Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬೃಹತ್ ಮೊತ್ತವಿದ್ದ ಎನ್ಆರ್‌ಐ ಬ್ಯಾಂಕ್...

ಬೃಹತ್ ಮೊತ್ತವಿದ್ದ ಎನ್ಆರ್‌ಐ ಬ್ಯಾಂಕ್ ಖಾತೆಯಿಂದ ಹಣ ಲಪಟಾಯಿಸಲು ಪ್ರಯತ್ನ: ಬ್ಯಾಂಕ್ ಉದ್ಯೋಗಿಗಳ ಸಹಿತ 12 ಮಂದಿ ಬಂಧನ

ವಾರ್ತಾಭಾರತಿವಾರ್ತಾಭಾರತಿ20 Oct 2021 11:52 PM IST
share
ಬೃಹತ್ ಮೊತ್ತವಿದ್ದ ಎನ್ಆರ್‌ಐ ಬ್ಯಾಂಕ್ ಖಾತೆಯಿಂದ ಹಣ ಲಪಟಾಯಿಸಲು ಪ್ರಯತ್ನ: ಬ್ಯಾಂಕ್ ಉದ್ಯೋಗಿಗಳ ಸಹಿತ 12 ಮಂದಿ ಬಂಧನ

ಹೊಸದಿಲ್ಲಿ, ಅ.20: ಸುಮಾರು 200 ಕೋಟಿ ರೂ. ಹಣ ಜಮೆಯಾಗಿದ್ದ ಎನ್ಆರ್ಐ(ಅನಿವಾಸಿ ಭಾರತೀಯ) ಖಾತೆಯಿಂದ ಹಣವನ್ನು ಲಪಟಾಯಿಸಲು ಪ್ರಯತ್ನಿಸಿದ ಪ್ರಕರಣದಲ್ಲಿ ಖಾಸಗಿ ಬ್ಯಾಂಕ್ ನ 3 ಸಿಬ್ಬಂದಿಗಳ ಸಹಿತ 12 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ದಿಲ್ಲಿ ಪೊಲೀಸ್(ಸೈಬರ್ ಸೆಲ್) ಉಪಾಯುಕ್ತ ಕೆಪಿಎಸ್ ಮಲ್ಹೋತ್ರಾ ಹೇಳಿದ್ದಾರೆ.

ಅಮೆರಿಕದಲ್ಲಿ ನೆಲೆಸಿದ್ದ ಎನ್ಆರ್ಐ ಖಾತೆದಾರನ ಮೊಬೈಲ್ ನಂಬರ್ ಹೋಲುವ ಮೊಬೈಲ್ ನಂಬರ್ ಪಡೆದುಕೊಂಡು ಆರೋಪಿಗಳು ತಮ್ಮ ಖಾತೆಗೆ ಹಣ ವರ್ಗಾಯಿಸಿಕೊಳ್ಳಲು ಪ್ರಯತ್ನಿಸಿದ್ದರು. ಜತೆಗೆ ಮೋಸದಿಂದ ಚೆಕ್ಪುಸ್ತಕ ಪಡೆದುಕೊಂಡು ಹಣ ವರ್ಗಾಯಿಸಲು ಪ್ರಯತ್ನಿಸಿದ್ದಾರೆ. ಬಳಿಕ ಕೆವೈಸಿ ದಾಖಲೆಯಲ್ಲಿ ನೋಂದಣಿಯಾಗಿರುವ ಮೊಬೈಲ್ ಸಂಖ್ಯೆಯನ್ನು ಬದಲಾಯಿಸಲೂ ಪ್ರಯತ್ನಿಸಿದ್ದಾರೆ. ಈ ಬಗ್ಗೆ ಎಚ್ಡಿಎಫ್ಸಿ ಬ್ಯಾಂಕ್ನವರು ನೀಡಿದ ದೂರಿನ ಹಿನ್ನೆಲೆಯಲ್ಲಿ ತನಿಖೆ ನಡೆಸಿದಾಗ ಖಾತೆಯಿಂದ ಹಣ ಲಪಟಾಯಿಸಲು ಆನ್ಲೈನ್ ಮೂಲಕ 66 ಬಾರಿ ಪ್ರಯತ್ನಿಸಿರುವುದು ಬೆಳಕಿಗೆ ಬಂದಿದೆ ಎಂದು ಮಲ್ಹೋತ್ರಾ ಮಾಹಿತಿ ನೀಡಿದ್ದಾರೆ.

