Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕ್ರೈಸ್ತ ಸಮುದಾಯ ವಿರುದ್ಧ ಬಿಜೆಪಿ...

ಕ್ರೈಸ್ತ ಸಮುದಾಯ ವಿರುದ್ಧ ಬಿಜೆಪಿ ಷಡ್ಯಂತ್ರ: ಜೆ.ಆರ್. ಲೋಬೋ ಆರೋಪ

ವಾರ್ತಾಭಾರತಿವಾರ್ತಾಭಾರತಿ16 Oct 2021 3:22 PM IST
share
ಕ್ರೈಸ್ತ ಸಮುದಾಯ ವಿರುದ್ಧ ಬಿಜೆಪಿ ಷಡ್ಯಂತ್ರ: ಜೆ.ಆರ್. ಲೋಬೋ ಆರೋಪ

ಮಂಗಳೂರು, ಅ.16: ಮತಾಂತರದ ಹೆಸರಿನಲ್ಲಿ ಬಿಜೆಪಿಯು ಕ್ರೈಸ್ತ ಸಮುದಾಯ ವನ್ನು ತನ್ನ ರಾಜಕೀಯ ಷಡ್ಯಂತ್ರಕ್ಕೆ ಸಾಫ್ಟ್ ಟಾರ್ಗೆಟ್ ಆಗಿ ಬಳಕೆ ಮಾಡುತ್ತಿದೆ ಎಂದು ಮಾಜಿ ಶಾಸಕ ಜೆ.ಆರ್. ಲೋಬೋ ಆರೋಪಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಕರ್ನಾಟಕ ವಿಧಾನ ಮಂಡಲದ ಸದನದ ಹಿಂದುಳಿದ ವರ್ಗ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಮಿತಿಯು ತನ್ನ ಇತ್ತೀಚಿನ ಸಮಿತಿ ಸಭೆಯಲ್ಲಿ ರಾಜ್ಯದ ಕ್ರೈಸ್ತ ಸಮುದಾಯ ಮಿಷಿನರಿಗಳು ಹಾಗೂ ಸಂಸ್ಥೆಗಳು ನಡೆಸುವ ಚಟುವಟಿಕೆಗಳ ವರದಿ ನೀಡಬೇಕೆಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿರುವುದು ಹಾಗೂ ರವಿವಾರ ಸಮಿತಿ ಸದಸ್ಯರು ಚರ್ಚ್‌ಗಳಿಗೆ ಭೇಟಿ ನೀಡಬೇಕೆಂಬ ಹೇಳಿಕೆಯು ಈ ಟಾರ್ಗೆಟ್‌ನ ಭಾಗವಾಗಿದೆ ಎಂದರು.

ಕ್ರೈಸ್ತ ಸಮುದಾಯ ಮೇಲಿನ ಬೇಹುಗಾರಿಕೆಯ ಸಮಿತಿಯ ಈ ತೀರ್ಮಾನ ಅದರ ಅಧಿಕಾರ ವ್ಯಾಪ್ತಿಗೆ ಮೀರಿದ್ದಾಗಿದೆ. ಸಮಿತಿಯು ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಅಭಿವೃದ್ದಿ ಬಗ್ಗೆ ಚಿಂತನೆ ನಡೆಸಬೇಕೇ ಹೊರತು ಇಂತಹ ಕೃತ್ಯಗಳನ್ನು ನಡೆಸುವುದಲ್ಲ ಎಂದವರು ಹೇಳಿದರು.

