Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ‘ಎನ್‍ಇಪಿ' ಕೋಮುವಾದಕ್ಕೆ ಎಡೆ...

‘ಎನ್‍ಇಪಿ' ಕೋಮುವಾದಕ್ಕೆ ಎಡೆ ಮಾಡಿಕೊಡುತ್ತಿದೆ: ಬೀಮಲ್ ರಾಯ್

ವಾರ್ತಾಭಾರತಿವಾರ್ತಾಭಾರತಿ31 Oct 2021 10:39 PM IST
share

ಬೆಂಗಳೂರು, ಅ. 31: ‘ಶಿಕ್ಷಣ ವರ್ಣರಂಜಿತವಾಗಿರಬೇಕೇ ಹೊರತು, ಏಕವರ್ಣದ್ದಾಗಿರಬಾರದು ಎಂಬ ಘೋಷವಾಕ್ಯದೊಂದಿಗೆ ‘ರಾಷ್ಟ್ರೀಯ ಶಿಕ್ಷಣ ನೀತಿ-2020' ಜಾರಿಯಾಗುತ್ತಿದ್ದು, ಇದು ಕೋಮುವಾದಕ್ಕೆ ಎಡೆ ಮಾಡಿಕೊಡುತ್ತಿದೆ' ಎಂದು ಪಶ್ಚಿಮ ಬಂಗಾಲದ ಮಾಜಿ ಅಡ್ವೊಕೇಟ್ ಜನರಲ್ ಪ್ರೊ.ಬೀಮಲ್ ರಾಯ್ ತಿಳಿಸಿದ್ದಾರೆ.

ರವಿವಾರ ಅಖಿಲ ಭಾರತ ಶಿಕ್ಷಣ ಉಳಿಸಿ ಸಮಿತಿಯು ಏರ್ಪಡಿಸಿದ್ದ ರಾಷ್ಟ್ರಮಟ್ಟ ಸಮ್ಮೇಳನದ ಎರಡನೆ ದಿನದ ವೆಬಿನಾರ್‍ನಲ್ಲಿ ಮಾತನಾಡಿದ ಅವರು, ‘ಇಂದು ಶಿಕ್ಷಣರಂಗ ಹಿಂದೆಂದು ಕಾಣದ ತೀವ್ರ ಬಿಕ್ಕಟ್ಟನ್ನು ಎದುರಿಸುತ್ತಿದೆ. ಆದರೆ ಸರಕಾರವು ಈ ಎಲ್ಲ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಬದಲು ದೇಶದಲ್ಲಿ ಜನರ ಐಕ್ಯತೆ ಒಡೆಯುವ ರಾಷ್ರೀಯ ಶಿಕ್ಷಣ ನೀತಿಯನ್ನು ಜಾರಿಗೊಳಿಸುತ್ತಿದೆ. ನೀತಿಯು ಸಂವಿಧಾನ ವಿರೋಧಿಯಾಗಿದ್ದು, ಧರ್ಮಗಳ ಆಧಾರದ ಮೇಲೆ ವಿದ್ಯಾರ್ಥಿಗಳ ಒಗ್ಗಟ್ಟನ್ನು ಒಡೆಯುವುದಾಗಿದೆ' ಎಂದು ಆಕ್ರೋಶ ವ್ಯಕ್ತಪಡಿಸಿದರು. 

ನಿವೃತ್ತ ಪ್ರಾಧ್ಯಾಪಕ ಪ್ರೊ.ಬಿರೇಂದ್ರ ಕೆ.ಆರ್.ನಾಯಕ್ ಮಾತನಾಡಿ, ‘ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಸಂಘ ಪರಿವಾರದ ಅಭಿಪ್ರಾಯ ಪಡೆದು ರೂಪಿಸಿದ ನೀತಿಯಾಗಿದೆ. ಜೊತೆಗೆ ಅಧುನಿಕ ಭಾರತದ ನಿರ್ಮಪಕರಾದ ಮಹಾತ್ಮ ಜ್ಯೋತಿಭಾ ಫುಲೆ, ವಿದ್ಯಾಸಾಗರ ಮುಂತಾದವರನ್ನು ದೂರ ಇಟ್ಟಿದೆ. ಈ ನಿಟ್ಟಿನಲ್ಲಿ ಇದು ರಾಷ್ಟ್ರೀಯ ನೀತಿ ಆಗಲು ಹೇಗೆ ಸಾಧ್ಯ? ಸರಕಾರವು ಅದ್ಯಾವ ಭಾರತ ಕೇಂದ್ರೀಕೃತ ಶಿಕ್ಷಣ ನೀತಿ ರೂಪಿಸಲು ಹೊರಟಿದೆ? ಎಂದು ಪ್ರಶ್ನಿಸಿದ ಅವರು, ರಾಷ್ಟ್ರೀಯ ಶಿಕ್ಷಣ ನೀತಿಯು ಸಾರ್ವಜನಿಕರ, ಶಿಕ್ಷಣ ಪ್ರೇಮಿಗಳ, ಸಂಘ-ಸಂಸ್ಥೆಗಳ ಅಭಿಪ್ರಾಯ, ಸಲಹೆಗಳನ್ನು ಒಳಗೊಂಡಿಲ್ಲ. ಆದುದರಿಂದ ನೀತಿಯನ್ನು ಶಿಕ್ಷಣ ಕ್ಷೇತ್ರದ ಮೇಲೆ ಬಲವಂತವಾಗಿ ಹೇರಲಾಗುತ್ತಿದೆ' ಎಂದು ದೂರಿದರು.

