Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ತೋಡಾರು: ಇಂಜಿನಿಯರಿಂಗ್ ಕಾಲೇಜು...

ತೋಡಾರು: ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಗಳ ನಡುವೆ ಹೊಡೆದಾಟ

ಇಬ್ಬರು ಆಸ್ಪತ್ರೆಗೆ ದಾಖಲು

ವಾರ್ತಾಭಾರತಿವಾರ್ತಾಭಾರತಿ28 Oct 2021 11:23 PM IST
share
ತೋಡಾರು: ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಗಳ ನಡುವೆ ಹೊಡೆದಾಟ

ಮೂಡುಬಿದಿರೆ, ಅ.28: ಇಲ್ಲಿನ ತೋಡಾರು ಸಮೀಪ ಇರುವ ಖಾಸಗಿ ಇಂಜಿನಿಯರಿಂಗ್ ಕಾಲೇಜೊಂದರ ವಿದ್ಯಾರ್ಥಿಗಳ ಇತ್ತಂಡಗಳ ನಡುವೆ ಹೊಡೆದಾಟ ನಡೆದು ಇಬ್ಬರು ವಿದ್ಯಾರ್ಥಿಗಳು ಸರಕಾರಿ ಆಸ್ಪತ್ರೆಗೆ ದಾಖಲಾದ ಘಟನೆ ವರದಿಯಾಗಿದೆ.
ಸಾಝ್ ಮತ್ತು ಸ್ವರೂಪ್ ಆಸ್ಪತ್ರೆಗೆ ದಾಖಲಾದವರು ಎಂದು ಗುರುತಿಸಲಾಗಿದೆ.

ತೋಡಾರಿನಲ್ಲಿರುವ ಇಂಜಿನಿಯರಿಂಗ್ ಕಾಲೇಜಿನಲ್ಲಿ ಮುಂದಿನ ಶನಿವಾರ ‘ಸಂಪ್ರದಾಯ’ ದಿನ ಕಾರ್ಯಕ್ರಮ ನಡೆಯಲಿದ್ದು, ಈ ಬಗ್ಗೆ ವಿದ್ಯಾರ್ಥಿಗಳು ಪೂರ್ವ ತಯಾರಿ ನಡೆಸುತ್ತಿದ್ದ ವೇಳೆ ಮಾತಿಗೆ ಮಾತು ಬೆಳೆದು ಬುಧವಾರ ವಿದ್ಯಾರ್ಥಿಗಳ ಗುಂಪಿನ ನಡುವೆ ಹೊಡೆದಾಟ ನಡೆದಿದೆ ಎನ್ನಲಾಗಿದೆ.

ತೃತೀಯ ವರ್ಷದ ವಿದ್ಯಾರ್ಥಿಗಳು ತಯಾರಿ ನಡೆಸುತ್ತಿದ್ದ ವೇಳೆ ಅಂತಿಮ ವರ್ಷದ ವಿದ್ಯಾರ್ಥಿಗಳ ಗುಂಪು ರ್ಯಾಗಿಂಗ್ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಬುಧವಾರ ನಡೆದ ಹೊಡೆದಾಟದ ಸಂಬಂಧ ಪ್ರಾಂಶುಪಾಲರು ಉಭಯ ತಂಡಗಳ ತಲಾ 4ರಂತೆ 8 ಮಂದಿಯನ್ನು ನಿನ್ನೆ ಅಮಾನತುಗೊಳಿಸಿ ಮನೆಗೆ ಕಳುಹಿಸಿದ್ದರು. ಮತ್ತೆ ಈ ಗುಂಪು ಕಾಲೇಜಿನ ಹೊರಗಡೆ ಹೊಡೆದಾಟ ನಡೆಸಿದ್ದು, ತೃತೀಯ ವರ್ಷದ ನಾಲ್ಕು ಮಂದಿಯ ಮೇಲೆ ಅಂತಿಮ ವರ್ಷದ ವಿದ್ಯಾರ್ಥಿಗಳ ನಲ್ವತ್ತು ಮಂದಿಯ ತಂಡ ಹಲ್ಲೆ ನಡೆಸಿದ್ದು, ಇಬ್ಬರು ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದು ಬಂದಿದೆ.

ಕಾಲೇಜಿನ ಪ್ರಾಂಶುಪಾಲರು ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಸಿಎಫ್‌ಐ ಜಿಲ್ಲಾ ನಿಯೋಗ ಆಸ್ಪತ್ರೆಗೆ ಭೇಟಿ

ಕ್ಯಾಂಪಸ್ ಫ್ರಂಟ್ ಜಿಲ್ಲಾ ನಿಯೋಗ ಆಸ್ಪತ್ರೆಗೆ ಭೇಟಿಯಾಗಿ ಹಲ್ಲೆಗೈದ ವಿದ್ಯಾರ್ಥಿಗಳ ವಿರುದ್ಧ ತಕ್ಷಣ ಕ್ರಮಕೈಗೊಳ್ಳಲು ಆಗ್ರಹಿಸಿದ್ದಾರೆ. ಈ ಸಂದರ್ಭದಲ್ಲಿ ಕ್ಯಾಂಪಸ್ ಫ್ರಂಟ್ ಜಿಲ್ಲಾ ಮುಖಂಡರಾದ ಅರ್ಫಿದ್ ಅಡ್ಕಾರ್, ಮಂಗಳೂರು ನಗರ ಜಿಲ್ಲಾಧ್ಯಕ್ಷ ಶರಫುದ್ದೀನ್, ಗ್ರಾಮಾಂತರ ಅಧ್ಯಕ್ಷ ಅಶ್ರಫ್ ಪೊರ್ಕೊಡಿ, ಕಾರ್ಯದರ್ಶಿ ಸರ್ಫರಾಝ್ ನಿಯೋಗದಲ್ಲಿದ್ದರು.

ಇಬ್ಬರು ಆಸ್ಪತ್ರೆಗೆ ದಾಖಲು

ಮೂಡುಬಿದಿರೆಯ ಯೆನೆಪೊಯ ಇಂಜಿನಿಯರಿಂಗ್ ಕಾಲೇಜಿನಲ್ಲಿ ಅ.30ರಂದು ನಡೆಯಲಿರುವ ಕಾರ್ಯಕ್ರಮವೊಂದರ ಭಿನ್ನಾಭಿಪ್ರಾಯಕ್ಕೆ ಸಂಬಂಧಿಸಿದಂತೆ ಅಂತಿಮ ವರ್ಷದ ವಿದ್ಯಾರ್ಥಿಗಳ ಒಂದು ಗುಂಪು 3ನೇ ವರ್ಷದ ವಿದ್ಯಾರ್ಥಿಗಳ ಒಂದು ಗುಂಪಿನೊಂದಿಗೆ ಘರ್ಷಣೆ ಉಂಟಾಗಿದೆ. ಈ ಸಂದರ್ಭ ವಿದ್ಯಾರ್ಥಿಗಳ ಒಂದು ಗುಂಪಿನ ಮೇಲೆ ಹೆಲ್ಮೆಟ್, ಕಲ್ಲು ಮತ್ತು ಕೈಯಿಂದ ಹಲ್ಲೆ ನಡೆಸಲಾಗಿದೆ. ಇತ್ತಂಡಗಳು ದೂರು ದಾಖಲಿಸಿದ್ದು, ತನಿಖೆ ಪ್ರಗತಿಯಲ್ಲಿದೆ.
-ಹರಿರಾಂ ಶಂಕರ್, ಉಪ ಆಯುಕ್ತರು ಕಾನೂನು ಸುವ್ಯವಸ್ಥಾ ವಿಭಾಗ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X