Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಪುನೀತ್ ಇಲ್ಲದೆ ತಬ್ಬಲಿಗಳಾದ...

ಪುನೀತ್ ಇಲ್ಲದೆ ತಬ್ಬಲಿಗಳಾದ ಅಲಕ್ಷ್ಯಕ್ಕೊಳಗಾದ ಹೆಣ್ಣು ಮಕ್ಕಳು, ಮಹಿಳೆಯರು

ಶಕ್ತಿಧಾಮದಲ್ಲೀಗ ನೀರವ ಮೌನ

ನೇರಳೆ ಸತೀಶ್ ಕುಮಾರ್ನೇರಳೆ ಸತೀಶ್ ಕುಮಾರ್30 Oct 2021 10:00 AM IST
share
ಪುನೀತ್ ಇಲ್ಲದೆ ತಬ್ಬಲಿಗಳಾದ ಅಲಕ್ಷ್ಯಕ್ಕೊಳಗಾದ ಹೆಣ್ಣು ಮಕ್ಕಳು, ಮಹಿಳೆಯರು

ಮೈಸೂರು: ನಾಯಕ ನಟ ಪುನೀತ್ ರಾಜ್‌ಕುಮಾರ್ ನಿಧನದಿಂದ ನೊಂದ ಅಲಕ್ಷ್ಯಕ್ಕೊಳಗಾದ ಹೆಣ್ಣು ಮಕ್ಕಳು ಮತ್ತು ಮಹಿಳೆಯರು ತಬ್ಬಲಿಗಳಾಗಿದ್ದು, ಶಕ್ತಿಧಾಮದಲ್ಲೀಗ ನೀರವ ಮೌನ ಆವರಿಸಿದೆ.

ಸಮಾಜದಲ್ಲಿ ನೊಂದ ಅವಮಾನಕ್ಕೊಳಗಾದ ಮಹಿಳೆಯರು ಮತ್ತು ನಿರ್ಲಕ್ಷಿತ ಮಕ್ಕಳ ಜೀವನೋಪಾಯಕ್ಕಾಗಿ ಅಂದು ಡಾ.ರಾಜ್‌ಕುಮಾರ್ ಅವರು ಸ್ಥಾಪಿಸಿದ್ದ ಶಕ್ತಿಧಾಮದಲ್ಲಿನ ಮಹಿಳೆಯರು ಮತ್ತು ಹೆಣ್ಣು ಮಕ್ಕಳ ಅಭಿವೃದ್ಧಿಗಾಗಿ ಪುನೀತ್ ರಾಜ್‌ಕುಮಾರ್ ಶಕ್ತಿ ಮೀರಿ ಸಹಾಯ ಮಾಡುತ್ತಿದ್ದರು. ಇಲ್ಲಿನ ಮಕ್ಕಳ ಶಿಕ್ಷಣ ಸೇರಿದಂತೆ ಅವರ ಬದುಕು ಕಟ್ಟಿಕೊಡಲು ರಾಜ್ ಕುಟುಂಬ ನಿರಂತರ ಸೇವೆ ಸಲ್ಲಿಸುತ್ತಿತ್ತು.

ಪುನೀತ್ ರಾಜ್‌ಕುಮಾರ್ ಅವರಂತೂ ಪ್ರತಿ ವರ್ಷ ಅವರ ತಾಯಿ ಪಾರ್ವತಮ್ಮ ಅವರ ಹುಟ್ಟು ಹಬ್ಬದ ದಿನ ಮತ್ತು ತಂದೆಯವರ ಜನ್ಮದಿನದಂದು ಶಕ್ತಿಧಾಮಕ್ಕೆ ಬಂದು ಇಲ್ಲಿನ ಮಕ್ಕಳೊಂದಿಗೆ ಊಟ ಮಾಡಿ ತಂದೆ ತಾಯಿಯ ಜನುಮದಿನವನ್ನು ಆಚರಿಸುತ್ತಿದ್ದರು. ಇನ್ನು ಮುಂದೆ ಪುನೀತ್ ನೆನಪು ಮಾತ್ರ.

ಪುನೀತ್ ಲಾಕ್ ಡೌನ್ ನಂತರ ಶಕ್ತಿ ಧಾಮಕ್ಕೆ ಭೇಟಿ ನೀಡಿರಲಿಲ್ಲ. 2019ರಲ್ಲಿ ಶಕ್ತಿಧಾಮದ ಆವರಣದಲ್ಲಿ ನಿರ್ಮಾಣವಾದ ನೂತನ ಕೌಶಲ್ಯ ಕಟ್ಟಡದ ಉದ್ಘಾಟನೆಗೆ ಬಂದಿದ್ದರು ಎಂದು ಶಕ್ತಿಧಾಮದ ಟ್ರಸ್ಟಿ ಸುಮನಾ ಪುನೀತ್ ನೆನೆದು ಭಾವುಕರಾದರು.

