Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಕತರ್‌ನಲ್ಲಿ ಅಮೆರಿಕ-ಇಯು ನಿಯೋಗದ ಜೊತೆ...

ಕತರ್‌ನಲ್ಲಿ ಅಮೆರಿಕ-ಇಯು ನಿಯೋಗದ ಜೊತೆ ತಾಲಿಬಾನ್ ಮಾತುಕತೆ

ಅಫ್ಘಾನ್‌ಗೆ ಯುರೋಪ್ ಒಕ್ಕೂಟದಿಂದ 1.2 ಶತಕೋಟಿ ಡಾಲರ್ ನೆರವು

ವಾರ್ತಾಭಾರತಿವಾರ್ತಾಭಾರತಿ13 Oct 2021 11:40 PM IST
share

   ಹೊಸದಿಲ್ಲಿ,ಅ.13: ಅಮೆರಿಕ-ಯುರೋಪ್ ಒಕ್ಕೂಟದ ಜಂಟಿ ನಿಯೋಗದ ಜೊತೆ ತಾಲಿಬಾನ್ ಮೊದಲ ಬಾರಿಗೆ ಮಂಗಳವಾರ ಕತರ್ ರಾಜಧಾನಿ ದೋಹಾದಲ್ಲಿ ಮಾತುಕತೆ ನಡೆಸಿದೆ. ಈ ಮಧ್ಯೆ ಯುರೋಪ್ ಒಕ್ಕೂಟವು ಅಫ್ಘಾನ್‌ಗೆ 1.2 ಶತಕೋಟಿ ಡಾಲರ್‌ಗಳ ಮಾನವೀಯ ನೆರವಿನ ಕೊಡುಗೆಯನ್ನು ನೀಡಿದೆ.

  20 ವರ್ಷಗಳ ದೀರ್ಘ ಸಂಘರ್ಷದ ಬಳಿಕ ಅಮೆರಿಕ ನೇತೃತ್ವದ ಮೈತ್ರಿಪಡೆಗಳು ಅಫ್ಘಾನಿಸ್ತಾನದಿಂದ ಹಿಂದೆ ಸರಿದ ಬಳಿಕ ಅಧಿಕಾರಕ್ಕೇರಿದ ತಾಲಿಬಾನ್ ಆಡಳಿತವು ತನಗೆ ಅಂತಾರಾಷ್ಟ್ರೀಯ ಮಾನ್ಯತೆಯನ್ನು ಬಯಸುತ್ತಿದೆ ಹಾಗೂ ಮಾನವೀಯ ದುರಂತಗಳಿಂದ ಪಾರಾಗಲು ಆರ್ಥಿಕ ನೆರವನ್ನು ಕೋರುತ್ತಿದೆ.

   ಇದಕ್ಕೂ ಮುನ್ನ ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೊನಿಯೋ ಗುಟೆರಸ್ ಬರಗಾಲ ಹಾಗೂ ಬಡತನದಿಂದ ತತ್ತರಿಸಿರುವ ಅಫ್ಘಾನಿಸ್ತಾನಕ್ಕೆ ಉದಾರವಾದ ದೇಣಿಗೆಯನ್ನು ನೀಡುವಂತೆ ಅವರು ಜಗತ್ತಿನಾದ್ಯಂತದ ರಾಷ್ಟ್ರಗಳಿಗೆ ಕರೆ ನೀಡಿದ್ದರು. ಇದೇ ವೇಳೆ ಅವರು .ತಾಲಿಬಾನ್ ಆಡಳಿತವು ಅಫ್ಘಾನ್ ಮಹಿಳೆಯರು ಮತ್ತು ಹಕ್ಕುಗಳನ್ನು ರಕ್ಷಿಸುವ ಬಗ್ಗೆ ನೀಡಿರುವ ಭರವಸೆಯನ್ನು ಮುರಿದಿದೆಯೆಂದು ಆಕ್ರೋಶ ವ್ಯಕ್ತಪಡಿಸಿದ್ದರು.

 ಅಫ್ಘಾನಿಸ್ತಾನದಲ್ಲಿ ಭೀಕರವವಾದ ಮಾನವೀಯ ಹಾಗೂ ಸಾಮಾಜಿಕ-ಆರ್ಥಿಕ ಪತನವುಂಟಾಗುವುದನ್ನು ತಪ್ಪಿಸಲು ಯುರೋಪ್ ಒಕ್ಕೂಟವು ನೆರವು ಪ್ಯಾಕೇಜ್ ಅನ್ನು ಘೋಷಿಸಿದೆ.ಇಟಲಿಯ ಆತಿಥ್ಯದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆದ ಜಿ20 ಶೃಂಗಸಭೆಯಲ್ಲಿ ಯುರೋಪಿಯನ್ ಕಮೀಶನ್‌ನ ಅಧ್ಯಕ್ಷೆ ಉರ್ಸುಲಾ ವಾನ್ ಡೆರ್ ಲಿಯೆನ್ ಅವರು ಈ ಘೋಷಣೆ ಮಾಡಿದ್ದಾರೆ.

