Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಬ್ಲ್ಯಾಕ್ ಲೈವ್ಸ್ ಮ್ಯಾಟರ್‌ಗಾಗಿ...

ಬ್ಲ್ಯಾಕ್ ಲೈವ್ಸ್ ಮ್ಯಾಟರ್‌ಗಾಗಿ ಮಂಡಿಯೂರಿದ ದಕ್ಷಿಣ ಆಫ್ರಿಕ ತಂಡ; ಹೊರಗುಳಿದ ಕ್ವಿಂಟನ್ ಡಿ ಕಾಕ್

ವಾರ್ತಾಭಾರತಿವಾರ್ತಾಭಾರತಿ26 Oct 2021 8:15 PM IST
share
ಬ್ಲ್ಯಾಕ್ ಲೈವ್ಸ್ ಮ್ಯಾಟರ್‌ಗಾಗಿ ಮಂಡಿಯೂರಿದ ದಕ್ಷಿಣ ಆಫ್ರಿಕ ತಂಡ; ಹೊರಗುಳಿದ ಕ್ವಿಂಟನ್  ಡಿ ಕಾಕ್

 ದುಬೈ, ಅ. 26: ದಕ್ಷಿಣ ಆಫ್ರಿಕ ಕ್ರಿಕೆಟ್ ತಂಡದ ವಿಕೆಟ್‌ಕೀಪರ್-ಬ್ಯಾಟ್ಸ್ ಮನ್  ಕ್ವಿಂಟನ್ ಡಿ ಕಾಕ್ ವೆಸ್ಟ್‌ಇಂಡೀಸ್ ವಿರುದ್ಧ ಮಂಗಳವಾರ ನಡೆದ ಟ್ವೆಂಟಿ-20 ವಿಶ್ವಕಪ್ ಪಂದ್ಯದಿಂದ ವೈಯಕ್ತಿಕ ಕಾರಣಗಳಿಗಾಗಿ ಹೊರಗುಳಿದಿದ್ದಾರೆ. ಪಂದ್ಯಾವಳಿಯಲ್ಲಿ ಇನ್ನುಳಿದ ಪಂದ್ಯಗಳಲ್ಲಿ ಬ್ಲ್ಯಾಕ್ ಲೈವ್ಸ್ ಮ್ಯಾಟರ್(ಕಪ್ಪು ವರ್ಣೀಯರ ಜೀವಗಳಿಗೂ ಬೆಲೆಯಿದೆ) ಅಭಿಯಾನಕ್ಕೆ ಬೆಂಬಲ ಸೂಚಿಸಿ ಪಂದ್ಯಕ್ಕೆ ಮುನ್ನ ಆಟಗಾರರು ಮಂಡಿಯೂರಬೇಕು ಎಂಬುದಾಗಿ ತಂಡದ ಆಡಳಿತವು ಆಟಗಾರರಿಗೆ ಸೂಚಿಸಿದ ಬಳಿಕ ಅವರು ಈ ನಿರ್ಧಾರ ತೆಗೆದುಕೊಂಡಿದ್ದಾರೆ.

 ವೈಯಕ್ತಿಕ ಕಾರಣಗಳಿಗಾಗಿ ಅವರು ಪಂದ್ಯದಿಂದ ಹೊರಗುಳಿದಿದ್ದಾರೆ ಎಂದು ದುಬೈ ಇಂಟರ್‌ನ್ಯಾಶನಲ್ ಕ್ರಿಕೆಟ್ ಸ್ಟೇಡಿಯಮ್‌ನಲ್ಲಿ ನಡೆದ ಪಂದ್ಯದ ಟಾಸ್ ಸಂದರ್ಭದಲ್ಲಿ ದಕ್ಷಿಣ ಆಫ್ರಿಕ ತಂಡದ ನಾಯಕ ಟೆಂಬ ಬವುಮ ಹೇಳಿದರು.

