Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಎಲ್ಲ ಖಾಸಗಿ ಆಸ್ಪತ್ರೆಗಳು ಡಿ-ಅಡಿಕ್ಷನ್...

ಎಲ್ಲ ಖಾಸಗಿ ಆಸ್ಪತ್ರೆಗಳು ಡಿ-ಅಡಿಕ್ಷನ್ ಕೇಂದ್ರ ತೆರೆಯಲಿ: ಡಿಸಿಪಿ ಹರೀಶ್ ಪಾಂಡೆ

ವಾರ್ತಾಭಾರತಿವಾರ್ತಾಭಾರತಿ28 Oct 2021 11:18 PM IST
share
ಎಲ್ಲ ಖಾಸಗಿ ಆಸ್ಪತ್ರೆಗಳು ಡಿ-ಅಡಿಕ್ಷನ್ ಕೇಂದ್ರ ತೆರೆಯಲಿ: ಡಿಸಿಪಿ ಹರೀಶ್ ಪಾಂಡೆ

ಬೆಂಗಳೂರು, ಅ.28: ಡ್ರಗ್ಸ್ ಸೇವನೆ ವ್ಯಸನಿಗಳಾಗಿರುವ ಯುವಕರನ್ನು ಹೊರತರಲು ಎಲ್ಲ ಖಾಸಗಿ ಆಸ್ಪತ್ರೆಗಳು ಪ್ರತ್ಯೇಕ ಡಿ-ಅಡಿಕ್ಷನ್ ಕೇಂದ್ರವನ್ನು ತೆರೆಯಬೇಕು ಎಂದು ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿ ಹರೀಶ್ ಪಾಂಡೆ ಹೇಳಿದರು.

ಫೋರ್ಟಿಸ್ ಆಸ್ಪತ್ರೆ ವತಿಯಿಂದ ಮೊದಲ ‘ವ್ಯಸನ ಮುಕ್ತ ಕೇಂದ್ರ’ ತೆರೆಯಲಾಗಿದ್ದು, ಅದರ ಉದ್ಘಾಟನೆಯನ್ನು ಗುರುವಾರ ನೆರವೇರಿಸಿ ಅವರು ಮಾತನಾಡಿದರು.

ಸರಕಾರ ಹಾಗೂ ಖಾಸಗಿ ಆಸ್ಪತ್ರೆಗಳ ಸಹಯೋಗದಲ್ಲಿ ಮಾದಕ ವ್ಯಸನ ಮುಕ್ತ ಕಾರ್ಯಕ್ರಮಗಳನ್ನು ಎಲ್ಲೆಡೆ ಮಾಡುವುದರಿಂದ ಈಗಾಗಲೇ ಮಾದಕ ವಸ್ತುಗಳಿಗೆ ವ್ಯಸನಿಗಳಾಗಿರುವವರನ್ನು ಹೊರ ತರಬಹುದು. ವಿದೇಶಗಳಿಗೆ ಹೋಲಿಸಿದರೆ ನಮ್ಮ ದೇಶದಲ್ಲಿ ಡಿ-ಅಡಿಕ್ಷನ್ ಕಾರ್ಯಕ್ರಮಗಳು ಅತ್ಯಂತ ಕಡಿಮೆ. ಹೀಗಾಗಿ ವ್ಯಸನಿಗಳು ಅದರಿಂದ ಹೊರಬರಲಾಗದೇ ಕಷ್ಟ ಪಡುತ್ತಿದ್ದಾರೆ ಎಂದು ಅವರು ಹೇಳಿದರು.

