Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. "ನರೇಂದ್ರ ಮೋದಿ ಅವರ ಒಂದಂಶದ ಕಾರ್ಯಸೂಚಿ...

"ನರೇಂದ್ರ ಮೋದಿ ಅವರ ಒಂದಂಶದ ಕಾರ್ಯಸೂಚಿ ‘ಮಾರಾಟ’ ಆಗಿರುವುದರಿಂದ ದೇಶದ ಸಾಮಾಜಿಕ ಗುರಿಗಳು ಅಪಾಯದಲ್ಲಿದೆ"

ಸೋನಿಯಾ ಗಾಂಧಿ ಹೇಳಿಕೆ

ವಾರ್ತಾಭಾರತಿವಾರ್ತಾಭಾರತಿ16 Oct 2021 11:37 PM IST
share
ನರೇಂದ್ರ ಮೋದಿ ಅವರ ಒಂದಂಶದ ಕಾರ್ಯಸೂಚಿ ‘ಮಾರಾಟ’ ಆಗಿರುವುದರಿಂದ ದೇಶದ ಸಾಮಾಜಿಕ ಗುರಿಗಳು ಅಪಾಯದಲ್ಲಿದೆ

ಹೊಸದಿಲ್ಲಿ, ಅ. 16: ಕೇಂದ್ರ ಸರಕಾರದ ನ್ಯಾಷನಲ್ ಮಾನಿಟೈಸೇಷನ್ ಪೈಪ್ಲೈನ್ (ಎನ್ಎಂಪಿ) ಯೋಜನೆಯ ಬಗ್ಗೆ ಶನಿವಾರ ತರಾಟೆಗೆ ತೆಗೆದುಕೊಂಡಿರುವ ಕಾಂಗ್ರೆಸ್ನ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ, ಪ್ರಧಾನಿ ನರೇಂದ್ರ ಮೋದಿ ಅವರ ಒಂದಂಶದ ಕಾರ್ಯಸೂಚಿ ‘ಮಾರಾಟ’ ಆಗಿರುವುದರಿಂದ ದೇಶದ ಸಾಮಾಜಿಕ ಗುರಿಗಳು ಅಪಾಯದಲ್ಲಿದೆ ಎಂದರು.

ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಸಭೆ (ಸಿಡಬ್ಲುಸಿ)ಯಲ್ಲಿ ಮಾತನಾಡಿದ ಸೋನಿಯಾ ಗಾಂಧಿ, ಭಾರತದ ಆರ್ಥಿಕತೆ ಚೆನ್ನಾಗಿದೆ ಎಂದು ಕೇಂದ್ರ ಸರಕಾರ ಪ್ರಚಾರ ನಡೆಸುತ್ತಿರುವ ಹೊರತಾಗಿಯೂ ದೇಶದ ಆರ್ಥಿಕತೆ ಅಪಾಯದಲ್ಲೇ ಮುಂದುವರಿದಿದೆ ಎಂದರು.

‘‘ಆರ್ಥಿಕ ಚೇತರಿಕೆಗೆ ಕೇಂದ್ರ ಸರಕಾರದಲ್ಲಿ ಇರುವ ಏಕೈಕ ಉತ್ತರವೆಂದರೆ, ದಶಕಗಳ ಕಾಲ ಶ್ರಮಿಸಿ ನಿರ್ಮಿಸಿದ ರಾಷ್ಟ್ರೀಯ ಸೊತ್ತುಗಳನ್ನು ಮಾರಾಟ ಮಾಡುವುದು. ಇದು ನಮಗೆಲ್ಲ ತಿಳಿದೇ ಇದೆ.

ಸರಕಾರಿ ವಲಯದ ಸಂಸ್ಥೆಗಳಿಗೆ ಕೇವಲ ವ್ಯೆವಾಹತ್ಮಕ ಹಾಗೂ ಆರ್ಥಿಕ ಉದ್ದೇಶ ಮಾತ್ರ ಇರುವುದಲ್ಲ. ಅದಕ್ಕೆ ಸಾಮಾಜಿಕ ಗುರಿ ಕೂಡ ಇದೆ. ಉದಾಹರಣೆಗೆ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಸಬಲೀಕರಣ, ಹಿಂದುಳಿದ ಪ್ರದೇಶಗಳ ಅಭಿವೃದ್ಧಿ ಮಾಡುವ ಗುರಿ ಅದಕ್ಕೆ ಇದೆ. ಆದರೆ, ಮೋದಿ ಅವರು ಏಕ ಅಂಶ ಕಾರ್ಯಸೂಚಿ ಮಾರಾಟದಿಂದಾಗಿ ದೇಶದ ಆರ್ಥಿಕತೆ ಅಪಾಯದಲ್ಲಿದೆ’’ ಎಂದು ಅವರು ಹೇಳಿದರು.

ಹಣದುಬ್ಬರ ಏರಿಕೆಯಾಗುತ್ತಿರುವ ಕುರಿತು ಕೇಂದ್ರ ಸರಕಾರವನ್ನು ತರಾಟೆಗೆ ತೆಗೆದುಕೊಂಡ ಸೋನಿಯಾ ಗಾಂಧಿ, ಆಹಾರ, ತೈಲ ಸೇರಿದಂತೆ ಅವಶ್ಯಕ ವಸ್ತುಗಳ ಬೆಲೆ ನಿರಂತರ ಏರಿಕೆಯಾಗುತ್ತಿದೆ. ಪೆಟ್ರೋಲ್ ಬೆಲೆ 100 ರೂ., ಡೀಸೆಲ್ ಬೆಲೆ 100 ರೂ., ಗ್ಯಾಸ್ ಸಿಲಿಂಡರ್ ಬೆಲೆ 900 ರೂ., ಅಡುಗೆ ಎಣ್ಣೆ ಬೆಲೆ 200 ರೂ. ಸಮೀಪ ತಲುಪುತ್ತದೆ ಎಂದು ಈ ದೇಶದ ಯಾರಾದರೂ ಒಬ್ಬರು ಕಲ್ಪಿಸಿದ್ದರೇ? ಇದು ದೇಶಾದ್ಯಂತ ಜನರ ಜೀವನವನ್ನು ದುಸ್ಥಿತಿಗೆ ತಳ್ಳಿದೆ ಎಂದು ಅವರು ಹೇಳಿದರು.

ಮೋದಿ ಆಳ್ವಿಕೆಯಲ್ಲಿ ಅಲ್ಪಸಂಖ್ಯಾತರನ್ನು ಸ್ಪಷ್ಟವಾಗಿ ಗುರಿ ಮಾಡಲಾಗುತ್ತಿದೆ. ಇದನ್ನು ಬಲವಾಗಿ ಖಂಡಿಸಬೇಕು ಎಂದು ಸೋನಿಯಾ ಗಾಂಧಿ ಅವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X