Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪಾಡ್ದಾನಗಳಿಗೆ ಸಾಂಸ್ಕೃತಿಕ ಪಠ್ಯದ...

ಪಾಡ್ದಾನಗಳಿಗೆ ಸಾಂಸ್ಕೃತಿಕ ಪಠ್ಯದ ಸ್ವರೂಪ ಅಗತ್ಯ: ಡಾ.ಚಿನ್ನಪ್ಪ ಗೌಡ

ಡಾ.ಎಸ್.ಡಿ.ಶೆಟ್ಟಿ- ಡಾ.ಪಾದೇಕಲ್ಲುಗೆ ತಾಳ್ತಜೆ ಕೇಶವ ಭಟ್ ಪ್ರಶಸ್ತಿ ಪ್ರದಾನ

ವಾರ್ತಾಭಾರತಿವಾರ್ತಾಭಾರತಿ30 Oct 2021 7:04 PM IST
share
ಪಾಡ್ದಾನಗಳಿಗೆ ಸಾಂಸ್ಕೃತಿಕ ಪಠ್ಯದ ಸ್ವರೂಪ ಅಗತ್ಯ: ಡಾ.ಚಿನ್ನಪ್ಪ ಗೌಡ

ಉಡುಪಿ, ಅ.30: ಉಡುಪಿ ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರ, ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್‌ನ ಜಂಟಿ ಆಶ್ರಯದಲ್ಲಿ ತಾಳ್ತಜೆ ಕೇಶವ ಭಟ್ಟ 2020ನೇ ಸಾಲಿನ ಪ್ರಶಸ್ತಿಯನ್ನು ಡಾ.ಎಸ್.ಡಿ.ಶೆಟ್ಟಿ ಹಾಗೂ 2021ನೆ ಸಾಲಿನ ಪ್ರಶಸ್ತಿಯನ್ನು ಡಾ.ಪಾದೇಕಲ್ಲು ವಿಷ್ಣು ಭಟ್ ಅವರಿಗೆ ಶನಿವಾರ ಉಡುಪಿ ಎಂಜಿಎಂ ಕಾಲೇಜಿನ ನೂತನ ರವೀಂದ್ರ ವುಂಟಪದಲ್ಲಿ ಪ್ರದಾನ ಮಾಡಲಾಯಿತು.

'ಪಾಡ್ದಾನಗಳು- ವಿಶ್ಲೇಷಣೆಯ ಹೊಸ ನೆಲೆಗಳು' ವಿಷಯದ ಕುರಿತು ಉಪನ್ಯಾಸ ನೀಡಿದ ಗೋಟಗೋಡಿ ಜಾನಪದ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಡಾ.ಚಿನ್ನಪ್ಪ ಗೌಡ, ಪಾಡ್ದಾನ ವಿಶೇಷ ಅಧ್ಯಯನಕ್ಕೆ ಒಳಗಾದ ಪ್ರಕಾರ ಆಗಿದೆ. ಪಾಡ್ದಾನಗಳನ್ನು ಸಂಗ್ರಹ ಪಠ್ಯ, ಸಾಹಿತ್ಯ ಪಠ್ಯ, ಜನಪದ ಪಠ್ಯ ಹಾಗೂ ಸಾಂಸ್ಕೃತಿಕ ಪಠ್ಯವಾಗಿ ನೋಡುವ ನಾಲ್ಕು ಹಂತಗಳಿವೆ. ಇದರಲ್ಲಿ ಇಂದು ಪಾಡ್ದಾನಗಳನ್ನು ಸಾಂಸ್ಕೃತಿಕ ಪಠ್ಯವಾಗಿ ನೋಡುವ ಅಗತ್ಯ ಹೆಚ್ಚು ಇದೆ ಎಂದರು.

