Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು ವಿಮಾನ ನಿಲ್ದಾಣ ರನ್‌ವೇ...

ಮಂಗಳೂರು ವಿಮಾನ ನಿಲ್ದಾಣ ರನ್‌ವೇ ವಿಸ್ತರಣೆ; ನೇರ ಭೂ ಖರೀದಿ ವ್ಯವಸ್ಥೆಗೆ ದ.ಕ. ಜಿಲ್ಲಾಡಳಿತ ಒಲವು

ವಾರ್ತಾಭಾರತಿವಾರ್ತಾಭಾರತಿ19 Oct 2021 9:59 PM IST
share
ಮಂಗಳೂರು ವಿಮಾನ ನಿಲ್ದಾಣ ರನ್‌ವೇ ವಿಸ್ತರಣೆ; ನೇರ ಭೂ ಖರೀದಿ ವ್ಯವಸ್ಥೆಗೆ ದ.ಕ. ಜಿಲ್ಲಾಡಳಿತ ಒಲವು

ಮಂಗಳೂರು : ಜಗತ್ತನ್ನೇ ನಲುಗಿಸಿದ್ದ ಮಂಗಳೂರು ವಿಮಾನ ದುರಂತ (2010, ಮೇ 22)ದ ಘಟನೆಯ ಬಳಿಕ ಭಾರೀ ಚರ್ಚೆಗೆ ಗ್ರಾಸವಾಗಿ, ಪ್ರಮುಖ ಬೇಡಿಕೆಯಾಗಿದ್ದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ರನ್‌ವೇ ವಿಸ್ತರಣೆ ಪ್ರಕ್ರಿಯೆ ಇನ್ನೂ ವೇಗ ದೊರಕಿಲ್ಲ. ಕಳೆದ ಹಲವು ವರ್ಷಗಳಿಂದ ಕುಂಟುತ್ತಾ ಸಾಗಿರುವ ಪ್ರಕ್ರಿಯೆಗೆ ಚುರುಕು ಮುಟ್ಟಿಸುವ ಉದ್ದೇಶದಿಂದ ದ.ಕ. ಜಿಲ್ಲಾಡಳಿತವು ನೇರ ಭೂ ಖರೀದಿ ಪ್ರಕ್ರಿಯೆ ಮೂಲಕ ಭೂಸ್ವಾಧೀನಕ್ಕೆ ಮುಂದಾಗುವ ಬಗ್ಗೆ ಒಲವು ತೋರಿಸಿದೆ.

ಮಂಗಳೂರಿನಲ್ಲಿ ವಿಮಾನ ದುರಂತ ಸಂಭವಿಸಿದ ಬಳಿಕ ರನ್‌ವೇ ವಿಸ್ತರಣೆಯ ಕೂಗು ಬಹುವಾಗಿ ಕೇಳಿ ಬಂದಿತ್ತು. ಜತೆಗೆ ರನ್‌ವೇ ವಿಸ್ತರಣೆಯಾಗದ ಕಾರಣದಿಂದ ದೊಡ್ಡ ಗಾತ್ರದ ವಿಮಾನಗಳು ಇಳಿಯಲು ಸಾಧ್ಯವಾಗುತ್ತಿಲ್ಲ ಎಂಬ ಕಾರಣಕ್ಕೆ ಸಾಕಷ್ಟು ಅಂತಾರಾಷ್ಟ್ರೀಯ ವಿಮಾನ ಯಾನಗಳು ಪಕ್ಕದ ರಾಜ್ಯದ ವಿಮಾನ ನಿಲ್ದಾಣಗಳಿಗೆ ವರ್ಗಾವಣೆಯಾಗುತ್ತಿದೆ ಎಂಬ ಆಕ್ಷೇಪವೂ ಕೇಳಿ ಬರುತ್ತಿದೆ.

ವಿಮಾನ ನಿಲ್ದಾಣ ಅಭಿವೃದ್ಧಿಗೆ ಜಮೀನು ಒದಗಿಸುವುದು ಆಯಾ ರಾಜ್ಯ ಸರಕಾರದ ಹೊಣೆ. ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ರನ್‌ವೇ ವಿಸ್ತರಣೆಗೆ ಕೊಳಂಬೆ, ಅದ್ಯಪಾಡಿ ಪ್ರದೇಶದಲ್ಲಿ ಜಮೀನು ಗುರುತಿಸಿ ಜಿಲ್ಲಾಡಳಿತ ರಾಜ್ಯ ಸರಕಾರದ ಮೂಲ ಸೌಕರ್ಯ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಿ ಹಲವು ವರ್ಷಗಳೇ ಕಳೆದಿವೆ. ಭೂ ಸ್ವಾಧೀನದ ವೆಚ್ಚವನ್ನು ರಾಜ್ಯ ಸರಕಾರ, ಕಾಮಗಾರಿ ವೆಚ್ಚವನ್ನು ವಿಮಾನ ನಿಲ್ದಾಣ ಪ್ರಾಧಿಕಾರ ಭರಿಸುವ ಬಗ್ಗೆ ತೀರ್ಮಾನವಾಗಿತ್ತು. ಆದರೆ ಯೋಜನೆಯ ಸಂಪೂರ್ಣ ವೆಚ್ಚವನ್ನು ಪ್ರಾಧಿಕಾರವೇ ಭರಿಸಬೇಕೆಂದು ರಾಜ್ಯದ ಸರಕಾರ ನಿಲುವು ತೋರಿದ್ದ ಹಿನ್ನೆಲೆಯಲ್ಲಿ ರನ್‌ವೇ ವಿಸ್ತರಣೆಗೆ ತೊಡಕಾಗಿತ್ತು.

