Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸಿಂಘು ಗಡಿಯಲ್ಲಿ ಕಾರ್ಮಿಕನ...

ಸಿಂಘು ಗಡಿಯಲ್ಲಿ ಕಾರ್ಮಿಕನ ಹತ್ಯೆಪ್ರಕರಣ: ಇಬ್ಬರು ನಿಹಾಂಗ್ ಸಿಖ್ಖರು ಬಂಧನ

ಪವಿತ್ರ ಗ್ರಂಥವನ್ನು ಅವಮಾನಿಸುವಂತೆ ಲಖ್ಬೀರ್ ಗೆ ಆಮಿಷವೊಡ್ಡಲಾಗಿತ್ತು ಎಂದು ಆರೋಪಿಸಿದ ಕುಟುಂಬ

ವಾರ್ತಾಭಾರತಿವಾರ್ತಾಭಾರತಿ16 Oct 2021 5:43 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಸಿಂಘು ಗಡಿಯಲ್ಲಿ ಕಾರ್ಮಿಕನ ಹತ್ಯೆಪ್ರಕರಣ: ಇಬ್ಬರು ನಿಹಾಂಗ್ ಸಿಖ್ಖರು ಬಂಧನ

ಹೊಸದಿಲ್ಲಿ,ಅ.16: ಸಿಂಘು ಗಡಿಯಲ್ಲಿನ ರೈತರ ಪ್ರತಿಭಟನಾ ತಾಣದಲ್ಲಿ ಕಾರ್ಮಿಕನೋರ್ವನ್ನು ಹತ್ಯೆಗೈದು,ಶವವನ್ನು ಛಿದ್ರವಿಚ್ಛಿದ್ರಗೊಳಿಸಿದ್ದನ್ನು ಒಪ್ಪಿಕೊಂಡಿರುವ ನಿಹಾಂಗ್ ಸಿಖ್ ಪಂಥಕ್ಕೆ ಸೇರಿದ ಸರ್ವಜಿತ ಸಿಂಗ್ ಎಂಬಾತನನ್ನು ದಿಲ್ಲಿ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಹತ್ಯೆಯ ಬಗ್ಗೆ ತನಗೆ ಯಾವುದೇ ಪಶ್ಚಾತ್ತಾಪವಿಲ್ಲ ಎಂದು ಆತ ಹೇಳಿಕೊಂಡಿದ್ದಾನೆ. ಶನಿವಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೋರ್ವ ನಿಹಾಂಗ್ ಸಿಖ್ ವ್ಯಕ್ತಿಯನ್ನು ಪಂಜಾಬಿನ ಅಮೃತಸರ ಜಿಲ್ಲೆಯಲ್ಲಿ ಬಂಧಿಸಲಾಗಿದ್ದು,ಪೊಲೀಸರು ಆತನ ಹೆಸರನ್ನು ತಕ್ಷಣ ಬಹಿರಂಗಗೊಳಿಸಿಲ್ಲ.

ಸರ್ವಜಿತ ಸಿಂಗ್ ಶುಕ್ರವಾರ ಸಂಜೆ ಪೊಲೀಸರಿಗೆ ಶರಣಾಗಿ,ಕಾರ್ಮಿಕನ ಹತ್ಯೆಯ ಹೊಣೆಯನ್ನು ಹೊತ್ತುಕೊಂಡಿದ್ದ. ನಿಹಾಂಗ್ ಗಳು ಸಿಖ್ ‘ಯೋಧರ ’ಪಂಥವಾಗಿದ್ದು,ನೀಲಿ ಟರ್ಬನ್ ಧರಿಸುವ ಇವರು ಸದಾ ಶಸ್ತ್ರಸಜ್ಜಿತರಾಗಿರುತ್ತಾರೆ.
ಸರ್ವಜಿತ ಸಿಂಗ್ ನನ್ನು ಶನಿವಾರ ನ್ಯಾಯಾಲಯದಲ್ಲಿ ಹಾಜರು ಪಡಿಸಿದ್ದ ಪೊಲೀಸರು,ಆತ ಇತರ ಶಂಕಿತರ ಬಗ್ಗೆ ಮಾಹಿತಿಯನ್ನು ನೀಡಿದ್ದಾನೆ. 

