ಕಾಮಾಲೆ ಕಣ್ಣಿನಿಂದ ನೋಡಿ ಪೊಲೀಸರನ್ನು ಅವಮಾನಿಸಬೇಡಿ'': ಸಿದ್ದರಾಮಯ್ಯಗೆ ಬಿಜೆಪಿ ತಿರುಗೇಟು
ಪೊಲೀಸರ ಕೇಸರಿ ದಿರಿಸು ವಿಚಾರ
ಬೆಂಗಳೂರು: 'ಕೇಸರಿ ದಿರಿಸಿನಲ್ಲಿರುವ ಪೊಲೀಸರ ಕೈಗೆ ತ್ರಿಶೂಲಗಳನ್ನೂ ಕೊಟ್ಟು ಹಿಂಸೆಯ ದೀಕ್ಷೆ ಕೊಟ್ಟು ಬಿಡಿ' ಎಂದು ಟ್ವೀಟ್ ಮಾಡಿ ಹೇಳಿಕೆ ನೀಡಿದ್ದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯಗೆ ಬಿಜೆಪಿ ತಿರುಗೇಟು ನೀಡಿದೆ.
''ಶ್ವೇತ ವರ್ಣದ ಧಿರಿಸು, ಅದಕ್ಕೊಂದು ಕೇಸರಿ ಬಣ್ಣದ ಶಲ್ಯ, ತಲೆಗೊಂದು ಗಾಂಧಿ ಟೋಪಿ. ಮಾನ್ಯ ಸಿದ್ದರಾಮಯ್ಯ ಅವರೇ, ಇದು ನಿಮಗೆ ಜಂಗಲ್ ರಾಜ್, ಕೋಮುವಾದ ಅನಿಸಿದರೆ ದಯವಿಟ್ಟು ವೈದ್ಯರನ್ನು ಸಂಪರ್ಕಿಸಿ. ಅದು ಮನೋರೋಗವಾಗಿರಬಹುದು. ನಿಮ್ಮ ರಾಜಕೀಯ ಚಪಲಕ್ಕೆ ಎಲ್ಲವನ್ನೂ ಕಾಮಾಲೆ ಕಣ್ಣಿನಿಂದ ನೋಡಿ ಪೊಲೀಸರನ್ನು ಅವಮಾನಿಸಬೇಡಿ'' ಎಂದು ಸಿದ್ದರಾಮಯ್ಯ ಹೇಳಿಕೆಗೆ ಬಿಜೆಪಿ ತಿರುಗೇಟು ನೀಡಿದೆ.
ಶ್ವೇತ ವರ್ಣದ ಧಿರಿಸು, ಅದಕ್ಕೊಂದು ಕೇಸರಿ ಬಣ್ಣದ ಶಲ್ಯ, ತಲೆಗೊಂದು ಗಾಂಧಿ ಟೋಪಿ.
— BJP Karnataka (@BJP4Karnataka) October 17, 2021
ಮಾನ್ಯ @siddaramaiah ಅವರೇ, ಇದು ನಿಮಗೆ ಜಂಗಲ್ ರಾಜ್, ಕೋಮುವಾದ ಅನಿಸಿದರೆ ದಯವಿಟ್ಟು ವೈದ್ಯರನ್ನು ಸಂಪರ್ಕಿಸಿ. ಅದು ಮನೋರೋಗವಾಗಿರಬಹುದು.
ನಿಮ್ಮ ರಾಜಕೀಯ ಚಪಲಕ್ಕೆ ಎಲ್ಲವನ್ನೂ ಕಾಮಾಲೆ ಕಣ್ಣಿನಿಂದ ನೋಡಿ ಪೊಲೀಸರನ್ನು ಅವಮಾನಿಸಬೇಡಿ. pic.twitter.com/lA400d2rQ9