ಬಿಜೆಪಿಯು ನಿರಂತರವಾಗಿ ಕ್ರೈಸ್ತ ಸಮುದಾಯದ ಮೇಲೆ ಮತಾಂತರದ ಆರೋಪವನ್ನು ಮಾಡುತ್ತಿರುವುದು ರಾಜಕೀಯ ದುರುದ್ದೇಶದಿಂದ ಕೂಡಿದೆ. ಬಲವಂತದ ಮತಾಂತರ ಯಾರನ್ನೂ ಮಾಡಲು ಸಾಧ್ಯವಿಲ್ಲ. ಒಂದು ವೇಳೆ ಅಂತಹದ್ದು ಆಗುತ್ತಿದೆ ಎಂದಾದರೆ ಅದಕ್ಕೆ ಅಗತ್ಯವಾದ ಕಾನೂನುಗಳಿವೆ. ಅದಕ್ಕೆ ಹೊರತಾಗಿ ಈ ರೀತಿಯ ಮಾಡುವುದು ಒಡೆದು ಆಳುವ ನೀತಿಯಾಗಿದೆ. ಕ್ರೈಸ್ತ ಸಮುದಾಯ ಶಿಕ್ಷಣ, ವೈದ್ಯಕೀಯ ಹಾಗೂ ಸಮಾಜ ಸೇವಾ ಕ್ಷೇತ್ರಗಳ ಫಲಾನುಭವಿಗಳನ್ನು ಮತಾಂತರ ಮಾಡಲಾಗಿದ್ದರೆ ಇಡೀ ದೇಶದಲ್ಲಿ ಶೇ. 70ರಷ್ಟು ಮಂದಿ ಕ್ರೈಸ್ತ ಧರ್ಮೀಯರಿರಬೇಕಿತ್ತು. ಆದರೆ ದ.ಕ. ಜಿಲ್ಲೆಯಲ್ಲಿರುವುದು ಶೇ. 12ರಷ್ಟು, ರಾಜ್ಯದಲ್ಲಿ ಶೇ. 2.5 ಆಗಿದ್ದರೆ, ದೇಶದಲ್ಲಿ ಕೇವಲ 3.5ರಷ್ಟು ಕ್ರೈಸ್ತ ಧರ್ಮದವರಿದ್ದಾರೆ. ರಾಜರು, ಬ್ರಿಟಿಷರು, ಪೋರ್ಚುಗೀಸರು ಇದ್ದಾಗಲೇ ಈ ಧರ್ಮ ದೇಶದಲ್ಲಿ. ಹಾಗಿರುವಾಗ ಸೌಮ್ಯ ಸ್ವಭಾವದ ಕ್ರೈಸ್ತ ಸಮುದಾಯ ಮೇಲೆ ಇಂತಹ ಆರೋಪಗಳು ಸರಿಯಲ್ಲ ಎಂದವರು ಹೇಳಿದರು.

ರವಿವಾರ ಚರ್ಚ್‌ಗಳಿಗೆ ಸಮಿತಿಯ ಸದಸ್ಯರು ಭೇಟಿ ನೀಡಬೇಕೆಂಬ ಹೇಳಿಕೆ ಒಳ್ಳೆಯದು. ಚರ್ಚ್‌ ಎಲ್ಲ ಜನರಿಗೆ ಜಾತಿ ಮತ ಬೇಧವಿಲ್ಲದೆ ತೆರೆಯಲಾಗುತ್ತದೆ. ಒಳ್ಳೆಯ ಉದ್ದೇಶದಿಂದ ಭೇಟಿ ಕೊಡಿ. ದುರುದ್ದೇಶದಿಂದ ಕೂಡಿದ್ದರೆ ದೇವರೇ ನೀಡಲಿದ್ದಾರೆ ಎಂದು ಅವರು ಹೇಳಿದರು.

ಗೋಷ್ಠಿಯಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ಮುಖಂಡರಾದ ಶಾಹುಲ್ ಹಮೀದ್, ಪ್ರಕಾಶ್ ಸಾಲಿಯಾನ್, ವಿಶ್ವಾಸ್ ಕುಮಾರ್‌ದಾಸ್, ಟಿ.ಕೆ. ಸುಧೀರ್, ಜೋಕಿಂ, ರಮಾನಂದ ಪೂಜಾರಿ, ಸಲೀಂ, ಸುಬೋದ್ ಆಳ್ವ, ಚಂದ್ರಕಲಾ, ಶಾಂತಲಾ ಗಟ್ಟಿ, ಸುಹಾನ್ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X