ಹತ್ಯೆಗೆ ಬಳಸಲಾಗಿದ್ದ ಶಸ್ತ್ರಾಸ್ತ್ರಗಳ ಪತ್ತೆಗೆ ಸಮಯಾವಕಾಶವೂ ಅಗತ್ಯವಿದೆ,ಹೀಗಾಗಿ ಆತನನ್ನು 14 ದಿನಗಳ ಅವಧಿಗೆ ತಮ್ಮ ಕಸ್ಟಡಿಗೆ ನೀಡುವಂತೆ ಕೋರಿದ್ದರಾದರೂ, ನ್ಯಾಯಾಲಯವು ಆತನಿಗೆ ಏಳು ದಿನಗಳ ಪೊಲೀಸ್ ಕಸ್ಟಡಿಯನ್ನು ವಿಧಿಸಿತು.

ಎಡಗಾಲು ಮತ್ತು ಎಡಗೈ ತುಂಡರಿಸಲಾಗಿದ್ದ ಪರಿಶಿಷ್ಟ ಜಾತಿಗೆ ಸೇರಿದ್ದ ಕಾರ್ಮಿಕ ಲಖ್ಬೀರ್ ಸಿಂಗ್(35)ನ ಶವವು ಶುಕ್ರವಾರ ಬೆಳಿಗ್ಗೆ ಸಿಂಘು ಗಡಿಯಲ್ಲಿನ ಪೊಲೀಸ್ ಬ್ಯಾರಿಕೇಡ್ಗೆ ಕಟ್ಟಿದ್ದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ನಿಹಾಂಗ್ ಸಿಕ್ಖರ ಗುಂಪೊಂದು ವೀಡಿಯೊದಲ್ಲಿ ಲಖ್ಬೀರ್ ಹತ್ಯೆಯ ಹೊಣೆಯನ್ನು ಹೊತ್ತುಕೊಂಡಿತ್ತು.
ರಕ್ತದ ಮಡುವಿನಲ್ಲಿ ಬಿದ್ದಿದ್ದ ಗಾಯಾಳುವನ್ನು ನಿಹಾಂಗ್ಗಳು ಸುತ್ತುವರಿದು ಆತನ ಹೆಸರು,ಊರು ಇತ್ಯಾದಿಗಳ ಬಗ್ಗೆ ಪ್ರಶ್ನಿಸುತ್ತಿದ್ದನ್ನೂ ವೀಡಿಯೊ ತೋರಿಸಿತ್ತು.

ಶನಿವಾರ ಬಹಿರಂಗಗೊಂಡಿರುವ ಇನ್ನೊಂದು ವೀಡಿಯೊದಲ್ಲಿ ಸಿಂಗ್ ಹತ್ಯೆಯ ಬಗ್ಗೆ ತನಗೆ ಪಶ್ಚಾತ್ತಾಪವಿಲ್ಲ ಎಂದು ಹೇಳಿದ್ದಾನೆ. ಶರಣಾಗತಿಗೆ ಮುನ್ನ ಚಿತ್ರೀಕರಿಸಲಾದ ಈ ವೀಡಿಯೊದಲ್ಲಿ ಸಿಂಗ್ ಅಕ್ಕಪಕ್ಕದಲ್ಲಿ ಇತರ ನಿಹಾಂಗ್ಗಳಿದ್ದು, ಕನಿಷ್ಠ ಇಬ್ಬರು ಈಗಲೂ ಖಡ್ಗಗಳನ್ನು ಹೊಂದಿದ್ದರು. ನಿನಗೆ ಪಶ್ಚಾತ್ತಾಪವಿದೆಯೇ ಎಂಬ ಪತ್ರಕರ್ತನ ಪ್ರಶ್ನೆಯನ್ನು ಅನಾಸಕ್ತಿಯಿಂದ ತಳ್ಳಿ ಹಾಕಿದ ಸಿಂಗ್,ಬಳಿಕ ತಲೆಯನ್ನು ಅಲುಗಿಸಿ ‘ಇಲ್ಲ’ಎಂದು ಉತ್ತರಿಸಿದ್ದು ವೀಡಿಯೊದಲ್ಲಿ ದಾಖಲಾಗಿದೆ.
 