ಇತ್ತೀಚಿನ ದಿನಗಳಲ್ಲಿ ಡ್ರಗ್ ಮಾರಾಟದ ದೊಡ್ಡ ಜಾಲ ಸದ್ದಿಲ್ಲದೇ ಹರಡುತ್ತಿದ್ದು, ಅದರ ಬೇರನ್ನು ಬುಡ ಸಮೇತ ಕಿತ್ತು ಹಾಕುವ ಪ್ರಯತ್ನವನ್ನು ನಮ್ಮ ಇಲಾಖೆ ಮಾಡುತ್ತಿದೆ. ಅತ್ಯಾಧುನಿಕ ತಂತ್ರಜ್ಞಾನದ ಬಳಕೆಯಿಂದ ಪೆಡ್ಲರ್‍ಗಳು ವಿದ್ಯಾರ್ಥಿಗಳನ್ನು ಸುಲಭವಾಗಿ ತಲುಪುತ್ತಿದ್ದಾರೆ. ಬೆಂಗಳೂರು ದಕ್ಷಿಣ ವಿಭಾಗದಲ್ಲಿಯೇ 450ಕ್ಕೂ ಹೆಚ್ಚು ಡ್ರಗ್ ಸೇವಿಸುವವರನ್ನು ಪತ್ತೆ ಹಚ್ಚಿ, ದೂರು ದಾಖಲಿಸಿದ್ದೇವೆ. ಇವರನ್ನು ತಲುಪುವ ಪೆಡ್ಲರ್‍ಗಳ ಜಾಲವನ್ನು ಪತ್ತೆ ಹಚ್ಚಬೇಕು ಎಂದು ಅವರು ಹರೀಶ್ ಪಾಂಡೆ ಹೇಳಿದರು.

ಡ್ರಗ್ ಸರಬರಾಜು ಮಾಡಲು ಕಳ್ಳ ಮಾರ್ಗ ಹಿಡಿದ್ದಾರೆ. ಹೀಗಾಗಿ ಪ್ರತಿಯೊಬ್ಬ ಪೋಷಕರು ತಮ್ಮ ಮಕ್ಕಳ ನಡವಳಿಕೆ ಮೇಲೆ ಗಮನ ಹರಿಸಬೇಕು. ಇಲ್ಲವಾದರೆ, ಡ್ರಗ್ ಜಾಲವನ್ನು ತಡೆಯಲು ಸಾಧ್ಯವಿಲ್ಲ. ವಿಪರ್ಯಾಸವೆಂದರೆ, ಪೋಷಕರಿಗೆ ತಮ್ಮ ಮಕ್ಕಳು ಡ್ರಗ್ ಸೇವನೆ ಮಾಡುತ್ತಿರುವ ಬಗ್ಗೆ ಮಾಹಿತಿಯೇ ಇಲ್ಲವಾಗಿದೆ ಎಂದು ಅವರು ತಿಳಿಸಿದರು.

ವ್ಯಸನ ಮುಕ್ತ ಕೇಂದ್ರದಲ್ಲಿ ಯಾವ ಚಿಕಿತ್ಸೆ ಲಭ್ಯ: ಫೋರ್ಟಿಸ್ ಆಸ್ಪತ್ರೆ ತೆರೆದಿರುವ ಈ ವ್ಯಸನ ಮುಕ್ತ ಕೇಂದ್ರದಲ್ಲಿ ಯಾವುದೇ ರೀತಿಯ ಡ್ರಗ್ ಸೇವನೆಗೆ ಒಳಗಾಗಿರುವವರಿಗೆ ಸಂಪೂರ್ಣ ಚಿಕಿತ್ಸೆ ನೀಡಲಾಗುತ್ತದೆ. ಕ್ಲಿನಿಕಲ್ ಸೈಕಾಲಜಿ ಸಮಾಲೋಚನೆಗಳು, ರೋಗವನ್ನು ಸಮಗ್ರವಾಗಿ ಪತ್ತೆ ಹಚ್ಚುವುದು, ಔಷಧಗಳ ಸಹಾಯದಿಂದ ವಿಷಕಾರಿ ಅಂಶವನ್ನು ದೇಹದಿಂದ ಹೊರ ತೆಗೆಯುವುದು, ಮಾನಸಿಕ ಚಿಕಿತ್ಸೆ, ಕುಟುಂಬ ಮತ್ತು ಸಮಾಲೋಚನ ಚಿಕಿತ್ಸೆ ನೀಡಲಾಗುತ್ತದೆ ಎಂದು ಅವರು ಹೇಳಿದರು.

