Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಆಗ್ರಾಕ್ಕೆ ತೆರಳುತ್ತಿದ್ದ ಪ್ರಿಯಾಂಕಾ...

ಆಗ್ರಾಕ್ಕೆ ತೆರಳುತ್ತಿದ್ದ ಪ್ರಿಯಾಂಕಾ ಗಾಂಧಿಯನ್ನು ತಡೆದ ಉತ್ತರಪ್ರದೇಶ ಪೊಲೀಸರು

ನಾನು ಎಲ್ಲಿಗೆ ಹೋದರೂ ... ಅನುಮತಿ ಕೇಳಬೇಕೇ? ಎಂದು ಪ್ರಶ್ನಿಸಿದ ಕಾಂಗ್ರೆಸ್ ನಾಯಕಿ

ವಾರ್ತಾಭಾರತಿವಾರ್ತಾಭಾರತಿ20 Oct 2021 2:59 PM IST
share
ಆಗ್ರಾಕ್ಕೆ ತೆರಳುತ್ತಿದ್ದ ಪ್ರಿಯಾಂಕಾ ಗಾಂಧಿಯನ್ನು ತಡೆದ ಉತ್ತರಪ್ರದೇಶ ಪೊಲೀಸರು

ಹೊಸದಿಲ್ಲಿ,ಅ.20: ಪೊಲೀಸ್ ಕಸ್ಟಡಿಯಲ್ಲಿ ಮೃತಪಟ್ಟ ವ್ಯಕ್ತಿಯ ಕುಟುಂಬಿಕರನ್ನು ಭೇಟಿಯಾಲು ಬುಧವಾರ ಆಗ್ರಾಕ್ಕೆ ಪ್ರಯಾಣಿಸುತ್ತಿದ್ದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಉತ್ತರಪ್ರದೇಶದ ಪೊಲೀಸರು ವಶಕ್ಕೆ ತೆಗೆದುಕೊಂಡ ಕೆಲವೇ ತಾಸುಗಳ ಬಳಿಕ ಅವರನ್ನು ಬಿಡುಗಡೆಗೊಳಿಸಿದ್ದಾರೆ ಹಾಗೂ ಮೃತನ ಕುಟುಂಬಿಕರನ್ನು ಭೇಟಿಯಾಗಲು ಅನುಮತಿ ನೀಡಿದ್ದಾರೆ.

ಲಕ್ನೋ-ಅಗ್ರಾ ಎಕ್ಸ್ಪ್ರೆಸ್ವೇಯಲ್ಲಿ ಟೋಲ್ ಪ್ಲಾಝಾದ ಬಳಿ ಪೊಲೀಸರು ಪ್ರಿಯಾಂಕಾರಿದ್ದ ಕಾರನ್ನು ತಡೆದು ನಿಲ್ಲಿಸಿದ ಪೊಲೀಸರು ಅವರನ್ನು ವಶಕ್ಕೆ ತೆಗೆದುಕೊಂಡಿದ್ದರು. ಲಕ್ನೋದ ಪೊಲೀಸ್ ಲೈನ್ನಲ್ಲಿರುವ ವಸತಿಗೃಹಕ್ಕೆ ಅವರನ್ನು ಕೊಂಡೊಯ್ಯಲಾಗಿದೆ. ಮೂಲಗಳು ತಿಳಿಸಿವೆ. ಒಂದು ತಿಂಗಳಿಗೂ ಕಡಿಮೆ ಅವಧಿಯಲ್ಲಿ ಪ್ರಿಯಾಂಕಾ ಅವರ ಬಂಧನವಾಗಿರುವುದು ಇದು ಎರಡನೆ ಸಲವಾಗಿದೆ. ಕಸ್ಟಡಿಯಲ್ಲಿ ಸಾವನ್ನಪ್ಪಿದ ಅರುಣ್ ವಾಲ್ಮೀಕಿಯ ಕುಟುಂಬಿಕರನ್ನು ಭೇಟಿಯಾಗಲು ಪ್ರಿಯಾಂಕಾ ಆಗ್ರಾಕ್ತಕೆ ತೆರಳುತ್ತಿದ್ದರು.

ಪೊಲೀಸರು ತನ್ನನ್ನು ಬಂಧಿಸುವ ಮುನ್ನ ಸುದ್ದಿಗಾರರ ಜೊತೆ ಮಾತನಾಡಿದ ಪ್ರಿಯಾಂಕಾ‘‘ಒಂದು ವೇಳೆ ನಾನು ಮನೆ ಅಥವಾ ಕಚೇರಿಗೆ ಹೋದರೆ ಅವರಿಗೆ ಪರವಾಗಿಲ್ಲ. ಆದರೆ ನಾನು ಎಲ್ಲಿಗಾದರೂ ಹೋಗುವುದಾದರೆ ಅವರು ಈ ಪ್ರಹಸನವನ್ನು ಶುರುಹಚ್ಚಿಬಿಡುತ್ತಾರೆ. ನಾನು ಕುಟುಂಬವೊಂದನ್ನು ಭೇಟಿಯಾಗಲು ಹೋಗುತ್ತಿದ್ದ ನನ್ನನ್ನು ಬಂಧಿಸಿರುವ ಉ.ಪ್ರ . ಪೊಲೀಸರ ಕ್ರಮ ಅಸಂಬದ್ಧವಾದುದು. ಎಂದರು.
  