ಪುನೀತ್ ಮತ್ತು ಅವರ ಪತ್ನಿ ಅಶ್ವಿನಿ ವಿದೇಶಕ್ಕೆ ಹೋಗಿ ಬಂದರೆ ಅಲ್ಲಿಂದ ತರುತ್ತಿದ್ದ ದೊಡ್ಡ ದೊಡ್ಡ ಬಿಸ್ಕಟ್ ಮತ್ತು ಚಾಕೊಲೇಟ್‌ಗಳನ್ನು ಮಕ್ಕಳಿಗೆ ನೀಡಿ ಸಂತಸ ಪಡುತ್ತಿದ್ದರು. ಪುನೀತ್ ಮಕ್ಕಳೊಂದಿಗೆ ಸರಳವಾಗಿ ಇರುತ್ತಿದ್ದರು. ಇಲ್ಲಿನ ಮಕ್ಕಳಿಗೆ ಪುನೀತ್ ಕಂಡರೆ ಬಹಳ ಪ್ರೀತಿ. ಮುಂದಿನ ತಿಂಗಳು ಇನೊಓಂೀಸಿಸ್ ಸಂಸ್ಥೆಯವರು ಕಟ್ಟಿಸಿಕೊಟ್ಟಿದ್ದ ಕಟ್ಟಡ ಉದ್ಘಾಟನೆಗೆ ಪುನೀತ್ ರಾಜ್ ಕುಮಾರ್ ಬರಬೇಕಿತ್ತು. ಆದರೆ, ವಿ ಅವರನ್ನು ಬಾರದ ಲೋಕಕ್ಕೆ ಕರೆದುಕೊಂಡು ಹೋಗಿರುವುದು ಅತ್ಯಂತ ನೋವುಂಟು ಮಾಡಿದೆ ಎಂದು ದುಃಖಿತರಾದರು.

ಪುನೀತ್ ನಿಧನಕ್ಕೆ ಶನಿವಾರ ಶಕ್ತಿಧಾಮದಲ್ಲಿ ಸಂತಾಪ ಏರ್ಪಡಿಸಲಾಗಿದೆ. ನಮ್ಮ ಸಂಸ್ಥೆಯ ಜಯದೇವ್, ದೊರೆ ಭಗವಾನ್, ಜಯಮಾಲಾ, ಕೆಂಪಯ್ಯ ಟ್ರಸ್ಟಿಗಳಾಗಿದ್ದು, ಮಕ್ಕಳು ಸೇರಿದಂತೆ ನೊಂದವರು ಸಂತಾಪ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಹೇಳಿದರು.

► ಶಕ್ತಿ ಮೀರಿ ಮಕ್ಕಳಿಗೆ ಸಹಾಯ

ರಾಜ್ ಕುಟುಂಬ ಶಕ್ತಿ ಮೀರಿ ಇಲ್ಲಿನ ಮಕ್ಕಳಿಗೆ ಸಹಾಯ ಮಾಡುತ್ತಿತ್ತು. ಇಲ್ಲಿ ಒಂದನೇ ತರಗತಿಯಿಂದ ಇಂಜಿನಿಯರಿಂಗ್‌ವರೆಗೆ ವಿದ್ಯಾರ್ಥಿನಿಯರು ಓದುತ್ತಿದ್ದಾರೆ. ಅವರಿಗೆಲ್ಲಾ ಆರ್ಥಿಕವಾಗಿ ಮತ್ತು ಶೈಕ್ಷಣಿಕವಾಗಿ ಪುನೀತ್ ಸಹಾಯ ಮಾಡುತ್ತಿದ್ದರು. ಅವರ ತಂದೆ ಸ್ಥಾಪಿಸಿದ ಶಕ್ತಿ ಧಾಮಕ್ಕೆ ಪಾರ್ವತಮ್ಮ ಅಧ್ಯಕ್ಷರಾಗಿದ್ದರು. ಅವರ ನಿಧನಾ ನಂತರ ಶಿವರಾಜ್ ಕುಮಾರ್ ಪತ್ನಿ ಗೀತಾ ಅಧ್ಯಕ್ಷರಾಗಿದ್ದಾರೆ. ರಾಜ್ ಕುಟುಂಬದ ಮೂವರೂ ಮಕ್ಕಳು ನಮಗೆ ಸಹಾಯ ಮಾಡುತ್ತಿದ್ದರು ಎಂದು ಶಕ್ತಿಧಾಮದ ಟ್ರಸ್ಟಿ ಸುಮನಾ ನೆನೆದರು.

share
ನೇರಳೆ ಸತೀಶ್ ಕುಮಾರ್
ನೇರಳೆ ಸತೀಶ್ ಕುಮಾರ್
Next Story
X