ಅಫ್ಘನ್ನರಿಗೆ ನೇರವಾಗಿ ಬೆಂಬಲ ನೀಡಲು ಹಾಗೂ ಅಫ್ಘಾನಿಸ್ತಾನದಲ್ಲಿ ಮಾನವೀಯ ನೆರವಿನ ಕಾರ್ಯಾಚರಣೆಯಲ್ಲಿ ತೊಡಗಿರುವ ಅಂತಾರಾಷ್ಟ್ರೀಯ ಸಂಘಟನೆಗಳಿಗಾಗಿ ನೀಡಲಾಗುತ್ತಿದೆಯೇ ಹೊರತು ತಾಲಿಬಾನ್‌ನ ಮಧ್ಯಂತರ ಸರಕಾರಕ್ಕಲ್ಲವೆಂದು ಡೆರ್‌ಲಿಯೆನ್ ಸ್ಪಷ್ಟಪಡಿಸಿದರು. ಅಫ್ಘಾನಿಸ್ತಾನದ ತಾಲಿಬಾನ್ ಸರಕಾರಕ್ಕೆ ಮಾನ್ಯತೆ ನೀಡಲು ಯುರೋಪ್ ಒಕ್ಕೂಟವು ನಿರಾಕರಿಸಿದೆ.

 ತಾಲಿಬಾನ್ ಅಧಿಕಾರಿಗಳ ಜೊತೆ ಯಾವುದೇ ಮಾತುಕತೆ ನಡೆಸಲು ರೂಪಿಸಲಾದ ಪೂರ್ವಶರತ್ತುಗಳ ಬಗ್ಗೆ ಯುರೋಪ್ ಒಕ್ಕೂಟವು ಸ್ಪಷ್ಟತೆಯನ್ನು ಹೊಂದಿದೆ ಎಂದವರು ಹೇಳಿದರು. ಅಫ್ಘಾನಿಸ್ತಾನದಲ್ಲಿ ನಡೆಯುತ್ತಿರುವುದನ್ನು ಅಲ್ಲಿಂದ ಬರುತ್ತಿರುವ ವರದಿಗಳೇ ಹೇಳುತ್ತಿವೆ. ಆದರೆ ತಾಲಿಬಾನ್‌ನ ಕೃತ್ಯಗಳಿಗಾಗಿ ಅಫ್ಘಾನಿಸ್ತಾನದ ಜನತೆ ಬೆಲೆ ತೆರಬಾರದೆಂಬುದೇ ಯುರೋಪ್ ಒಕ್ಕೂಟದ ಆಶಯವಾಗಿದೆ ಎಂದು ಡೆರ್ ಲಿಯೆನ್ ಹೇಳಿದರು.

ತಾಲಿಬಾನ್ ಆಡಳಿತದ ಬಳಿಕ ಅಫ್ಘಾನಿಸ್ತಾನಕ್ಕೆ ವಿದೇಶಿ ನೆರವು ಬಹುತೇಕ ಕಡಿತಗೊಂಡಿದ್ದು, ಆ ದೇಶದ ಆರ್ಥಿಕತೆ ಪಾತಾಳಕ್ಕೆ ಕುಸಿದಿದೆ. ಚಳಿಗಾಲ ಸಮೀಪಿಸುತ್ತಿದ್ದಂತೆಯೇ ಆಹಾರ ವಸ್ತುಗಳ ಬೆಲೆ ಏರಿಕೆ ಹಾಗೂ ನಿರುದ್ಯೋಗ ಸಮಸ್ಯೆ ಉಲ್ಬಣಿಸಲಿರುವುದರಿಂದ ಪರಿಸ್ಥಿತಿ ಇನ್ನಷ್ಟು ಬಿಗಡಾಯಿಸುವ ಸಾಧ್ಯತೆಯಿದೆಯೆಂದು ಅಂತಾರಾಷ್ಟ್ರೀಯ ಸುದ್ದಿಸಂಸ್ಥೆಗಳು ವರದಿ ಮಾಡಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X