Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ರಾಜ್ಯದಲ್ಲಿ ಕನ್ನಡದ ಸಬಲೀಕರಣಕ್ಕೆ...

ರಾಜ್ಯದಲ್ಲಿ ಕನ್ನಡದ ಸಬಲೀಕರಣಕ್ಕೆ ಕಾರ್ಯಸೂಚಿ : ಚನ್ನೇಗೌಡ

ವಾರ್ತಾಭಾರತಿವಾರ್ತಾಭಾರತಿ26 Oct 2021 9:56 PM IST
share

ಉಡುಪಿ, ಅ.26: ರಾಜ್ಯದ ಎಲ್ಲಾ ಕ್ಷೇತ್ರಗಳಲ್ಲೂ ಕನ್ನಡವನ್ನು ಒತ್ತುಕೊಟ್ಟು ಅನುಷ್ಠಾನಗೊಳಿಸಲು ಕಾರ್ಯಸೂಚಿಗಳನ್ನು ಹೊಂದಿದ್ದು, ತಾನು ಅಧ್ಯಕ್ಷನಾಗಿ ಆಯ್ಕೆಯಾದರೆ ಇನ್ನು ಯಶಸ್ವಿಯಾಗಿ ಜಾರಿಗೊಳಿಸುವುದಾಗಿ ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿ ಬೆಂಗಳೂರಿನ ವ.ಚ.ಚನ್ನೇಗೌಡ ಹೇಳಿದ್ದಾರೆ.

ನ.21ರಂದು ಕಸಾಪ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಡೆಯುವ ಚುನಾವಣೆ ಯಲ್ಲಿ ಅಭ್ಯರ್ಥಿಯಾಗಿರುವ ಚನ್ನೇಗೌಡ ಮತಯಾಚನೆಗಾಗಿ ಜಿಲ್ಲೆಗೆ ಆಗಮಿಸಿದ್ದು, ಇಂದಿಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡುತಿದ್ದರು. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಕನ್ನಡ ಕ್ರಿಯಾ ಸಮಿತಿಯನ್ನು ಸ್ಥಾಪಿಸಿ ಈಗ ಅಧ್ಯಕ್ಷರಾಗಿರುವ ಚನ್ನೇಗೌಡ, ಆಡಳಿತದಲ್ಲಿ ಕನ್ನಡದ ಅನುಷ್ಠಾನಕ್ಕಾಗಿ ತಾನು ನಡೆಸಿದ ಹೋರಾಟವನ್ನು ವಿವರಿಸಿ ಕಳೆದ ನಾಲ್ಕು ದಶಕಗಳಿಂದ ನಾಡು-ನುಡಿಗಾಗಿ ನಾಡಿನೆಲ್ಲೆಡೆ ನಡೆದ ಚಳವಳಿಗಳಲ್ಲಿ ಭಾಗವಹಿಸಿದ್ದೇನೆ ಎಂದರು.

ಮಂಡ್ಯ ತಾಲೂಕು ನಾಗಮಂಗಲ ತಾಲೂಕು ವಡೇರಹಳ್ಳಿಯವರಾದ ಚನ್ನೇಗೌಡ, 1988ರಲ್ಲಿ ಕೆಎಸ್ಸಾರ್ಟಿಸಿಯಲ್ಲಿ ಕನ್ನಡ ಕ್ರಿಯಾ ಸಮಿತಿಯನ್ನು ಸ್ಥಾಪಿಸಿದ್ದು, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯೊಂದಿಗೆ ಸೇರಿ 2007ರಲ್ಲಿ ಏಳು ಲಕ್ಷ ರೂ.ಮೊತ್ತದ ನೃಪತುಂಗ ಸಾಹಿತ್ಯ ಪ್ರಶಸ್ತಿಯನ್ನು ನಾಡಿನ ಹಿರಿಯ ಸಾಹಿತಿಗೆ ನೀಡುತ್ತಿರುವುದಾಗಿ ತಿಳಿಸಿದರು. ಅದೇ ರೀತಿ ಪ್ರತಿವರ್ಷ ನಾಡಿನ ಐವರು ಯುವ ಸಾಹಿತಿಗಳಿಗೆ ಮಯೂರ ವರ್ಮ ಪ್ರಶಸ್ತಿ, ಕರ್ನಾಟಕ ಚೂಡಾಮಣಿ ಪ್ರಶಸ್ತಿ, ಡಾ.ರಾಜ್‌ ಕುಮಾರ್ ರಂಗ ಪ್ರಶಸ್ತಿ ಹಾಗೂ ರಾಮಜಾಧವ ಗ್ರಂಥ ಪುರಸ್ಕಾರ ನೀಡಲಾಗುತ್ತಿದೆ ಎಂದರು.

ತಾನು ಅಧ್ಯಕ್ಷನಾಗಿ ಆಯ್ಕೆಯಾದರೆ ಪರಿಷತ್ತಿನಲ್ಲಿ ಶಾಶ್ವತ ನಿಘಂಟು ವಿಭಾಗದ ಸ್ಥಾಪನೆ, ಕನ್ನಡದ ಪ್ರಮುಖ್ಯ ಸಾಹಿತ್ಯಗಳನ್ನು ಅನ್ಯ ಭಾಷೆಗಳಿಗೆ ಅನುವಾದಕ್ಕೆ ಆದ್ಯತೆ, ಆನ್‌ಲೈನ್‌ನಲ್ಲಿ ಕಸಾಪ ಸದಸ್ಯತ್ವ, ಪುಸ್ತಕ ಖರೀದಿಗೆ ಅವಕಾಶ, ಯುವ ಬರಹಗಾರರು ಹಾಗೂ ಮಹಿಳೆಯರಿಗೆ ಪರಿಷತ್ತಿನ ವೇದಿಕೆಗಳಲ್ಲಿ ಹೆಚ್ಚು ಅವಕಾಶ, ಐದು ವರ್ಷಗಳ ಅವಧಿಯಲ್ಲಿ ಕನಿಷ್ಠ ಎರಡು ಕನ್ನಡ ಸಾಹಿತ್ಯ ಸಮ್ಮೇಳನಗಳ ಅಧ್ಯಕ್ಷತೆಯನ್ನು ಮಹಿಳೆಯರಿಗೆ ನೀಡುವುದಾಗಿ ಪ್ರಕಟಿಸಿದರು.

ಎಲ್ಲಾ ಜಿಲ್ಲೆ ಮತ್ತು ತಾಲೂಕುಗಳಲ್ಲಿ ಕನ್ನಡ ಸಾಹಿತ್ಯ ಭವನ ನಿರ್ಮಾಣ, ಅಶಕ್ತ ಸಾಹಿತಿ ಹಾಗೂ ಕಲಾವಿದರಿಗೆ ಆರೋಗ್ಯ ವಿಮೆ ಜಾರಿ, ಪರಿಷ್ಕೃತ ಡಾ. ಸರೋಜಿನಿ ಮಹಿಷಿ ವರದಿಯನ್ನು ಅನುಷ್ಠಾನಗೊಳಿಸಲು ಸರಕಾರದ ಮೇಲೆ ಒತ್ತಡ ಹೇರುವುದಾಗಿ ಅವರು ನಾಡಿನ ಜನತೆಗೆ ಭರವಸೆ ನೀಡಿದರು.

ಪತ್ರಿಕಾಗೋಷ್ಠಿಯಲ್ಲಿ ಬೆಂಗಳೂರಿನ ರಫಾಯಿಲ್‌ ರಾಜ್, ಗಜಣ್ಣ, ಉಡುಪಿಯ ರವಿರಾಜ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X