Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಆರೋಪಿ ಆರೆಸ್ಸೆಸ್ ಮುಖಂಡ ನಾರಾಯಣ ರೈ...

ಆರೋಪಿ ಆರೆಸ್ಸೆಸ್ ಮುಖಂಡ ನಾರಾಯಣ ರೈ ಬಂಧಿಸಿ ಸಮಗ್ರ ತನಿಖೆಗೆ ದ.ಕ.ಯುವ ಕಾಂಗ್ರೆಸ್ ಅಧ್ಯಕ್ಷ ಲುಕ್ಮಾನ್ ಒತ್ತಾಯ

ಪುತ್ತೂರಿನಲ್ಲಿ ದಲಿತ ಬಾಲಕಿಯ ಅತ್ಯಾಚಾರ ಪ್ರಕರಣ

ವಾರ್ತಾಭಾರತಿವಾರ್ತಾಭಾರತಿ25 Oct 2021 6:10 PM IST
share
ಆರೋಪಿ ಆರೆಸ್ಸೆಸ್ ಮುಖಂಡ ನಾರಾಯಣ ರೈ ಬಂಧಿಸಿ ಸಮಗ್ರ ತನಿಖೆಗೆ ದ.ಕ.ಯುವ ಕಾಂಗ್ರೆಸ್ ಅಧ್ಯಕ್ಷ ಲುಕ್ಮಾನ್ ಒತ್ತಾಯ

ಮಂಗಳೂರು, ಅ.25: ಪುತ್ತೂರು ತಾಲೂಕಿನ ಗ್ರಾಮವೊಂದರಲ್ಲಿ ದಲಿತ ಬಾಲಕಿಯ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ನೈಜ ಆರೋಪಿಯನ್ನು ಬಂಧಿಸಿ ಸಮಗ್ರ ತನಿಖೆ ನಡೆಸಿ ಬಾಲಕಿಗೆ ನ್ಯಾಯ ದೊರಕುವವರೆಗೆ ಹೋರಾಟ ನಡೆಸುವುದಾಗಿ ದ.ಕ. ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಲುಕ್ಮಾನ್ ಬಂಟ್ವಾಳ ಹೇಳಿದ್ದಾರೆ.

ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂತ್ರಸ್ತ ಬಾಲಕಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ನೀಡಿರುವ ದೂರಿನಲ್ಲಿ ತನ್ನ ಜತೆ ಅಕ್ರಮ ದೈಹಿಕ ಸಂಪರ್ಕ ಬೆಳೆಸಿ ಗರ್ಭವತಿಯನ್ನಾಗಿ ಮಾಡಿ ತಾನು ಮಗುವಿಗೆ ಜನ್ಮ ನೀಡಲು ಕಾರಣವಾದ ನಾರಾಯಣ ರೈ ಎಂಬಾತನ ಮೇಲೆ ಕಾನೂನು ಕ್ರಮ ಜರಗಿಸಬೇಕು ಎಂದು ಒತ್ತಾಯಿಸಿದ್ದಾರೆ. ಆದರೆ ಈ ಕುರಿತು ಎಫ್‌ಐಆರ್ ದಾಖಲಾಗಿದ್ದರೂ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ವಿಫಲರಾಗಿದ್ದಾರೆ ಎಂದು ಆರೋಪಿಸಿದರು.

ಪ್ರಕರಣದಲ್ಲಿ ನೈಜ ಆರೋಪಿ, ಆರೆಸೆಸ್ಸ್ ಮುಖಂಡ ನಾರಾಯಣ ರೈ ಎಂಬಾತನನ್ನು ರಕ್ಷಿಸಲು ಕಾಣದ ಕೈಗಳ ಒತ್ತಡದ ಮೇರೆಗೆ ಪೊಲೀಸರು, ಲೇಡಿಗೋಶನ್ ವೈದ್ಯಾಧಿಕಾರಿ ಕರ್ತವ್ಯಲೋಪ ಎಸಗಿದ್ದಾರೆ ಎಂದು ಅವರು ಅಪಾದಿಸಿದರು.

