Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಉಗ್ರ ಚಟುವಟಿಕೆಗೆ ಹಣಕಾಸು ನೀಡಿದ...

ಉಗ್ರ ಚಟುವಟಿಕೆಗೆ ಹಣಕಾಸು ನೀಡಿದ ಪ್ರಕರಣದಲ್ಲಿ ನಾಲ್ವರು ಆರೋಪಿಗಳು ದೋಷಮುಕ್ತ

ಆಧಾರರಹಿತ ಊಹೆಗಳು ಅಪಾಯಕಾರಿ ಎಂದ ನ್ಯಾಯಾಲಯ

ವಾರ್ತಾಭಾರತಿವಾರ್ತಾಭಾರತಿ25 Oct 2021 6:13 PM IST
share
ಉಗ್ರ ಚಟುವಟಿಕೆಗೆ ಹಣಕಾಸು ನೀಡಿದ ಪ್ರಕರಣದಲ್ಲಿ ನಾಲ್ವರು ಆರೋಪಿಗಳು ದೋಷಮುಕ್ತ

ಹೊಸದಿಲ್ಲಿ: ವಾಸ್ತವಗಳ ಆಧರಿತವಲ್ಲದ ಊಹೆಗಳನ್ನು ಮಾಡುವುದು ಅಪಾಯಕಾರಿ ಎಂದು ಇತ್ತೀಚೆಗೆ ಉಗ್ರವಾದಕ್ಕೆ ಹಣಕಾಸು ಸಹಾಯ ನೀಡಿದ ಪ್ರಕರಣದಲ್ಲಿ ಆರೋಪಿಗಳಾದ ನಾಲ್ಕು ಮಂದಿಯನ್ನು ದೋಷಮುಕ್ತಗೊಳಿಸುವ ಸಂದರ್ಭ ದಿಲ್ಲಿಯ ನ್ಯಾಯಾಲಯ ಹೇಳಿದೆ. ಆರೋಪಿಗಳು ಹಾಗೂ ನಿಷೇಧಿತ ಉಗ್ರ ಸಂಘಟನೆಗಳ ಜತೆ ನಂಟು ಕಲ್ಪಿಸುವ ಸಂವಾದಗಳ ಸೀಡಿಯನ್ನು ಯಾರು ತಯಾರಿಸಿದ್ದರೆಂದು ಪತ್ತೆ ಹಚ್ಚಲು ಎನ್‍ಐಎ ಯಾವುದೇ ಪ್ರಯತ್ನ ನಡೆಸಿಲ್ಲ ಎಂದು ನ್ಯಾಯಾಲಯ ಹೇಳಿದೆ ಎಂದು indianexpress.com ವರದಿ ಮಾಡಿದೆ.

ಭಾರತದಲ್ಲಿ ಅಶಾಂತಿ ಹರಡಲು ಪಾಕಿಸ್ತಾನಿ ಉಗ್ರ ಸಂಘಟನೆ- ಫಲಾಹ್-ಇ-ಇನ್ಸಾಯಿತ್ ನಿಂದ ಹಣ ಪಡೆದಿದ್ದಾರೆಂಬ ಆರೋಪದ ಮೇಲೆ ಎನ್‍ಐ ಈ ಹಿಂದೆ ಮುಹಮ್ಮದ್ ಸಲ್ಮಾನ್, ಮುಹಮ್ಮದ್ ಸಲೀಂ, ಅರಿಫ್ ಗುಲಾಂ ಬಾಶಿರ್ ಧರಂಪುರಿಯಾ ಮತ್ತು ಮುಹಮ್ಮದ್ ಹುಸೈನ್ ಮೊಲಾನಿ ಎಂಬವರನ್ನು  ಬಂಧಿಸಿದ್ದರೆ, ನ್ಯಾಯಾಲಯ ಅಕ್ಟೋಬರ್ 21ರಂದು ಅವರನ್ನು ಖುಲಾಸೆಗೊಳಿಸಿತ್ತು. ಮಸೀದಿ ನಿರ್ಮಾಣದ ನೆಪದಲ್ಲಿ ಹಣ ನೀಡಲಾಗಿತ್ತು ಎಂದು ಎನ್‍ಐಎ ವಾದಿಸಿತ್ತು.

ಈ ಪ್ರಕರಣದಲ್ಲಿ ಆರೋಪಿಗಳಲ್ಲೊಬ್ಬನಾದ ಕಮ್ರಾನ್‍ನ ಉದ್ಯೋಗಿ ಎನ್ನಲಾಗಿದ್ದ ಧರಂಪುರಿಯಾ ಎಂಬಾತನಿಂದ ವಶಪಡಿಸಿಕೊಳ್ಳಲಾಗಿದ್ದ ಸೀಡಿಯನ್ನು ಪ್ರಮುಖ ಸಾಕ್ಷ್ಯವನ್ನಾಗಿ ಎನ್‍ಐಎ ಬಳಸಿತ್ತು. ಅದರಲ್ಲಿ ಫಲಾಹ್ ಉಗ್ರ ಸಂಘಟನೆಯ ಉಪಮುಖ್ಯಸ್ಥ ಶಾಹಿದ್ ಮೆಹಮೂದ್ ಮತ್ತು ಕಮ್ರಾನ್ ನಡುವಿನ ಸಂಭಾಷಣೆಯಿದೆಯೆಂದೂ ಪ್ರಾಸಿಕ್ಯೂಶನ್ ವಾದಿಸಿತ್ತು.

ಆದರೆ ಈ ಸೀಡಿಯ ಮೂಲ, ಅದನ್ನು ಯಾರು ಸಿದ್ಧಪಡಿಸಿದ್ದರು ಎಂಬ ಮಾಹಿತಿಯನ್ನು ಎನ್‍ಐಎ ಒದಗಿಸಿಲ್ಲ ಹಾಗೂ ಈ ಸೀಡಿಯಲ್ಲಿನ ಸಂಭಾಷಣೆಯಲ್ಲಿ  ಯಾವುದೇ ಹಣಕಾಸು ಸಂಬಂಧಿತ ಉಲ್ಲೇಖವಿಲ್ಲ ಎಂದು ನ್ಯಾಯಾಲಯ ಹೇಳಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X