Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 100 ಕೋಟಿ ಡೋಸ್ ಲಸಿಕೆಯ ದಾಖಲೆ ಬರೆದ...

100 ಕೋಟಿ ಡೋಸ್ ಲಸಿಕೆಯ ದಾಖಲೆ ಬರೆದ ಭಾರತ ಇತಿಹಾಸ ರಚಿಸಿದೆ: ಪ್ರಧಾನಿ ಮೋದಿ ಶ್ಲಾಘನೆ

ವಾರ್ತಾಭಾರತಿವಾರ್ತಾಭಾರತಿ21 Oct 2021 11:07 PM IST
share
100 ಕೋಟಿ ಡೋಸ್ ಲಸಿಕೆಯ ದಾಖಲೆ ಬರೆದ ಭಾರತ ಇತಿಹಾಸ ರಚಿಸಿದೆ: ಪ್ರಧಾನಿ ಮೋದಿ ಶ್ಲಾಘನೆ

ಹೊಸದಿಲ್ಲಿ, ಅ.21: ಕೊರೋನ ಸೋಂಕಿನ ವಿರುದ್ಧದ 100 ಕೋಟಿ ಡೋಸ್ ಲಸಿಕೆಯನ್ನು ದೇಶದ ಜನತೆಗೆ ನೀಡುವ ಮೂಲಕ ಭಾರತ ಗುರುವಾರ ನೂತನ ಮೈಲುಗಲ್ಲನ್ನು ಸ್ಥಾಪಿಸಿದ್ದು ಇದು ಭಾರತೀಯ ವಿಜ್ಞಾನದ ಗೆಲುವಾಗಿದೆ ಮತ್ತು 130 ಕೋಟಿ ಭಾರತೀಯರ ಸಾಮೂಹಿಕ ಹುರುಪಿನ ದ್ಯೋತಕವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. 

ದಿಲ್ಲಿಯ ಆರ್ಎಂಎಲ್ ಆಸ್ಪತ್ರೆಗೆ ಭೇಟಿ ನೀಡಿ ಅಲ್ಲಿ ನಡೆಯುತ್ತಿರುವ ಲಸಿಕೀಕರಣ ಕಾರ್ಯಕ್ರಮವನ್ನು ವೀಕ್ಷಿಸಿದ ಪ್ರಧಾನಿ ಮೋದಿ, ಈ ದಿನ ಇತಿಹಾಸದಲ್ಲಿ ದಾಖಲಾಗಲಿದೆ ಎಂದು ಶ್ಲಾಘಿಸಿದರು. ದೇಶದ 1.3 ಬಿಲಿಯ ಜನಸಂಖ್ಯೆಯ 75% ವಯಸ್ಕರು ಒಂದು ಡೋಸ್ ಲಸಿಕೆ ಪಡೆದಿದ್ದರೆ ಸುಮಾರು 30% ಜನರು ಸಂಪೂರ್ಣ ಲಸಿಕೆ ಪಡೆದಿದ್ದಾರೆ . ದೇಶದ 944 ಮಿಲಿಯ ವಯಸ್ಕರು ಈ ವರ್ಷ ಸಂಪೂರ್ಣ ಲಸಿಕೆ ಪಡೆಯುವುದು ನಮ್ಮ ಗುರಿಯಾಗಿದೆ ಎಂದು ಸರಕಾರ ಹೇಳಿದೆ. 

ಉತ್ತರಪ್ರದೇಶ, ಮಹಾರಾಷ್ಟ್ರ, ಪ.ಬಂಗಾಳ, ಗುಜರಾತ್ ಮತ್ತು ಮಧ್ಯಪ್ರದೇಶ ಅತ್ಯಧಿಕ ಲಸಿಕೆ ಹಾಕಿದ ರಾಜ್ಯಗಳಲ್ಲಿ ಮೊದಲ 5 ಸ್ಥಾನಗಳಲ್ಲಿವೆ. ದೇಶದಲ್ಲಿ ಲಸಿಕೀಕರಣ ಕಾರ್ಯಕ್ರಮ ಆರಂಭವಾದ 9 ತಿಂಗಳಲ್ಲೇ ಈ ಮೈಲುಗಲ್ಲನ್ನು ಸ್ಥಾಪಿಸಿರುವುದು ಅಸಾಧಾರಣ ಕಾರ್ಯವಾಗಿದೆ . ಆದರೆ, 75%ಕ್ಕೂ ಹೆಚ್ಚು ವಯಸ್ಕರು 1 ಡೋಸ್ ಪಡೆದಿದ್ದರೂ, 25% ಜನತೆ ಇನ್ನೂ ಲಸಿಕೆ ಪಡೆಯಬೇಕಿದೆ ಎಂಬುದನ್ನು ಗಮನಿಸಬೇಕು ಎಂದು ನೀತಿ ಆಯೋಗದ ಸದಸ್ಯ ವಿಕೆ ಪಾಲ್ ಹೇಳಿದ್ದಾರೆ. 

ಬಲಿಷ್ಟ ರಾಜಕೀಯ ನಾಯಕತ್ವ, ಆರೋಗ್ಯ ಕ್ಷೇತ್ರದ ಕಾರ್ಯಕರ್ತರ ಮತ್ತು ಮುಂಚೂಣಿ ಕಾರ್ಯಪಡೆಯ ಸಮರ್ಪಣಾ ಮನೋಭಾವದ ಕಾರ್ಯವಿಲ್ಲದಿದ್ದರೆ ಅಲ್ಪಾವಧಿಯಲ್ಲಿ ಇಂತಹ ಗಮನಾರ್ಹ ಸಾಧನೆ ಮಾಡಲು ಸಾಧ್ಯವಾಗುತ್ತಿರಲಿಲ್ಲ ಎಂದು ವಿಶ್ವ ಆರೋಗ್ಯ ಸಂಸ್ಥೆಯ ಆಗ್ನೇಯ ಏಶ್ಯಾ ವಲಯದ ನಿರ್ದೇಶಕಿ ಡಾ. ಪೂನಂ ಖೇತ್ರಪಾಲ್ ಸಿಂಗ್ ಹೇಳಿದ್ದಾರೆ. ರೈಲು, ವಿಮಾನ ಮತ್ತು ಹಡಗಿನಲ್ಲಿ ಲೌಡ್ಸ್ಪೀಕರ್ ಮೂಲಕ ಘೋಷಣೆ ಮಾಡುವ ಮೂಲಕ ಈ ದಾಖಲೆಯ ಸಂಭ್ರಮಾಚರಣೆಗೆ ಸರಕಾರ ಯೋಜನೆ ರೂಪಿಸಿದೆ. ಗಾಯಕ ಕೈಲಾಶ್ ಖೇರ್ ಹಾಡಿರುವ ಗಾಯನವನ್ನೂ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯ ಬಿಡುಗಡೆಗೊಳಿಸಲಿದ್ದಾರೆ. ಕೆಂಪುಕೋಟೆಯ ಮೇಲೆ ಸುಮಾರು 1,400 ಕಿ.ಗ್ರಾಂ ತೂಕದ ಬೃಹತ್ ರಾಷ್ಟ್ರಧ್ವಜವನ್ನು ಅರಳಿಸಲಾಗುವುದು ಎಂದು ಸರಕಾರ ಹೇಳಿದೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X