Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಹವಾಮಾನ ವೈಫರೀತ್ಯಕ್ಕೆ ಕಾಫಿ ಬೆಳೆ ನಾಶ;...

ಹವಾಮಾನ ವೈಫರೀತ್ಯಕ್ಕೆ ಕಾಫಿ ಬೆಳೆ ನಾಶ; ವಿಶೇಷ ಪರಿಹಾರ ನೀಡಲು ಆಗ್ರಹ

ವಾರ್ತಾಭಾರತಿವಾರ್ತಾಭಾರತಿ26 Oct 2021 9:07 PM IST
share
ಹವಾಮಾನ ವೈಫರೀತ್ಯಕ್ಕೆ ಕಾಫಿ ಬೆಳೆ ನಾಶ; ವಿಶೇಷ ಪರಿಹಾರ ನೀಡಲು ಆಗ್ರಹ

ಚಿಕ್ಕಮಗಳೂರು, ಅ.26: ಹವಾಮಾನ ವೈಫರೀತ್ಯದಿಂದಾಗಿ ಜಿಲ್ಲಾದ್ಯಂತ ಅಕಾಲಿಕ ಮಳೆಯಾಗುತ್ತಿದ್ದು, ಇದು ಕಾಫಿಕೃಷಿಯ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ. 2015ರಿಂದ ಇಲ್ಲಿಯವರೆಗೆ  ನಿರಂತರವಾದ ಅತೀವೃಷ್ಟಿ ಮತ್ತು ಅನಾವೃಷ್ಟಿ ಪರಿಣಾಮ ಕಾಫಿಬೆಳೆಗಾರರು ಬೆಳೆ ಕಳೆದುಕೊಂಡು ಆರ್ಥಿಕ ಸಂಕಷ್ಟಕ್ಕೆ ಗುರಿಯಾಗಿದ್ದಾರೆ. ಆದ್ದರಿಂದ ಕೇಂದ್ರ ಹಾಗೂ ರಾಜ್ಯ ಸರಕಾರಗಳು ಕಾಫಿ ಬೆಳೆಗಾರರ ನೆರವಿಗೆ ಕೂಡಲೇ ಧಾವಿಸಬೇಕೆಂದು ಕಾಫಿ ಬೆಳೆಗಾರರ ಸಂಘದ ಅಧಕ್ಷ ಎಚ್.ಟಿ.ಮೋಹನ್‍ಕುಮಾರ್ ಹಾಗೂ ಪ್ರಧಾನ ಕಾರ್ಯದರ್ಶಿ ಕೃಷ್ಣಪ್ಪ ಆಗ್ರಹಿಸಿದ್ದಾರೆ.

ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಅವರು, ಅತಿವೃಷ್ಟಿ, ಅಕಾಲಿಕ ಮಳೆಯಂತಹ ಹವಾಮಾನ ವೈಫರೀತ್ಯದ ಪರಿಣಾದಿಂದಾಗಿ ಕಳೆದ ಕೆಲ ವರ್ಷಗಳಿಂದ ಕಾಫಿ ಬೆಳೆ ಸಂಪೂರ್ಣವಾಗಿ ನಾಶ ವಾಗಿದೆ. ಇದರೊಂದಿಗೆ ರೋಗಬಾದೆ, ಬೆಲೆಕುಸಿತ, ಕಾರ್ಮಿಕರ ಕೊರತೆ, ಕಾಡುಪ್ರಾಣಿಗಳ ಹಾವಳಿಯಿಂದಾಗಿ ಬೆಳೆಗಾರರು ಭಾರೀ ಸಂಕಷ್ಟದ ಪರಿಸ್ಥಿತಿ ಎದುರಿಸುತ್ತಿದ್ದಾರೆ. ಈ ಸಂಬಂಧ ಕೇಂದ್ರ ಸರಕಾರಕ್ಕೆ ಅನೇಕ ಬಾರಿ ನಿಯೋಗಗಳ ಮೂಲಕ ಮನವಿ ಮಾಡಿದ್ದರೂ ಕೇಂದ್ರ ಸರಕಾರ ಕಾಫಿ ಉದ್ಯಮದ ಸಮಸ್ಯೆಗಳ ಪರಿಹಾರಕ್ಕೆ ಕಿಂಚಿತ್ ಕಾಳಜಿ ನೀಡಿಲ್ಲ ಎಂದು ಅವರು ಆರೋಪಿಸಿದ್ದಾರೆ.

