Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರಾಮಮಂದಿರಕ್ಕೆ ದೇಣಿಗೆ ನೀಡದ್ದಕ್ಕೆ...

ರಾಮಮಂದಿರಕ್ಕೆ ದೇಣಿಗೆ ನೀಡದ್ದಕ್ಕೆ ಮುಖ್ಯಶಿಕ್ಷಕಿಗೆ ಶಿಕ್ಷೆ!

ಶಾಲಾಡಳಿತ ಮಂಡಳಿಗೆ ದಿಲ್ಲಿ ಹೈಕೋರ್ಟ್ ನೋಟಿಸ್

ವಾರ್ತಾಭಾರತಿವಾರ್ತಾಭಾರತಿ31 Oct 2021 10:02 AM IST
share
ರಾಮಮಂದಿರಕ್ಕೆ ದೇಣಿಗೆ ನೀಡದ್ದಕ್ಕೆ ಮುಖ್ಯಶಿಕ್ಷಕಿಗೆ ಶಿಕ್ಷೆ!

ಹೊಸದಿಲ್ಲಿ, ಅ.31: ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮಮಂದಿರಕ್ಕೆ ದೇಣಿಗೆ ನೀಡದ ಕಾರಣಕ್ಕಾಗಿ ತಮ್ಮನ್ನು ಅಮಾನತುಗೊಳಿಸಲಾಗಿದೆ ಎಂದು ಆಪಾದಿಸಿ ಮುಖ್ಯ ಶಿಕ್ಷಕಿಯೊಬ್ಬರು ಸಲ್ಲಿಸಿದ ದಾವೆಯ ಹಿನ್ನೆಲೆಯಲ್ಲಿ ದಿಲ್ಲಿ ಹೈಕೋರ್ಟ್, ಶಾಲಾಡಳಿತ ಮಂಡಳಿಗೆ ನೋಟಿಸ್ ನೀಡಿದೆ. ತಮಗೆ ಕಡಿಮೆ ವೇತನ ನೀಡಲಾಗುತ್ತಿದೆ ಎಂದೂ ಮಹಿಳೆ ಆಪಾದಿಸಿದ್ದಾರೆ.

ಅಮಾನತು ಆದೇಶವನ್ನು ರದ್ದುಪಡಿಸಿ, ಉದ್ಯೋಗಕ್ಕೆ ವಾಪಸ್ ಕರೆಸಿಕೊಳ್ಳುವ ಜತೆಗೆ ಹಿಂದಿನ ಪೂರ್ಣ ವೇತನ ನೀಡಲು ಸರಕಾರಕ್ಕೆ ಸೂಚನೆ ನೀಡಬೇಕು ಎಂದು ಕೋರಿ ಶಿಕ್ಷಕಿ ಅರ್ಜಿ ಸಲ್ಲಿಸಿದ್ದಾರೆ. ಕಳೆದ ಆಗಸ್ಟ್‌ನಲ್ಲಿ ವಿನಾಕಾರಣ ತಮ್ಮನ್ನು ದಿಢೀರನೇ ಭಾಲ್‌ಸ್ವಾ ಶಾಲೆಗೆ ವರ್ಗಾಯಿಸಲಾಗಿದ್ದು, ಶಾಲೆಯಿಂದ ತಮಗೆ ಎಲ್ಲ ಡೈರಿಗಳನ್ನು ಪಡೆದುಕೊಳ್ಳಲು ಕೂಡಾ ಸಮಯಾವಕಾಶ ನೀಡಿಲ್ಲ ಎಂದು ದೂರಿದ್ದಾರೆ.

"ರಾಮಮಂದಿರಕ್ಕಾಗಿ 2021ರ ಫೆಬ್ರವರಿಯಲ್ಲಿ 70 ಸಾವಿರದಿಂದ ಒಂದು ಲಕ್ಷ ರೂಪಾಯಿವರೆಗೆ ಸಂಗ್ರಹಿಸಲು ಅಥವಾ ದೇಣಿಗೆ ನೀಡಲು ಎಲ್ಲ ಸಿಬ್ಬಂದಿಗೆ ಪ್ರತಿವಾದಿ ಶಿಕ್ಷಣ ಸಂಸ್ಥೆಯಿಂದ ಗುರಿ ನೀಡಲಾಗಿತ್ತು. ಪೋಷಕರು ದೇಣಿಗೆ ನೀಡುವಂತೆ ವಿದ್ಯಾರ್ಥಿಗಳ ಮನವೊಲಿಸಲು ಸೂಚಿಸಲಾಗಿತ್ತು ಇಲ್ಲವೇ ಮಾರುಕಟ್ಟೆಗೆ ತೆರಳಿ ಅಂಗಡಿ ಮಾಲಕರಿಂದ ದೇಣಿಗೆ ಸಂಗ್ರಹಿಸುವಂತೆ ಸೂಚನೆ ನೀಡಲಾಗಿತ್ತು ಎಂದು ಅರ್ಜಿದಾರ ಮಹಿಳೆ ಆಪಾದಿಸಿದ್ದಾರೆ.