ತಾಂತ್ರಿಕ ಆಧಾರದಿಂದ ಆರೋಪಿಗಳನ್ನು ಪತ್ತೆಹಚ್ಚಲು ಎಸಿಪಿ ರಮಣ್ ಲಾಂಬಾ ನೇತೃತ್ವದ ತಂಡವೊಂದನ್ನು ರಚಿಸಿದ್ದು ಈ ತಂಡ ಮೊಬೈಲ್ ಲೊಕೇಷನ್ ಆಧಾರದಲ್ಲಿ 20 ಸ್ಥಳಗಳನ್ನು ಗುರುತಿಸಿದೆ. ಬಳಿಕ ದಿಲ್ಲಿ, ಹರ್ಯಾನ ಮತ್ತು ಉತ್ತರಪ್ರದೇಶದಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ 12 ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರಲ್ಲಿ ಡಿ ಚೌರಾಸಿಯಾ ಎಂಬಾತ ಬ್ಯಾಂಕಿನ ರಿಲೇಷನ್ಶಿಪ್ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದು ಚೆಕ್ ಪುಸ್ತಕ ಒದಗಿಸಲು , ಸಾಲದ ಹಿನ್ನೆಲೆಯಲ್ಲಿ ಕೈಗೊಂಡಿದ್ದ ಖಾತೆಯ ಸ್ಥಂಬನೆಯನ್ನು ರದ್ದುಗೊಳಿಸಲು ಮತ್ತು ಖಾತೆಯಲ್ಲಿ ಮೊಬೈಲ್ ಫೋನ್ ನಂಬರ್ ಪರಿಷ್ಕರಿಸಲು ನೆರವಾಗಿದ್ದ. ಎ ಸಿಂಗ್ ಮತ್ತೊಬ್ಬ ಬ್ಯಾಂಕ್ ಸಿಬಂದಿಯಾಗಿದ್ದು, ಮಹಿಳಾ ಸಿಬಂದಿಯ ಹೆಸರನ್ನು ಬಹಿರಂಗಗೊಳಿಸಿಲ್ಲ.

ಈ ಎನ್ಆರ್ಐ ಖಾತೆ ಹಲವು ಸಮಯಗಳಿಂದ ನಿಷ್ಕ್ರಿಯವಾಗಿದ್ದು ಇದರಲ್ಲಿ ಬೃಹತ್ ಮೊತ್ತ ಜಮೆಗೊಂಡಿದ್ದನ್ನು ತಿಳಿದ ಪ್ರಧಾನ ಸೂತ್ರಗಾರ ಬ್ಯಾಂಕಿನ ಮಹಿಳಾ ಸಿಬಂದಿಗೆ ಆಮಿಷವೊಡ್ಡಿ ಚೆಕ್ ಪುಸ್ತಕ ಮತ್ತು ಖಾತೆಯ ಸ್ಥಂಬನೆಯನ್ನು ರದ್ದುಗೊಳಿಸಲು ಯಶಸ್ವಿಯಾಗಿದ್ದ. ಈಕೆಗೆ 10 ಲಕ್ಷ ರೂ. ಹಣ ಮತ್ತು 15 ಲಕ್ಷ ರೂ. ಮೊತ್ತದ ವಿಮೆ ವ್ಯವಹಾರ (ಬ್ಯಾಂಕ್ ನಿಗದಿಗೊಳಿಸಿದ್ದ ಗುರಿ) ಒದಗಿಸುವ ಭರವಸೆ ನೀಡಲಾಗಿತ್ತು. ಚೆಕ್ ಪುಸ್ತಕ ಪಡೆದ ಆರ್ ಜೈಸ್ವಾಲ್ ಎಂಬಾತ ಅದರ ಹಾಳೆಗಳನ್ನು ತನ್ನ ಸಹವರ್ತಿಗಳಿಗೆ ವಿತರಿಸಿ ಖಾತೆಯಿಂದ ಹಣ ಹಿಂಪಡೆಯಲು ಸೂಚಿಸಿದ್ದಾನೆ.

ಬ್ಯಾಂಕ್ನಿಂದ ಪಡೆಯುವ ಹಣದ 50% ಮೊತ್ತ ತಾವೇ ಇರಿಸಿಕೊಳ್ಳುವಂತೆ ಅವರಿಗೆ ಸೂಚಿಸಿದ್ದ. ಇದಕ್ಕೆ ಬ್ಯಾಂಕ್ ಸಿಬ್ಬಂದಿಗಳಾದ ಚೌರಾಸಿಯಾ ಮತ್ತು ಸಿಂಗ್ ನೆರವಾಗಿದ್ದರು. ಹಣ ಹಿಂಪಡೆಯುವುದು ಅಥವಾ ಇಂಟರ್ನೆಟ್ ಬ್ಯಾಂಕಿಂಗ್, ಕೆವೈಸಿಯಲ್ಲಿ ಮೊಬೈಲ್ ಸಂಖ್ಯೆ ಪರಿಷ್ಕರಣೆ ಬ್ಯಾಂಕ್ ಸಿಬ್ಬಂದಿಗಳ ನೆರವಿದ್ದರೆ ಮಾತ್ರ ಸಾಧ್ಯ ಎಂದು ಮಲ್ಹೋತ್ರಾ ಹೇಳಿದ್ದಾರೆ. ಈ ಹಿಂದೆಯೂ ಇದೇ ಖಾತೆಯಿಂದ ಹಣ ಲಪಟಾಯಿಸಲು ಪ್ರಯತ್ನ ನಡೆದಿದ್ದು ಗಾಝಿಯಾಬಾದ್ ಮತ್ತು ಪಂಜಾಬ್ ನಲ್ಲಿ 2 ಪ್ರಕರಣ ದಾಖಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X