ಸಂತ್ರಸ್ತ ಬಾಲಕಿ ತನ್ನ ಕುಟುಂಬಕ್ಕೆ ಆಧಾರವಾಗಬೇಕು ಎಂಬ ನಿಟ್ಟಿನಲ್ಲಿ ಭೂಮಾಲಕ ನಾರಾಯಣ ರೈ ಎಂಬವರ ಮನೆಯಲ್ಲಿ ತೋಟದ ಕೆಲಸಕ್ಕೆ ಹೋಗುತ್ತಿದ್ದ ಸಂದರ್ಭ ಬೆದರಿಸಿ ಅತ್ಯಾಚಾರಗೈಯ್ಯಲಾಗಿದೆ. ಬಳಿಕ ಅದನ್ನು ಯಾರ ಬಳಿಯೂ ಹೇಳದಂತೆ ಬೆದರಿಕೆ ಹಾಕಿದ್ದಲ್ಲದೆ, ಈ ಸಂಬಂಧ 2021ರ ಸೆಪ್ಟಂಬರ್ 5ರಂದು ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಅದರಲ್ಲಿಯ ಹೇಳಿಕೆ ತನ್ನದಲ್ಲ. ಸಹಿ ಕೂಡಾ ತನ್ನದಲ್ಲ ಎಂದು ಬಾಲಕಿ ಹೇಳಿದ್ದಾರೆ. ಈ ನಡುವೆ ಪ್ರಕರಣಕ್ಕೆ ಸಂಬಂಧಿಸಿ ತನ್ನ ಸಹೋದರ ಸಂಬಂಧಿ ಅಣ್ಣನನ್ನು ಬಂಧಿಸಿದ್ದು ಆತ ನಿರಪರಾಧಿ, ಪೊಲೀಸ್ ಠಾಣೆಯಲ್ಲಿ ಮಾತ್ರವಲ್ಲದೆ, ಮ್ಯಾಜಿಸ್ಟ್ರೇಟ್ ಎದುರಿನಲ್ಲಿಯೂ ತಾನು ಆರೋಪಿ ನಾರಾಯಣ ರೈ ಹೆಸರು ಹೇಳಿರುವುದಾಗಿ ಬಾಲಕಿ ತಿಳಿಸಿದ್ದಾರೆ.

ಇದೀಗ ಬಾಲಕಿಯು ನೈಜ ಆರೋಪಿಯೆಂದು ಹೆಸರಿಸಿರುವ ನಾರಾಯಣ ರೈ ವಿರುದ್ಧ ಪ್ರಕರಣ ದಾಖಲಾಗಿದ್ದು, ಜಾಮೀನು ಅರ್ಜಿ ಕೂಡ ಹಾಕಿದ್ದು, ಅದು ತಿರಸ್ಕೃತಗೊಂಡಿದೆ. ಹೀಗಿರುವಾಗ ಅತ್ಯಾಚಾರ, ದಲಿತ ದೌರ್ಜನ್ಯ, ಪೋಕ್ಸೋ ಪ್ರಕರಣದಡಿ ಆರೋಪಿಯನ್ನು ಬಂಧಿಸಿ ಸಮಗ್ರ ತನಿಖೆ ನಡೆಸಬೇಕು. ಆರೋಪಿಯನ್ನು ಡಿಎನ್‌ಎ ಪರೀಕ್ಷೆಗೊಪಡಿಸಬೇಕು. ಅ. 28ರೊಳಗೆ ಆರೋಪಿ ನಾರಾಯಣ ರೈ ಬಂಧನವಾಗದಿದ್ದರೆ, ದಲಿತ ಸಮನ್ವಯ ಸಂಘಟನೆಗಳ ನೇತೃತ್ವದ ಹೋರಾಟಕ್ಕೆ ದ.ಕ. ಜಿಲ್ಲಾ ಯುವ ಕಾಂಗ್ರೆಸ್ ಕೂಡಾ ಬೆಂಬಲ ಸೂಚಿಸಲಿದೆ. ಬಾಲಕಿಗೆ ನ್ಯಾಯ ದೊರೆಯುವವರೆಗೆ ಹೋರಾಟ ನಡೆಸಲಿದೆ ಎಂದು ಲುಕ್ಮಾನ್ ಬಂಟ್ವಾಳ ಹೇಳಿದರು.

ಗೋಷ್ಠಿಯಲ್ಲಿ ಶೈಲಜಾ ಅಮರನಾಥ್, ಅಭೀಷೇಕ್ ಬೆಳ್ಳಿಪಾಡಿ, ರಮಾನಂದ ಬೋಳಾರ, ಶಾಂತಲಾ ಗಟ್ಟಿ, ಸೌಹನ್, ಬಾಲಕೃಷ್ಣ ಆನಂದ ಬೆಳ್ಳಾರೆ, ಕೇಶವ ಪಡೀಲ್, ಕೃತಿ ಕೋಟ್ಯಾನ್ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X