ಡಾ.ಶಾಮಸುಂದರ್ ದೀಪ್ತಿ ಮಾತನಾಡಿ, ನೂತನ ಶಿಕ್ಷಣ ನೀತಿ ಜಾರಿಯಾದರೆ, ಪ್ರಾಥಮಿಕ ಶಿಕ್ಷಣದಿಂದ ಹಿಡಿದು ಉನ್ನತ ಶಿಕ್ಷಣದವರೆಗೂ ವ್ಯಾಪಾರಿಕರಣವಾಗಲಿದೆ. ಅದರಲ್ಲೂ ವೈದ್ಯಕೀಯ ಶಿಕ್ಷಣವಂತೂ ಜನಸಾಮಾನ್ಯರು ಕನಸಿನಲ್ಲೂ ಕಾಣಲು ಸಾಧ್ಯವಿಲ್ಲದ ಪರಿಸ್ಥಿತಿ ನಿರ್ಮಾಣವಾಗುತ್ತದೆ. ಜೊತೆಗೆ ವೈದ್ಯಕೀಯ ಕ್ಷೇತ್ರದಲ್ಲಿ ಪುರಾಣದ ಕಥೆಗಳನ್ನು ವೈಜ್ಞಾನಿಕ ಸಂಗತಿಗಳೆಂಬಂತೆ ಚಿತ್ರಿಸಲಾಗುತ್ತಿದೆ. ಆದುದರಿಂದ ರಾಷ್ಟ್ರೀಯ ಶಿಕ್ಷಣ ನೀತಿ-2020ನ್ನು ವಿರೋಧಿಸಬೇಕು ಎಂದರು. 

ಜೆಎನ್‍ಯುನ ಪ್ರೊ.ಎ.ಕೆ.ರಾಮಕೃಷ್ಣನ್ ಮಾತನಾಡಿ, ನೂತನ ಶಿಕ್ಷಣ ನೀತಿಯು ಜನಸಾಮಾನ್ಯರನ್ನು ಹಾಗೂ ಬಡಮಕ್ಕಳನ್ನು ಶಿಕ್ಷಣದಿಂದ ವಂಚಿತರನ್ನಾಗಿಸುತ್ತದೆ. ಅಲ್ಲದೆ, ನೂತನ ಶಿಕ್ಷಣ ನೀತಿಯು ಬಡವರನ್ನು ಶಿಕ್ಷಣದಿಂದ ವಂಚಿತರನ್ನಾಗಿಸುವುದನ್ನೇ ಕಾನೂನುಬದ್ದಗೊಳಿಸಲು ಪ್ರಯತ್ನಿಸುತ್ತಿದೆ ಎಂದು ಇದೇ ವೇಳೆ ಆಪಾದಿಸಿದರು.  

ಅಖಿಲ ಭಾರತ ಶಿಕ್ಷಣ ಉಳಿಸಿ ಸಮಿತಿಯ ರಾಷ್ಟ್ರಾಧ್ಯಕ್ಷ ಪ್ರಕಾಶ್ ಭಾಯ್ ಶಾ, ಪ್ರಧಾನ ಕಾರ್ಯದರ್ಶಿ ಆನಿಸ್ ಕುಮಾರ್ ರಾಯ್, ಇರ್ಫಾನ್ ಹಬೀಬ್, ರಾಮ್ ಪುನಿಯಾನಿ, ಪ್ರೊ.ರವಿವರ್ಮ ಕುಮಾರ್, ಪ್ರೊ. ಮುರಿಗೆಪ್ಪ, ರೋಮಿಲಾ ಥಾಪರ್, ಸುಖದೇವ ಥೋರಟ್, ಕರುಣಾನಂದನ್, ಜವಾಹರ್ ನೇಸನ್, ಚಂದ್ರಶೇಖರ ಚಕ್ರವರ್ತಿ ಸಚ್ಚಿದಾನಂದ ಸಿನ್ಹಾ ಪಾಲ್ಗೊಂಡಿದ್ದರು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X