Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. 'ಆತ್ಮಹತ್ಯೆಯಂಥ ನಿರ್ಧಾರ ಬೇಡ': ಪುನೀತ್...

'ಆತ್ಮಹತ್ಯೆಯಂಥ ನಿರ್ಧಾರ ಬೇಡ': ಪುನೀತ್ ಅಭಿಮಾನಿಗಳಿಗೆ ಶಿವರಾಜ್‍ಕುಮಾರ್ ಮನವಿ

ವಾರ್ತಾಭಾರತಿವಾರ್ತಾಭಾರತಿ31 Oct 2021 6:08 PM IST
share
ಆತ್ಮಹತ್ಯೆಯಂಥ ನಿರ್ಧಾರ ಬೇಡ: ಪುನೀತ್ ಅಭಿಮಾನಿಗಳಿಗೆ ಶಿವರಾಜ್‍ಕುಮಾರ್ ಮನವಿ

ಬೆಂಗಳೂರು, ಅ.31:ಪುನೀತ್ ರಾಜ್‍ಕುಮಾರ್ ನಿಧನದಿಂದಾಗಿ ಅಭಿಮಾನಿಗಳು ಆತ್ಮಹತ್ಯೆಯಂಥ ನಿರ್ಧಾರ ಕೈಗೊಳ್ಳಬೇಡಿ ಎಂದು ನಟ ಶಿವರಾಜ್‍ಕುಮಾರ್ ಮನವಿ ಮಾಡಿದರು.

ರವಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಮಗನನ್ನೇ ಕಳೆದುಕೊಂಡಿದ್ದೇನೆ. ಇಂತಹ ಸಂದರ್ಭದಲ್ಲಿ ಅಭಿಮಾನಿಗಳು ಆತ್ಮಹತ್ಯೆಯಂಥ ನಿರ್ಧಾರ ಕೈಗೊಳ್ಳಬೇಡಿ ಎಂದು ಗದ್ಗದಿತರಾದರು. 

ಅಪ್ಪು ನನ್ನಲ್ಲಿದ್ದಾನೆ, ರಾಘುವಿನಲ್ಲಿದ್ದಾನೆ. ಅದಕ್ಕಿಂತ ಹೆಚ್ಚಾಗಿ ಅಭಿಮಾನಿಗಳ ಹೃದಯದಲ್ಲಿದ್ದಾನೆ. ದಯವಿಟ್ಟು ಆತ್ಮಹತ್ಯೆಯಂತಹ ನಿರ್ಧಾರ ಕೈಗೊಳ್ಳಬೇಡಿ. ನಿಮಗೂ ಕುಟುಂಬವಿದೆ. ಅಪ್ಪು ಇಂಥಹ ನಿರ್ಧಾರಗಳನ್ನು ಇಷ್ಟಪಡುತ್ತಿಲ್ಲ. ದಯವಿಟ್ಟು ನಿಮ್ಮ ಕುಟುಂಬಗಳನ್ನು ನೀವು ನೋಡಿಕೊಳ್ಳಿ. ಏಕೆಂದರೆ ನಿಮ್ಮ ಅಗತ್ಯ ಕುಟುಂಬಕ್ಕೆ ಇರುತ್ತದೆ. ಇದನ್ನು ಕಳೆದುಕೊಳ್ಳಬೇಡಿ ಎಂದರು.

ನಾವೆಲ್ಲವೂ ಇಲ್ಲವೇ. ನೋವನ್ನು ನುಂಗಿಕೊಂಡು ಸಾಗಬೇಕು. ನಮ್ಮ ಕುಟುಂಬಕ್ಕೆ ನಾವಿರುವುದು ನಮ್ಮ ಜವಾಬ್ದಾರಿ. ಅಪ್ಪಾಜಿಯೂ ಇದನ್ನೇ ಹೇಳುತ್ತಿದ್ದರು ಎಂದ ಅವರು, ಅಪ್ಪು ಚಿಕ್ಕವನು. ಸಣ್ಣ ವಯಸ್ಸು. ಅದೆಷ್ಟು ಬೇಗ ಭಗವಂತನಿಗೆ ಆತ ಇಷ್ಟವಾಗಿಬಿಟ್ಟ ಎಂದರೆ ನಮಗದು ನೋವು ಕೊಡುತ್ತದೆ. ನಮಗಿಂತ ಹೆಚ್ಚಾಗಿ ಅಭಿಮಾನಿಗಳಿಗೆ ನೋವಾಗಿದೆ. ಅಭಿಮಾನಿಗಳು ಕುಟುಂಬ ಸಮೇತರಾಗಿ ಬಂದು ಅಪ್ಪು ಅಪ್ಪು ಎಂದು ಕರೆದು ಅತ್ತಾಗ ನನಗೂ ಕೊರಗಿದ್ದೆ. ಈ ನೋವು ನೋಡಿದಾಗ ಅಪ್ಪುವನ್ನು ಅವಸರವಾಗಿ ದೇವರು ಕರೆದುಕೊಂಡುಬಿಟ್ಟನೇ ಎಂದೆನಿಸಿಬಿಡುತ್ತದೆ ಎಂದು ನುಡಿದರು.

ನಾನು ಅವನಿಗಿಂತ 13 ವರ್ಷ ದೊಡ್ಡವನು. ಅವನನ್ನು ಮಗುವಾಗಿರುವಾಗಲಿಂದ ನೋಡಿದ್ದೇನೆ. ನನ್ನ ಮಗುವನ್ನೇ ಕಳೆದುಕೊಂಡಂತೆ ಅನಿಸುತ್ತಿದೆ. ಆದರೂ ಜೀವನ ಸಾಗಬೇಕು. ಅಪ್ಪು ಕುಟುಂಬದ ಜೊತೆ ನಾವೆಲ್ಲರೂ ಇದ್ದೇವೆ. ಅವನ ಆಸೆ, ಆಕಾಂಕ್ಷೆಗಳನ್ನು ಈಡೇರಿಸಲು ನಾವು ಪ್ರಯತ್ನ ಮಾಡುತ್ತೇವೆ ಎಂದು ಹೇಳಿದರು.

ರಾಜ್ಯ ಸರಕಾರ, ಪೊಲೀಸ್ ಸಿಬ್ಬಂದಿ ಚೆನ್ನಾಗಿ ಎಲ್ಲ ವ್ಯವಸ್ಥೆಯನ್ನು ಮಾಡಿದ್ದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಧನ್ಯವಾದ. ನಮ್ಮ ಕುಟುಂಬದ ಮೇಲೆ ಇಷ್ಟೊಂದು ಅಭಿಮಾನ ಇಟ್ಟು ಅಚ್ಚುಕಟ್ಟಿನ ವ್ಯವಸ್ಥೆಯನ್ನು ಸರಕಾರ ಮಾಡಿತ್ತು. ಇನ್ನು, ಹಾಲು–ತುಪ್ಪ ಆದ ಕೂಡಲೇ ಸಮಾಧಿ ದರ್ಶನಕ್ಕೆ ಸಾರ್ವಜನಿಕರಿಗೆ ಅವಕಾಶ ನೀಡುವ ಬಗ್ಗೆ ಮುಖ್ಯಮಂತ್ರಿಯವರ ಜೊತೆ ಮಾತನಾಡುತ್ತೇನೆ ಎಂದು ಅವರು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X