Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. "ರಾತ್ರಿ 1ರ ತನಕ ವರದಿಗಾಗಿ...

"ರಾತ್ರಿ 1ರ ತನಕ ವರದಿಗಾಗಿ ಕಾದಿದ್ದೆವು": ಲಖಿಂಪುರ ಪ್ರಕರಣದ ಕುರಿತು ಉ.ಪ್ರ ಸರಕಾರಕ್ಕೆ ಸುಪ್ರೀಂಕೋರ್ಟ್‌ ತರಾಟೆ

ವಾರ್ತಾಭಾರತಿವಾರ್ತಾಭಾರತಿ20 Oct 2021 12:42 PM IST
share
ರಾತ್ರಿ 1ರ ತನಕ ವರದಿಗಾಗಿ ಕಾದಿದ್ದೆವು: ಲಖಿಂಪುರ ಪ್ರಕರಣದ ಕುರಿತು ಉ.ಪ್ರ ಸರಕಾರಕ್ಕೆ ಸುಪ್ರೀಂಕೋರ್ಟ್‌ ತರಾಟೆ


  ಹೊಸದಿಲ್ಲಿ,ಆ.21: ಅಕ್ಟೋಬರ್ 3ರಂದು ಲಖೀಂಪುರ ಖೇರಿಯಲ್ಲಿ ನಡೆದ ಹಿಂಸಾಚಾರದ ಬಗ್ಗೆ ತನಿಖೆ ನಡೆಸುವ ವಿಚಾರದಲ್ಲಿ ಉತ್ತರ ಪ್ರದೇಶ ಸರಕಾರವು ವಿಳಂಬನೀತಿಯನ್ನು ಅನುಸರಿಸುತ್ತಿದಯೆಂದು ಸುಪ್ರೀಂಕೋರ್ಟ್ ಬುಧವಾರ ಅಭಿಪ್ರಾಯಿಸಿರುವುದಾಗಿ ಬಾರ್ ಆ್ಯಂಡ್ ಬೆಂಚ್ ಕಾನೂನು ಸುದ್ದಿಜಾಲ ತಾಣ ವರದಿ ಮಾಡಿದೆ.

ಬುಧವಾರ ಉತ್ತರಪ್ರದೇಶ ಸರಕಾರದ ಪರವಾಗಿ ವಾದ ಮಂಡಿಸಿದ ವಕೀಲ ಹರೀಶ್ ಸಾಳ್ವೆ ಅವರು ಲಖೀಂಪುರ ಹಿಂಸಾಚಾರದ ಕುರಿತಾದ ವರದಿಯನ್ನು ಮೊಹರು ಮಾಡಿದ ಲಕೋಟೆಯಲ್ಲಿ ತಾನು ನ್ಯಾಯಾಲಯಕ್ಕೆ ಸಲ್ಲಿಸಿರುವುದಾಗಿ ಭಾರತದ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ಹಾಗೂ ನ್ಯಾಯಮೂರ್ತಿಗಳಾದ ಹಿಮಾ ಕೊಹ್ಲಿ ಹಾಗೂ ಸೂರ್ಯ ಕಾಂತ್ ಅವರಿದ್ದ ನ್ಯಾಯಪೀಠಕ್ಕೆ ತಿಳಿಸಿದರು.

ಆದಕ್ಕೆ ಪ್ರತಿಕ್ರಿಯಿಸಿದ ಮುಖ್ಯ ನ್ಯಾಯಮೂರ್ತಿ ರಮಣ ಅವರು, ನ್ಯಾಯಪೀಠಕ್ಕೆ ಈಗ ತಾನೆಯಷ್ಟೇ ಈ ವರದಿ ದೊರೆತಿದೆ ಎಂದರು. ‘‘ ವರದಿಯ ಸಲ್ಲಿಕೆಗೆಗಾಗಿ ನಾವು ಮಂಗಳವಾರ ರಾತ್ರಿ 1 ಗಂಟೆಯವರೆಗೂ ಕಾಯುತ್ತಲೇ ಇದ್ದೆವು. ಆದರೆ ನಮಗೆ ಏನೂ ದೊರೆತಿರಲಿಲ್ಲ’’ ಎಂದು ರಮಣ ಅಸಮಾಧಾನ ವ್ಯಕ್ತಪಡಿಸಿದರು.

ಲಖೀಂಪುರ ಹಿಂಸಾಚಾರ ಘಟನೆಯ 44 ಸಾಕ್ಷಿಗಳ ಪೈಕಿ ಕೇವಲ ನಾಲ್ವರ ಹೇಳಿಕೆಗಳನ್ನು ಮಾತ್ರವೇ ಯಾಕೆ ದಾಖಲಿಸಿಕೊಳ್ಳಲಾಗಿದೆ ಎಂದು ನ್ಯಾಯಾಲಯ ಪ್ರಶ್ನಿಸಿತು. ನ್ಯಾಯಾಂಗ ಕಸ್ಟಡಿಯಲ್ಲಿರುವ ಆರು ಮಂದಿ ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ಒಪ್ಪಿಸುವಂತೆ ಯಾಕೆ ಪ್ರಾಸಿಕ್ಯೂಶನ್ ನ್ಯಾಯಾಲಯವನ್ನು ಕೋರುತ್ತಿಲ್ಲವೆಂಬುದನ್ನು ಕೂಡಾ ಅದು ತಿಳಿಯಬಯಸಿತು.

ಲಖೀಂಪುರ ಹಿಂಸಾಚಾರ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡವು, ದುರ್ಬಲ ಸಾಕ್ಷಿದಾರರಿಗೆ ರಕ್ಷಣೆಯನ್ನು ಒದಗಿಸಬೇಕೆಂದು ನ್ಯಾಯಾಲಯ ಅಭಿಪ್ರಾಯಿಸಿತು.

ಅಕ್ಟೋಬರ್ 3ರಂದು ಲಖೀಂಪುರದಲ್ಲಿ ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟನೆಯ ಸಂದರ್ಭನಡೆದ ಹಿಂಸಾಚಾರದ ಘಟನೆಗಲ್ಲಿ ನಾಲ್ವರು ರೈತರು ಸೇರಿದಂತೆ ಎಂಟು ಮಂದಿ ಸಾವನ್ನಪ್ಪಿದ್ದರು.


ಅದಕ್ಕೆ ಉತ್ತರಿಸಿದ ಸಾಳ್ವೆ ಅವರು ದಸರಾ ರಜೆಗಳ ಹಿನನೆಲೆಯಲ್ಲಿ ನ್ಯಾಯಾಲಯಗಳು ಕಾರ್ಯನಿರ್ವಹಿಸದೆ ಇರುವುದರಿಂದ ವರದಿಯನ್ನು ಒಪ್ಪಿಸಲು ತಡವಾಗಿದೆಯೆಂದು ಸಾಳ್ವೆ ಸ್ಪಷ್ಟೀಕರಣ ನೀಡಿದರು. ಆನಂತರ ಸುಪ್ರೀಂಕೋರ್ಟ್ ಪ್ರಕರಣದ ವಿಚಾರಣೆಯನ್ನು ಅಕ್ಟೋಬರ್ 26ಕ್ಕೆ ಮುಂದೂಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X