Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಬ್ರಿಟನ್: ಕೊರೋನ ನಿಯಂತ್ರಿಸಲು...

ಬ್ರಿಟನ್: ಕೊರೋನ ನಿಯಂತ್ರಿಸಲು ರೂಪಿಸಿದ್ದ ಯೋಜನೆಯಿಂದ 37 ಬಿಲಿಯನ್ ಪೌಂಡ್ ವ್ಯರ್ಥ ; ಸಂಸತ್ ಸಮಿತಿ ವರದಿ

ವಾರ್ತಾಭಾರತಿವಾರ್ತಾಭಾರತಿ27 Oct 2021 11:41 PM IST
share
ಬ್ರಿಟನ್: ಕೊರೋನ ನಿಯಂತ್ರಿಸಲು ರೂಪಿಸಿದ್ದ ಯೋಜನೆಯಿಂದ 37 ಬಿಲಿಯನ್ ಪೌಂಡ್ ವ್ಯರ್ಥ ; ಸಂಸತ್ ಸಮಿತಿ ವರದಿ

ಲಂಡನ್, ಅ.27: ಬ್ರಿಟನ್ ಸರಕಾರ ಕಳೆದ ವರ್ಷ ಕೊರೋನ ಸೋಂಕು ತಡೆಗಟ್ಟುವ ಉದ್ದೇಶದಿಂದ ರೂಪಿಸಲಾಗಿದ್ದ ಪತ್ತೆ ಮತ್ತು ಪರೀಕ್ಷೆ ಕಾರ್ಯಕ್ರಮ ವಿಫಲಗೊಂಡಿದ್ದರಿಂದ ಸುಮಾರು 37 ಬಿಲಿಯನ್ ಪೌಂಡ್‌ನಷ್ಟು ಮೊತ್ತ ವ್ಯರ್ಥವಾಗಿದೆ ಎಂದು ಬ್ರಿಟನ್ ಸಂಸದರ ವರದಿಯೊಂದು ತಿಳಿಸಿದೆ.

ಸರಕಾರ ಮತ್ತು ಈ ಯೋಜನೆಯ ಅನನುಭವಿ ಮುಖ್ಯಸ್ಥರಾಗಿದ್ದ ಡಿಡೊ ಹಾರ್ಡಿಂಗ್ ಏನನ್ನಾದರೂ ಸಾಧಿಸಬೇಕೆಂಬ ಅತ್ಯುತ್ಸಾಹ ಪ್ರದರ್ಶಿಸಿದ್ದರು. ಆದರೆ ಅಂತಿಮವಾಗಿ ಇದು ಕೇವಲ ಅತಿಯಾದ ಭರವಸೆಯಾಗಿಯೇ ಉಳಿಯಿತು ಮತ್ತು ಭಾರೀ ಮೊತ್ತದ ಹಣ ವ್ಯರ್ಥವಾಯಿತು . ಇವರಿಬ್ಬರು ಸರಕಾರಿ ಸ್ವಾಮ್ಯದ ರಾಷ್ಟ್ರೀಯ ಆರೋಗ್ಯ ಸೇವೆಯ ಬದಲು ದುಬಾರಿ ವೆಚ್ಚದ ಖಾಸಗಿ ಗುತ್ತಿಗೆದಾರರ ನೆರವು ಪಡೆದರು ಎಂದು ಬ್ರಿಟನ್ ಸಂಸತ್ತಿನ ಸಾರ್ವಜನಿಕ ಲೆಕ್ಕಪತ್ರ ಸಮಿತಿಯ ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಈ ಯೋಜನೆಯಡಿ ಕೊರೋನ ಸೋಂಕಿನ ಲಕ್ಷಣವಿದ್ದ ಕೆಲವೇ ಮಂದಿಯನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಒಟ್ಟಾರೆ, ಈ ಯೋಜನೆಯ ಪ್ರಮುಖ ಉದ್ದೇಶವಾದ ಕೊರೋನ ಸೋಂಕಿನ ಸರಪಳಿ ತುಂಡರಿಸುವ ಗುರಿ ತಲುಪಲು ಸಾಧ್ಯವಾಗಲಿಲ್ಲ ಎಂದು ವರದಿ ಹೇಳಿದೆ.