2021ನೇ ಸಾಲಿನಲ್ಲಿ ಮಳೆಯು ನಿರಂತರವಾಗಿ ಸುರಿಯುತ್ತಲೇ ಇದ್ದು, ಅರೇಬಿಕಾ ಕಾಫಿಯನ್ನು ಕುಯ್ಯಲು ಸಾಧ್ಯವಾಗುತ್ತಿಲ್ಲ. ಜೊತೆಗೆ ಕಾಫಿತೋಟಗಳಲ್ಲಿ ನಿರಂತರ ಮಳೆಯಿಂದಾಗಿ ಕಳೆ ಪದೇ ಪದೇ ಬರುತ್ತಿದ್ದು, ಕಾರ್ಮಿಕರಿಂದ ಮತ್ತೆ ಮತ್ತೆ ಕಳೆ ನಿರ್ಮೂಲನೆ ಮಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಪ್ರಸಕ್ತ ಸುರಿಯುತ್ತಿರುವ ಅಕಾಲಿಕ ಮಳೆಯಿಂದ ಕಾಫಿ ಒಣಗಿಸಲು ಸಾಧ್ಯವಾಗದೇ ಕಾಫಿಯು ಗುಣಮಟ್ಟ ಕಳೆದುಕೊಳ್ಳುತ್ತಿದೆ. ಜೊತೆಗೆ ಬೆಳೆಗಾರರು ವರ್ಷವಿಡೀ ಬೆವರು ಸುರಿಸಿ ಬೆಳೆದ ಫಸಲು ಕೈಗೆ ಬರುವ ಮುನ್ನವೇ ಹಾಳಾಗುತ್ತಿದೆ. ಪರಿಣಾಮ ಬೆಳೆಗಾರರು ಬೆಳೆ, ಬೆಲೆ ಇಲ್ಲದೇ ಆರ್ಥಿಕವಾಗಿ ದಿವಾಳಿಯಾಗಿದ್ದಾರೆ. ಇದರೊಂದಿಗೆ ಹವಾಮಾನ ವೈಫರೀತ್ಯದಿಂದಾಗಿ ಈ ಬಾರಿಯ ಕಾಳುಮೆಣಸು ಫಸಲು ಶೇ.85ರಷ್ಟು ನೆಲಕಚ್ಚಿದೆ ಎಂದು ತಿಳಿಸಿದ್ದಾರೆ.

ಹಾಸನ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಯ ಜನಪ್ರತಿನಿಧಿಗಳು ಈ ವಿಷಯದ ಬಗ್ಗೆ ಹೆಚ್ಚಿನ ಆಸಕ್ತಿ ವಹಿಸಿ ಕಾಫಿ ಬೆಳೆಗಾರರ ಸಮಸ್ಯೆಗಳ ಬಗ್ಗೆ ಕೇಂದ್ರ ಮತ್ತು ರಾಜ್ಯ ಸರಕಾರದ  ಗಮನಸೆಳೆದು ಆತಂಕದಲ್ಲಿರುವ ಬೆಳೆಗಾರರಿಗೆ ಶೀಘ್ರದಲ್ಲೇ ಸೂಕ್ತ ಪರಿಹಾರ ದೊರಕಿಸಿಕೊಡಬೇಕೆಂದು ಒತ್ತಾಯಿಸಿರುವ ಅವರು,  ಇಂತಹ ಸಂಕಷ್ಟದ ಪರಿಸ್ಥಿತಿಯಲ್ಲಿ ಕಾಫಿಗೆ ಯಾವುದೇ ತರಹದ ಬೆಳೆವಿಮೆ ಇಲ್ಲವಾಗಿದ್ದು, ಈ ವಿಚಾರವಾಗಿಯೂ ಜನಪ್ರತನಿಧಿಗಳು ಗಮನಹರಿಸಬೇಕು. ಕಾಫಿ ಬೆಳೆಗೆ ವಿಮೆ ಪರಿಹಾರ ನೀಡಬೇಕು. ಜೊತೆಗೆ ರಾಷ್ಟ್ರೀಯ ವಿಪತ್ತು ಯೋಜನೆಯಡಿ ಕಾಫಿಗೆ ಕೊಡುತ್ತಿರುವ ಪರಿಹಾರ ಭಾರೀ ಕಡಿಮೆ ಇದ್ದು, ಕಾಫಿ ಬೆಳೆಯಲು ತಗುಲುವ ಖರ್ಚು ವೆಚ್ಚ ಪರಿಗಣಿಸಿ ರಾಷ್ಟ್ರೀಯ ವಿಪತ್ತು ಯೋಜನೆಯಡಿಯಲ್ಲಿ ಕಾಫಿಗೆ ಪ್ರತ್ಯೇಕ ಪರಿಹಾರವನ್ನು ಕಲ್ಪಿಸಬೇಕು. ಈ ನಿಟ್ಟಿನಲ್ಲಿ ಜನಪ್ರತಿನಿಧಿಗಳು ಕೇಂದ್ರ ಸರಕಾರದ ಮೇಲೆ ಹೆಚ್ಚಿನ ಒತ್ತಡ ಹೇರಬೇಕೆಂದು ಹೇಳಿಕೆಯಲ್ಲಿ ಅವರು ಆಗ್ರಹಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X