Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಅಹಿಂಸೆಯ ನೈಜಾರ್ಥ ಪರಿಕಲ್ಪನೆ ಯುವ...

ಅಹಿಂಸೆಯ ನೈಜಾರ್ಥ ಪರಿಕಲ್ಪನೆ ಯುವ ಸಮುದಾಯಕ್ಕೆ ಅರ್ಥ ಮಾಡಿಸುವಲ್ಲಿ ಸೋಲಾಗಿದೆ: ನಿಕೇತ್‍ ರಾಜ್

ಗ್ರಾಮ ಸ್ವರಾಜ್ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ29 Oct 2021 7:54 PM IST
share
ಅಹಿಂಸೆಯ ನೈಜಾರ್ಥ ಪರಿಕಲ್ಪನೆ ಯುವ ಸಮುದಾಯಕ್ಕೆ ಅರ್ಥ ಮಾಡಿಸುವಲ್ಲಿ ಸೋಲಾಗಿದೆ: ನಿಕೇತ್‍ ರಾಜ್

ಪುತ್ತೂರು: ಮಹಾತ್ಮ ಗಾಂಧೀಜಿ ಅವರ ಸತ್ಯ ಮತ್ತು ಅಹಿಂಸೆಯ ನೈಜಾರ್ಥದ ಪರಿಕಲ್ಪನೆಯನ್ನು ಯುವ ಸಮುದಾಯಕ್ಕೆ ಅರ್ಥ ಮಾಡಿಸುವಲ್ಲಿ ಸೋಲಾಗಿದೆ. ಅದೇ ರೀತಿ ಕಾಂಗ್ರೆಸ್‍ನ ಸಾಧನೆಗಳನ್ನು ಯುವ ಜನಾಂಗಕ್ಕೆ ಅಂದೇ ತಿಳಿಸದಿರುವುದರಿಂದ ತಪ್ಪಾಗಿದೆ ಎಂದು ಕೆಪಿಸಿಸಿ ವಕ್ತಾರ ನಿಕೇತ್‍ರಾಜ್ ಮೌರ್ಯ ಹೇಳಿದರು. 

ಪುತ್ತೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ಕಳೆದ 13 ದಿನಗಳಿಂದ ವಿವಿಧ ಗ್ರಾಮಗಳಲ್ಲಿ ನಡೆದ ಗ್ರಾಮ ಸ್ವರಾಜ್ ಕಾರ್ಯಕ್ರಮದ ಸಮಾರೋಪ ಸಮಾರಂಭ ಶುಕ್ರವಾರ ಸಂಜೆ ಪುತ್ತೂರಿನ ಕಿಲ್ಲೆ ಮೈದಾನದಲ್ಲಿ ನಡೆಯಿತು. ನಿಕೇತ್ ರಾಜ್ ಮೌರ್ಯ ಅವರು ಈ ಸಮಾರಂಭದಲ್ಲಿ ದಿಕ್ಸೂಚಿ ಭಾಷಣ ಮಾಡಿದರು. 

ಕಾಂಗ್ರೆಸ್ ಪಕ್ಷವು ಯಾರನ್ನೂ ಶಾಸಕರನ್ನಾಗಿ, ಸಂಸದರನ್ನಾಗಿ, ಮುಖ್ಯಮಂತ್ರಿಗಳನ್ನಾಗಿ, ಪ್ರಧಾನ ಮಂತ್ರಿಗಳನ್ನಾಗಿ ಮಾಡಲು ಸೃಷ್ಟಿಯಾಗಿಲ್ಲ. ಸ್ವಾತಂತ್ರ್ಯ ಸಂಗ್ರಾಮದ ಕ್ರಾಂತಿಯ ಧ್ಯೋತಕವಾಗಿ ಕಾಂಗ್ರೆಸ್ ಉದಯವಾಗಿತ್ತು. ಮಹಾತ್ಮ ಗಾಂಧೀಜಿಯ ಸಾಂಗತ್ಯದಿಂದಾಗಿ ಕಾಂಗ್ರೆಸ್ ಸ್ವಾತಂತ್ರ್ಯ ಹೋರಾಟ ಬಲಗೊಂಡಿತು. ವಿವಿಧ ಭಾಷೆ, ಜಾತಿ. ಧರ್ಮ ಸಂಸ್ಕೃತಿಯನ್ನು ಒಟ್ಟುಗೂಡಿಸಿದ ಕೀರ್ತಿ ಕಾಂಗ್ರೆಸ್‍ಗೆ ಸಲ್ಲುತ್ತದೆ ಎಂದರು. 

ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಮಾತನಾಡಿ ಮಹಾತ್ಮ ಗಾಂಧೀಜಿಯನ್ನೇ ಕೊಂದವರಿಗೆ ಮಾಲೆ ಹಾಕುವ ಜನರು ನಮ್ಮಲ್ಲಿರುವುದು ದೇಶದ ದುರಂತವಾಗಿದೆ. ಕಾಂಗ್ರೆಸ್ ಏನು ಮಾಡಿದೆ ಎನ್ನುವ ಬಿಜೆಪಿಗರು ಇದೀಗ ಕಾಂಗ್ರೆಸ್ ಕಳೆದ 60 ವರ್ಷಗಳಲ್ಲಿ ಮಾಡಿರುವುದನ್ನು ಎಲ್ಲಾ ಮಾರಾಟ ಮಾಡುತ್ತಿದ್ದಾರೆ. ಜನರಿಗೆ ಕುಡಿಯುವ ನೀರು, ವಾಸದ ಮನೆ, ರಸ್ತೆ ಸೇರಿದಂತೆ ಎಲ್ಲಾ ಮೂಲ ಸೌಕರ್ಯವನ್ನು ಒದಗಿಸಿರುವುದೇ ಕಾಂಗ್ರೆಸ್ ಪಕ್ಷ ಈಗ ಕಾಂಗ್ರೆಸ್‍ನಿಂದ ಲಾಭ ಪಡೆದು ಬೈಕ್‍ನಲ್ಲಿ ಓಡಾಡುತ್ತಿರುವವರು ಕೇಸರಿ ಶಾಲು ಹಾಕಿಕೊಂಡು ತಿರುಗುತ್ತಿದ್ದಾರೆ ಎಂದರು. 

ಎಐಸಿಸಿ ಕಾರ್ಯದರ್ಶಿ ಮೋಹನ್ ಪಿ.ವಿ, ಕೆಪಿಸಿಸಿ ಕಾರ್ಯದರ್ಶಿ ಎಂ.ಎಸ್. ಮಹಮ್ಮದ್, ವಿಟ್ಲ ಉಪ್ಪಿನಂಗಡಿ ಬ್ಲಾಕ್ ಅಧ್ಯಕ್ಷ ಡಾ. ರಾಜಾರಾಂ, ಸೇವಾದಳದ ಜಿಲ್ಲಾಧ್ಯಕ್ಷ ಜೋಕಿಂ ಡಿಸೋಜ, ಪುತ್ತೂರ ನಗರ ಕಾಂಗ್ರೆಸ್ ಅಧ್ಯಕ್ಷ ಎಚ್. ಮಹಮ್ಮದ್ ಆಲಿ, ಮುಖಂಡರಾದ ಮುರಳೀಧರ ರೈ ಮಠಂತಬೆಟ್ಟು, ಮಹಮ್ಮದ್ ಬಡಗನ್ನೂರು, ಪ್ರವೀಣ್ ಚಂದ್ರ ಆಳ್ವ ಮತ್ತಿತರರು ಉಪಸ್ಥಿತರಿದ್ದರು. 

ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಬಿ. ವಿಶ್ವನಾಥ ರೈ ಪ್ರಾಸ್ತಾವಿಕ ಮಾತುಗಳನ್ನಾಡಿ ಸ್ವಾಗತಿಸಿದರು. ಪುತ್ತೂರ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಮಳ ರಾಮಚಂದ್ರ ನಿರೂಪಿಸಿದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X