Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಉತ್ತರಾಖಂಡ ಮೇಘಸ್ಫೋಟಕ್ಕೆ 9 ಚಾರಣಿಗರು...

ಉತ್ತರಾಖಂಡ ಮೇಘಸ್ಫೋಟಕ್ಕೆ 9 ಚಾರಣಿಗರು ಸೇರಿ 64 ಬಲಿ

ವಾರ್ತಾಭಾರತಿವಾರ್ತಾಭಾರತಿ22 Oct 2021 9:04 AM IST
share
ಉತ್ತರಾಖಂಡ ಮೇಘಸ್ಫೋಟಕ್ಕೆ 9 ಚಾರಣಿಗರು ಸೇರಿ 64 ಬಲಿ

ಡೆಹ್ರಾಡೂನ್/ ಶಿಮ್ಲಾ, ಅ.22: ಮೇಘಸ್ಫೋಟದಿಂದ ಉದ್ಭವಿಸಿದ ಭೀಕರ ಪ್ರವಾಹ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಉತ್ತರಾಖಂಡದಲ್ಲಿ ಮಳೆ ಸಂಬಂಧಿ ದುರಂತಗಳಿಂದ ಮೃತಪಟ್ಟವರ ಮತ್ತಷ್ಟು ದೇಹಗಳು ಪತ್ತೆಯಾಗಿವೆ. ಜತೆಗೆ ನಾಪತ್ತೆಯಾದ ಮತ್ತಷ್ಟು ಮಂದಿ ಸಾವಿಗೀಡಾಗಿರುವುದನ್ನು ದೃಢಪಡಿಸಲಾಗಿದ್ದು, ಸಾವಿನ ಸಂಖ್ಯೆ 64ಕ್ಕೇರಿದೆ. ಮೃತಪಟ್ಟವರಲ್ಲಿ ಒಂಭತ್ತು ಮಂದಿ ಚಾರಣಿಗರು ಸೇರಿದ್ದು, ಈ ಪೈಕಿ ಐದು ಮಂದಿ ಹಿಮಾಚಲ ಪ್ರದೇಶದ ಕಿನ್ನೂರ್‌ನಲ್ಲಿ ಜೀವ ಕಳೆದುಕೊಂಡಿದ್ದಾರೆ.

ನೈನಿತಾಲ್‌ನಲ್ಲಿ ಗರಿಷ್ಠ ಸಾವು ಸಂಭವಿಸಿದ್ದು, ಇದುವರೆಗೆ 34 ಮಂದಿ ಮಳೆಸಂಬಂಧಿ ದುರಂತದಿಂದ ಸಾವಿಗೀಡಾಗಿದ್ದಾರೆ. ಚಂಪಾವತ್ ಜಿಲ್ಲೆಯಲ್ಲಿ 11 ಮಂದಿ ಮೃತಪಟ್ಟಿದ್ದಾರೆ. ಎನ್‌ಡಿಆರ್‌ಎಫ್‌ನ 17 ತುಕಡಿಗಳು, ಎಸ್‌ಡಿಆರ್‌ಎಫ್‌ನ 60 ತಂಡಗಳು, ಪಿಎಸಿಯ 15 ತುಕಡಿಗಳು ಮತ್ತು 5000 ಮಂದಿ ಪೊಲೀಸ್ ಸಿಬ್ಬಂದಿ ಪರಿಹಾರ ಕಾರ್ಯಾಚರಣೆಯಲ್ಲಿ ತೊಡಗಿಸಿಕೊಂಡಿದ್ದಾರೆ.

ಕಳೆದ ಕೆಲ ದಿನಗಳಿಂದ ಮಳೆ ಸಂಬಂಧಿ ಅನಾಹುತಗಳಿಂದ ಆಗಿರುವ ಹಾನಿ ಸುಮಾರು 7,000 ಕೋಟಿ ರೂಪಾಯಿಗಿಂತಲೂ ಅಧಿಕ ಎಂದು ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಪ್ರಕಟಿಸಿದ್ದಾರೆ. ಅಂತಿಮ ಮೌಲ್ಯಮಾಪನದ ಬಳಿಕ ನಷ್ಟದ ಪ್ರಮಾಣ 10 ಸಾವಿರ ಕೋಟಿ ರೂ. ಮೀರುವ ನಿರೀಕ್ಷೆ ಇದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಉತ್ತರಾಖಂಡದ ಹಸ್ರಿಲ್‌ನಿಂದ ಹಿಮಾಚಲ ಪ್ರದೇಶದ ಚಿತ್ಕುಲಕ್ಕೆ ಚಾರಣ ಹೊರಟಿದ್ದ 11 ಮಂದಿ ಪರ್ವತಾರೋಹಿಗಳು ನಾಪತ್ತೆಯಾದ ಒಂದು ದಿನದ ಬಳಿಕ ಐದು ಮಂದಿಯ ಮೃತದೇಹಗಳು ಕಿನ್ನೂರಿನಲ್ಲಿ ಪತ್ತೆಯಾಗಿವೆ. ಇಬ್ಬರನ್ನು ರಕ್ಷಿಸಲಾಗಿದೆ. ಕೊಲ್ಕತ್ತಾದ ನಾಲ್ಕು ಮಂದಿ ಸುಂದರ್‌ದುಂಗಾ ಕಣಿವೆಯಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X