ಬಿಡದಿ: ಈಜಲು ಹೋಗಿದ್ದ ಇಬ್ಬರು ಬಾಲಕರು ನೀರು ಪಾಲು
ಬೆಂಗಳೂರು, ಅ.22: ಈಜಲು ಹೋಗಿದ್ದ ಇಬ್ಬರು ಬಾಲಕರು ಮುಳುಗಿ ಮೃತಪಟ್ಟಿರುವ ದಾರುಣ ಘಟನೆ ಬಿಡದಿಯ ಕೆಂಚನಗುಪ್ಪೆಯಲ್ಲಿ ನಡೆದಿದೆ.
ಬಿಡದಿ ಪಟ್ಟಣದ ಕೌಶಿಕ್(11) ಮತ್ತು ಕರಣ್(12) ಮೃತ ಬಾಲಕರು. ಕೆಂಚನಗುಪ್ಪೆಯ ಕುಂಬಾರ ಕಟ್ಟೆಯಲ್ಲಿ ಈಜಲು ಹೋಗಿದ್ದ ಇವರಿಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.
ಶುಕ್ರವಾರ ಬೆಳಗ್ಗೆ ಕುಂಬಾರ ಕಟ್ಟೆಯಲ್ಲಿ ಬಾಲಕರ ಮೃತ ದೇಹಗಳು ಪತ್ತೆಯಾಗಿವೆ. ಸುದ್ದಿ ತಿಳಿದ ತಕ್ಷಣವೇ ಸ್ಥಳಕ್ಕೆ ಧಾವಿಸಿದ ಬಿಡದಿ ಪೊಲೀಸರು ಪ್ರಕರಣ ದಾಖಲಿಸಿ ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.
Next Story