Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಫಾದರ್ ಮುಲ್ಲರ್‌ ಮೆಡಿಕಲ್ ಕಾಲೇಜಿಗೆ...

ಫಾದರ್ ಮುಲ್ಲರ್‌ ಮೆಡಿಕಲ್ ಕಾಲೇಜಿಗೆ ನ್ಯಾಕ್ ಎ ಗ್ರೇಡ್

ವಾರ್ತಾಭಾರತಿವಾರ್ತಾಭಾರತಿ21 Oct 2021 5:20 PM IST
share
ಫಾದರ್ ಮುಲ್ಲರ್‌ ಮೆಡಿಕಲ್ ಕಾಲೇಜಿಗೆ ನ್ಯಾಕ್ ಎ ಗ್ರೇಡ್

ಮಂಗಳೂರು: ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜು ಆಸ್ಪತ್ರೆಯು ನ್ಯಾಷನಲ್ ಅಸೆಸ್‍ಮೆಂಟ್ ಆ್ಯಂಡ್ ಅಕ್ರಡೇಶನ್ ಕೌನ್ಸಿಲ್- ನ್ಯಾಕ್‍ನ ಎ ಗ್ರೇಡ್ ಪ್ರಮಾಣಪತ್ರ ಪಡೆದುಕೊಂಡಿದೆ.

ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜಿನ ನಾಲೇಜ್ ಸೆಂಟರ್ ಸಭಾಂಗಣದಲ್ಲಿ ಗುರುವಾರ ನಡೆದ ಸಮಾರಂಭದಲ್ಲಿ ನ್ಯಾಕ್ ಎ ಗ್ರೇಡ್ ಪ್ರಮಾಣಪತ್ರವನ್ನು ಹಸ್ತಾಂತರ ಮಾಡಲಾಯಿತು.

ಫಾದರ್ ಮುಲ್ಲರ್ ಶಿಕ್ಷಣ ಸಂಸ್ಥೆಗಳ ಸಮೂಹದ ನಿರ್ದೇಶಕ ಫಾದರ್ ರಿಚರ್ಡ್ ಅಲೋಶಿಯಸ್ ಕುವೆಲ್ಲೊ ಸಮಾರಂಭದ ಅಧ್ಯಕ್ಷತೆ ವಹಿಸಿ, ಸಂಸ್ಥೆಯ ಡೀನ್‍ಗಳು, ಆಡಳಿತ ಮಂಡಳಿ, ವಿವಿಧ ವಿಭಾಗಗಳ ಮುಖ್ಯಸ್ಥರು, ಪ್ರಾಧ್ಯಾಪಕರು, ಬೋಧಕೇತರ ಸಿಬ್ಬಂದಿ, ಕಟ್ಟಕಡೆಯ ವ್ಯಕ್ತಿ ಸೇರಿ ಪ್ರತಿಯೊಬ್ಬರ ಜವಾಬ್ದಾರಿ ಮತ್ತು ಪರಿಶ್ರಮದಿಂದ ಎ ಗ್ರೇಡ್ ಪಡೆಯಲು ಸಾಧ್ಯವಾಗಿರುವುದು ಸಂತೋಷದ ಕ್ಷಣ ಎಂದರು.

ನಾವು ಸಾಧನೆಯ ಮೆಟ್ಟಿಲು ತುಳಿದಿದ್ದೇವೆ. ಇದನ್ನು ಉಳಿಸಿಕೊಂಡು ಮುಂದೆ ಎ ಪ್ಲಸ್‍ನಂತಹ ಇನ್ನಷ್ಟು ಸಾಧನೆ ಮಾಡಲಿದ್ದೇವೆ. ಮೆಡಿಕಲ್ ಕಾಲೇಜಿನಲ್ಲಿ ಗುಣಮಟ್ಟದ ಶಿಕ್ಷಣ ಮತ್ತು ಆಸ್ಪತ್ರೆಯಲ್ಲಿ  ಮಾನವೀಯ ಚಿಕಿತ್ಸೆ ನೀಡುವುದು ನಮ್ಮ ಗುರಿ. ನಮ್ಮ ಸಿಬ್ಬಂದಿಗಳಿಂದ ವೃತ್ತಿಪರತೆ, ಜ್ಞಾನ ಮತ್ತು ವಿಶ್ವಾಸದ ಸೇವೆಯನ್ನು ನಾವು ನೀಡುತ್ತಿದ್ದೇವೆ. ಗುಣಮಟ್ಟದ ಸೇವೆಯಲ್ಲಿ ರಾಜಿ ಮಾತೇ ಇಲ್ಲ. ಪ್ರತಿಕ್ರಿಯೆಗಳಿಗೆ ಅವಕಾಶ ನೀಡದೆ ಸ್ಪಂದನಕ್ಕೆ ಆದ್ಯತೆ ನೀಡುತ್ತಿದ್ದೇವೆ ಎಂದು ಅವರು ಹೇಳಿದರು.

ಫಾದರ್ ಮುಲ್ಲರ್ ಆಸ್ಪತ್ರೆಯ ಆಡಳಿತಾಧಿಕಾರಿ ಫಾದರ್ ರುಡಾಲ್ಫ್ ರವಿ ಡೇಸ, ಸಹಾಯಕ ಆಡಳಿತಾಧಿಕಾರಿ ಫಾದರ್ ನೆಲ್ಸನ್ ಪಾಯಸ್,  ಡೀನ್ ಡಾ.ಬಿ.ಸಂಜೀವ ರೈ, ಫಾದರ್ ಜೀವನ್, ಪ್ರಾಧ್ಯಾಪಕ ಡಾ.ಹರೀಶ್ ಶಿವು ಗೌಡ, ಡಾ.ಆ್ಯಂಟನಿ, ಡಾ.ಉದಯ್, ಡಾ.ಕಿಶನ್, ಸಿಸ್ಟರ್ ಜಾನೆಟ್ ಮತ್ತಿತರರು ಉಪಸ್ಥಿತರಿದ್ದರು.

ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜಿನ ಡೀನ್ ಡಾ.ಜಯಪ್ರಕಾಶ್ ಆಳ್ವ ಸ್ವಾಗತಿಸಿದರು. ಉಪ ಡೀನ್ ಡಾ.ರಮೇಶ್ ಭಟ್ ಪ್ರಾಸ್ತಾವಿಕ ಮಾತನಾಡಿದರು. ಆಡಳಿತಾಕಾರಿ ಫಾದರ್ ಅಜಿತ್ ಬಿ.ಮಿನೇಜಸ್ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X