Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೋರ್ಟ್ ಆದೇಶದಂತೆ ಮರಣೋತ್ತರ ಪ್ರಶಸ್ತಿಗೆ...

ಕೋರ್ಟ್ ಆದೇಶದಂತೆ ಮರಣೋತ್ತರ ಪ್ರಶಸ್ತಿಗೆ ಅವಕಾಶವಿಲ್ಲ: ಉಡುಪಿಯಲ್ಲಿ ಸಚಿವ ಸುನೀಲ್‌ ಕುಮಾರ್ ಹೇಳಿಕೆ

ಪುನೀತ್ ರಾಜ್‌ ಕುಮಾರ್ ಗೆ ರಾಜ್ಯೋತ್ಸವ ಪ್ರಶಸ್ತಿ ನೀಡುವ ಬೇಡಿಕೆ

ವಾರ್ತಾಭಾರತಿವಾರ್ತಾಭಾರತಿ1 Nov 2021 7:26 PM IST
share
ಕೋರ್ಟ್ ಆದೇಶದಂತೆ ಮರಣೋತ್ತರ ಪ್ರಶಸ್ತಿಗೆ ಅವಕಾಶವಿಲ್ಲ: ಉಡುಪಿಯಲ್ಲಿ ಸಚಿವ ಸುನೀಲ್‌ ಕುಮಾರ್ ಹೇಳಿಕೆ

ಉಡುಪಿ, ನ.1: ಇತ್ತೀಚೆಗೆ ನಿಧನರಾದ ಖ್ಯಾತ ಚಿತ್ರನಟ ಪವರ್‌ ಸ್ಟಾರ್ ಪುನೀತ್ ರಾಜ್‌ ಕುಮಾರ್ ಅವರಿಗೆ ಮರಣೋತ್ತರ ರಾಜ್ಯೋತ್ಸವ ಪ್ರಶಸ್ತಿ ನೀಡಬೇಕೆಂಬ ಬೇಡಿಕೆ ಅನೇಕರಿಂದ ಬಂದಿದ್ದರೂ, ಕೋರ್ಟ್ ಆದೇಶದಂತೆ ಮರಣೋತ್ತರ ಪ್ರಶಸ್ತಿ ನೀಡಲು ಅವಕಾಶವಿಲ್ಲದ ಕಾರಣ ಇದನ್ನು ಪರಿಗಣಿಸಲು ಸಾಧ್ಯವಾಗಿಲ್ಲ ಎಂದು ರಾಜ್ಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ. ಸುನೀಲ್‌ ಕುಮಾರ್ ಸ್ಪಷ್ಟಪಡಿಸಿದ್ದಾರೆ.

ಉಡುಪಿಯಲ್ಲಿಂದು ಜಿಲ್ಲಾ ಮಟ್ಟದ ರಾಜೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಈ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದರು.

ಪುನೀತ್ ನಿಧನ ಇಡೀ ರಾಜ್ಯಕ್ಕೆ ತುಂಬಲಾರದ ನಷ್ಟ. ರಾಜ್ಯ ಸರಕಾರ ಅವರ ಅಂತ್ಯಕ್ರಿಯೆಯಲ್ಲಿ ತೆಗೆದುಕೊಳ್ಳಬೇಕಾದ ಎಲ್ಲ ಎಚ್ಚರಿಕೆಗಳನ್ನು ತೆಗೆದುಕೊಂಡು ಶ್ರದ್ಧಾಂಜಲಿ ಅರ್ಪಿಸಿದೆ. ಈಗ ಪುನೀತ್ ಅವರಿಗೆ ರಾಜ್ಯೋತ್ಸವ ಕೊಡಬೇಕು ಎಂಬ ಮಾತು ಎಲ್ಲಾ ಕಡೆಗಳಿಂದ ಕೇಳಿ ಬಂದಿದೆ. ಆದರೆ ನಮ್ಮ ನಿಯಮಾವಳಿ ಮತ್ತು ಕೋರ್ಟ್ ಆದೇಶದ ಪ್ರಕಾರ ಮರಣೋತ್ತರ ಪ್ರಶಸ್ತಿಗೆ ಅವಕಾಶವಿಲ್ಲ. ಅವಕಾಶ ಇಲ್ಲದ ಕಾರಣ ಈ ಬೇಡಿಕೆ ಪರಿಗಣಿಸಲು ಸಾಧ್ಯವಾಗಿಲ್ಲ ಎಂದವರು ಹೇಳಿದರು.

ಪುನೀತ್ ರಾಜ್ ಕುಮಾರ್ ಅವರು ಯಾವುದೇ ಶುಲ್ಕ ವಿಧಿಸದೇ ಸರಕಾರಿ ಜಾಹೀರಾತುಗಳಲ್ಲಿ ಪಾಲ್ಗೊಂಡಿರುವುದು ಸೇರಿದಂತೆ ಅವರ ವಿವಿಧ ಸೇವೆಗಳನ್ನು ಪರಿಗಣಿಸಿ ಯಾವ ರೀತಿಯ ಗೌರವ ಕೊಡಬೇಕು ಎಂದು ಸರಕಾರ ಮುಂದಿನ ದಿನಗಳಲ್ಲಿ  ತೀರ್ಮಾನ ತೆಗೆದುಕೊಳ್ಳುತ್ತದೆ. ಈಗಲೇ ಯಾವುದೇ ತರಾತುರಿಯ ನಿರ್ಧಾರಗಳನ್ನು ತೆಗೆದುಕೊಳ್ಳಲು ಸಾಧ್ಯವಿಲ್ಲ. ದೀಪಾವಳಿ ನಂತರ ಸಭೆ ನಡೆಸಿ ಗೌರವ ಸಲ್ಲಿಕೆ ಬಗ್ಗೆ ತೀರ್ಮಾನ ಮಾಡುತ್ತೇವೆ. ಪುನೀತ್‌ಗೆ ವಿಶೇಷ ಗೌರವ ನೀಡಲು ರಾಜ್ಯ ಸರಕಾರ ಖಂಡಿತ ಉತ್ಸುಕವಾಗಿದೆ ಎಂದರು.

