ನು ಸ್ಥಾಪಿಸಲು ಮತ್ತು ವಿಶ್ವ ಕಲ್ಯಾಣದ ಕಡೆಗೆ ಸಹಾಯ ಮಾಡಲು ಸಹಾಯ ಮಾಡುತ್ತದೆ.

ಸಮಾರಂಭದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಕಾರ್ಯವಾಹಕ  ದತ್ತಾತ್ರೇಯ ಹೊಸಬಾಳೆ, ನ್ಯೂ ಹಾರಿಜನ್ ಶಿಕ್ಷಣ ಸಂಸ್ಥೆ ಅಧ್ಯಕ್ಷ ಡಾ.ಮೋಹನ್ ಮಂಘನಾನಿ, ಯುವಕ ಸಂಘದ ಅಧ್ಯಕ್ಷ ಪ್ರೊ. ಎಂ.ಕೆ.ಶ್ರೀಧರ್ ಸೇರಿದಂತೆ ಮುಂತಾದ ಗಣ್ಯರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X