Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ವಾಲ್ಮೀಕಿ ಸಮುದಾಯಕ್ಕೆ ಶೇ.7.5ರಷ್ಟು...

ವಾಲ್ಮೀಕಿ ಸಮುದಾಯಕ್ಕೆ ಶೇ.7.5ರಷ್ಟು ಮೀಸಲಾತಿ ನೀಡುವವರೆಗೆ ಹೋರಾಟ: ಬೆಳ್ಳೂರು ಆಂಜಿನಪ್ಪ

ವಾರ್ತಾಭಾರತಿವಾರ್ತಾಭಾರತಿ20 Oct 2021 7:32 PM IST
share
ವಾಲ್ಮೀಕಿ ಸಮುದಾಯಕ್ಕೆ ಶೇ.7.5ರಷ್ಟು ಮೀಸಲಾತಿ ನೀಡುವವರೆಗೆ ಹೋರಾಟ: ಬೆಳ್ಳೂರು ಆಂಜಿನಪ್ಪ

ಬೆಂಗಳೂರು, ಅ.20: ರಾಜ್ಯದಲ್ಲಿ ವಾಲ್ಮೀಕಿ ಸಮುದಾಯವು 19 ಲಕ್ಷ ಜನಸಂಖ್ಯೆ ಹೊಂದಿದ್ದಾಗ 1985ರಲ್ಲಿ ಶೇ.3ರಷ್ಟು ಮೀಸಲಾತಿಯನ್ನು ನೀಡಲಾಗಿತ್ತು. ಇದೀಗ ನಮ್ಮ ಜನಸಂಖ್ಯೆ 65 ಲಕ್ಷ ಇದೆ. ಮೀಸಲಾತಿಯನ್ನು ಶೇ.7.5ಕ್ಕೆ ಹೆಚ್ಚಳ ಮಾಡಲು ಯಾವ ಸರಕಾರಗಳು ಮನಸ್ಸು ಮಾಡುತ್ತಿಲ್ಲ ಎಂದು ವಾಲ್ಮೀಕಿ ಸಮುದಾಯದ ಮುಖಂಡ ಬೆಳ್ಳೂರು ಆಂಜಿನಪ್ಪ ಆಕ್ರೋಶ ವ್ಯಕ್ತಪಡಿಸಿದರು.

ಬುಧವಾರ ಕೆ.ಆರ್.ಪುರದಲ್ಲಿರುವ ಬೆಂಗಳೂರು ಪೂರ್ವ ತಾಲೂಕು ಕಚೇರಿಯಲ್ಲಿ ತಾಲೂಕು ಆಡಳಿತ ಹಾಗೂ ಶ್ರೀ ಮಹರ್ಷಿ ವಾಲ್ಮೀಕಿ ನಾಯಕ ಕ್ಷೇಮಾಭಿವೃದ್ಧಿ ಸಂಘ ಆಯೋಜಿಸಿದ್ದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಅವರು ಪ್ರಧಾನ ಭಾಷಣ ಮಾಡಿದರು.

ಸರಕಾರಗಳು ನಮ್ಮ ತಾಳ್ಮೆಯನ್ನು ಪರೀಕ್ಷೆ ಮಾಡಬಾರದು. ನ್ಯಾಯಸಮ್ಮತವಾಗಿ ಜನಸಂಖ್ಯೆಗೆ ಅನುಗುಣವಾಗಿ ಕೇಳುತ್ತಿರುವ ಮೀಸಲಾತಿಯನ್ನು ಕೊಡಲು ಯಾಕೆ ಮೀನಾಮೇಷ ಎಣಿಸಲಾಗುತ್ತಿದೆ. ಮೀಸಲಾತಿ ಪಡೆಯಲು ನಾವು ಇನ್ನೂ ಎಷ್ಟು ಹೋರಾಟಗಳನ್ನು ಮಾಡಬೇಕು. ಸರಕಾರ ನಮ್ಮ ಆಗ್ರಹಕ್ಕೆ ಮಣಿಯದೆ ಇದ್ದರೆ ಇದೇ ತಾಲೂಕು ದಂಡಾಧಿಕಾರಿ ಕಚೇರಿಯಿಂದಲೆ ವಿಧಾನಸೌಧ ಚಲೋ ಹೋರಾಟ ಆರಂಭಿಸಲಾಗುವುದು ಎಂದು ಅವರು ಎಚ್ಚರಿಕೆ ನೀಡಿದರು.

ಮನುಷ್ಯನಿಗೆ ತನ್ನ ಸಂಸ್ಕೃತಿಯ ಪರಿಚಯ ಆದಾಗ ಜೀವನ ಸಾರ್ಥಕ ಆಗುತ್ತದೆ. ನಮ್ಮ ದೇಶಕ್ಕೆ ಸಂಸ್ಕೃತಿಯ ಬುನಾದಿ ಹಾಕಿಕೊಟ್ಟವರು ವಾಲ್ಮೀಕಿ. ಅವರ ಆದರ್ಶ, ಸಂಸ್ಕೃತಿಯನ್ನು ಎಲ್ಲರೂ ಅಳವಡಿಸಿಕೊಳ್ಳಬೇಕು. ಸಮಾಜಕ್ಕೆ ಬಡವರು, ತಳ ಸಮುದಾಯದವರು ಪರಿಚಯಿಸಿದ ಕೊಡುಗೆಗಳನ್ನು ಪಟ್ಟಭದ್ರ ಹಿತಾಸಕ್ತಿಗಳು ಮರೆಮಾಚುತ್ತಿವೆ ಎಂದು ಅವರು ಬೇಸರ ವ್ಯಕ್ತಪಡಿಸಿದರು.