ಅಲ್ಲದೆ, ಮೆದುಳು, ಕಿಡ್ನಿ, ಕ್ಯಾನ್ಸರ್ ಅಥವಾ ಹೃದಯ ಸಮಸ್ಯೆಗೆ ಒಳಗಾಗಿದ್ದರೆ ಅದಕ್ಕೂ ಚಿಕಿತ್ಸೆಯನ್ನು ನೀಡಲಾಗುವುದು. ಅಲ್ಲದೆ, ಧನಾತ್ಮಕತೆಯನ್ನು ಅವರಲ್ಲಿ ಹೆಚ್ಚಿಸಲು ಯೋಗ, ಧ್ಯಾನ ಹಾಗೂ ಉತ್ತಮ ಪರಿಸರವನ್ನು ಇಲ್ಲಿ ನಿರ್ಮಾಣ ಮಾಡಿಕೊಡಲಾಗುವುದು ಅವರು ತಿಳಿಸಿದರು.

ರಾಷ್ಟ್ರೀಯ ವ್ಯಸನ ಮುಕ್ತ ಚಿಕಿತ್ಸಾ ಕೇಂದ್ರ (ಎಐಐಎಂಎಸ್) ಪ್ರಕಾರ 10 ರಿಂದ 75 ವಯಸ್ಸಿನ ಶೇ. 2.8ರಷ್ಟು ಅಂದರೆ, 3.1 ಕೋಟಿ ಜನರು ಗಾಂಜಾ ಸೇವನೆಯಲ್ಲಿ ತೊಡಗಿದ್ದಾರೆ. 72 ಲಕ್ಷ  ಜನರು ಇತರೆ ಡ್ರಗ್ ಸೇವಿಸುತ್ತಿದ್ದಾರೆ. ಇದರಲ್ಲಿ 25 ಲಕ್ಷ ಜನರು ಈಗಾಗಲೇ ಮಾದಕ ದ್ರವ್ಯಕ್ಕೆ ವ್ಯಸನಿಗಳಾಗಿದ್ದಾರೆ ಎಂದು ಅಧ್ಯಯನದಲ್ಲಿ ದೃಢಪಟ್ಟಿದೆ ಎಂದು ಹರೀಶ್ ಪಾಂಡೆ ಹೇಳಿದರು.

ರಾಜ್ಯದಲ್ಲಿ 50 ಕೋಟಿಗೂ ಹೆಚ್ಚು ಪ್ರಮಾಣದಲ್ಲಿ ಡ್ರಗ್‍ಗಳನ್ನು ವಶಕ್ಕೆ ಪಡೆಯಲಾಗಿದ್ದು, 5291 ಜನರನ್ನು ಬಂಧಿಸಲಾಗಿದೆ. ಅಧ್ಯಯನದ ಪ್ರಕಾರ, ಗಾಂಜಾ ಸೇವನೆ ಹೆಚ್ಚಾಗಿ ಚಂಢಿಗಡ್‍ನಲ್ಲಿ ಶೇ.29.33 ರಷ್ಟು ಇದ್ದು, ಪಂಜಾಬ್‍ನಲ್ಲಿ 12.39 ಹಾಗೂ ಕರ್ನಾಟಕದಲ್ಲಿ 2.90 ರಷ್ಟು ಬಳಕೆ ಮಾಡಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಫೋರ್ಟಿಸ್ ಹೆಲ್ತ್ ಕೇರ್ ಸಿಒಒ ಆಶೀಶ್ ಭಾಟಿಯಾ, ನ್ಯಾಷನಲ್ ಮೆಂಟಲ್ ಹೆಲ್ತ್ ಕಾರ್ಯಕ್ರಮದ ನಿರ್ದೇಶಕ ಡಾ.ಸಮೀರ್ ಪರೀಕ್, ಫೋರ್ಟಿಸ್ ಆಸ್ಪತ್ರೆ ಉಪಾಧ್ಯಕ್ಷ ಡಾ.ಮನೀಶ್ ಮಟ್ಟು, ಮನೋತಜ್ಞ ಡಾ.ವೆಂಕಟೇಶ್ ಬಾಬು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X