ಅರ್ಜಿದಾರ ಶಿಕ್ಷಕಿ ಯಾವುದೇ ತರಗತಿಯ ಉಸ್ತುವಾರಿ ಹೊಂದಿದ ಶಿಕ್ಷಕಿಯಲ್ಲದ ಕಾರಣ ಹಾಗೂ ಸ್ವಂತವಾಗಿ ಅಷ್ಟೊಂದು ದೊಡ್ಡ ಮೊತ್ತದ ಕೊಡುಗೆ ನೀಡಲು ಅಸಾಧ್ಯವಾದ ಹಿನ್ನೆಲೆಯಲ್ಲಿ ಶಿಕ್ಷಿಸಲಾಗಿದೆ ಎಂದು ಅರ್ಜಿಯಲ್ಲಿ ದೂರಲಾಗಿದೆ.

"ಇದು ಪ್ರತಿ ವರ್ಷ ಸಮರ್ಪಣೆ ಹೆಸರಿನಲ್ಲಿ ಸಂಗ್ರಹಿಸಬೇಕಾದ 5ರಿಂದ 15 ಸಾವಿರ ರೂ.ವಲ್ಲದೇ ಹೆಚ್ಚುವರಿಯಾಗಿ ಸಂಗ್ರಹಿಸಬೇಕಾದ ದೇಣಿಗೆಯಾಗಿತ್ತು. ರಾಮಮಂದಿರಕ್ಕೆ 70 ಸಾವಿರ ರೂ. ಹಾಗೂ ವಾರ್ಷಿಕ ಸಮರ್ಪಣೆಗೆ 15 ಸಾವಿರ ರೂ. ನೀಡುವಂತೆ ಬಲವಂತಪಡಿಸಲಾಯಿತು. ಆರ್ಥಿಕ ಸಂಕಷ್ಟದ ಹಿನ್ನೆಲೆಯಲ್ಲಿ ಮಾರ್ಚ್ 3ರಂದು ಕೇವಲ 2,100 ರೂಪಾಯಿಗಳನ್ನು ರಾಮಮಂದಿರಕ್ಕೆ ದೇಣಿಗೆಯಾಗಿ ನೀಡಿದ್ದು, ವಾರ್ಷಿಕ ಸಮರ್ಪಣೆಗೆ ಹಣ ನೀಡಿರಲಿಲ್ಲ ಎಂದು ವಿವರಿಸಲಾಗಿದೆ.

ಅರ್ಜಿದಾರ ಶಿಕ್ಷಕಿಯ ಪತಿ 2016ರಲ್ಲಿ ಅಪಘಾತವೊಂದರಲ್ಲಿ ಕಣ್ಣು ಕಳೆದುಕೊಂಡಿದ್ದು, ಇತರ ಗಂಭೀರ ಗಾಯಗಳಾಗಿವೆ. ನರ ಸಮಸ್ಯೆಯೂ ಇರುವ ಕಾರಣದಿಂದ ಆರ್ಥಿಕವಾಗಿ ಕುಟುಂಬ ತೀವ್ರ ಸಂಕಷ್ಟದಲ್ಲಿದೆ ಎಂದು ವಕೀಲ ಖಗೇಶ್ ಝಾ ನ್ಯಾಯಾಲಯದಲ್ಲಿ ಹೇಳಿದರು. ಆದಾಗ್ಯೂ ಆರೆಸ್ಸೆಸ್ ಹಿನ್ನೆಲೆಯ ಸಮರ್ಥ ಶಿಕ್ಷಣ ಸಮಿತಿ ತಮ್ಮ ಕಕ್ಷಿದಾರರಿಗೆ ಕಿರುಕುಳ ನೀಡಿದೆ ಎಂದು ಅವರು ಆಪಾದಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X