ಉಡುಪಿ ಜಿಲ್ಲೆಯಲ್ಲಿ ಬಾಲ ಕಾರ್ಮಿಕ, ಕಿಶೋರ ಕಾರ್ಮಿಕರ ಸಮೀಕ್ಷೆ: ಡಿಸಿ ಕೂರ್ಮಾರಾವ್

ಉಡುಪಿ, ಅ.23: ಜಿಲ್ಲೆಯಲ್ಲಿ ನವೆಂಬರ್ 1ರಿಂದ ಬಾಲ ಕಾರ್ಮಿಕರು ಮತ್ತು ಕಿಶೋರ ಕಾರ್ಮಿಕರ ಸಮೀಕ್ಷೆ ನಡೆಸಲಾಗುವುದು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಹೇಳಿದ್ದಾರೆ.
ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಕೋರ್ಟ್ ಹಾಲ್ನಲ್ಲಿ ಶುಕ್ರವಾರ ನಡೆದ ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸಂಘದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.
ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಕೋರ್ಟ್ ಹಾಲ್ನಲ್ಲಿ ಶುಕ್ರವಾರ ನಡೆದ ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸಂಘದ ಸೆಯಅ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು. ಅಪ್ರಾಪ್ತ ವಯಸ್ಸಿನ ಮಕ್ಕಳು ಬಾಲ ಕಾರ್ಮಿಕರಾಗಿ ಕೆಲಸದಲ್ಲಿ ತೊಡಗಿ ಕೊಳ್ಳುವುದರಿಂದ ಮಕ್ಕಳ ವಿಕಸನಕ್ಕೆ ಹಾಗೂ ಬೆಳವಣಿಗೆಗೆ ತೊಡಕಾಗುವ ಜೊತೆಗೆ ಶಿಕ್ಷಣದಿಂದಲೂ ವಂಚಿತರಾಗುತ್ತಾರೆ. ಇದೊಂದು ಅನಿಷ್ಠ ಪದ್ದತಿ ಯಾಗಿದ್ದು, ಸಮಾಜದಿಂದ ಇದನ್ನು ತೊಡೆದು ಹಾಕಲು ಎಲ್ಲಾ ಸಾರ್ವಜನಿಕರು ಜಿಲ್ಲಾಡಳಿತದ ಕೈ ಜೋಡಿಸಬೇಕು ಎಂದರು.
ಜಿಲ್ಲೆಯಲ್ಲಿ ವಿವಿಧ ಕೈಗಾರಿಕೆಗಳು, ಹೋಟೆಲ್ ಮತ್ತು ರೆಸ್ಟೋರೆಂಟ್ಗಳು, ಕಲ್ಲುಕ್ವಾರಿಗಳು, ಜಲ್ಲಿ ಕ್ರಷರ್ಗಳಲ್ಲಿ ಬಾಲ ಕಾರ್ಮಿಕರು ಮತ್ತು ಕಿಶೋರ ಕಾರ್ಮಿಕರನ್ನು ಬಳಸಿಕೊಳ್ಳುವ ಸಾಧ್ಯತೆಗಳಿದ್ದು, ಇಂತಹ ಎಲ್ಲಾ ಪ್ರದೇಶಗಳಲ್ಲಿ ಸಮೀಕ್ಷೆ ನಡೆಸಿ ವರದಿ ನೀಡುವಂತೆ ತಿಳಿಸಿದ ಜಿಲ್ಲಾಧಿಕಾರಿಗಳು, ಸಮೀಕ್ಷೆಯನ್ನು ನ.1ರಿಂದ ಜಿಲ್ಲೆಯಾದ್ಯಂತ ಏಕಕಾಲಕ್ಕೆ ಆರಂಭಿಸಿ ತಿಂಗಳ ಅಂತ್ಯದೊಳಗೆ ಮುಕ್ತಾಯಗೊಳಿಸಿ ಸಮಗ್ರ ವರದಿ ಸಲ್ಲಿಸುವಂತೆ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಸಮೀಕ್ಷಾ ಕಾರ್ಯಕ್ಕೆ ಅಗತ್ಯ ಸಹಕಾರ ನೀಡುವಂತೆ ಸೂಚಿಸಿದರು.
ನವೆಂಬರ್ ತಿಂಗಳಲ್ಲಿ ಮಕ್ಕಳ ಗ್ರಾಮಸಭೆಗಳು ನಡೆಯಲಿದ್ದು, ಈ ಸಭೆಗಳಲ್ಲಿ ಬಾಲ ಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ಪದ್ದತಿಯ ಬಗ್ಗೆ ಅಧಿಕಾರಿಗಳು ಮಾಹಿತಿ ನೀಡಬೇಕು. ಬಾಲ ಕಾರ್ಮಿಕ ಮಕ್ಕಳನ್ನು ರಕ್ಷಿಸಲು ಹಾಗೂ ಅವರಿಗೆ ಪುರ್ನವಸತಿ ಕಲ್ಪಿಸಲು ತಾಲೂಕುವಾರು ವಿವಿಧ ಅಧಿಕಾರಿಗಳನ್ನು ನಿಯೋಜಿ ಸಿದ್ದು ಈ ಎಲ್ಲಾ ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಬಾಲ ಕಾರ್ಮಿಕರು ಕಂಡು ಬಂದಲ್ಲಿ ಅಗತ್ಯ ರಕ್ಷಣಾ ಕಾರ್ಯ ಕೈಗೊಳ್ಳಬೇಕು ಎಂದರು.
ಜಿಲ್ಲೆಯಲ್ಲಿ ಅಪಾಯಕಾರಿ ಮತ್ತು ಅಪಾಯಕಾರಿಯಲ್ಲದ ಉದ್ದಿಮೆಗಳು ಸೇರಿದಂತೆ ಯಾವುದೇ ವಲಯಗಳಲ್ಲಿ ಬಾಲ ಕಾರ್ಮಿಕ ಮತ್ತು ಕಿಶೋರ ಕಾರ್ಮಿಕರ ಬಳಕೆಯನ್ನು ಸಂಪೂರ್ಣವಾಗಿ ಇಲ್ಲವಾಗಿಸಿ ಜಿಲ್ಲೆಯನ್ನು ಬಾಲ ಕಾರ್ಮಿಕ ಮುಕ್ತ ಜಿಲ್ಲೆಯನ್ನಾಗಿಸಬೇಕು ಎಂದವರು ಹೇಳಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಜಿಪಂ ಉಪ ಕಾರ್ಯ ದರ್ಶಿ ಕಿರಣ್ ಪೆಡ್ನೇಕರ್, ಜಿಲ್ಲಾ ಕಾರ್ಮಿಕ ಅಧಿಕಾರಿ ಕುಮಾರ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.