ದೇಶದಲ್ಲಿ ಮುಕ್ತವಾಗಿ ಸಂಚರಿಸಲು ತನಗೆ ಸಂವಿಧಾನಾತ್ಮಕವಾದ ಹಕ್ಕಿದೆಯೆಂದು ಪ್ರಿಯಾಂಕಾ ಪ್ರತಿಪಾದಿಸಿದರು. ತಾನು ಬಿಡುಗಡೆಯಾದ ಕೂಡಲೇ ಮೃತನ ಕುಟುಂಬವನ್ನು ಭೇಟಿಯಾಗಲು ದೃಢನಿರ್ಧಾರ ಮಾಡಿರುವುದಾಗಿಯೂ ಪ್ರಿಯಾಂಕಾ ತಿಳಿಸಿದರು.
 ಈ ತಿಂಗಳ ಆರಂಭದಲ್ಲಿ ಲಖೀಂಪುರ ಘಟನೆಯಲ್ಲಿ ಸಾವನ್ನಪ್ಪಿದ ರೈತರ ಕುಟುಂಬಗಳನ್ನು ಭೇಟಿಯಾಗಲು ಹೊರಟಿದ್ದ ಪ್ರಿಯಾಂಕಾ ವಾದ್ರಾ ಅವರನ್ನು ಉತ್ತರಪ್ರದೇಶ ಪೊಲೀಸರು ಬಂಧಿಸಿದ್ದರು.

 ಪ್ರಿಯಾಂಕಾ ಅವರನ್ನು ವಶಕ್ಕೆ ತೆಗೆದುಕೊಂಡಿರುವ ಉತ್ತರಪ್ರದೇಶ ಸರಕಾರದ ಕ್ರಮವನ್ನು ಕಾಂಗ್ರೆಸ್ ತೀವ್ರವಾಗಿ ಖಂಡಿಸಿದೆ. ಉತ್ತರಪ್ರದೇಶ ಪೊಲೀಸರ ಚಿತ್ರಹಿಂಸೆಯಿಂದಾಗಿ ಅರುಣ್ ವಾಲ್ಮೀಕಿ ಸಾವನ್ನಪ್ಪಿರುವುದಾಗಿ ಕಾಂಗ್ರೆಸ್ ಮತ್ತಿತರ ಪ್ರತಿಪಕ್ಷಗಳು ಆಪಾದಿಸಿದ್ದವು.
ಅರುಣ್ ವಾಲ್ಮೀಕಿ ಕುಟುಂಬವನ್ನು ಭೇಟಿಯಾಗದಂತೆ ತನ್ನನ್ನು ಪೊಲೀಸರು ತಡೆದ ಬೆನ್ನಲ್ಲೇ ಟ್ವಿಟ್ಟರ್ನಲ್ಲಿ ಪ್ರತಿಕ್ರಿಯಿಸಿರುವ ರಾಹುಲ್ ಅವರು ಉತ್ತರಪ್ರದೇಶ ಸರಕಾರ ಹೆದರುವುದೇತಕ್ಕೆ ಎಂದು ಕಟಕಿಯಾಡಿದ್ದಾರೆ.
  
‘‘ಅರುಣ್ ಗಾಂಧಿ ಪೊಲೀಸ್ ಕಸ್ಟಡಿಯಲ್ಲಿ ಸಾವನ್ನಪ್ಪಿದ್ದಾರೆ. ಅವರು ಕುಟುಂಬವು ನ್ಯಾಯಕ್ಕಾಗಿ ಹೋರಾಡುತ್ತಿದೆ. ನಾನು ಆ ಕುಟುಂಬವನ್ನು ಭೇಟಿಯಾಗ ಬಯಸಿದ್ದೆ. ನಾನು ಯಾಕೆ ತಡೆಯಲಾಗಿದೆ. ಯಾಕೆ ಉತ್ತರಪ್ರದೇಶ ಸರಕಾರವು ಹೆದರುತ್ತಿದೆ. ಪ್ರಧಾನಿ ಮೋದಿಯವರು ಬುದ್ಧನ ಬಗ್ಗೆ ದೊಡ್ಡದಾಗಿ ಮಾತನಾಡುತ್ತಿರುತ್ತಾರೆ. ಆದರೆ ಆತನ ಸಂದೇಶದ ಮೇಲೆ ಅವರು ದಾಳಿ ನಡೆಸುತ್ತಿದ್ದಾರೆ’’ ಎಂದು ಪ್ರಿಯಾಂಕಾ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.
  
ಮೃತ ಯುವಕನ ಕುಟುಂಬವನ್ನು ಭೇಟಿಯಾಗಲು ಪ್ರಿಯಾಂಕಾ ಅವರು ಪೂರ್ವಾನುಮತಿಯನ್ನು ಪಡೆದಿರಲಿಲ್ಲವೆಂದು ಉತ್ತರಪ್ರದೇಶ ಪೊಲೀಸರು ಕಾಂಗ್ರೆಸ್ ನಾಯಕಿಯ ಬಂಧನವನ್ನು ಸಮರ್ಥಿಸಿಕೊಂಡಿದ್ದಾರೆ.
 
ಪೊಲೀಸ್ ಠಾಣೆಗೆ ಸೇರಿದ ಪುರಾವೆಗಳ ಲಾಕರ್ ಇರುವ ಕಟ್ಟಡದಲ್ಲಿ ಇರಿಸಲಾಗಿದ್ದ 25 ಲಕ್ಷ ರೂ.ಗಳನ್ನು ಕಳವು ಮಾಡಿದ ಆರೋಪದಲ್ಲಿ ಅಲ್ಲಿ ಕ್ಲೀನರ್ ಆಗಿ ಕೆಲಸ ಮಾಡುತ್ತಿದ್ದ ಅರುಣ್ ವಾಲ್ಮೀಕಿಯನ್ನು ಶನಿವಾರ ಬಂಧಿಸಲಾಗಿತ್ತು. ಆನಂತರ ಕಸ್ಟಡಿಲ್ಲಿ ನಿಗೂಢವಾಗಿ ಸಾವನ್ನಪ್ಪಿದ್ದಾನೆ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X