Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಖಾಸಗಿ, ಸರ್ಕಾರಿ ಹಾಗೂ ಅರೆ ಸರ್ಕಾರಿ...

ಖಾಸಗಿ, ಸರ್ಕಾರಿ ಹಾಗೂ ಅರೆ ಸರ್ಕಾರಿ ವಲಯದಲ್ಲಿ ಕನ್ನಡಿಗರಿಗೆ ಉದ್ಯೋಗ ದೊರಕಿಸಿ ಕೊಡಲು ಆದ್ಯತೆ: ಸಿಎಂ ಬೊಮ್ಮಾಯಿ

ವಾರ್ತಾಭಾರತಿವಾರ್ತಾಭಾರತಿ1 Nov 2021 2:04 PM IST
share
ಖಾಸಗಿ, ಸರ್ಕಾರಿ ಹಾಗೂ ಅರೆ ಸರ್ಕಾರಿ ವಲಯದಲ್ಲಿ ಕನ್ನಡಿಗರಿಗೆ ಉದ್ಯೋಗ ದೊರಕಿಸಿ ಕೊಡಲು ಆದ್ಯತೆ: ಸಿಎಂ ಬೊಮ್ಮಾಯಿ

ಬೆಂಗಳೂರು : ಕನ್ನಡಿಗರಿಗೆ ಖಾಸಗಿ, ಸರ್ಕಾರಿ ಹಾಗೂ ಅರೆ ಸರ್ಕಾರಿ ವಲಯದಲ್ಲಿ ಉದ್ಯೋಗ ದೊರಕಿಲು ಆದ್ಯತೆ ನೀಡಲಾಗುವುದು.  ಅದರ ಜತೆ ಔದ್ಯೋಗಿಕ ನೀತಿಯ ಪರಿಣಾಮಕಾರಿ ಅನುಷ್ಠಾನದಿಂದ ಕೌಶಲ್ಯ, ಅರೆ ಕೌಶಲ್ಯ ವಲಯದಲ್ಲಿ ಶೇ 75 ರಷ್ಟು ಉದ್ಯೋಗಗಳನ್ನು ಕ್ನಡಿಗರಿಗೆ ದೊರಕಿಸಲು ಸರ್ಕಾರ ಆದ್ಯತೆ ನೀಡುತ್ತಿದೆ.

ಇವು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಶಿಕ್ಷಣ ಇಲಾಖೆ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಕರ್ನಾಟಕ ರಾಜ್ಯೋತ್ಸವ ಧ್ವಜಾರೋಹಣ ನೆರವೇರಿಸಿ ಆಡಿದ ಮಾತುಗಳು.‌

ಆಡಳಿತದಲ್ಲಿ ಕನ್ನಡದ ಪರಿಣಾಮಕಾರಿ ಬಳಕೆಗೆ ಈಗಾಗಲೇ ಹೊರಡಿಸಿರುವ ಆದೇಶಗಳ ಅನುಷ್ಠಾನಕ್ಕೆ ಕ್ರಮ ವಹಿಸಲಾಗುವುದು. ಕನ್ನಡಿಗರಿಗೆ ಉತ್ತಮ ಆಡಳಿತ ನೀಡಲು ಆಡಳಿತ ಸುಧಾರಣಾ ಸಮಿತಿಯ  ಪ್ರಥಮ ವರದಿಯ ಪ್ರಮುಖ ಭಾಗಗಳ ಅನುಷ್ಠಾನ ಹಾಗೂ ಇಂದಿನಿಂದ  ಜನಸೇವಕ ಕಾರ್ಯಕ್ರಮದ ಮೂಲಕ ಸರ್ಕಾರದ 30 ಸೇವೆಗಳನ್ನು ಮನೆಮನೆಗೆ ತಲುಪಿಸುವ ಕಾರ್ಯಕ್ರಮವನ್ನು ಜಾರಿಗೆ ತರುತ್ತಿದ್ದು, ಜನವರಿ 26 ರಿಂದ ರಾಜ್ಯಾದ್ಯಂತ ಅನುಷ್ಠಾನ ಮಾಡಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಔದ್ಯೋಗಿಕ ನೀತಿಯ ಪರಿಣಾಮಕಾರಿ ಅನುಷ್ಠಾನದಿಂದ ಕೌಶಲ್ಯ, ಅರೆ ಕೌಶಲ್ಯ ವಲಯದಲ್ಲಿ ಶೇ 75 ರಷ್ಟು ಉದ್ಯೋಗವನ್ನು ಕ್ನಡಿಗರಿಗೆ ದೊರಕಿಸಲು ಸರ್ಕಾರ ಆದ್ಯತೆ ನೀಡುತ್ತಿದೆ.  ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ರಾಜ್ಯದ 180 ಸರ್ಕಾರಿ ಐ.ಟಿ.ಐಗಳ ಉನ್ನತೀಕರಣಕ್ಕೆ ಚಾಲನೆ ನೀಡಿದ್ದು ಇದೇ ತಿಂಗಳು ಉನ್ನತೀಕರಣದ ಕಾರ್ಯ ಪೂರ್ಣಗೊಂಡು ವಿದ್ಯಾರ್ಥಿಗಳಿಗೆ ಮುಕ್ತವಾಗಲಿದೆ ಎಂದರು.