ಸಾಂಸ್ಕೃತಿಕದಲ್ಲಿ ಸಾಮಾಜಿಕ, ರಾಜಕೀಯ, ಆರ್ಥಿಕ, ನೈತಿಕ ಸೇರಿದಂತೆ ಎಲ್ಲ ಆಯಾಮಗಳು ಇರುತ್ತವೆ. ಇದರಿಂದ ಪಾಡ್ದಾನಗಳ ಮೌಲ್ಯ ಹಾಗೂ ಮಹತ್ವ ವನ್ನು ಇನ್ನಷ್ಟು ಸೂಕ್ಷವಾಗಿ ನೋಡಲು ಸಾಧ್ಯವಾಗುತ್ತದೆ. ಪಾಡ್ದಾನಗಳನು ಸಾಹಿತ್ಯಿಕ ಪಠ್ಯ ಓದುವ ಬದಲು ಚಾರಿತ್ರಿಕ ಕಾಲಘಟ್ಟದ ಸಾಮಾಜಿಕ ವಿಮರ್ಶೆ ಯಾಗಿ ನೋಡಬೇಕಾಗಿದೆ. ಪಾಡ್ದಾನಗಳು ತುಳುನಾಡಿನ ಮಹಾಕಾವ್ಯ, ಪುರಾಣ ಎಂಬುದಾಗಿಯೂ ಕರೆಯಲಾಗುತ್ತದೆ ಎಂದು ಅವರು ತಿಳಿಸಿದರು.

ಪ್ರಶಸ್ತಿ ಸ್ವೀಕರಿಸಿದ ಸಂಶೋಧಕ ಡಾ.ಎಸ್.ಡಿ.ಶೆಟ್ಟಿ ಮಾತನಾಡಿ, ಅವಿಭಜಿತ ದ.ಕ. ಜಿಲ್ಲೆ ಯಲ್ಲಿ ಜನಪದ, ಭೂತಾರಧಾನೆ, ಯಕ್ಷಗಾನ ಸೇರಿದಂತೆ ಹಸ್ತಪ್ರತಿ ಅಧ್ಯಯನಕ್ಕೆ ಉತ್ತಮ ಅವಕಾಶ ಇದೆ. ಆದರೂ ಇಲ್ಲಿನ ಸಂಶೋಧಕರು ನಿರ್ಲರ್ಕ್ಷ ವಹಿಸು ತ್ತಿರುವುದು ವಿಷಾಧನೀಯ. ಇಲ್ಲಿಗೆ ಸಿಗುವ ಹಸ್ತಪ್ರತಿ ಬೇರೆ ಎಲ್ಲೂ ಇಲ್ಲ. ಉತ್ತರ ಕರ್ನಾಟಕ, ಮೈಸೂರು, ಬೆಂಗಳೂರುಗಳಲ್ಲಿ ಹಸ್ತಪ್ರತಿ ಬಗ್ಗೆ ಸಾಕಷ್ಟು ಸಂಶೋಧನೆ ಆಗಿದೆ ಎಂದು ತಿಳಿಸಿದರು. ಅಧ್ಯಕ್ಷತೆ ವಹಿಸಿದ್ದ ಎಂಜಿಎಂ ಕಾಲೇಜಿನ ಪ್ರಾಂಶುಪಾಲ ಡಾ.ದೇವಿದಾಸ್ ಎಸ್. ನಾಯ್ಕಾ, ಮೂಡಂಬೈಲು ಗೋಪಾಲಕೃಷ್ಣ ಶಾಸ್ತ್ರಿ ಅವರ ಪುರಾಣಕಥಾ ಚಿಂತನಾರತ್ನ ಕೃತಿಯನ್ನು ಬಿಡುಗಡೆಗೊಳಿಸಿದರು. ಪಾದೆಕಲ್ಲು ವಿಷ್ಣು ಭಟ್ ಕೃತಿ ಪರಿಚಯ ಮಾಡಿದರು.

ಪ್ರಶಸ್ತಿ ಆಯ್ಕೆ ಸಮಿತಿಯ ಡಾ.ತಾಳ್ತಜೆ ವಸಂತ ಕುಮಾರ್, ಟಿ.ಕೆ.ರಘುಪತಿ, ಹಿರಿಯ ಲೇಖಕ ಮೂಡಂಬೈಲು ಗೋಪಾಲಕೃಷ್ಣ ಶಾಸ್ತ್ರಿ ಮಾತನಾಡಿದರು. ಕಾರ್ಕಳ ಭುವನೇಂದ್ರ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಡಾ.ಅರುಣ್ ಕುಮಾರ್ ಎಸ್.ಆರ್. ಅಭಿನಂದನಾ ಭಾಷಣ ಮಾಡಿದರು.

ಕೇಂದ್ರದ ಆಡಳಿತಾಧಿಕಾರಿ ಡಾ.ಬಿ.ಜಗದೀಶ್ ಶೆಟ್ಟಿ ಸ್ವಾಗತಿಸಿದರು. ಪಿಪಿಸಿ ಉಪನ್ಯಾಸಕ ಶಿವಕುಮಾರ್ ಅಳಗೋಡು ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X