Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪುತ್ತೂರಿನ ಬಾಲ ಪ್ರತಿಭೆಗೆ ಆತ್ಮವಿಶ್ವಾಸ...

ಪುತ್ತೂರಿನ ಬಾಲ ಪ್ರತಿಭೆಗೆ ಆತ್ಮವಿಶ್ವಾಸ ತುಂಬಿದ್ದ 'ಅಪ್ಪು'

ವಾರ್ತಾಭಾರತಿವಾರ್ತಾಭಾರತಿ30 Oct 2021 5:30 PM IST
share
ಪುತ್ತೂರಿನ ಬಾಲ ಪ್ರತಿಭೆಗೆ ಆತ್ಮವಿಶ್ವಾಸ ತುಂಬಿದ್ದ ಅಪ್ಪು

ಪುತ್ತೂರು: ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅವರ ನಿಧನ ವಾರ್ತೆಯು ಕನ್ನಡ ಚಿತ್ರರಂಗಕ್ಕೆ ಮಾತ್ರವಲ್ಲ ಇಡೀ ಕರ್ನಾಟಕವನ್ನೇ ಕಣ್ಣೀರಿನಲ್ಲಿ ಮುಳುಗಿಸಿದೆ. ಪುನೀತ್ ರಾಜ್‍ಕುಮಾರ್ ಅವರಿಗೆ ಪುತ್ತೂರಿನೊಂದಿಗೆ ನಂಟು ಇದೆ. ಪುನೀತ್ ಈ ಹಿಂದೆ ಪುತ್ತೂರಿನ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಳಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದರು. ಅಲ್ಲದೆ ಪುತ್ತೂರಿನಲ್ಲಿ ನಡೆದ ಹೆಸರಾಂತ ಜಾನಪದ ಕ್ರೀಡೆಯಾದ ಕೋಟಿ ಚೆನ್ನಯ ಜೋಡು ಕರೆ ಕಂಬಳದಲ್ಲಿಯೂ ಭಾಗವಹಿಸಿ ಕಂಬಳದ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ್ದರು. 

ವಯಸ್ಸಿನ ವ್ಯತ್ಯಾಸ ನೋಡದೆ ಅಬಾಲ ವೃದ್ಧರಾದಿಯಾಗಿ ಎಲ್ಲರೊಡನೆಯೂ ಆತ್ಮೀಯತೆಯಿಂದ ಬೆರೆಯುತ್ತಿದ್ದ ಪುನೀತ್ ರಾಜ್‍ಕುಮಾರ್ ಅವರು, ಹಲವು ಬಾಲ ಪ್ರತಿಭೆಗಳಿಗೆ ಅವಕಾಶ ನೀಡಿದ್ದಾರೆ. ಅವರು ಬೆನ್ನು ತಟ್ಟಿ ಬೆಳೆಸಿದ ಬಾಲ ಪ್ರತಿಭೆಯೊಬ್ಬರು ಪುತ್ತೂರಿನಲ್ಲಿದ್ದಾರೆ. ಈ ಬಾಲ ಕಲಾವಿದೆ ಡ್ಯಾನ್ಸ್ ಮೂಲಕ ರಾಜ್ಯ ಮಟ್ಟದಲ್ಲಿ ಹೆಸರು ಮಾಡಿದ್ದ ಪುತ್ತೂರಿನ ಬೆಟ್ಟಂಪಾಡಿ ನಿವಾಸಿ ದಯಾನಂದ ರೈ ಅವರ ಪುತ್ರಿ, ಪುತ್ತೂರಿನ ಸುಧಾನ ವಸತಿ ಶಾಲೆಯಲ್ಲಿ ಪ್ರಸ್ತುತ 10ನೇ ತರಗತಿಯಲ್ಲಿ ಕಲಿಯುತ್ತಿರುವ ವಿದ್ಯಾರ್ಥಿನಿ ದೀಕ್ಷಾ ರೈ. ಇವರು ಪುನೀತ್ ಅವರನ್ನು ಹತ್ತಿರದಿಂದ ಬಲ್ಲವರು. 