ಪ್ರಾಥಮಿಕ ಮಟ್ಟದಿಂದ ಹಿಡಿದು ಉನ್ನತ ಶಿಕ್ಷಣದವರೆಗೆ ಉತ್ತಮ ಗುಣಮಟ್ಟದ ಶಿಕ್ಷಣವನ್ನು ದೊರಕಿಸಿ  ಜಾಗತಿಕ ಮಟ್ಟದಲ್ಲಿ ಪೈಪೋಟಿಗೆ ಸಿದ್ಧರಾಗುವಂತೆ ತಯಾರು ಮಾಡಲಾಗುವುದು. ನೂತನ ಶಿಕ್ಷಣ ನೀತಿಯನ್ನು ಜಾರಿಗೆ ತಂದಿದ್ದು, ಮಾತೃ ಭಾಷೆಯಲ್ಲಿಯೇ ಉನ್ನತ ಹಾಗೂ ತಾಂತ್ರಿಕ  ಶಿಕ್ಷಣವನ್ನು ಪಡೆಯಲು ನಮ್ಮ ಸರ್ಕಾರ ಅನುವು ಮಾಡಿಕೊಟ್ಟಿದೆ ಎಂದರು.  

'ಯಾವುದೇ ಪ್ರದೇಶ ಹಿಂದುಳಿಯಲು ಬಿಡುವುದಿಲ್ಲ'

ಕರ್ನಾಟಕದ ಯಾವುದೇ ಪ್ರದೇಶವನ್ನು ಹಿಂದುಳಿಯಲು ಬಿಡುವುದಿಲ್ಲ ಎಂಬ ಸಂಕಲ್ಪ ನಮ್ಮ ಸರ್ಕಾರದ್ದು ಎಂದ ಮುಖ್ಯಮಂತ್ರಿಗಳು, ಮುಂಬೈ ಕರ್ನಾಟಕವನ್ನು ಕಿತ್ತೂರು ಕರ್ನಾಟಕ ಎಂದು ಘೋಷಣೆ ಮಾಡಲು ನಮ್ಮ ಸರ್ಕಾರ ಬದ್ಧವಾಗಿದೆ. ಹೆಸರು ಬದಲಾವಣೆಯ ಜೊತೆಗೆ ಆ ಭಾಗದ ಜನರ ಬದುಕು ಹಸನಾಗಬೇಕು. ಪ್ರಗತಿ ಹೊಂದಬೇಕು. ಆ ಮೂಲಕ ಪ್ರಾದೇಶಿಕ ಅಸಮತೋಲನ ನಿವಾರಣೆ ಆಗಬೇಕು. ಆ  ನಿಟ್ಟಿನಲ್ಲಿ ಸರ್ವ ಪ್ರಯತ್ನವನ್ನೂ ಮಾಡಲಾಗುವುದು ಎಂದರು.

ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ 3000 ಕೋಟಿ ವಿಶೇಷ ಅನುದಾನವನ್ನು ಸರ್ಕಾರ ಒದಗಿಸಲಿದೆ.  ಕೃಷ್ಣ ಮತ್ತು ಕಾವೇರಿ ಜಲಾನಯನ ಪ್ರದೇಶದ ಸಮಗ್ರ ಅಭಿವೃದ್ಧಿ, ಔದ್ಯೋಗೀಕರಣಕ್ಕೆ ಸರ್ಕಾರ ಯೋಜನೆಗಳನ್ನು ರೂಪಿಸಲಿದೆ ಎಂದರು.

'ರಾಜ್ಯೋತ್ಸವ ನಿತ್ಯೋತ್ಸವವಾಗಲಿ'

ಎಲ್ಲ ವಿಚಾರಗಳಲ್ಲಿಯೂ ಕನ್ನಡಕ್ಕೆ ಅಗ್ರಸ್ಥಾನ ನೀಡಿ ಕನ್ನಡಿಗರ ಬದುಕು, ಭವಿಷ್ಯವನ್ನು ಕಟ್ಟೋಣ ಎಂದ ಮುಖ್ಯಮಂತ್ರಿಗಳು, ಮುಂದಿನ ದಿನಗಳಲ್ಲಿ ಕನ್ನಡ ರಾಜ್ಯೋತ್ಸವ ನಿತ್ಯೋತ್ಸವವಾಗಿ, ಜನೋತ್ಸವವಾಗಬೇಕು. ಈ ಗುರಿ ತಲುಪುವವರೆಗೆ ವಿರಮಿಸುವುದಿಲ್ಲ ಎಂದರು.

ಕೋವಿಡ್ ಕಾರಣದಿಂದ ಸೀಮಿತವಾಗಿ ರಾಜ್ಯೋತ್ಸವ ಆಚರಿಸುತ್ತಿದ್ದರೂ  ಉತ್ಸಾಹ, ಚೈತನ್ಯ ಕುಂದಿಲ್ಲ. ಕನ್ನಡ ನಮ್ಮೆಲ್ಲರನ್ನೂ ಒಗ್ಗೂಡಿಸಿದೆ. ಅದು ನಮ್ಮೆಲ್ಲರ ಬೇರು. ಈ ತಾಯಿ ಬೇರನ್ನು ಸಂರಕ್ಷಿಸಿ, ವಿಶ್ವದಲ್ಲಿ ಹೆಮ್ಮರವಾಗಿಸಿ, ಮನುಕುಲಕ್ಕೆ ಕನ್ನಡದ ಮಹತ್ವ, ಪ್ರಯೋಜನ ಮತ್ತು ಸ್ವಾಭಿಮಾನವನ್ನು ತಿಳಿಸುವ ಶತಮಾನವಿದು ಎಂದರು.

ಕನ್ನಡದ ಅಸ್ತಿತ್ವ ಸುದೀರ್ಘ ಬದಲಾವಣೆಗಳ ಮಧ್ಯೆಯೂ ಗಟ್ಟಿಯಾಗಿ ನಿಂತಿದೆ. ಸಾಂಸ್ಕೃತಿಕ ಆಡಳಿತಾತ್ಮಕ ಹಾಗೂ ಐತಿಹಾಸಿಕ ದಾಳಿಗಳನ್ನು ಕನ್ನಡ ಎದುರಿಸಿ ನಿಂತಿದೆ. ಕನ್ನಡಕ್ಕೇ ತನ್ನದೇ ಅಂತರ್ಗತ ಶಕ್ತಿ ಇದೆ.  ಸೂರ್ಯ ಚಂದ್ರರಿರುವವರೆಗೂ ಯಾವುದೇ ಶಕ್ತಿ ಕನ್ನಡವನ್ನು ಅಳಿಸಲು ಸಾಧ್ಯವಿಲ್ಲವೆಂದು ಅಭಿಪ್ರಾಯಪಟ್ಟರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X