Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 2020ರಲ್ಲಿ ಆತ್ಮಹತ್ಯೆಗೆ ಶರಣಾದವರಲ್ಲಿ...

2020ರಲ್ಲಿ ಆತ್ಮಹತ್ಯೆಗೆ ಶರಣಾದವರಲ್ಲಿ ದಿನಗೂಲಿ ಕಾರ್ಮಿಕರೇ ಅಧಿಕ: ವರದಿ

ವಾರ್ತಾಭಾರತಿವಾರ್ತಾಭಾರತಿ30 Oct 2021 5:29 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
2020ರಲ್ಲಿ ಆತ್ಮಹತ್ಯೆಗೆ ಶರಣಾದವರಲ್ಲಿ ದಿನಗೂಲಿ ಕಾರ್ಮಿಕರೇ ಅಧಿಕ: ವರದಿ

ಹೊಸದಿಲ್ಲಿ,ನ.30: 2020ರಲ್ಲಿ ಭಾರತದಲ್ಲಿ ಆಕಸ್ಮಿಕ ಸಾವುಗಳು ಹಾಗೂ ಆತ್ಮಹತ್ಯೆಗಳ ಕುರಿತ ವರದಿಯನ್ನು ರಾಷ್ಟ್ರೀಯ ಅಪರಾಧ ದಾಖಲೆಗಳ ಇಲಾಖೆ (ಎನ್‌ಸಿಆರ್‌ಬಿ) ಗುರುವಾರ ಬಿಡುಗಡೆಗೊಳಿಸಿದೆ. ಕೋವಿಡ್-19 ಸೋಂಕಿನ ವರ್ಷದಲ್ಲಿ ರಸ್ತೆ ಅಪಘಾತ ಹಾಗೂ ಅದಕ್ಕೆ ಸಂಬಂಧಿಸಿದ ಸಾವುಗಳಲ್ಲಿ ಇಳಿಕೆಯುಂಟಾಗಿದೆ. ಆದರೆ ಈ ಅವಧಿಯಲ್ಲಿ ಆತ್ಮಹತ್ಯೆ ಮಾಡಿಕೊಂಡವರ ಸಂಖ್ಯೆ 1,53,052ಕ್ಕೆ ತಲುಪಿದ್ದು ಇದು ಸಾರ್ವಕಾಲಿಕ ದಾಖಲೆಯಾಗಿದೆ. 2019ರಲ್ಲಿ ಸಂಭವಿಸಿದ ಆತ್ಮಹತ್ಯಾ ಸಾವುಗಳಿಗಿಂತ ಕಳೆದ ವರ್ಷ ಶೇ.10ರಷ್ಟು ಏರಿಕೆಯಾಗಿದೆಯೆಂದು ವರದಿ ತಿಳಿಸಿದೆ.

2020ರಲ್ಲಿ ಆತ್ಮಹತ್ಯೆ ಮಾಡಿಕೊಂಡವರ ಸಂಖ್ಯೆ ಪ್ರತಿ ಒಂದು ಲಕ್ಷ ಜನಸಂಖ್ಯೆಗೆ 11.3 ಶೇಕಡ ಆಗಿದ್ದರೆ, 2019ರಲ್ಲಿ ಇದು 10.4 ಶೇಕಡ ಆಗಿತ್ತು. ಇದು 2010ಕ್ಕಿಂತ ಶೇ.11.4ರಷ್ಟು ಅಧಿಕವಾಗಿದೆ.

