Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನಳಿನ್ ಕುಮಾರ್ ಕಟೀಲ್ ವಿರುದ್ಧ...

ನಳಿನ್ ಕುಮಾರ್ ಕಟೀಲ್ ವಿರುದ್ಧ ಕಾಂಗ್ರೆಸ್ ವಕ್ತಾರ ಬೇಳೂರು ಗೋಪಾಲಕೃಷ್ಣ ವಾಗ್ದಾಳಿ

ವಾರ್ತಾಭಾರತಿವಾರ್ತಾಭಾರತಿ22 Oct 2021 9:35 PM IST
share
ನಳಿನ್ ಕುಮಾರ್ ಕಟೀಲ್ ವಿರುದ್ಧ ಕಾಂಗ್ರೆಸ್ ವಕ್ತಾರ ಬೇಳೂರು ಗೋಪಾಲಕೃಷ್ಣ ವಾಗ್ದಾಳಿ

ಶಿವಮೊಗ್ಗ, ಅ.22:ನಳಿನ್ ಕುಮಾರ್ ಕಟೀಲ್ ಅವರಿಗೆ ಸೀರೆ ಉಡಿಸಿದರೆ ಅವರು ಗಂಡಸು ಅಲ್ಲ,ಹೆಂಗಸು ಅಲ್ಲ ಎಂದು ಕಾಂಗ್ರೆಸ್ ವಕ್ತಾರ,ಮಾಜಿ ಶಾಸಕ ಬೇಳೂರು ಗೋಪಾಲ ಕೃಷ್ಣ ವ್ಯಂಗವಾಡಿದ್ದಾರೆ.

ಶಿವಮೊಗ್ಗದಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು,ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ದ ಹೇಳಿಕೆ ನೀಡಿದ  ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹರಿಹಾಯ್ದರು.ಬಿಜೆಪಿಯಲ್ಲಿ ಕೊಳೆತು ನಾರುವಷ್ಟು ವಿಷಯಗಳಿವೆ,ನಮ್ಮ ನಾಯಕರ ವಿರುದ್ದ  ಮಾತನಾಡುವ ನೈತಿಕತೆ ಅವರಿಗಿಲ್ಲ ಎಂದು ಟೀಕಿಸಿದರು.

ರೇಪ್ ಮಾಡಿದವರು ಸದನದಲ್ಲಿ ಬ್ಲೂ ಫಿಲಂ ನೋಡಿದವರು, ಭ್ರಷ್ಟಾಚಾರ ಮಾಡಿದವರು ಬಿಜೆಪಿಯಲ್ಲಿ ತುಂಬಿ ತುಳುಕುತ್ತಿದ್ದಾರೆ. ಅವರನ್ನು ಟೀಕಿಸಲಿ ಎಂದ ಅವರು, ಸಚಿವ ಕೆ.ಎಸ್ ಈಶ್ವರಪ್ಪನವರ ಬಗ್ಗೆ ನನಗೆ ತುಂಬಾ ಅಭಿಮಾನವಿದೆ. ಅವರು ಕೂಡಾ ಕಾಂಗ್ರೆಸ್ ನಾಯಕರ ಬಗ್ಗೆ ಮಿತಿಮೀರಿ ಬೈಯುತ್ತಿದ್ದಾರೆ. ಆದರೆ, ಅವರಿಗೆ ನೆನಪಿರಲಿ ಬೇಳೂರಿಗೆ ಬೈಯಲು ಆಗುವುದಿಲ್ಲವೆಂದೆನೂ ಅಲ್ಲ ಎಂದರು.

