Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನವೆಂಬರ್ 1ರಿಂದ ಅನಕ್ಷರಸ್ಥ ಕೈದಿಗಳಿಗೆ...

ನವೆಂಬರ್ 1ರಿಂದ ಅನಕ್ಷರಸ್ಥ ಕೈದಿಗಳಿಗೆ ಅಕ್ಷರ ಕಲಿಸಲು ಕ್ರಮ: ಗೃಹ ಸಚಿವ ಆರಗ ಜ್ಞಾನೇಂದ್ರ

ವಾರ್ತಾಭಾರತಿವಾರ್ತಾಭಾರತಿ28 Oct 2021 7:22 PM IST
share
ನವೆಂಬರ್ 1ರಿಂದ ಅನಕ್ಷರಸ್ಥ ಕೈದಿಗಳಿಗೆ ಅಕ್ಷರ ಕಲಿಸಲು ಕ್ರಮ: ಗೃಹ ಸಚಿವ ಆರಗ ಜ್ಞಾನೇಂದ್ರ

ಬೆಂಗಳೂರು, ಅ. 28: ‘ರಾಜ್ಯದ ವಿವಿಧ ಕಾರಾಗೃಹಗಳಲ್ಲಿ ಒಟ್ಟು 16 ಸಾವಿರ ಮಂದಿ ಕೈದಿಗಳಿದ್ದು, ಆ ಪೈಕಿ ಆರು ಸಾವಿರಕ್ಕೂ ಅಧಿಕ ಮಂದಿ ಅನಕ್ಷರಸ್ಥರಿದ್ದು ಅವರಿಗೆ ನವೆಂಬರ್ ಒಂದರಿಂದ ಅಕ್ಷರ ಕಲಿಸಲು ಕ್ರಮ ವಹಿಸಲಾಗುವುದು' ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಇಂದಿಲ್ಲಿ ತಿಳಿಸಿದ್ದಾರೆ.

ಗುರುವಾರ ವಿಕಾಸಸೌಧದಲ್ಲಿ ಕರ್ನಾಟಕ ಸಿನಿಮಾ ನಿಯಂತ್ರಣ(ತಿದ್ದುಪಡಿ) ನಿಯಮಗಳ ಬಗ್ಗೆ ಅಧಿಕಾರಿಗಳ ಜತೆ ಸಭೆ ನಡೆಸಿದ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಹೆಬ್ಬೆಟ್ಟು ಒತ್ತಿ ಜೈಲಿಗೆ ಬಂದ ಕೈದಿಗಳನ್ನು ಅಕ್ಷರ ಕಲಿಸಿ ಅವರು ಬಿಡುಗಡೆ ಹೊಂದುವ ವೇಳೆ ಅವರಿಗೆ ಸಹಿ ಮಾಡುವ ಮಟ್ಟಿಗೆ ಅಕ್ಷರ ಕಲಿಸಲಾಗುವುದು' ಎಂದರು.

‘ಕೈದಿಗಳಿಗೆ ಅಕ್ಷರ ಕಲಿಕೆಗೆ ಕಾರ್ಯಕ್ರಮ ರೂಪಿಸಲಾಗುತಿದ್ದು, ಅಕ್ಷರ ಕಲಿಸಲು ಜೈಲುಗಳಲ್ಲಿನ ಕೈದಿಗಳನ್ನೇ ಬಳಸಿಕೊಳ್ಳಲಾಗುತ್ತದೆ. ಅವರಿಗೆ ಗೌರವಧನ ಕೊಡಲಾಗುತ್ತದೆ. ಕೈದಿಗಳಿಗೆ ಅಕ್ಷರ ಕಲಿಕೆಯಿಂದ ಅನುಕೂಲವಾಗಲಿದೆ. ಆ ದೃಷ್ಟಿಯಿಂದ ಇಲಾಖೆ ಕೈದಿಗಳಿಗೆ ನವೆಂಬರ್‍ನಲ್ಲಿ ಅಕ್ಷರ ಕಲಿಕೆಗೆ ಮುಂದಾಗಿದೆ' ಎಂದು ಆರಗ ಜ್ಞಾನೇಂದ್ರ ತಿಳಿಸಿದರು.

