Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಚೀನಾ: ಕೊರೋನ ಸೋಂಕು ಮತ್ತೆ ಉಲ್ಬಣ ಇಜಿನ್...

ಚೀನಾ: ಕೊರೋನ ಸೋಂಕು ಮತ್ತೆ ಉಲ್ಬಣ ಇಜಿನ್ ಪ್ರಾಂತದಲ್ಲಿ ಲಾಕ್‌ಡೌನ್ ಜಾರಿ

ವಾರ್ತಾಭಾರತಿವಾರ್ತಾಭಾರತಿ25 Oct 2021 10:26 PM IST
share
ಚೀನಾ: ಕೊರೋನ ಸೋಂಕು ಮತ್ತೆ ಉಲ್ಬಣ ಇಜಿನ್ ಪ್ರಾಂತದಲ್ಲಿ ಲಾಕ್‌ಡೌನ್ ಜಾರಿ

ಬೀಜಿಂಗ್, ಅ.25: ಚೀನಾದ ಇಜಿನ್ ಪ್ರಾಂತದಲ್ಲಿ ಕೊರೋನ ಸೋಂಕಿನ ಹೊಸ ರೂಪಾಂತರಿತ ವೈರಸ್ ತೀವ್ರ ಪ್ರಮಾಣದಲ್ಲಿ ಉಲ್ಬಣಿಸುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಲಾಕ್‌ಡೌನ್ ಜಾರಿಗೊಳಿಸಲಾಗಿದೆ ಎಂದು ಸ್ಥಳೀಯಾಡಳಿತ ಮಾಹಿತಿ ನೀಡಿದೆ. ಇನ್ನರ್ ಮಂಗೋಲಿಯಾ ವಲಯದಲ್ಲಿರುವ ಇಜಿನ್ ಪ್ರಾಂತದ ಸುಮಾರು 35,700 ಜನರು ಮನೆಯಿಂದ ಹೊರಗೆ ಬರಬಾರದೆಂದು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಚೀನಾದಲ್ಲಿ ಕಳೆದ ವಾರವೊಂದರಲ್ಲೇ ಹೊಸ ಸೋಂಕಿನ 150ಕ್ಕೂ ಅಧಿಕ ಪ್ರಕರಣ ಪತ್ತೆಯಾಗಿದ್ದು ಇದರಲ್ಲಿ ಮೂರನೇ ಒಂದರಷ್ಟು ಪ್ರಕರಣ ಮಂಗೋಲಿಯಾ ಗಡಿಭಾಗದಲ್ಲಿರುವ ಈ ಸಣ್ಣಪ್ರಾಂತದಲ್ಲಿ ದಾಖಲಾಗಿದೆ.

ಹೊಸ ಸೋಂಕು ಪ್ರಕರಣ ಕ್ಷಿಪ್ರವಾಗಿ ಪ್ರಸಾರಗೊಳ್ಳುತ್ತಿದ್ದು ಒಂದು ವಾರದಲ್ಲೇ 11 ಪ್ರಾಂತಗಳಿಗೆ ಹರಡಿದೆ. ಚೀನಾದಲ್ಲಿ ಸೋಮವಾರ 38 ಕೊರೋನ ಸೋಂಕು ಪತ್ತೆಯಾಗಿದ್ದು ಇದರಲ್ಲಿ 19 ಪ್ರಕರಣ ಇನ್ನರ್ ಮಂಗೋಲಿಯಾ ಪ್ರದೇಶದಲ್ಲಿ ದಾಖಲಾಗಿದೆ. ಸಾಗರೋತ್ತರ ದೇಶಗಳಿಂದ ಈ ರೂಪಾಂತರಿತ ಸೋಂಕು ಚೀನಾಕ್ಕೆ ವ್ಯಾಪಿಸಿದೆ ಎಂದು ರಾಷ್ಟ್ರೀಯ ಆರೋಗ್ಯ ಆಯೋಗದ ಅಧಿಕಾರಿ ವು ಲಿಂಗ್ಯೋವ್ ಹೇಳಿದ್ದಾರೆ.

