Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬೆಳ್ವೆ ಪ್ರತಿಭಟನೆ: ಉಡುಪಿ ಧರ್ಮಪ್ರಾಂತದ...

ಬೆಳ್ವೆ ಪ್ರತಿಭಟನೆ: ಉಡುಪಿ ಧರ್ಮಪ್ರಾಂತದ ಸ್ಪಷ್ಟೀಕರಣ

ವಾರ್ತಾಭಾರತಿವಾರ್ತಾಭಾರತಿ25 Oct 2021 9:52 PM IST
share

ಉಡುಪಿ, ಅ.25: ಉಡುಪಿ ಜಿಲ್ಲೆಯ ಬೆಳ್ವೆ ಗುಮ್ಮಹೊಲದ ಸಂತ ಜೋಸೆಫ್ ಅಗ್ರಿಕಲ್ಚರ್ ಕಾಲನಿಯ ಜನರು ಚರ್ಚ್‌ನ ಧರ್ಮಗುರುಗಳ ವಿರುದ್ಧ ಅನೇಕ ಆರೋಪಗಳನ್ನು ಮಾಡಿ, ಅವರನ್ನು ತಕ್ಷಣ ಅಲ್ಲಿಂದ ವರ್ಗಾವಣೆ ಮಾಡ ಬೇಕೆಂಬ ಬೇಡಿಕೆಯಿಟ್ಟು ಮಾಡಿದ ಪ್ರತಿಭಟನಾ ವರದಿಗಳಲ್ಲಿ ಅನೇಕ ಸತ್ಯಕ್ಕೆ ದೂರವಾದ ವಿಷಯಗಳಿವೆ ಎಂದು ಉಡುಪಿ ಧರ್ಮಪ್ರಾಂತ ಪತ್ರಿಕೆಗಳಿಗೆ ನೀಡಿದ ಸ್ಪಷ್ಟೀಕರಣದಲ್ಲಿ ತಿಳಿಸಿದೆ.

ರವಿವಾರ ಚರ್ಚ್‌ನಲ್ಲಿ ಎಂದಿನಂತೆ ಬೆಳಗ್ಗಿನ ಪೂಜೆ ಸುಸೂತ್ರವಾಗಿ ನಡೆದು ಕ್ರೈಸ್ತ ಭಕ್ತಾದಿಗಳು ಅದರಲ್ಲಿ ಪಾಲ್ಗೊಂಡಿದ್ದರು. ಹೀಗಾಗಿ, ಗೇಟ್‌ಗೆ ಬೀಗ ಜಡಿದು ಭಕ್ತಾದಿಗಳಿಗೆ ಚರ್ಚ್ ಪ್ರವೇಶಿಸದಂತೆ ತಡೆಯಲಾಯಿತು ಎಂಬುದು ವರದಿ ಸತ್ಯಕ್ಕೆ ದೂರವಾದುದು ಎಂದು ಅದು ಹೇಳಿದೆ.

2021 ಜುಲೈ ತಿಂಗಳಲ್ಲಿ ಬೆಳ್ವೆ ಕಾಲನಿಯ ಹೊಸ ನಿರ್ದೇಶಕರಾಗಿ ನೇಮಕ ಗೊಂಡ ಧರ್ಮಗುರುಗಳು ಇಕ್ಕಟ್ಟಾಗಿದ್ದ ತಮ್ಮ ಶೌಚಾಲಯ ಮತ್ತು ಕಚೇರಿ ಯನ್ನು ವಿಸ್ತರಿಸಲು ಧರ್ಮಪ್ರಾಂತದ ಬಿಷಪರ ಲಿಖಿತ ಅನುಮತಿ ಪಡೆದು, ಒಂದು ಗೋಡೆಯನ್ನು ಕೆಡವಿ, ಆ ಜಾಗದಲ್ಲಿ ಹೊಸ ಗೋಡೆಯನ್ನು ಕಟ್ಟಿಸಲು ಆರಂಭಿಸಿದ್ದರು. ಯಾವ ರೀತಿಯಲ್ಲೂ ಚರ್ಚ್ ಕಟ್ಟಡ ಅಥವ ಇತರ ಭಾಗಗಳಿಗೆ ಹಾನಿಯನ್ನು ಉಂಟುಮಾಡಿಲ್ಲ.

