Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಹಸಿರು ಜಲಜನಕ, ನವೀಕರಿಸಬಹುದಾದ ಇಂಧನ...

ಹಸಿರು ಜಲಜನಕ, ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಸಹಕಾರಕ್ಕೆ ಭಾರತ-ಇಟಲಿ ಒಪ್ಪಿಗೆ

ವಾರ್ತಾಭಾರತಿವಾರ್ತಾಭಾರತಿ30 Oct 2021 9:04 PM IST
share
ಹಸಿರು ಜಲಜನಕ, ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಸಹಕಾರಕ್ಕೆ ಭಾರತ-ಇಟಲಿ ಒಪ್ಪಿಗೆ

ರೋಮ್, ಅ.30: ಹಸಿರು ಜಲಜನಕದ ಅಭಿವೃದ್ಧಿ, ನವೀಕರಿಸಬಹುದಾದ ಇಂಧನಗಳ ಕಾರಿಡಾರ್ ರಚನೆ ಹಾಗೂ ಪ್ರಾಕೃತಿಕ ಅನಿಲ ಕ್ಷೇತ್ರದಲ್ಲಿ ಜಂಟಿ ಯೋಜನೆಗಳನ್ನು ರೂಪಿಸಲು ಭಾರತ ಮತ್ತು ಇಟಲಿ ಒಪ್ಪಿಕೊಂಡಿವೆ ಎಂದು ಭಾರತದ ಪ್ರಧಾನಿ ನರೇಂದ್ರ ಮೋದಿ ಹಾಗೂ ಇಟಲಿ ಪ್ರಧಾನಿ ಮಾರಿಯೊ ಡ್ರಾಗಿಯವರ ಜಂಟಿ ಹೇಳಿಕೆ ತಿಳಿಸಿದೆ.

ಇಂಧನ ಪರಿವರ್ತನೆಯಲ್ಲಿ ಸಹಯೋಗವನ್ನು ಬಲಪಡಿಸಲು ಎರಡೂ ದೇಶಗಳು ಆಸಕ್ತವಾಗಿವೆ. ಇಂಧನ ಪರಿವರ್ತನೆ ಸಂಬಂಧಿ ಕ್ಷೇತ್ರದಲ್ಲಿ ಭಾರತ- ಇಟಲಿ ಸಂಸ್ಥೆಗಳ ಜಂಟಿ ಹೂಡಿಕೆಯನ್ನು ಉಭಯ ಮುಖಂಡರ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಹೇಳಿಕೆ ತಿಳಿಸಿದೆ. ರೋಮ್‌ನಲ್ಲಿ ನಡೆಯುವ ಜಿ20 ಶೃಂಗಸಭೆಯ ನೇಪಥ್ಯದಲ್ಲಿ ಉಭಯ ದೇಶಗಳ ಮುಖಂಡರ ಮಧ್ಯೆ ಪ್ರಥಮ ಬಾರಿ ನಡೆದ ಮುಖಾಮುಖಿ ಸಭೆಯಲ್ಲಿ ಕಾರ್ಯನೀತಿ ಮತ್ತು ನಿಯಂತ್ರಣ ರೂಪರೇಖೆ, ಶುದ್ಧ ಮತ್ತು ವಾಣಿಜ್ಯಿಕವಾಗಿ ಕಾರ್ಯಸಾಧ್ಯವಾದ ಇಂಧನ/ತಂತ್ರಜ್ಞಾನಗಳ ವರ್ಗಾವಣೆಗೆ ಅನುಕೂಲ ಮಾಡಿಕೊಡುವ ಬಗ್ಗೆ, ನವೀಕರಿಸಬಹುದಾದ ಇಂಧನಗಳ ಬಗ್ಗೆ ದೀರ್ಘಾವಧಿಯ ಯೋಜನೆಯಲ್ಲಿ ಪರಸ್ಪರ ಸಹಕಾರ ಸಂಬಂಧಕ್ಕೆ ನಿರ್ಧರಿಸಲಾಗಿದೆ.