ಕಾಂಗ್ರೆಸ್ ಪಕ್ಷವನ್ನು ಬಿಜೆಪಿಯವರು ಸುಖಾಸುಮ್ಮನೆ ಟೀಕೆ ಮಾಡುತ್ತಿದ್ದಾರೆ.ಬಿಜೆಪಿ ರಾಜ್ಯ ಉಪಾಧ್ಯಕ್ಷ ವಿಜಯೇಂದ್ರ, ವಿಧಾನ ಪರಿಷತ್ ಸದಸ್ಯ ರವಿಕುಮಾರ್ ಸೇರಿದಂತೆ ಹಲವರು ಮುಂದಿನ ಚುನಾವಣೆಗೆ ಕಾಂಗ್ರೆಸ್ ಪಕ್ಷ ಇರುವುದಿಲ್ಲ ಎಂದು ಹೇಳಿಕೆ ನೀಡುತ್ತಿದ್ದಾರೆ.ಹಾಗೆಲ್ಲ ಹೇಳುತ್ತಿರುವವರೇ ಮುಂದಿನ ಚುನಾವಣೆಗೆ ಇರುವುದಿಲ್ಲ.ಬಿಜೆಪಿಯಲ್ಲಿ ಮೂಲೆಗುಂಪಾಗುತ್ತಾರೆ ಎಂದರು.

ನೈತಿಕ ಪೊಲೀಸ್‌ಗಿರಿ ಕೆಲವು ಸಂದರ್ಭದಲ್ಲಿ ಮಾಡಬಹುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ.ರಾಜ್ಯವನ್ನು ಮುನ್ನೆಡೆಸುವವರು ಈ ರೀತಿ ಹೇಳಿಕೆ ನೀಡುವುದು ಎಷ್ಟರ ಮಟ್ಟಿ ಸರಿ ಎಂದು ಪ್ರಶ್ನಿಸಿದ ಅವರು,ಸಿಎಂ ಹೇಳಿಕೆಯಿಂದ ಎಲ್ಲಾ ಜಾತಿ,ಧರ್ಮದ ನೈತಿಕ ಪೊಲೀಸ್‌ಗಿರಿ ಹೆಚ್ಚಳವಾಗಲಿದೆ ಎಂದು ಎಚ್ಚರಿಕೆ ನೀಡಿದರು.

ಮುಸ್ಲಿಂ ಮತಕ್ಕಾಗಿ ಹೇಳಿಕೆ:

ಆರ್‌ಎಸ್‌ಎಸ್ ವಿರುದ್ದ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಬೇಳೂರು,ಮುಸ್ಲಿಂ ಸಮುದಾಯದ ಮತಕ್ಕಾಗಿ ಕುಮಾರ ಸ್ವಾಮಿ ಈರೀತಿ ಹೇಳಿಕೆ ನೀಡುತ್ತಿದ್ದಾರೆ ಎಂದು ಆರೋಪಿಸಿದರು.

ಕಾಳಸಂತೆಯಲ್ಲಿ ಗೊಬ್ಬರ ಮಾರಾಟ:

ಮಲೆನಾಡು ಭಾಗದಲ್ಲಿ ಅಡಿಕೆಗೆ ಎಲೆ ಚುಕ್ಕೆ ರೋಗ ಬಂದಿದೆ. ರೈತರು ತೀವ್ರ ಸಂಕಷ್ಟಕ್ಕೆ ಗುರಿಯಾಗಿದ್ದಾರೆ. ರಾಜ್ಯ ಸರ್ಕಾರ ಈ ಬಗ್ಗೆ ಸೊಲ್ಲೆತ್ತುತ್ತಿಲ್ಲ. ಮತ್ತು ರೈತರಿಗೆ ಅಗತ್ಯವಾಗಿ ಬೇಕಾದ ರಸಗೊಬ್ಬರ ಕೂಡಾ ಇಲಾಖೆಯಲ್ಲೂ ಸಿಗುತ್ತಿಲ್ಲ, ಸರ್ಕಾರದಲ್ಲೂ ಕೂಡ ಇಲ್ಲ. ಆದರೆ, ಖಾಸಗಿಯಲ್ಲಿ ಮಾತ್ರ ಗೊಬ್ಬರ ಸಿಗುತ್ತದೆ. ಕಳ್ಳ ಸಂತೆಯಲ್ಲಿ ಗೊಬ್ಬರ ಮಾರಾಟ ಆಗುತ್ತಿದ್ದರೂ ಕೂಡ ಸರ್ಕಾರ ಕಣ್ಣು ಮುಚ್ಚಿ ಕುಳಿತಿದೆ ಎಂದು ಟೀಕಿಸಿದರು.