ಅಯೋಧ್ಯೆಯಲ್ಲಿ ಸಾವಿರಾರು ಕೋಟಿ ರೂ.ಖರ್ಚು ಮಾಡಿ ಶ್ರೀರಾಮನ ದೇವಸ್ಥಾನ ನಿರ್ಮಿಸಲಾಗುತ್ತಿದೆ. ಆದರೆ, ಜಗತ್ತಿಗೆ ರಾಮನ ಚರಿತ್ರೆಯನ್ನು ಪರಿಚಯಿಸಿದ ವಾಲ್ಮೀಕಿಯನ್ನು ಗೌರವಿಸುವ, ಸ್ಮರಿಸುವ ಪ್ರವೃತ್ತಿ ಕಣ್ಮರೆಯಾಗುತ್ತಿರುವುದು ಬೇಸರದ ಸಂಗತಿ. ವಾಲ್ಮೀಕಿ ಸಮುದಾಯವನ್ನು ಸಮಾಜದ ಮುಖ್ಯವಾಹಿನಿಗೆ ತರುವ ನಿಟ್ಟಿನಲ್ಲಿ ಮೀಸಲಾತಿ ನೀಡಿ ಬೆಂಬಲಿಸಬೇಕು ಎಂದು ಬೆಳ್ಳೂರು ಆಂಜಿನಪ್ಪ ಒತ್ತಾಯಿಸಿದರು.

ಬೆಂಗಳೂರು ಪೂರ್ವ ತಾಲೂಕಿನ ವಿಶೇಷ ದಂಡಾಧಿಕಾರಿ ನಾಗಪ್ರಶಾಂತ್ ಮಾತನಾಡಿ, ವಾಲ್ಮೀಕಿ ರಚಿಸಿದ ರಾಮಾಯಣದಲ್ಲಿ ಸುಮಾರು 24 ಸಾವಿರ ಶ್ಲೋಕಗಳಿವೆ. ಅವುಗಳಲ್ಲಿ ಸಮಾಜದ ಎಲ್ಲ ವಿಭಾಗಗಳ ಅಂಶಗಳನ್ನು ಕಾಣಬಹುದು. ಮನುಷ್ಯನ ಬದುಕಿಗೆ ಅಗತ್ಯವಿರುವ ಎಲ್ಲವನ್ನೂ ಸಾವಿರಾರು ವರ್ಷಗಳ ಹಿಂದೆಯೇ ಅವರು ತಮ್ಮ ರಾಮಾಯಣದಲ್ಲಿ ಅಳವಡಿಸಿದ್ದಾರೆ ಎಂದರು.

ವಾಲ್ಮೀಕಿ ಸಮುದಾಯದ ಮುಖಂಡ ಬಾಕ್ಸರ್ ಎನ್.ನಾಗರಾಜ್ ಮಾತನಾಡಿ, ಸಮುದಾಯದ ಏಳಿಗೆಗೆ ಶ್ರಮಿಸಿದ 10 ಜನ ಪ್ರಮುಖರಿಗೆ ಸನ್ಮಾನಿಸಲಾಗಿದೆ. ಇದರ ಜೊತೆಗೆ ಸಮುದಾಯಕ್ಕಾಗಿ ಬೆಂಗಳೂರು ಪೂರ್ವ ತಾಲೂಕಿನಲ್ಲಿ ಸಮುದಾಯ ಭವನ, ವಸತಿ ನಿಲಯ ಹಾಗೂ ಕಾಲೇಜು ನಿರ್ಮಿಸಲು ಜಾಗಬೇಕಾಗಿದೆ. ಮುಂದಿನ ದಿನಗಳಲ್ಲಿ ಸಮುದಾಯದ ಎಲ್ಲ ಶಾಸಕರು, ಸಚಿವರನ್ನು ಭೇಟಿ ಮಾಡಿ, ಮುಖ್ಯಮಂತ್ರಿಯ ಗಮನಕ್ಕೆ ತರುವ ಕೆಲಸ ಮಾಡುತ್ತೇವೆ ಎಂದರು.

ಕಾರ್ಯಕ್ರಮದಲ್ಲಿ ವಾಲ್ಮೀಕಿ ಸಮುದಾಯದ ಶ್ರೀ ಈಶ್ವರಾನಂದ ಸ್ವಾಮಿ, ಬ್ರಹ್ಮಾನಂದ ಸ್ವಾಮೀ ದಿವ್ಯ ಸಾನಿಧ್ಯವಹಿಸಿದ್ದರು. ಸಂಘದ ಅಧ್ಯಕ್ಷ ಕೆ.ಎಂ.ಗಣೇಶ್, ಇನ್ಸ್ಪೆಕ್ಟರ್ ಮಂಜುನಾಥ್, ಬಿಇಒ ಹನುಮಂತರಾಯಪ್ಪ, ಐಟಿಐ ಡಿಜಿಎಂ(ನಿವೃತ್ತ) ವೆಂಕಟೇಶ್ವರಲು, ಮುಖಂಡರಾದ ಕೋನದಾಸಪುರ ರಾಜಪ್ಪ, ನಾಗೇಂದ್ರ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X