ಖಾಸಗಿ ವಾಹಿನಿಯಲ್ಲಿ ನಡೆದ 'ಡ್ಯಾನ್ಸ್ ಡ್ಯಾನ್ಸ್' ಸ್ಪರ್ಧೆಯ ಕಾರ್ಯಕ್ರಮದಲ್ಲಿ ದೀಕ್ಷಾ ರೈ ಪ್ರದರ್ಶಿಸಿದ ಡ್ಯಾನ್ಸ್ ಗೆ ಮಾರುಹೋಗಿದ್ದ ಪುನೀತ್ ಅವರು ಬಳಿಕದ ದಿನಗಳಲ್ಲಿ ದೀಕ್ಷಾ ಜೊತೆ ಉತ್ತಮ ಬಾಂಧವ್ಯ ಬೆಳೆಸಿಕೊಂಡಿದ್ದರು. ಕನ್ನಡದ ಕೋಟ್ಯಾಧಿಪತಿಯಲ್ಲಿ ಪುನೀತ್ ರಾಜ್‍ಕುಮಾರ್ ಅವರಿಗೆ ಪ್ರಶ್ನೆ ಕೇಳುವ ಅವಕಾಶವೂ ದೀಕ್ಷಾ ರೈಗೆ ಲಭಿಸಿತ್ತು. ಪ್ರಶ್ನೆ ಕೇಳುವ ಸಂದರ್ಭದಲ್ಲಿ ತಡವರಿಸಿದ ದೀಕ್ಷಾಳಿಗೆ ಧೈರ್ಯ ತುಂಬಿ ಕಾರ್ಯಕ್ರಮವನ್ನು ಮುಂದುವರಿಸಿದ್ದ ಪುನೀತ್ ರಾಜ್‍ಕುಮಾರ್ ಅವರನ್ನು ದೀಕ್ಷಾ ನೆನಪಿಸಿಕೊಳ್ಳುತ್ತಾರೆ. ಅಲ್ಲದೆ ದೀಕ್ಷಾ ಅವರ ಡ್ಯಾನ್ಸ್ ನ್ನು ಮೆಚ್ಚಿಕೊಂಡಿದ್ದ ಪುನೀತ್ ಅವರು ದೀಕ್ಷಾಳ ಡ್ಯಾನ್ಸ್ ನ ಒಂದು ಸ್ಪೆಪ್ ಅನ್ನು ತಾನು ತನ್ನ ಮುಂದಿನ ಚಿತ್ರದಲ್ಲಿ ಅಳವಡಿಸಿಕೊಳ್ಳುತ್ತೇನೆ ಎಂದೂ ತಿಳಿಸಿದ್ದರಂತೆ. 

ಪುನೀತ್ ರಾಜ್‍ ಕುಮಾರ್ ಅವರ ಅಂಜನೀಪುತ್ರ ಚಿತ್ರೀಕರಣದ ವೇಳೆಯಲ್ಲಿ ದೀಕ್ಷಾ ತನ್ನ ಸಹಪಾಠಿಗಳ ಜೊತೆಗೆ ಪುನೀತ್ ಅವರನ್ನು ಬೇಟಿಯಾಗಿದ್ದರು.  ತನ್ನ ಬಿಡುವಿಲ್ಲದ ಕೆಲಸದ ನಡುವೆಯೂ  ದೀಕ್ಷಾ ಹಾಗೂ ಆಕೆಯ ಸಹಪಾಠಿಗಳಿಗೆ ಸಮಯ ನೀಡಿ ಎಲ್ಲರಲ್ಲೂ ಅತ್ಮೀಯವಾಗಿ ಬೆರೆತಿದ್ದರಂತೆ. ಇಂದು ಪುತ್ತೂರಿನ ಸುಧಾನ ಶಾಲೆಯಲ್ಲಿ ಬಾಲಕಿ ದೀಕ್ಷಾ ಅವರನ್ನು ಭೇಟಿಯಾದಾಗ ಈ ಎಲ್ಲಾ ವಿಚಾರಗಳನ್ನು ತಿಳಿಸಿ ದೀಕ್ಷಾ ದು:ಖಿತರಾದರು. 

ಬಾಲ್ಯದಲ್ಲಿ ತಂದೆ ರಾಜ್‍ಕುಮಾರ್ ಅವರೊಂದಿಗೆ ಪುತ್ತೂರಿನ ಕಲ್ಲಾರೆ ಗುರುರಾಘವೇಂದ್ರ ಮಠಕ್ಕೆ ಪುನೀತ್ ಭೇಟಿ ನೀಡಿದ್ದರು ಎಂದು ಸ್ಥಳೀಯರು ನೆನಪಿಸಿಕೊಳ್ಳುತ್ತಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X