Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಶಾಲೆಯ ಕಟ್ಟಡದ ಕೊನೆಯ ಮಹಡಿಯಿಂದ...

ಶಾಲೆಯ ಕಟ್ಟಡದ ಕೊನೆಯ ಮಹಡಿಯಿಂದ ವಿದ್ಯಾರ್ಥಿಯ ತಲೆ ಕೆಳಗಾಗಿ ನೇತಾಡಿಸಿದ ಮುಖ್ಯೋಪಾಧ್ಯಾಯನ ಬಂಧನ

ವಾರ್ತಾಭಾರತಿವಾರ್ತಾಭಾರತಿ29 Oct 2021 10:45 PM IST
share
ಶಾಲೆಯ ಕಟ್ಟಡದ ಕೊನೆಯ ಮಹಡಿಯಿಂದ ವಿದ್ಯಾರ್ಥಿಯ ತಲೆ ಕೆಳಗಾಗಿ ನೇತಾಡಿಸಿದ ಮುಖ್ಯೋಪಾಧ್ಯಾಯನ ಬಂಧನ

ಲಕ್ನೋ, ಅ. 29: ವಿದ್ಯಾರ್ಥಿಯೋರ್ವನನ್ನು ಶಾಲಾ ಕಟ್ಟಡದ ಕೊನೆಯ ಮಹಡಿಯಿಂದ ಕಾಲು ಹಿಡಿದು ತಲೆ ಕೆಳಗಾಗಿ ನೇತಾಡಿಸಿದ ಆಘಾತಕಾರಿ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ಉತ್ತರಪ್ರದೇಶದ ಮಿರ್ಝಾಪುರ ಶಾಲೆಯೊಂದರ ಮುಖ್ಯೋಪಾಧ್ಯಾಯರನ್ನು ಪೊಲೀಸರು ಬಂಧಿಸಿದ್ದಾರೆ.

ಗುರುವಾರ ಮಧ್ಯಾಹ್ನದ ಊಟದ ಬಿಡುವಿನ ವೇಳೆ ಬೇರೆಬೇರೆ ತರಗತಿಗಳ ವಿದ್ಯಾರ್ಥಿಗಳು ಆಟವಾಡುತ್ತಿದ್ದ ಸಂದರ್ಭ ವಿದ್ಯಾರ್ಥಿಯೋರ್ವನಿಗೆ ಕಚ್ಚಿರುವುದಕ್ಕೆ ಕ್ಷಮೆ ಕೋರದೇ ಇದ್ದರೆ ಕೆಳಗೆ ಹಾಕಲಾಗುವುದು ಎಂದು ಮುಖ್ಯೋಪಾದ್ಯಾಯ ಮನೋಜ್ ವಿಶ್ವಕರ್ಮ ಬಾಲಕ ಸೋನು ಯಾದವ್ನನ್ನು ಕಾಲು ಹಿಡಿದುಕೊಂಡು ತಲೆ ಕೆಳಗಾಗಿ ನೇತಾಡಿಸಿ ಬೆದರಿಕೆ ಒಡ್ಡಿದ್ದಾನೆ.

ವಿದ್ಯಾರ್ಥಿಗೆ ಕಚ್ಚಿರುವುದಕ್ಕೆ ಆಕ್ರೋಶಿತರಾದ ಮುಖ್ಯೋಪಾಧ್ಯಾಯ ಮನೋಜ್ ವಿಶ್ವಕರ್ಮ 2ನೇ ತರಗತಿ ವಿದ್ಯಾರ್ಥಿ ಸೋನು ಯಾದವ್ನನ್ನು ಎಳೆದುಕೊಂಡು ಶಾಲೆಯ ಕಟ್ಟಡದ ಕೊನೆಯ ಮಹಡಿಗೆ ಹೋದರು. ಅಲ್ಲಿ ಆತನ ಕಾಲು ಹಿಡಿದು ತಲೆ ಕೆಳಗಾಗಿ ನೇತಾಡಿಸಿ, ‘‘ನೀನು ಕಚ್ಚಿದ ವಿದ್ಯಾರ್ಥಿಯಲ್ಲಿ ಕ್ಷಮೆ ಕೇಳದೇ ಇದ್ದರೆ ಕೆಳಗೆ ಹಾಕಲಾಗುವುದು’’ ಎಂದು ಬೆದರಿಕೆ ಒಡ್ಡಿದ್ದರು. ಸೋನು ಯಾದವ್ ಗಟ್ಟಿಯಾಗಿ ಅಳುತ್ತಿರುವುದು ಕೇಳಿ ವಿದ್ಯಾರ್ಥಿಗಳ ಸಮೂಹ ಸೇರಿದ ಬಳಿಕ ಮನೋಜ್ ವಿಶ್ವಕರ್ಮ ಅವರು ಸೋನು ಯಾದವ್ನನ್ನು ಬಿಟ್ಟಿದ್ದಾರೆ.

‘‘ಮುಖ್ಯೋಪಾಧ್ಯಾಯರು ಮಾಡಿರುವುದು ತಪ್ಪು. ಆದರೆ, ಅವರು ಪ್ರೀತಿಯ ಕಾರಣಕ್ಕೆ ಮಾಡಿದರು. ಆದುರಿಂದ ನಮಗೆ ಯಾವುದೇ ಸಮಸ್ಯೆ ಇಲ್ಲ’’ ಎಂದು ಸೋನು ಯಾದವ್ನ ತಂದೆ ರಂಜಿತ್ ಯಾದವ್ ಹೇಳಿದ್ದಾರೆ.

‘‘ಆತನ (ಸೋನು ಯಾದವ್)ನನ್ನು ಸರಿಪಡಿಸುವತಂತೆ ಆತನ ತಂದೆ ರಂಜಿತ್ ಯಾದವ್ ಹೇಳಿದ್ದರು’’ ಎಂದು ಬಾಲ ನ್ಯಾಯ ಕಾಯ್ದೆಯ ಸೆಕ್ಷನ್ ಅಡಿಯಲ್ಲಿ ಬಂಧಿತರಾಗಿರುವ ಮುಖ್ಯೋಪಾಧ್ಯಾಯ ಮನೋಜ್ ವಿಶ್ವಕರ್ಮ ಹೇಳಿದ್ದಾರೆ.

‘‘ಸೋನು ತುಂಬಾ ಕೀಟಲೆಯ ವಿದ್ಯಾರ್ಥಿ. ಆತ ಮಕ್ಕಳಿಗೆ ಕಚ್ಚುತ್ತಿದ್ದ. ಅಧ್ಯಾಪಕರಿಗೆ ಕೂಡ ಕಚ್ಚುತ್ತಿದ್ದ. ಸರಿಪಡಿಸುವಂತೆ ಆತನ ತಂದೆ ನನಗೆ ಹೇಳಿದ್ದರು. ಆದುದರಿಂದ ನಾವು ಆತನನ್ನು ಹೆದರಿಸಲು ಪ್ರಯತ್ನಿಸಿದೆವು. ಹೆದರಿಕೆ ಹುಟ್ಟಲು ಆತನನನ್ನು ಕೊನೆಯ ಮಹಡಿಯಿಂದ ತಲೆಕೆಳಗಾಗಿ ನೇತಾಡಿಸಿದೆವು’’ ಎಂದು ಅವರು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X