Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನಮ್ಮ ವ್ಯವಸ್ಥೆ ರೈತರನ್ನು ಯಾವ...

ನಮ್ಮ ವ್ಯವಸ್ಥೆ ರೈತರನ್ನು ಯಾವ ಮಟ್ಟಕ್ಕಿಳಿಸಿದೆ?: ಬಿಜೆಪಿ ಸಂಸದ ವರುಣ್ ಗಾಂಧಿ‌ ಆಕ್ರೋಶ

ವಾರ್ತಾಭಾರತಿವಾರ್ತಾಭಾರತಿ23 Oct 2021 9:53 PM IST
share
ನಮ್ಮ ವ್ಯವಸ್ಥೆ ರೈತರನ್ನು ಯಾವ ಮಟ್ಟಕ್ಕಿಳಿಸಿದೆ?: ಬಿಜೆಪಿ ಸಂಸದ ವರುಣ್ ಗಾಂಧಿ‌ ಆಕ್ರೋಶ

ಹೊಸದಿಲ್ಲಿ,ಅ.23: ನೂತನ ಕೃಷಿಕಾಯ್ದೆಗಳ ವಿರುದ್ಧ ಪ್ರತಿಭಟಿಸುತ್ತಿರುವ ರೈತರ ಪರವಾಗಿ ಮಾತನಾಡಿದ ಮತ್ತು ಉ.ಪ್ರದೇಶದ ಲಖಿಂಪುರ ಖೇರಿಯಲ್ಲಿ ಕೊಲ್ಲಲ್ಪಟ್ಟವರಿಗೆ ನ್ಯಾಯಕ್ಕಾಗಿ ಆಗ್ರಹಿಸಿದ ಬಳಿಕ ಬಿಜೆಪಿಯ ರಾಷ್ಟ್ರೀಯ ಕಾರ್ಯಕಾರಿಣಿಯಿಂದ ಕೈಬಿಡಲಾಗಿರುವ ಸಂಸದ ವರುಣ ಗಾಂಧಿಯವರು, ದೇಶದ ಕೃಷಿ ನೀತಿಗಳ ಮರುಚಿಂತನೆಗೆ ಕರೆ ನೀಡಿದ್ದಾರೆ.

ತನ್ನ ಬೆಳೆಗೆ ಬೆಂಕಿ ಹಚ್ಚುತ್ತಿರುವ ಲಖಿಂಪುರ ಖೇರಿಯ ರೈತನ ವೀಡಿಯೊವನ್ನು ವರುಣ್ ಟ್ವಿಟರ್ನಲ್ಲಿ ಹಂಚಿಕೊಂಡಿದ್ದಾರೆ. ತಾನು ಬೆಳೆದ ಭತ್ತ 15 ದಿನಗಳಿಂದಲೂ ಮಾರಾಟವಾಗಿಲ್ಲ,ಹೀಗಾಗಿ ಅನಿವಾರ್ಯವಾಗಿ ಅದನ್ನು ಸುಡುತ್ತಿದ್ದೇನೆ ಎಂದು ರೈತ ವೀಡಿಯೊದಲ್ಲಿ ಹೇಳಿದ್ದ.

‘ಉ.ಪ್ರದೇಶದ ರೈತ ಸುಮೇಧ ಸಿಂಗ್ ಕಳೆದ 15 ದಿನಗಳಿಂದಲೂ ತಾನು ಬೆಳೆದಿದ್ದ ಭತ್ತದ ಮಾರಾಟದ ಪ್ರಯತ್ನದಲ್ಲಿ ಮಂಡಿಯಿಂದ ಮಂಡಿಗೆ ಅಲೆದಾಡುತ್ತಿದ್ದ. ಅದರೆ ತನ್ನ ಪ್ರಯತ್ನದಲ್ಲಿ ವಿಫಲನಾದಾಗ ಹತಾಶನಾಗಿ ತನ್ನ ಇಡೀ ಬೆಳೆಯನ್ನು ಸುಟ್ಟುಹಾಕಿದ್ದಾನೆ ’ ಎಂದು ವರುಣ್ ಟ್ವೀಟಿಸಿದ್ದಾರೆ.

ತನ್ನ ಭತ್ತದ ರಾಶಿಯ ಮೇಲೆ ಸೀಮೆಎಣ್ಣೆ ಸುರಿದಿದ್ದ ಸಿಂಗ್ ಕೆಲವರು ತಡೆಯಲು ಪ್ರಯತ್ನಿಸಿದ್ದರೂ ಅದಕ್ಕೆ ಬೆಂಕಿ ಹಚ್ಚಿರುವುದನ್ನು ವೀಡಿಯೊ ತೋರಿಸುತ್ತಿದೆ.

‘ನಮ್ಮ ವ್ಯವಸ್ಥೆ ರೈತರನ್ನು ಯಾವ ಮಟ್ಟಕ್ಕಿಳಿಸಿದೆ? ನಾವು ನಮ್ಮ ಕೃಷಿ ನೀತಿಯ ಬಗ್ಗೆ ಮರುಚಿಂತನೆ ನಡೆಸುವ ಅಗತ್ಯವಿದೆ ’ಎಂದು ಕೇಂದ್ರ ಸಚಿವ ಅಜಯಕುಮಾರ್ ಮಿಶ್ರಾರ ಪುತ್ರ ಆಶಿಷ್ ಮಿಶ್ರಾ ಆರೋಪಿಯಾಗಿರುವ ಲಖಿಂಪುರ ಖೇರಿ ಹಿಂಸಾಕಾಂಡದ ವಿರುದ್ಧ ಈವರೆಗೆ ಧ್ವನಿಯೆತ್ತಿರುವ ಏಕೈಕ ಬಿಜೆಪಿ ನಾಯಕನಾಗಿರುವ ವರುಣ್ ಟ್ವೀಟ್ನಲ್ಲಿ ಬರೆದಿದ್ದಾರೆ.

ವರುಣ್ ಉ.ಪ್ರದೇಶದಲ್ಲಿ ತನ್ನ ಪಕ್ಷವನ್ನು ವಿಶೇಷವಾಗಿ ಟೀಕಿಸುತ್ತಿದ್ದಾರೆ. ಗುರುವಾರ ರಾಜ್ಯದ ತೇರಾಯ್ ಪ್ರದೇಶದಲ್ಲಿ ನೆರೆಹಾವಳಿಯ ಚಿತ್ರಗಳನ್ನು ಟ್ವೀಟಿಸಿದ್ದ ಅವರು,ಯೋಗಿ ಆದಿತ್ಯನಾಥ ಸರಕಾರವನ್ನು ತೀವ್ರ ತರಾಟೆಗೆತ್ತಿಕೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X