ಇದು ಆತಂಕದ ವಿಷಯವಾಗಿದ್ದು ತೆರಿಗೆ ಪಾವತಿದಾರರನ್ನು ಎಟಿಎಂ ವ್ಯವಸ್ಥೆಯಂತೆ ಪರಿಗಣಿಸಲಾಗಿದೆ . ತೆರಿಗೆ ಪಾವತಿದಾರರ ನಿಧಿಯನ್ನು ಸೂಕ್ತ ರೀತಿಯಲ್ಲಿ ಬಳಸುವ ಬಗ್ಗೆ ಗಮನ ಹರಿಸದಿರುವುದು ಆತಂಕಕ್ಕೆ ಕಾರಣವಾಗಿದೆ ಎಂದು ವಿಪಕ್ಷ ಲೇಬರ್ ಪಕ್ಷದ ಸಂಸದೆ ಮೆಗ್ ಹೀಲಿಯರ್ ಹೇಳಿದ್ದಾರೆ.

ಆದರೆ ನೂತನ ಯೋಜನೆಯನ್ನು ಸಮರ್ಥಿಸಿಕೊಂಡಿರುವ ಸರಕಾರ, ಇದರಿಂದ ಯುರೋಪ್‌ನ ಇತರ ದೇಶಗಳಿಗಿಂತ ಬ್ರಿಟನ್‌ನಲ್ಲಿ ಹೆಚ್ಚು ಮಂದಿ ಪರೀಕ್ಷೆಯ ಪ್ರಯೋಜನ ಪಡೆಯುವಂತಾಗಿದೆ ಎಂದಿದೆ. ಈ ಯೋಜನೆಯಿಂದ ಪ್ರತೀ ದಿನ ಹಲವು ಮಂದಿಯ ಪ್ರಾಣ ಉಳಿಸುವ ಜೊತೆ, ಕೊರೋನ ಸೋಂಕು ಹರಡುವ ಹಾಟ್‌ಸ್ಪಾಟ್‌ಗಳನ್ನು ಗುರುತಿಸಿ ಪ್ರಸರಣದ ಸರಪಳಿ ತುಂಡರಿಸಲು ನೆರವಾಗಿದೆ ಎಂದು ಬ್ರಿಟನ್‌ನ ಆರೋಗ್ಯ ಸುರಕ್ಷಾ ಏಜೆನ್ಸಿಯ ವುುಖ್ಯಸ್ಥ ಜೆನ್ನೀ ಹ್ಯಾರಿಸ್ ಹೇಳಿದ್ದಾರೆ.

ಕಳೆದ ವರ್ಷದ ಆರಂಭದಲ್ಲಿ ಬ್ರಿಟನ್‌ನಲ್ಲಿ ಕೊರೋನ ಸೋಂಕಿನ ಪ್ರಕರಣ ಉಲ್ಬಣಗೊಂಡಿದ್ದಾಗ ಬ್ರಿಟನ್ ಸರಕಾರ ಹೊಸ ಪ್ರಕರಣಗಳನ್ನು ಪತ್ತೆಹಚ್ಚುವ ಮತ್ತು ಸೋಂಕಿತ ವ್ಯಕ್ತಿಗಳನ್ನು ಪರೀಕ್ಷಿಸುವ ಸಾಮೂಹಿಕ ಅಭಿಯಾನಕ್ಕೆ ಚಾಲನೆ ನೀಡಿತ್ತು. ಆದರೂ ಸೋಂಕು ಪ್ರಕರಣ ಒಂದೇ ಸಮನೆ ಹೆಚ್ಚಿದ್ದರಿಂದ ಯುರೋಪ್‌ನಲ್ಲಿ ರಶ್ಯಾದ ಬಳಿಕ ಕೊರೋನ ಸೋಂಕಿನಿಂದ ಅತ್ಯಧಿಕ ಸಾವು ಸಂಭವಿಸಿದ ದೇಶವಾಗಿದೆ ಬ್ರಿಟನ್.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X