ಸರ್ಕಾರಿ ನೌಕರರ ರಾಜ್ಯಾಧ್ಯಕ್ಷರ ಬಗ್ಗೆ ತೀವ್ರ ತರಾಟೆ :

ಸರ್ಕಾರಿ ನೌಕರರ ರಾಜ್ಯಾಧ್ಯಕ್ಷ ಸಿ.ಎಸ್. ಷಡಕ್ಷರಿ ಅವರನ್ನು ತೀವ್ರ ತರಾಟೆಗೆ ತೆಗೆದು ಕೊಂಡ ಬೇಳೂರು ಈತ ಕೋಟಿ ಕೋಟಿ ಆಸ್ತಿ ಸಂಪಾದನೆ ಮಾಡಿದ್ದಾನೆ. ವರ್ಗಾವಣೆ ದಂಧೆಯಲ್ಲಿ ಈತನೇ ರೂವಾರಿಯಾಗಿದ್ದಾನೆ. ರಾಘವೇಂದ್ರ, ವಿಜಯೇಂದ್ರ, ಉಮೇಶ ಅವರ ಜೊತೆ ಸೇರಿಕೊಂಡು ವರ್ಗಾವಣೆ ದಂಧೆ ನಡೆಸುತ್ತಿದ್ದಾರೆ. ಉಪ್ಪಾರ ಪೇಟೆಯ ಇನ್ಸ್ ಪೆಕ್ಟರ್ ಅಂತಹ ಚಿಕ್ಕ ಹುದ್ದೆಯ ವರ್ಗಾವಣೆಗೂ ಲಕ್ಷಾಂತರ ರೂ. ಪಡೆಯುತ್ತಾರೆ ಎಂದರೆ ಅದೆಷ್ಟು ಹಣ ಲೂಟಿ ಮಾಡಿದ್ದಾರೆ ಎಂದು ತಿಳಿದುಕೊಳ್ಳಬೇಕು. ಮೊದಲು ಈತನ ಮನೆ ಮೇಲೆ ಇಡಿ ರೈಡ್ ಆಗಬೇಕು. ಇದರ ಮೇಲೆ ಚುನಾವಣೆಗೆ ನಿಲ್ಲಲು ಹೊರಟಿದ್ದಾನೆ ಎಂಬ ಸುದ್ದಿಯೂ ಇದೆ. ಹಡಬೆ ದುಡ್ಡಿನಲ್ಲಿ ಇದೆಲ್ಲ ಮಾಡುತ್ತಿದ್ದಾನೆ ಎಂದು ಹರಿಹಾಯ್ದರು.

ಜಿಲ್ಲಾಧಿಕಾರಿಗಳಿಂದ ಗ್ರಾಮ ವಾಸ್ತವ್ಯದ ನಾಟಕ :

ಜಿಲ್ಲಾಧಿಕಾರಿಗಳು ಸರ್ಕಾರದ ಏಜೆಂಟರಂತೆ ಕೆಲಸ ಮಾಡುತ್ತಿದ್ದಾರೆ. ಗ್ರಾಮ ವಾಸ್ತವ್ಯವನ್ನು ಶಿವಮೊಗ್ಗದಿಂದ ಕೇವಲ ೮ ಕಿ,ಮೀ ಇರುವ ಗಾಜನೂರಿನಲ್ಲಿ ಮಾಡಿದ್ದಾರೆ. ಇದೊಂದು ಕಾಟಾಚಾರದ ಕ್ರಿಯೆ ಆಗಿದೆ. ಮಲೆನಾಡಿನ ಗುಡ್ಡಗಾಡು ಪ್ರದೇಶದಲ್ಲಿ ಬಸ್ ಗಳಿಲ್ಲದ ರಸ್ತೆಗಳಿಲ್ಲದ, ವಿದ್ಯುತ್ ಇಲ್ಲದ, ಆಸ್ಪತ್ರೆ ಇಲ್ಲದ ಗ್ರಾಮಗಳಿಗೆ ಭೇಟಿಕೊಟ್ಟರೆ ವಾಸ್ತವ್ಯಕ್ಕೂ ಒಂದು ಅರ್ಥ ಬರುತ್ತದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಜಿ.ಡಿ ಮಂಜುನಾಥ್, ಶಾಂತವೀರ ನಾಯ್ಕ್, ರಾಜ್ ಕುಮಾರ್, ಸೋಮಶೇಖರ್ ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X