ಕಾಶನ್ ಪದ್ಧತಿ ಬದಲು: ‘ಸದ್ಯ ಕವಾಯತು ಮಾಡುವ ಸಂದರ್ಭದಲ್ಲಿ ಆಂಗ್ಲ ಭಾಷೆಯಲ್ಲಿ ಕಾಶನ್ ಕೊಡುವ ಪದ್ಧತಿ ಇದ್ದು, ನವೆಂಬರ್ ಒಂದರಿಂದ ಕನ್ನಡದಲ್ಲಿ ಕವಾಯತು ಮಾಡಲಾಗುತ್ತದೆ. ಈಗಾಗಲೇ ತರಬೇತಿ ನೀಡಲಾಗಿದೆ' ಎಂದ ಅವರು, ‘ಬೆಳಗಾವಿಯಲ್ಲಿ ಎಂಇಎಸ್ ಕಾರ್ಯಕರ್ತರು ಉದ್ಧಟತನ ಮಾಡಿದರೆ ಮೊಕದ್ದಮೆ ಹೂಡುತ್ತೇವೆ' ಎಂದು ಎಚ್ಚರಿಕೆ ನೀಡಿದರು.

ಈ ಪ್ರಕರಣದಲ್ಲಿ ಯಾವುದೇ ಪಕ್ಷದ ಎಷ್ಟೇ ಪ್ರಭಾವಿ ರಾಜಕಾರಣಿ ಇದ್ದರೂ ಬಿಡುವ ಪ್ರಶ್ನೆ ಇಲ್ಲ. ಕಾನೂನಿನ ಚೌಕಟ್ಟಿನಲ್ಲಿ ತಂದು ಕ್ರಮ ಕೈಗೊಳ್ಳಲಾಗುವುದು ಹಾಗೂ ಶಿಕ್ಷೆಯನ್ನು ಕೊಡಿಸಲಾಗುವುದು ಎಂದ ಅವರು, ನಿರ್ಮಾಪಕಸೌಂದರ್ಯ ಜಗದೀಶ್, ಅವರ ಕುಟುಂಬಸದಸ್ಯರಹಲ್ಲೆಪ್ರಕರಣಕ್ಕೆಸಂಬಂಧಿಸಿದಂತೆನನಗೆಮಾಹಿತಿ ಇಲ್ಲ. ಮಾಹಿತಿ ತರಿಸಿಕೊಂಡು ತಿಳಿಸುತ್ತೇನೆ ಎಂದರು.

ಕಾಯ್ದೆಗೆ ತಿದ್ದುಪಡಿ: ‘ಕರ್ನಾಟಕ ಸಿನಿಮಾ ನಿಯಂತ್ರಣ ಕಾಯ್ದೆ'ಗೆ ಪುನಃ ತಿದ್ದುಪಡಿ ತರುತ್ತಿದ್ದೇವೆ. ಮುಂಚೆ ಬಹಳ ದೊಡ್ಡ ಕೊಠಡಿ ಇರಬೇಕಿತ್ತು, ಪರಿಕರ ದೊಡ್ಡದಿಡಬೇಕಿತ್ತು. ಈಗ ತಂತ್ರಜ್ಞಾನ ಬದಲಾಗಿದೆ. ಇತ್ತಿಚಿನ ತಾಂತ್ರಿಕತೆ ದೃಷ್ಟಿಯಿಂದ ಯಾವ ಬದಲಾವಣೆ ಅಗತ್ಯವಿದೆ ಎಂದು ಸಭೆಯಲ್ಲಿ ಚರ್ಚೆಯಾಗಿದೆ. ಬೇರೆ ಬೇರೆ ಇಲಾಖೆಯವರ ಸಲಹೆ ಪಡೆಯಲಾಗಿದೆ. ಸಿನಿಮಾ ತಯಾರಕರೊಂದಿಗೆ ಈ ಹಿಂದೆ ಸಮಾಲೋಚನೆ ಮಾಡಲಾಗಿದೆ ಎಂದು ಅವರು ಹೇಳಿದರು.

‘ಪರವಾನಿಗೆ ಶುಲ್ಕ ರಿಯಾಯಿತಿ, ಪರವಾನಗೆ ಶುಲ್ಕ 5 ವರ್ಷಕ್ಕೊಮ್ಮೆ ನೀಡುವುದು ಸೇರಿದಂತೆ ಪೈರೆಸಿ ಪಿಡುಗು ಸಮಸ್ಯೆ ನಿವಾರಣೆಗೆ ಕ್ರಮದ ಬಗ್ಗೆ ಚರ್ಚೆ ಮಾಡಲಾಗಿದೆ. ಪೈರೆಸಿ ಕಂಡು ಹಿಡಿದು, ಆರೋಪಿಗಳನ್ನು ಪತ್ತೆ ಮತ್ತು ಕಣ್ಗಾವಳಿಕೆ ಹಾಗೂ ಶಿಕ್ಷೆ ಕೊಡಿಸಲು ಸಿಸಿಬಿ ಮತ್ತು ಸೈಬರ್ ಅಪರಾಧ ವಿಭಾಗದ ತಂಡದ ಜಂಟಿ ಕಾರ್ಯಾಚರಣೆ ಪಡೆ ರಚಿಸಲಾಗಿದೆ' ಎಂದು ಅವರು ವಿವರಣೆ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X