ನಾಳೆ ಪುನೀತ್ ರಾಜ್ ಕುಮಾರ್ ಅಂತ್ಯ ಸಂಸ್ಕಾರ: ಸಿಎಂ ಬೊಮ್ಮಾಯಿ

ಪುನೀತ್ ರಾಜ್ ಕುಮಾರ್
ಬೆಂಗಳೂರು, ಅ.30: ನಟ ಪುನೀತ್ ರಾಜ್ ಕುಮಾರ್ ಅಂತಿಮ ಸಂಸ್ಕಾರ ರವಿವಾರ (ಅ.31) ನಡೆಸಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಪುನೀತ್ ಅವರ ಪುತ್ರಿ ಧೃತಿ ನ್ಯೂಯಾರ್ಕ್ ನಿಂದ ಆಗಮಿಸಿದ್ದು, ಮಧ್ಯಾಹ್ನ ದಿಲ್ಲಿಗೆ ತಲುಪಿದ್ದಾರೆ. ಆದರೆ ಅವರು ಬೆಂಗಳೂರಿಗೆ ತಲುಪುವುದು ಸಂಜೆ 6 ಗಂಟೆ ಆಗಲಿದೆ. ಸಂಜೆಯ ನಂತರ ಅಂತ್ಯಕ್ರಿಯೆ ನಡೆಸುವುದು ಕಷ್ಟವಾಗಬಹುದು. ಈ ಹಿನ್ನೆಲೆಯಲ್ಲಿ ಅಂತ್ಯ ಸಂಸ್ಕಾರವನ್ನು ರವಿವಾರ ಮಾಡಲು ರಾಜಕುಮಾರ್ ಕುಟುಂಬಸ್ಥರ ಜೊತೆ ಚರ್ಚೆ ಮಾಡಿ ನಿರ್ಧರಿಸಲಾಗಿದೆ ಎಂದು ಸಿಎಂ ತಿಳಿಸಿದ್ದಾರೆ.
Next Story