ಸ್ಥಳದಲ್ಲಿದ್ದ ನಿಹಾಂಗ್ ಸಿಕ್ಖರು ತನಿಖೆಗೆ ಸಹಕರಿಸಿಲಿಲ್ಲ ಮತ್ತು ಬ್ಯಾರಿಕೇಡ್ನಿಂದ ಶವವನ್ನು ಇಳಿಸಲೂ ಅವಕಾಶ ನೀಡಿರಲಿಲ್ಲ ಎಂದು ಪೊಲೀಸರು ಹೇಳಿದ್ದಾರೆ.

ಲಖ್ಬೀರ್ ಸಿಖ್ ಧರ್ಮದ ಪವಿತ್ರ ಗ್ರಂಥವನ್ನು ಅವಮಾನಿಸಿದ್ದ ಎಂದು ನಿಹಾಂಗ್ ಸಿಕ್ಖರು ಹೇಳುತ್ತಿರುವುದು ವೀಡಿಯೊದಲ್ಲಿ ಕಂಡು ಬಂದಿದೆ. ಇದನ್ನು ಇನ್ನಷ್ಟೇ ದೃಢಪಡಿಸಿಕೊಳ್ಳಬೇಕಿದೆ ಎಂದು ಸೋನಿಪತ್ ಎಸ್ಪಿ ಜೆ.ಎಸ್.ರಾಂಧವಾ ರಾಂಧವಾ ತಿಳಿಸಿದರು. ಪವಿತ್ರ ಗ್ರಂಥವನ್ನು ಅವಮಾನಿಸುವಂತೆ ಲಖ್ಬೀರ್ ಗೆ ಆಮಿಷವೊಡ್ಡಲಾಗಿತ್ತು ಎಂದು ಆತನ ಕುಟುಂಬವು ಶನಿವಾರ ಆರೋಪಿಸಿದೆ.
 
‘ಲಖ್ಬೀರ್ ಮಾದಕ ದ್ರವ್ಯ ವ್ಯಸನಿಯಾಗಿದ್ದ. ಆತ ಗುರು ಗ್ರಂಥ ಸಾಹಿಬ್ ಅಥವಾ ನಿಹಾಂಗ್ ರನ್ನು ಎಂದೂ ಗುರಿಯಾಗಿಸಿಕೊಳ್ಳುತ್ತಿರಲಿಲ್ಲ. ನಮ್ಮ ಪವಿತ್ರ ಗ್ರಂಥವನ್ನು ಅವಮಾನಿಸಲು ಯಾರೋ ಆತನಿಗೆ ಹಣದ ಆಮಿಷವನ್ನೊಡ್ಡಿದ್ದರು ಎಂದು ನಾವು ಭಾವಿಸಿದ್ದೇವೆ. ಕಳೆದ ವಾರ ಮನೆಯನ್ನು ಬಿಟ್ಟಿದ್ದ ಆತ ಸಿಂಘು ಗಡಿಯಲ್ಲಿ ನಿಹಾಂಗ್ ಸಿಕ್ಖರ ಜೊತೆಯಲ್ಲಿರುತ್ತಾನೆ ಎಂದು ನಾವು ನಿರೀಕ್ಷಿಸಿರಲಿಲ್ಲ’ ಎಂದು ಲಖ್ಬೀರ್ ಭಾವ ಸುಖಚೇನ್ ಸಿಂಗ್ ಹೇಳಿದರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X