 ಭಾರತದಲ್ಲಿ ಹಸಿರು ಜಲಜನಕ(ನವೀಕರಿಸಬಹುದಾದ ಇಂಧನ ಬಳಸಿ ಉತ್ಪಾದಿಸುವ ಜಲಜನಕ) ಹಾಗೂ ಅದಕ್ಕೆ ಸಂಬಂಧಿಸಿದ ತಂತ್ರಜ್ಞಾನಗಳ ಅಭಿವೃದ್ಧಿ ಹಾಗೂ ಅನುಷ್ಟಾನಕ್ಕೆ ನೆರವಾಗುವ ಮಾತುಕತೆ ಆರಂಭಿಸಲು, 2030ರೊಳಗೆ 450 ಜಿಡಬ್ಲುನಷ್ಟು ನವೀಕರಿಸಬಹುದಾದ ಇಂಧನ ಉತ್ಪಾದಿಸುವ ಭಾರತದ ಉದ್ದೇಶಕ್ಕೆ ಪೂರಕವಾಗಿ ಬೃಹತ್ ಹಸಿರು ಕಾರಿಡಾರ್ ಸ್ಥಾಪನೆಗೆ ಉಭಯ ಮುಖಂಡರು ನಿರ್ಧರಿಸಿದ್ದಾರೆ. ಅಲ್ಲದೆ, ಪ್ರಾಕೃತಿಕ ಅನಿಲ ಕ್ಷೇತ್ರದಲ್ಲಿ ಜಂಟಿ ಯೋಜನೆಯ ಅಭಿವೃದ್ಧಿ, ಇಂಗಾಲದ ಪ್ರಮಾಣ ಕಡಿಮೆಗೊಳಿಸುವ ಕುರಿತ ತಾಂತ್ರಿಕ ನಾವೀನ್ಯತೆ, ಸ್ಮಾರ್ಟ್ ಸಿಟಿ, ಗ್ರಾಮೀಣ ಸಾರಿಗೆ ವ್ಯವಸ್ಥೆಯ ವಿದ್ಯುದೀಕರಣ ಮುಂತಾದ ಕ್ಷೇತ್ರದಲ್ಲಿ ಜಂಟಿ ಯೋಜನೆಯನ್ನು ಅಭಿವೃದ್ಧಿಪಡಿಸಲು ಭಾರತ ಮತ್ತು ಇಟಲಿ ಕಂಪೆನಿಗಳ ಜಂಟಿ ಯೋಜನೆಯನ್ನು ನಿರ್ಧರಿಸಲಾಗಿದೆ ಎಂದು ಹೇಳಿಕೆ ತಿಳಿಸಿದೆ.

2017ರ ಅಕ್ಟೋಬರ್ 30ರಂದು ದಿಲ್ಲಿಯಲ್ಲಿ ಇಂಧನ ಕ್ಷೇತ್ರದಲ್ಲಿ ಸಹಕಾರಕ್ಕೆ ಸಂಬಂಧಿಸಿದ ಒಪ್ಪಂದಕ್ಕೆ ಸಹಿ ಹಾಕಿದ ಸಂದರ್ಭ ರೂಪಿಸಲಾಗಿದ್ದ ಜಂಟಿ ಕಾರ್ಯಪಡೆಗೆ ಸ್ಮಾರ್ಟ್ ಸಿಟಿ, ಸ್ಮಾರ್ಟ್ ಗ್ರಿಡ್(ವಿದ್ಯುತ್ ಜಾಲ), ಸಂಚಾರ, ವಿದ್ಯುತ್ ಸರಬರಾಜು ಮತ್ತು ದಾಸ್ತಾನು, ಅನಿಲ ಸಾಗಣೆ, ಪ್ರಾಕೃತಿಕ ಅನಿಲವನ್ನು ಸಂಪರ್ಕ ಇಂಧನವಾಗಿ ಪ್ರೋಸಮಗ್ರ ತ್ಯಾಜ್ಯ ನಿರ್ವಹಣೆ, ಹಸಿರು ಇಂಧನ ಮುಂತಾದ ಕ್ಷೇತ್ರಗಳಲ್ಲಿ ಸಹಕಾರ ಸಂಬಂಧಕ್ಕೆ ಇರುವ ಅವಕಾಶವನ್ನು ಅಧ್ಯುನ ನಡೆಸುವ ಹೊಣೆ ವಹಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X