ಅ.5ರಂದು ಬೆಳ್ವೆಯ ಪ್ರತಿನಿಧಿಗಳು ಹಾಗೂ ಧರ್ಮಪ್ರಾಂತದ ಆಡಳಿತ ಮಂಡಳಿ ಉಡುಪಿ ಬಿಷಪರ ನಿವಾಸದಲ್ಲಿ ನಡೆಸಿದ ಸಭೆಯಲ್ಲಿ ಎಲ್ಲಾ ವಿಷಯಗಳನ್ನು ಚರ್ಚಿಸಲಾಗಿತ್ತು. ಧರ್ಮಗುರುಗಳ ವರ್ಗಾವಣೆಯೊಂದನ್ನು ಬಿಟ್ಟು ಮಿಕ್ಕೆಲ್ಲಾ ಬೇಡಿಕೆಗಳನ್ನು ಕೈಬಿಟ್ಟಿರುವುದಾಗಿ ಬೆಳ್ವೆಯ ಪ್ರತಿನಿಧಿಳು ಲಿಖಿತವಾಗಿ ಮಾತುಕೊಟ್ಟಿದ್ದರು.

ಗುಮ್ಮಹೊಲ ಬೆಳ್ವೆಯ ಸಂತ ಜೋಸೆಫ್ ಅಗ್ರಿಕಲ್ಚರಲ್ ಕಾಲನಿಯ ಬೇಡಿಕೆಗೆ ಸಂಬಂಧಪಟ್ಟಂತೆ, ಯಾವುದೇ ಚರ್ಚಿಗೆ/ ಸಂಸ್ಥೆಗೆ/ಕಾಲನಿಗೆ ಗುರುಗಳನ್ನು/ನಿರ್ದೇಶಕರನ್ನು ನೇಮಿಸುವ ಅಥವಾ ವರ್ಗಾಯಿಸುವ ಪರಮಾಧಿಕಾರ ಧರ್ಮಪ್ರಾಂತದ ಮುಖ್ಯಸ್ಥರಾದ ಬಿಷಪರದು. ಕೆಥೋಲಿಕ ಧರ್ಮಸಭೆಯ ಹಾಗೂ ಧರ್ಮಪ್ರಾಂತದ ನೇಮ ನಿಯಮಗಳ ಪ್ರಕಾರ ಅದು ನಡೆಯುತ್ತದೆ. ಇದು ತಿಳಿದೂ ಬೆಳ್ವೆಯ ಕ್ರೈಸ್ತರು, ಕ್ರೈಸ್ತ ಸಮುದಾಯಕ್ಕೆ ಸಂಬಂಧಪಡದ ಜನರಿಗೆ ತಪ್ಪು ಮಾತಿಯನ್ನು ನೀಡಿ ಗುಂಪುಗೂಡಿಸಿ ಪ್ರತಿಭಟಿಸಿದ್ದು, ’ಕ್ರೈಸ್ತ ಧರ್ಮವನ್ನು ತ್ಯಜಿಸುತ್ತೇವೆ’ ಎಂಬ ಬೆದರಿಕೆ ಒಡ್ಡಿದ್ದು ನಿಜಕ್ಕೂ ವಿಷಾದನೀಯ ಎಂದು ಸ್ಪಷ್ಟೀಕರಣದಲ್ಲಿ ಹೇಳಲಾಗಿದೆ.

ಗುಮ್ಮಹೊಲ ಬೆಳ್ವೆಯ ಕ್ರೈಸ್ತ ವಿಶ್ವಾಸಿಗಳು ಚರ್ಚ್‌ಗೆ ಪ್ರವೇಶಿಸಲು, ಪ್ರಾರ್ಥನೆ-ಪೂಜೆಗಳಲ್ಲಿ ಭಾಗವಹಿಸಲು ಯಾರೂ ಯಾವತ್ತೂ ಅಡ್ಡಿ ಮಾಡಿಲ್ಲ. ಪ್ರಸ್ತುತ ಧರ್ಮಗುರುಗಳು ಏನಾದರೂ ಸೂಚನೆಗಳನ್ನು ನೀಡಿರುವುದಾದರೆ, ಅವು ಚರ್ಚ್‌ನ ಶಿಸ್ತು ಪಾಲನೆಯ ಭಾಗವಾಗಿವೆ. ಬೆಳ್ವೆ ಸಂತ ಜೋಸೆಫರ ಅಗ್ರಿಕಲ್ಚರಲ್ ಕಾಲನಿಯ ಕ್ರೈಸ್ತ ಭಕ್ತಾದಿಗಳು ಒಳಗಿನ ಮತ್ತು ಹೊರಗಿನ ಯಾವುದೇ ಪಟ್ಟಭದ್ರ ಹಿತಾಸಕ್ತಿಗಳ ಪ್ರಭಾವಕ್ಕೆ ಹಾಗೂ ಸುಳ್ಳು ಮಾಹಿತಿಗಳಿಗೆ ಬಲಿಯಾಗದೆ, ದೈನಂದಿನ ಕ್ರೈಸ್ತ ವಿಶ್ವಾಸಿ ಜೀವನವನ್ನು ನಡೆಸಬೇಕೆಂದು ಧರ್ಮಪ್ರಾಂತದ ಆಡಳಿತ ಮಂಡಳಿಯ ಪ್ರಕಟಣೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X