2020ರಲ್ಲಿ ಆತ್ಮಹತ್ಯೆಗೆ ಶರಣಾದವರಲ್ಲಿ ದಿನಗೂಲಿ ಕಾರ್ಮಿಕರು ಅತ್ಯಧಿಕ ಪ್ರಮಾಣದಲ್ಲಿದ್ದಾರೆ . ಕಳೆದ ವರ್ಷ ಲಾಕ್‌ಡೌನ್ ಹೇರಿಕೆಯ ಬಳಿಕ ಉದ್ಯೋಗವಿಲ್ಲದೆ ಸಂಕಷ್ಟಕ್ಕೀಡಾಗಿದ್ದ ದಿನಗೂಲಿ ಕಾರ್ಮಿಕರು ತಮ್ಮ ಊರುಗಳಿಗೆ ನಿರ್ಗಮಿಸಿ, ಅಲ್ಲಿ ಉದ್ಯೋಗವನ್ನು ಅರಸಬೇಕಾದಂತಹ ಅತಂತ್ರ ಪರಿಸ್ಥಿತಿಯುಂಟಾಗಿತ್ತು. 2020ರಲ್ಲಿ ದೇಶದಲ್ಲಿ ಆತ್ಮಹತ್ಯೆ ಮಾಡಿಕೊಂಡವರಲ್ಲಿ ಶೇ.24.6 ಶೇಕಡ ಮಂದಿ ದಿನಗೂಲಿ ಕಾರ್ಮಿಕರೆಂದು ವರದಿ ತಿಳಿಸಿದೆ.

2014ರಲ್ಲಿ ಶೇ.12ರಷ್ಟು ದಿನಗೂಲಿ ಕಾರ್ಮಿಕರು ಆತ್ಮಹತ್ಯೆಗೆ ಶರಣಾಗಿದ್ದಾರೆ, 2020ರಲ್ಲಿ ಆ ಸಂಖ್ಯೆ 24.6 ಶೇಕಡಕ್ಕೆ ತಲುಪಿದ್ದು, ಆರು ವರ್ಷಗಳಲ್ಲಿ ಎರಡು ಪಟ್ಟು ಹೆಚ್ಚಳವಾಗಿದೆ.

ಇತ್ತ ಸಾವಿಗೆ ಶರಣಾದ ವಿದ್ಯಾರ್ಥಿಗಳ ಸಂಖ್ಯೆಯಲ್ಲಿಯೂ ಹೆಚ್ಚಳವಾಗಿದ್ದು, 2020ರಲ್ಲಿ ಒಟ್ಟು 14,825 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 2019ರಲ್ಲಿ ಸಾವಿಗೆ ಶರಣಾದ ವಿದ್ಯಾರ್ಥಿಗಳ ಸಂಖ್ಯೆ 10,335 ಆಗಿದ್ದು, ಕಳೆದ ವರ್ಷ ಶೇ.21.20ರಷ್ಟು ಹೆಚ್ಚಳವಾಗಿದೆ.

ಕಳೆದ ವರ್ಷ ಆತ್ಮಹತ್ಯೆ ಮಾಡಿಕೊಡ ಸ್ವೋದ್ಯೋಗಿಗಳ ಸಂಖ್ಯೆಯಲ್ಲೂ ಅದರ ಹಿಂದಿನ ವರ್ಷಕ್ಕಿಂತ ಶೇ.7.67ರಷ್ಟು ಹೆಚ್ಚಳವಾಗಿದೆ. ವ್ಯಾಪಾರಿಗಳ ಆತ್ಮಹತ್ಯೆ ಪ್ರಮಾಣದಲ್ಲಿ 2019ಕ್ಕಿಂತ ಶೇ.26.1ರಷ್ಟು ಹೆಚ್ಚಳವಾಗಿದೆ ಎಂದು ಎನ್‌ಸಿಆರ್‌ಬಿ ವರದಿ ತಿಳಿಸಿದೆ.

2022ರಲ್ಲಿ ಆತ್ಮಹತ್ಯೆಯಿಂದ ಸಾವನ್ನಪ್ಪಿದವರ ಪೈಕಿ ಗೃಹಿಣಿಯರು (ಶೇ.14.6), ಸ್ವೋದ್ಯೋಗಿಗಳು (11,3 ಶೇ.), ವೃತ್ತಿಪರ/ವೇತನದಾರರು (ಶೇ.9.7 ಶೇ.), ರೈತರು/ಕೃಷಿಕರು (ಶೇ.7), ನಿವೃತ್ತ ನೌಕರರು ( 1 ಶೇ.) ಹಾಗೂ ಶೇ.13.4 ಇತರ ಶ್ರೇಣಿಗಳವರಾಗಿದ್ದಾರೆಂದು ವರದಿ ತಿಳಿಸಿದೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X