ಜನಾಂಗೀಯ ತಾರತಮ್ಯದ ವಿರುದ್ಧ ತಂಡವು ಸ್ಥಿರ ಹಾಗೂ ಒಗ್ಗಟ್ಟಿನ ನಿಲುವನ್ನು ತೆಗೆದುಕೊಳ್ಳಬೇಕು ಹಾಗೂ ಅದಕ್ಕಾಗಿ ಪಂದ್ಯಾವಳಿಯ ಇನ್ನುಳಿದ ಪಂದ್ಯಗಳ ಆರಂಭಕ್ಕೆ ಮುನ್ನ ಆಟಗಾರರು ಮಂಡಿಯೂರಬೇಕು ಎಂಬ ನಿರ್ಧಾರವನ್ನು ಸೋಮವಾರ ನಡೆದ ಆಡಳಿತ ಮಂಡಳಿ ಸಭೆಯಲ್ಲಿ ತೆಗೆದುಕೊಳ್ಳಲಾಯಿತು ಎಂದು ಕ್ರಿಕೆಟ್ ಸೌತ್ ಆಫ್ರಿಕ (ಸಿಎಸ್‌ಎ) ಹೇಳಿದೆ.

 ಈ ವಿಷಯದಲ್ಲಿ ವಿಶ್ವಕಪ್‌ನಲಿ ಆಡುತ್ತಿರುವ ಇತರ ಹಲವು ತಂಡಗಳು ಸ್ಥಿರ ನಿಲುವನ್ನು ತೆಗೆದುಕೊಂಡಿವೆ ಹಾಗೂ ಇದೇ ಮಾದರಿಯನ್ನು ಅನುಸರಿಸಲು ದಕ್ಷಿಣ ಆಫ್ರಿಕದ ಎಲ್ಲ ಆಟಗಾರರಿಗೆ ಇದು ಸಕಾಲ ಎಂಬುದಾಗಿ ಮಂಡಳಿ ಅಭಿಪ್ರಾಯಪಟ್ಟಿದೆ ಎಂದು ಸಿಎಸ್‌ಎ ಹೇಳಿಕೆಯೊಂದರಲ್ಲಿ ತಿಳಿಸಿದೆ.

  ಈ ಹಿಂದೆಯೂ ಈ ವಿಷಯದಲ್ಲಿ ಮಂಡಿಯೂರಲು ಡಿ ಕಾಕ್ ನಿರಾಕರಿಸಿದ್ದರು. ಅದು ನನ್ನ ವೈಯಕ್ತಿಕ ಅಭಿಪ್ರಾಯ ಎಂದು ಅವರು ಹೇಳಿದ್ದರು.

ಇದು ಅವರವರ ನಿರ್ಧಾರ. ಏನನ್ನೇ ಮಾಡಲು ಯಾರನ್ನೂ ಬಲವಂತಪಡಿಸುವಂತಿಲ್ಲ. ಇದು ನನ್ನ ರೀತಿ, ಅಷ್ಟೆ ಎಂಬುದಾಗಿ ಡಿ ಕಾಕ್ ಜೂನ್‌ನಲ್ಲಿ ಹೇಳಿದ್ದರು.

ತಂಡವನ್ನು ಬೆಸೆಯುವ ಅಂಟು: ಸಿಎಸ್‌ಎ ಅಧ್ಯಕ್ಷ

ಜನಾಂಗೀಯ ತಾರತಮ್ಯವನ್ನು ನಿವಾರಿಸುವ ಬದ್ಧತೆಯು ತಂಡವನ್ನು ಬೆಸೆಯುವ ಅಂಟು ಆಗಬೇಕು ಎಂದು ಕ್ರಿಕೆಟ್ ಸೌತ್‌ ಆಫ್ರಿಕ ಅಧ್ಯಕ್ಷ ಲಾಸನ್ ನಾಯ್ಡು ಹೇಳಿದ್ದಾರೆ.

 ನಮ್ಮ ದೈನಂದಿನ ಬದುಕಿನ ಹಲವು ವಿಷಯಗಳಲ್ಲಿ ವೈವಿಧ್ಯತೆ ಇರಬಹುದು ಹಾಗೂ  ಇರಬೇಕು. ಆದರೆ ಜನಾಂಗೀಯ ತಾರತಮ್ಯದ ವಿರುದ್ಧ ನಿಲುವು ತೆಗೆದುಕೊಳ್ಳುವ ವಿಷಯದಲ್ಲಿ ಅಲ್ಲ ಎಂದು ಅವರು ಅಭಿಪ್ರಾಯಪಟ್ಟರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X