ನೂತನ ಸೋಂಕು ಪ್ರಕರಣ ವರದಿಯಾಗಿರುವ ಪ್ರದೇಶದ ಜನತೆ ರಾಜಧಾನಿ ಬೀಜಿಂಗ್ ಪ್ರವೇಶಿಸುವುದನ್ನು ನಿಷೇಧಿಸಲಾಗಿದ್ದು ನೆಗೆಟಿವ್ ಪರೀಕ್ಷಾ ವರದಿ ಹೊಂದಿದ್ದವರು ಮಾತ್ರ ಪ್ರವೇಶಕ್ಕೆ ಅವಕಾಶ ನೀಡಲಾಗಿದೆ. ಈ ಮಧ್ಯೆ, ಹೊಸ ರೂಪಾಂತರಿತ ಸೋಂಕು ಪ್ರವಾಸಿಗರಿಂದ ಕ್ಷಿಪ್ರವಾಗಿ ಹರಡುತ್ತಿರುವುದನ್ನು ಮನಗಂಡು ಬೀಜಿಂಗ್, ಇನ್ನರ್ ಮಂಗೋಲಿಯಾ, ಗನ್ಸು, ನಿಂಗ್‌ಕ್ಸಿಯಾ, ಗುಯ್‌ರೆ ನಗರಗಳಿಗೆ ಪ್ರವಾಸ ಯಾತ್ರೆ ತೆರಳುವುದನ್ನು ನಿಷೇಧಿಸಲಾಗಿದ್ದು ಪ್ರವಾಸೋದ್ಯಮಕ್ಕೆ ಸಂಬಂಧಿಸಿದ ಎಲ್ಲಾ ರೈಲು ಸೇವೆಗಳನ್ನು ರದ್ದುಗೊಳಿಸಲಾಗಿದೆ.

ಚೀನಾವು ಮೇ ತಿಂಗಳಿನಿಂದ ಕೊರೋನ ಸಂಬಂಧದ ನಿರ್ಬಂಧಗಳನ್ನು ತುಸು ಸಡಿಲಿಸಿದ ಬಳಿಕ ಡೆಲ್ಟಾ ರೂಪಾಂತರಿತ ಸೋಂಕು ಹರಡತೊಡಗಿದ್ದು ಆಗಸ್ಟ್‌ನಲ್ಲಿ ಚೀನಾದ ಅರ್ಧಭಾಗಕ್ಕೆ ವ್ಯಾಪಿಸಿತ್ತು.

ಈ ಹಿನ್ನೆಲೆಯಲ್ಲಿ ಕೊರೋನ ಸೋಂಕು ಹರಡುವ ಹಾಟ್‌ಸ್ಪಾಟ್‌ಗಳನ್ನು ಗುರುತಿಸಿ, ಅಲ್ಲಿಂದ ಸಾರಿಗೆ ವ್ಯವಸ್ಥೆಯನ್ನು ಸ್ಥಗಿತಗೊಳಿಸುವ ಜೊತೆಗೆ, ಸ್ಥಳೀಯ ಜನರನ್ನು ಹಲವು ಬಾರಿ ಪರೀಕ್ಷೆಗೆ ಒಳಪಡಿಸುವ ಮೂಲಕ ಕೊರೋನ ಸೋಂಕನ್ನು ಮತ್ತೆ ಶೂನ್ಯ ಪ್ರಮಾಣಕ್ಕೆ ಇಳಿಸಲು ಅಧಿಕಾರಿಗಳು ಕಠಿಣ ಕ್ರಮ ಕೈಗೊಂಡಿದ್ದರು. ಆದರೂ, ದೇಶದಲ್ಲಿ ಕೊರೋನ ಸೋಂಕು ನಿಧಾನಗತಿಯಲ್ಲಿ ಸಮುದಾಯಕ್ಕೆ ಹರಡುತ್ತಿರುವುದು ಆತಂಕಕ್ಕೆ ಕಾರಣವಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಏಶ್ಯದಲ್ಲಿ ಡೆಲ್ಟಾ ರೂಪಾಂತರಿತ ಸೋಂಕು ತೀವ್ರಗತಿಯಲ್ಲಿ ಪ್ರಸಾರವಾಗುತ್ತಿರುವುದರಿಂದ ಪೂರ್ಣಪ್ರಮಾಣದ ಆರ್ಥಿಕ ಚಟುವಟಿಕೆಗೆ ತೆರೆದುಕೊಳ್ಳುವ ಸರಕಾರಗಳ ಪ್ರಯತ್ನಗಳಿಗೆ ಹಿನ್ನಡೆಯಾಗಿದೆ. ಸಿಂಗಾಪುರದಲ್ಲಿ ಕೊರೋನ ಸಂಬಂಧಿಸಿದ ನಿರ್ಬಂಧಗಳನ್ನು ಮತ್ತೆ 1 ತಿಂಗಳು ಮುಂದುವರಿಸಲಾಗಿದ್ದು ಪೂರ್ಣ ಪ್ರಮಾಣದ ಲಸಿಕೆ ಪಡೆದ ಸಿಬಂದಿಗಳು ಜನವರಿ 1ರಿಂದ ಕಚೇರಿಗೆ ಹಾಜರಾಗಬಹುದು ಎಂದು ಸರಕಾರ ಸೂಚಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X