ನಾಡಗೀತೆ ಎರಡು ದಿನದಲ್ಲಿ ತೀರ್ಮಾನ:  ನಾಡಗೀತೆ ಹಾಡುವ ಕುರಿತಂತೆ ಇರುವ ಗೊಂದಲದ ಬಗ್ಗೆ ಪ್ರಶ್ನಿಸಿದಾಗ, ನಮ್ಮಲ್ಲಿ ಗೊಂದಲ ಏನಿಲ್ಲ. ನಾವು ಬಹಳ ಸ್ಪಷ್ಟವಿದ್ದೇವೆ. ರಾಗ ಸಂಯೋಜನೆ ಮತ್ತು ಕಾಲಮಿತಿಯನ್ನು ನಿಗದಿ ಪಡಿಸಲು ಸಮಿತಿಯನ್ನು ರಚಿಸಿದ್ದು, ಸಮಿತಿ ಶಿಫಾರಸು ಮಾಡಿದೆ. ವರದಿ ಸರಕಾರದ ಬಳಿ ಇದೆ. ಒಂದೆರಡು ದಿನಗಳಲ್ಲಿ ಈ ಬಗ್ಗೆ ಅಂತಿಮ ನಿರ್ಧಾರವನ್ನು ಪ್ರಕಟಿಸಲಾಗುತ್ತೆ ಎಂದರು.

ರಾ.ಶಿಕ್ಷಣ ನೀತಿ: ಯಾರೋ ಅಲ್ಪಬುದ್ಧಿಯವರು ಮಾತ್ರ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ವಿರೋಧಿಸುತ್ತಾರೆ. ಹೊಸ ನೀತಿಯಲ್ಲಿ ಸಾಮಾನ್ಯ ಹಾಗೂ ಬಡ ವಿದ್ಯಾರ್ಥಿಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಕನ್ನಡ ಭಾಷೆಗೆ ಹೆಚ್ಚಿ ಒತ್ತು ನೀಡಲಾಗಿದೆ. ರಾಷ್ಟ್ರೀಯ ಶಿಕ್ಷಣ ನೀತಿ ಬಗ್ಗೆ ಅರ್ಧಂಬರ್ಧ ತಿಳಿದವರು ಮಾತ್ರ ಎನ್‌ಇಪಿ ವಿರುದ್ಧ ಮಾತನಾಡುತ್ತಾರೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಕಾಂಗ್ರೆಸ್‌ಗೆ ನಿರಾಶೆಯ ಫಲಿತಾಂಶ: ನಾಳೆಯ ಉಪಚುನಾವಣೆ ಫಲಿತಾಂಶ ಬಿಜೆಪಿ ಪರ ಬರಲಿದೆ ಎಂಬ ನಿಶ್ಚಿತ ನಿರೀಕ್ಷೆಯಲ್ಲಿದ್ದೇವೆ. ಚುನಾವಣಾ ಫಲಿತಾಂಶ ರಾಜ್ಯದ ಜನರಿಗೆ ಆಶಾದಾಯಕವಾಗಲಿದೆ ಮತ್ತು ಕಾಂಗ್ರೆಸ್ ಪಾಲಿಗೆ ನಿರಾಶೆಯ ಫಲಿತಾಂಶ ಆಗಲಿದೆ ಎಂದು ಸಚಿವ ಸುನೀಲ್ ಕುಮಾರ್ ಭವಿಷ್ಯ ನುಡಿದಿದ್ದಾರೆ.

ಉಪಚುನಾವಣೆ ಬಗ್ಗೆ ಡಿ.ಕೆ ಶಿವಕುಮಾರ್ ಇದು ಮುಂದಿನ ಚುನಾವಣೆಯ ದಿಕ್ಸೂಚಿ ಅಲ್ಲ ಎಂದು ಹೇಳುವ ಮೂಲಕ ಪ್ರಾರಂಭದಲ್ಲೇ ಸೋಲನ್ನು ಒಪ್ಪಿಕೊಂಡಿದ್ದಾರೆ. ನಾವು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಚುನಾವಣೆ ಎದುರಿಸಿದ್ದೇವೆ. ಹಾನಗಲ್ ಮತ್ತು ಸಿಂದಗಿ ಎರಡೂ ಕಡೆ ನಮ್ಮ ಗೆಲುವು ನಿಶ್ಚಿತ. ಮತ್ತು ನಾಳೆಯ ಫಲಿತಾಂಶ ಮುಂದೆ ಬರಲಿರುವ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಚುನಾವಣೆಯ ದಿಕ್ಸೂಚಿಯಾಗಲಿದೆ. ರಾಜ್ಯದ ಜನ ಬೊಮ್ಮಾಯಿ ಅವರ ಮೂರು ತಿಂಗಳ ಹಾಗೂ ಯಡಿಯೂರಪ್ಪ ಅವರ ಎರಡು ವರ್ಷಗಳ ಆಡಳಿತ ಮೆಚ್ಚಿ ಮತ ಹಾಕಿದ್ದು ಎರಡೂ ಕಡೆ ನಮ್ಮ ಪರ ಫಲಿತಾಂಶ ಬರಲಿದೆ ಎಂದು ವಿಶ್ವಾಸದಿಂದ ಹೇಳುತ್ತೇನೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X