ಈ ನಡುವೆ, ವಿಮಾನ ನಿಲ್ದಾಣದ ನಿರ್ವಹಣೆಯನ್ನು ಅದಾನಿ ಸಂಸ್ಥೆಗೆ ವಹಿಸಿದ ಬಳಿಕ ರನ್ ವೇ ವಿಸ್ತರಣೆ ಪ್ರಕ್ರಿಯೆ ಮತ್ತೆ ನೆನೆಗುದಿಗೆ ಬಿದ್ದಿದೆ. ಮಂಗಳೂರು ಏರ್‌ಪೋರ್ಟ್‌ನ ಪ್ರಸಕ್ತ ರನ್‌ವೇ 8,038 ಅಡಿ ಉದ್ದವಿದೆ. 2013ರಲ್ಲಿ ಇದನ್ನು 11,600 ಅಡಿಗೆ ವಿಸ್ತರಿಸುವ ಯೋಜನೆ ರೂಪಿಸಲಾಗಿತ್ತು. ಈ ಯೋಜನೆಗೆ 280 ಎಕರೆ ಜಾಗ ಹಾಗೂ 1,120 ಕೋಟಿ ರೂ. ವೆಚ್ಚ ಎಂದು ಅಂದಾಜಿಸಲಾಗಿತ್ತು.

ಯೋಜನೆಗೆ ಭೂಸ್ವಾಧೀನ ನಡೆಸಲು ವಿಮಾನ ನಿಲ್ದಾಣ ಪ್ರಾಧಿಕಾರದಿಂದ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆಯಾಗಿತ್ತು. ಆದರೆ, ಅಧಿಕ ಮೊತ್ತ ಅಗತ್ಯವಿದ್ದ ಕಾರಣ ರನ್‌ವೇ ವಿಸ್ತರಣೆಯನ್ನು 10,500 ಅಡಿಗೆ ಇಳಿಸಲು ತೀರ್ಮಾನಿಸಲಾಯಿತು. ಅದೂ ಕೂಡ ಹೊರೆಯಾದ ಕಾರಣದಿಂದ ಸದ್ಯ 33 ಎಕರೆ ಭೂಸ್ವಾಧೀನಕ್ಕೆ ಸರಕಾರ ಚಿಂತನೆ ನಡೆಸಿದೆ. ಆದರೆ ಈಗ ವಿಮಾನ ನಿಲ್ದಾಣ ನಿರ್ವಹಣೆ ಅದಾನಿ ಸಂಸ್ಥೆಗೆ ಹೋಗಿರುವ ಕಾರಣದಿಂದ ಅವರಿಂದ ಭೂಸ್ವಾಧೀನ ನಡೆಸಲು ಸಾಧ್ಯವಿಲ್ಲ. ಹೀಗಾಗಿ ಪ್ರಾಧಿಕಾರದ ಮೂಲಕವೇ ಭೂಸ್ವಾಧೀನ ಮಾಡುವ ಪ್ರಕ್ರಿಯೆ ಆರಂಭವಾಗಿದೆ ಎನ್ನುತ್ತಿದೆ ದ.ಕ. ಜಿಲ್ಲಾಡಳಿತ.

''ಮಂಗಳೂರು ಏರ್‌ಪೋರ್ಟ್‌ನ ರನ್‌ವೇ ವಿಸ್ತರಣೆಗಾಗಿ ಅಗತ್ಯವಿರುವ ಭೂಸ್ವಾಧೀನ ಪ್ರಕ್ರಿಯೆಗೆ ಸಂಬಂಧಿಸಿ ದರ ಸಂಧಾನ ಮಾಡಿಕೊಂಡು ಭೂಮಿ ನೀಡಲು ಬಯಸುವ ಭೂ ಮಾಲಕರಿಂದ ಮಾರುಕಟ್ಟೆ ದರದಲ್ಲಿ ನೇರವಾಗಿ ಭೂಮಿ ಖರೀದಿ ಮಾಡುವ ಬಗ್ಗೆ ಮಾತುಕತೆ ನಡೆಸಲಾಗುತ್ತಿದೆ. ಭೂಮಿಯ ದರ ನಿಗದಿ ಹಾಗೂ ಪೂರಕ ವ್ಯವಸ್ಥೆಗಳನ್ನು ಜಿಲ್ಲಾಡಳಿತ ನಡೆಸಲಿದೆ. ಇದಕ್ಕೆ ಬೇಕಾಗುವ ಮೊತ್ತವನ್ನು ನಿರ್ವಹಣೆ ವಹಿಸಿಕೊಂಡಿರುವ ಅದಾನಿ ಸಂಸ್ಥೆಯವರು ನೀಡಬೇಕಾಗುತ್ತದೆ''.

- ಡಾ.ರಾಜೇಂದ್ರ ಕೆ.ವಿ., ಜಿಲ್ಲಾಧಿಕಾರಿ, ದ.ಕ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X